ಕೇದಾರನಾಥ ದೇವಾಲಯ (ಸಂಗ್ರಹ ಚಿತ್ರ) 
ದೇಶ

ಕೇದಾರನಾಥದಲ್ಲಿ 'ಹಿಂದೂಯೇತರರ' ಪ್ರವೇಶ ನಿಷೇಧಿಸಿ: ಬಿಜೆಪಿ ಶಾಸಕಿ ಆಗ್ರಹ

ಕೇದಾರನಾಥ ಧಾಮದ ಪ್ರತಿಷ್ಠೆಗೆ ಕಳಂಕ ತರುವ ಕೆಲವು ಜನರು ಇದ್ದಾರೆ ಎಂದು ನೌಟಿಯಾಲ್ ಹೇಳಿದರು.

ಡೆಹ್ರಾಡೂನ್: 'ಹಿಂದೂಯೇತರ'ರು ಕೇದಾರನಾಥ ಧಾಮದ ಪ್ರತಿಷ್ಠೆಗೆ ಧಕ್ಕೆ ತರುತ್ತಿದ್ದಾರೆ. ಹೀಗಾಗಿ ಅನ್ಯ ಧರ್ಮದವರಿಗೆ ಪ್ರವೇಶ ನಿಷೇಧಿಸಬೇಕು ಎಂದು ಬಿಜೆಪಿ ಶಾಸಕಿ ಆಶಾ ನೌಟಿಯಾಲ್ ಅವರು ಒತ್ತಾಯಿಸಿದ್ದಾರೆ.

ಕೇದಾರನಾಥ ವಿಧಾನಸಭಾ ಕ್ಷೇತ್ರದ ಶಾಸಕಿಯಾಗಿರುವ ಆಶಾ ನೌಟಿಯಾಲ್ ಅವರು ಕೇದಾರನಾಥದಲ್ಲಿ ಚಾರ್ ಧಾಮ್ 'ಯಾತ್ರೆ' ನಿರ್ವಹಣೆ ಕುರಿತು ಸಭೆ ನಡೆಸಿದರು. ಸಭೆಯಲ್ಲಿ ಜನರು ಕೆಲವು ಸಮಸ್ಯೆಗಳನ್ನು ಪ್ರಸ್ತಾಪಿಸಿದರು.

ಜನರು ಎತ್ತಿರುವ ಸಮಸ್ಯೆಗಳಿಗೆ ನಾನು ಸ್ಪಂದಿಸುತ್ತೇನೆ ಮತ್ತು ಕೇದಾರನಾಥ ಧಾಮದ ಪ್ರತಿಷ್ಠೆಗೆ ಕಳಂಕ ತರುವ ಕೆಲವು ಜನರು ಇದ್ದಾರೆ ಎಂದು ನೌಟಿಯಾಲ್ ಹೇಳಿದರು. ಅಂತಹ ಜನರು ದೇವಾಲಯದ ಆವರಣ ಪ್ರವೇಶಿಸುವುದನ್ನು ನಿಷೇಧಿಸಬೇಕೆಂದು ಅವರು ಒತ್ತಾಯಿಸಿದರು.

"ಕೇದಾರನಾಥದಲ್ಲಿ ಯಾತ್ರೆ ನಿರ್ವಹಣೆಗೆ ಸಂಬಂಧಿಸಿದಂತೆ ಇತ್ತೀಚೆಗೆ ಸಭೆ ನಡೆಸಲಾಯಿತು... ಕೇದಾರನಾಥ ಧಾಮದ ಪ್ರತಿಷ್ಠೆಗೆ ಕಳಂಕ ತರುವ ಕೆಲಸವನ್ನು ಕೆಲವರು ಮಾಡುತ್ತಿದ್ದಾರೆ. ಅಂತಹ ಜನರ ಪ್ರವೇಶವನ್ನು ನಿಷೇಧಿಸಬೇಕು" ಎಂದು ಆಶಾ ನೌಟಿಯಾಲ್ ಭಾನುವಾರ ANI ಗೆ ತಿಳಿಸಿದ್ದಾರೆ.

ಇದಲ್ಲದೆ, ಖಂಡಿತವಾಗಿಯೂ 'ಹಿಂದೂಯೇತರ'ರು ದೇವಾಲಯದ ಪ್ರತಿಷ್ಠೆಗೆ ಧಕ್ಕೆ ತರುತ್ತಿದ್ದಾರೆ ಮತ್ತು ಅಂತಹ ಚಟುವಟಿಕೆಗಳಲ್ಲಿ ಅವರೇ ಭಾಗಿಯಾಗಿದ್ದಾರೆ ಎಂದು ನೌಟಿಯಾಲ್ ಆರೋಪಿಸಿದರು.

"ಅವರು ಖಂಡಿತವಾಗಿಯೂ ಅಲ್ಲಿಗೆ ಬರುವ ಹಿಂದೂಗಳಲ್ಲ ಮತ್ತು ಧಾಮಕ್ಕೆ ಅಪಖ್ಯಾತಿ ತರುವ ಚಟುವಟಿಕೆಗಳಲ್ಲಿ 'ಹಿಂದೂಯೇತರ'ರು ಭಾಗಿಯಾಗಿದ್ದಾರೆ... ಅಂತಹ ಜನರ ಪ್ರವೇಶವನ್ನು ನಿಷೇಧಿಸಬೇಕೆಂದು ನಾವು ಒತ್ತಾಯಿಸುತ್ತೇವೆ..." ಎಂದು ಅವರು ಹೇಳಿದರು.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

ಭಾರತ-ರಷ್ಯಾ ಆರ್ಥಿಕ ಬಾಂಧವ್ಯಕ್ಕೆ ಹೊಸ ಬಲ; ಪುಟಿನ್ ಭೇಟಿಯಾದ ಜೈಶಂಕರ್, ಪರಮಾಣು ಸಹಕಾರ ಸೇರಿ ಹಲವು ಅಂಶಗಳ ಕುರಿತು ಚರ್ಚೆ!

3 ದಿನ ಮೊದಲೇ ಮುಂಗಾರು ಅಧಿವೇಶನಕ್ಕೆ ತೆರೆ: 'ವಿರೋಧ ಪಕ್ಷಕ್ಕೆ ಹೆದರಿ ಅಧಿವೇಶನ ರದ್ದು'; ರಾಜ್ಯಪಾಲರಿಗೆ BJP ದೂರು!

Video: ಕುದಿಯುತ್ತಿದ್ದ ಬೆಲ್ಲದ ಪಾಕಕ್ಕೆ ಬಿದ್ದ ಯುವಕ; ಅಣ್ಣನ ಸಾಲ ತೀರಿಸಲು ಕೆಲಸಕ್ಕೆ ಹೋಗಿದ್ದವನ ದಾರುಣ ಅಂತ್ಯ

'ಕಿವಿಲಿ ಹೊಗೆ ಬರುವಂತಿದೆ': ಲಂಕಾ-ಭಾರತ ಟೆಸ್ಟ್ ಪಂದ್ಯದಲ್ಲಿ ಮತ್ತೊಂದು ವಿವಾದ, ಗ್ಲೌಸ್ ಕಿತ್ತೆಸೆದ ಬ್ಯಾಟರ್, ಆಗಿದ್ದೇನು?

ಬಿಜೆಪಿ MLC ಎನ್. ರವಿಕುಮಾರ್‌ ವಿರುದ್ಧ ಜಾಮೀನು ರಹಿತ ಬಂಧನ ವಾರಂಟ್