ಪ್ರೇಮ್‌ಚಂದ್ ಅಗರ್ವಾಲ್ 
ದೇಶ

ವಿವಾದಾತ್ಮಕ ಹೇಳಿಕೆಗೆ ಆಕ್ರೋಶ: ಉತ್ತರಾಖಂಡ ಸಚಿವ ಪ್ರೇಮ್‌ಚಂದ್ ಅಗರ್ವಾಲ್ ರಾಜೀನಾಮೆ

ಪ್ರೇಮ್‌ಚಂದ್ ಹೇಳಿಕೆ ಖಂಡಿಸಿ ರಾಜ್ಯಾದ್ಯಂತ ಪ್ರತಿಭಟನೆ ನಡೆದಿತ್ತು ಮತ್ತು ಸಾರ್ವಜನಿಕರಿಂದ ತೀವ್ರ ಆಕ್ರೋಶ ವ್ಯಕ್ತವಾಗಿತ್ತು.

ಡೆಹ್ರಾಡೂನ್: ಅಚ್ಚರಿಯ ಘಟನೆಯೊಂದರಲ್ಲಿ, ಉತ್ತರಾಖಂಡ ಹಣಕಾಸು ಮತ್ತು ಸಂಸದೀಯ ವ್ಯವಹಾರಗಳ ಸಚಿವ ಪ್ರೇಮ್‌ಚಂದ್ ಅಗರ್ವಾಲ್ ಅವರು ಭಾನುವಾರ ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡಿದ್ದಾರೆ.

ವಿಧಾನಸಭೆಯ ಬಜೆಟ್ ಅಧಿವೇಶನದಲ್ಲಿ ಅಗರ್ವಾಲ್ ಅವರು ಅಜಾಗರೂಕತೆಯಿಂದ ಬೆಟ್ಟದ ನಿವಾಸಿಗಳ ವಿರುದ್ಧ ಅವಹೇಳನಕಾರಿ ಹೇಳಿಕೆ ನೀಡಿದ ಹಿನ್ನೆಲೆಯಲ್ಲಿ ಈ ರಾಜೀನಾಮೆ ನೀಡಲಾಗಿದೆ.

ಪ್ರೇಮ್‌ಚಂದ್ ಹೇಳಿಕೆ ಖಂಡಿಸಿ ರಾಜ್ಯಾದ್ಯಂತ ಪ್ರತಿಭಟನೆ ನಡೆದಿತ್ತು ಮತ್ತು ಸಾರ್ವಜನಿಕರಿಂದ ತೀವ್ರ ಆಕ್ರೋಶ ವ್ಯಕ್ತವಾಗಿತ್ತು. ಹೀಗಾಗಿ ಅಗರ್ವಾಲ್ ಇಂದು ತಮ್ಮ ಸಚಿವ ಸ್ಥಾನಕ್ಕೆ ರಾಜೀನಾಮೆ ನೀಡಿದ್ದಾರೆ.

ರಾಜೀನಾಮೆ ಸಲ್ಲಿಸುವ ಮುನ್ನ ಭಾರವಾದ ಹೃದಯದಿಂದ ಮಾಧ್ಯಮಗಳನ್ನು ಉದ್ದೇಶಿಸಿ ಮಾತನಾಡಿದ ಸಂಸದೀಯ ವ್ಯವಹಾರಗಳ ಸಚಿವ ಪ್ರೇಮ್‌ಚಂದ್ ಅಗರ್ವಾಲ್ ಅವರು, "ನನ್ನ ಮಾತುಗಳು ಮತ್ತು ಅದರ ಪರಿಣಾಮಕ್ಕೆ ನಾನು ಸಂಪೂರ್ಣ ಜವಾಬ್ದಾರಿಯನ್ನು ತೆಗೆದುಕೊಳ್ಳುತ್ತೇನೆ" ಎಂದು ಹೇಳಿದರು.

"ರಾಜ್ಯದ ಎಲ್ಲಾ ನಿವಾಸಿಗಳ ಪ್ರೀತಿ ಮತ್ತು ಆಶೀರ್ವಾದಕ್ಕೆ ನಾನು ಧನ್ಯವಾದ ಹೇಳಲು ಬಯಸುತ್ತೇನೆ". ಈ ಬೆಂಬಲದ ಹೊರತಾಗಿಯೂ, ರಾಜ್ಯದಲ್ಲಿ ಸೃಷ್ಟಿಯಾಗಿರುವ ವಾತಾವರಣದಿಂದ ನನಗೆ ತೀವ್ರ ಬೇಸರವಾಗಿದೆ" ಎಂದು ಅವರು ಭಾವುಕರಾಗಿ ಹೇಳಿದರು.

ಅಗರ್ವಾಲ್ ಅವರ ವಿರುದ್ಧ ತೀವ್ರ ಟೀಕೆ ವ್ಯಕ್ತವಾಗಿದ್ದು, ಅವರ ವಿವಾದಾತ್ಮಕ ಹೇಳಿಕೆಗಳು ಸಾಮಾಜಿಕ ಮಾಧ್ಯಮದಲ್ಲಿ ಆಕ್ರೋಶ ಮತ್ತು ಟ್ರೋಲಿಂಗ್‌ಗೆ ಕಾರಣವಾಗಿತ್ತು. ಇದಕ್ಕೆ ಪ್ರತಿಕ್ರಿಯೆಯಾಗಿ, ಅಗರ್ವಾಲ್ ಅಲವು ಹಲವು ಬಾರಿ ಕ್ಷಮೆಯಾಚಿಸಿದರು. ವಿಧಾನಸಭಾ ಅಧಿವೇಶನದ ಸಮಯದಲ್ಲಿಯೂ ಒಂದು ಬಾರಿ ಕ್ಷಮೆಯಾಚಿಸಿದ್ದರು.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಟ್ರಂಪ್ ಎಚ್ಚರಿಕೆಗೆ ತಲೆಬಾಗದ ಇರಾನ್​: ಸೌದಿ ನೆಲೆಯಲ್ಲಿ ಕ್ಷಿಪಣಿ ದಾಳಿ; ಅಮೆರಿಕಾದ 5 ಟ್ಯಾಂಕರ್ ವಿಮಾನಗಳಿಗೆ ಹಾನಿ..!

West Asia conflict effect: LPG ಕೊರತೆ ತೀವ್ರ; ಮನೆಗಳಲ್ಲಿ PNG, ಹೋಟೆಲ್ ಗಳು ಕಲ್ಲಿದ್ದಲು ಬಳಕೆ ಮಾಡುವಂತೆ ಕೇಂದ್ರ ಸರ್ಕಾರ ಸಲಹೆ

ಒಡಿಶಾ 'ಕೈ' ಶಾಸಕರಿಗೆ' ಟ್ರಬಲ್ ಶೂಟರ್ ಡಿಕೆಶಿ ಆತಿಥ್ಯ: 'ಆಪರೇಷನ್ ಕಮಲ' ತಡೆಗೆ ಕೈಗೊಂಡ ಮುನ್ನೆಚ್ಚರಿಕಾ ಕ್ರಮ; ಕಾಂಗ್ರೆಸ್ ಸಮರ್ಥನೆ

ಒಂದೇ ಸೂರಿನಡಿ ರಾಮ್-ರಹೀಮ್: ದ್ವೇಷ ಹರಡುವವರ ಮಧ್ಯೆ ಮುಸ್ಲಿಮರಿಗಾಗಿ ‘ಇಫ್ತಾರ್ ಕೂಟ’ ಆಯೋಜಿಸುತ್ತಿರುವ ಹಿಂದೂ ಮಹಿಳೆ..!

Strait of Hormuz: 'ಹೌದು.. ನಮ್ಮ ಆಪ್ತ ರಾಷ್ಟ್ರ'... ಭಾರತದ ನೌಕೆಗಳಿಗೆ ಅನುಮತಿ ಕುರಿತು ಇರಾನ್ ರಾಯಭಾರಿ ಹೇಳಿಕೆ!

SCROLL FOR NEXT