ಎನ್ ಆರ್ ನಾರಾಯಣ ಮೂರ್ತಿ  
ದೇಶ

ಉದ್ಯೋಗಿಗಳನ್ನು ಮನುಷ್ಯರನ್ನಾಗಿ ನೋಡಿ, ಅವರಿಗೂ ಕಂಪನಿಯ ಲಾಭ ಹಂಚಿ: Infosys Narayana Murthy

ನಿಮ್ಮ ಉದ್ಯೋಗಿಗಳನ್ನು ಹೊಗಳುವಾಗ ಸಾರ್ವಜನಿಕವಾಗಿಯೇ ಹೊಗಳಿ. ಅದೇ ರೀತಿ, ಟೀಕಿಸುವ ಸಂದರ್ಭ ಬಂದಾಗ ಟೀಕೆಗಳು ಖಾಸಗಿಯಾಗಿರಲಿ.

ಮುಂಬೈ: ವಾರಕ್ಕೆ 70 ಗಂಟೆ ಕೆಲಸ ಮಾಡಬೇಕೆಂದು ಹೇಳಿದ್ದ ಇನ್ಫೋಸಿಸ್ ಸಂಸ್ಥೆಯ ಸಹ ಸಂಸ್ಥಾಪಕ ನಾರಾಯಣಮೂರ್ತಿ ಈಗ ಉದ್ಯೋಗಿಗಳ ಯೋಗಕ್ಷೇಮದ ಬಗ್ಗೆ ಮಾತನಾಡಿ ಸುದ್ದಿಯಲ್ಲಿದ್ದಾರೆ.

ಈಗ ಕಂಪನಿಗಳಿಗೆ ಸಲಹೆ ನೀಡಿರುವ ನಾರಾಯಣಮೂರ್ತಿ, ಕಂಪನಿಗಳು ತಮ್ಮ ಉದ್ಯೋಗಿಗಳನ್ನು ಮಾನವೀಯತೆಯಿಂದ ನಡೆಸಿಕೊಳ್ಳಬೇಕು ಎಂದು ಸಲಹೆ ನೀಡಿದ್ದಾರೆ. ಮಾತ್ರವಲ್ಲದೆ, ಸಂಸ್ಥೆಯಲ್ಲಿರುವ ವೇತನದ ಅಂತರವನ್ನೂ ಕಡಿಮೆ ಮಾಡಿ ಎಂದು ಹೇಳಿದ್ದಾರೆ.

TiE Con Mumbai 2025 ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, ಪ್ರತಿಯೊಬ್ಬ ಕಾರ್ಪೊರೇಟ್‌ ಉದ್ಯೋಗಿಯ ಗೌರವ ಮತ್ತು ಘನತೆಯನ್ನು ಎತ್ತಿಹಿಡಿಯಬೇಕು ಎಂದು ನಾರಾಯಣಮೂರ್ತಿ ಹೇಳಿದ್ದಾರೆ.

ನಿಮ್ಮ ಉದ್ಯೋಗಿಗಳನ್ನು ಹೊಗಳುವಾಗ ಸಾರ್ವಜನಿಕವಾಗಿಯೇ ಹೊಗಳಿ. ಅದೇ ರೀತಿ, ಟೀಕಿಸುವ ಸಂದರ್ಭ ಬಂದಾಗ ಟೀಕೆಗಳು ಖಾಸಗಿಯಾಗಿರಲಿ. ಸಂಸ್ಥೆಯ ಲಾಭವನ್ನು ಆದಷ್ಟು ನ್ಯಾಯಯುತವಾಗಿ ಉದ್ಯೋಗಿಗಳಿಗೆ ಹಂಚಿಕೆ ಮಾಡಿ' ಎಂದು ಮೂರ್ತಿ ಹೇಳಿದ್ದಾರೆ.

ಬಡತನ ನಿರ್ಮೂಲನೆಗೆ ಪರಿಹಾರ

ಭಾರತದ ಭವಿಷ್ಯದ ಅಭಿವೃದ್ಧಿ ಮತ್ತು ಬಡತನ ನಿರ್ಮೂಲನೆಯು ಸಹಾನುಭೂತಿಯಿಂದ ಬಂಡವಾಳಶಾಹಿಯನ್ನು ಸ್ವೀಕರಿಸುವ ವ್ಯವಹಾರಗಳ ಮೇಲೆ ಅವಲಂಬಿತವಾಗಿದೆ ಎಂದು ನಂಬುವುದಾಗಿ ನಾರಾಯಣಮೂರ್ತಿ ಹೇಳಿದ್ದಾರೆ.

"ಬಂಡವಾಳಶಾಹಿ ಎಂದರೆ ಜನರು ತಮಗಾಗಿ ಮತ್ತು ತಮ್ಮ ಹೂಡಿಕೆದಾರರಿಗೆ ಸಂಪತ್ತನ್ನು ಸೃಷ್ಟಿಸಲು, ಜನರಿಗೆ ಉದ್ಯೋಗಗಳನ್ನು ಸೃಷ್ಟಿಸಲು ಮತ್ತು ಆ ಮೂಲಕ ಬಡತನವನ್ನು ಕಡಿಮೆ ಮಾಡಲು ಮತ್ತು ಸಾರ್ವಜನಿಕ ಒಳ್ಳೆಯ ಕೆಲಸಗಳು ನಡೆಯಲು ತೆರಿಗೆಗಳಿಗೆ ಕೊಡುಗೆ ನೀಡಲು ಹೊಸ ಆಲೋಚನೆಗಳೊಂದಿಗೆ ಹೊರಬರಲು ಅವಕಾಶಗಳನ್ನು ಒದಗಿಸುವುದು" ಎಂದು ನಾರಾಯಣ ಮೂರ್ತಿ ವಿವರಿಸಿದರು.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

'ನಾವು ದಾಳಿ ಮಾಡದೇ ಹೋಗಿದ್ದರೆ ಇಷ್ಟು ಹೊತ್ತಿಗೆ Iran ಅಣ್ವಸ್ತ್ರ ರಾಷ್ಟ್ರವಾಗಿರುತ್ತಿತ್ತು': ಇಸ್ರೇಲ್ ಪ್ರಧಾನಿ ಬೆಂಜಮಿನ್ ನೇತನ್ಯಾಹು

IPL 2026: ತವರಿನಲ್ಲಿ ಮುಂಬೈ ಗೆ ಮುಖಭಂಗ; RCB ಗೆ 18 ರನ್ ಭರ್ಜರಿ ಗೆಲುವು!

7 ತಿಂಗಳ ಮಗುವಿಗಾಗಿ ಕೆಲಸದ ಸಮಯದ ಹೊಂದಾಣಿಕೆ ಕೋರಿದ ಭಾರತೀಯ ಉದ್ಯೋಗಿ; US ಮ್ಯಾನೇಜರ್ ಪ್ರತಿಕ್ರಿಯೆ ಬಗ್ಗೆ ಜಾಲತಾಣಗಳಲ್ಲಿ ಭಾರಿ ಚರ್ಚೆ!

ಗುರಿ ಇಟ್ಟಿದ್ದು ಜಿಹಾದಿ ಬಂಡುಕೋರರಿಗೆ, ಗುರಿಯಾಗಿದ್ದು ಸ್ಥಳೀಯ ಮಾರ್ಕೆಟ್; 100 ಕ್ಕೂ ಹೆಚ್ಚು ನಾಗರಿಕರ ಮಾರಣಹೋಮ!

IPL 2026: ಮುಂಬೈ ವಿರುದ್ದ ಭರ್ಜರಿ ಬ್ಯಾಟಿಂಗ್; ಬಾಬರ್ ಆಜಂ, ಕ್ರಿಸ್ ಗೇಯ್ಲ್ ದಾಖಲೆ ಮುರಿದ Virat Kohli!

SCROLL FOR NEXT