ಇಫ್ತಾರ್ ಕೂಟದಲ್ಲಿ ದೆಹಲಿ ಸಿಎಂ ಭಾಗಿ 
ದೇಶ

ಇಫ್ತಾರ್ ಕೂಟದಲ್ಲಿ ದೆಹಲಿ ಬಿಜೆಪಿ ಸಿಎಂ ಭಾಗಿ; ಏಕತೆ ಹೆಚ್ಚುತ್ತದೆ ಎಂದ ರೇಖಾ ಗುಪ್ತಾ

ಕೇಂದ್ರ ಅಲ್ಪಸಂಖ್ಯಾತ ವ್ಯವಹಾರಗಳ ಸಚಿವ ಕಿರಣ್ ರಿಜಿಜು ಮತ್ತು ಹಲವಾರು ಬಿಜೆಪಿ ನಾಯಕರು ಸಹ ಈ ಕಾರ್ಯಕ್ರಮದಲ್ಲಿ ಭಾಗವಹಿಸಿದ್ದರು.

ನವದೆಹಲಿ: ದೆಹಲಿಯಲ್ಲಿ ಬಿಜೆಪಿ ಅಲ್ಪಸಂಖ್ಯಾತ ಮೋರ್ಚಾ ಆಯೋಜಿಸಿದ್ದ ಇಫ್ತಾರ್ ಕೂಟದಲ್ಲಿ ದೆಹಲಿ ಮುಖ್ಯಮಂತ್ರಿ ರೇಖಾ ಗುಪ್ತಾ ಅವರು ಸಚಿವ ಆಶಿಶ್ ಸೂದ್ ಅವರೊಂದಿಗೆ ಭಾಗವಹಿಸಿದ್ದರು.

ಭಾನುವಾರ ದೆಹಲಿ ಬಿಜೆಪಿಯ ಅಲ್ಪಸಂಖ್ಯಾತ ಮೋರ್ಚಾ ಆಯೋಜಿಸಿದ್ದ ಇಫ್ತಾರ್ ಕಾರ್ಯಕ್ರಮದಲ್ಲಿ ಭಾಗವಹಿಸಿದೆ. ಇಂತಹ ಕಾರ್ಯಕ್ರಮಗಳು ಸಮಾಜದಲ್ಲಿ "ಏಕತೆ ಮತ್ತು ಸಾಮರಸ್ಯ"ವನ್ನು ಬಲಪಡಿಸುತ್ತವೆ ಎಂದು ದೆಹಲಿ ಮುಖ್ಯಮಂತ್ರಿ ರೇಖಾ ಗುಪ್ತಾ ಅವರು ಹೇಳಿದ್ದಾರೆ.

ಕೇಂದ್ರ ಅಲ್ಪಸಂಖ್ಯಾತ ವ್ಯವಹಾರಗಳ ಸಚಿವ ಕಿರಣ್ ರಿಜಿಜು ಮತ್ತು ಹಲವಾರು ಬಿಜೆಪಿ ನಾಯಕರು ಸಹ ಈ ಕಾರ್ಯಕ್ರಮದಲ್ಲಿ ಭಾಗವಹಿಸಿದ್ದರು.

"ಬಿಜೆಪಿ ಅಲ್ಪಸಂಖ್ಯಾತ ಮೋರ್ಚಾ(ದೆಹಲಿ ರಾಜ್ಯ) ಆಯೋಜಿಸಿದ್ದ 'ದಾವತ್-ಎ-ಇಫ್ತಾರ್' ಕಾರ್ಯಕ್ರಮದಲ್ಲಿ ಎಲ್ಲಾ ಸಹೋದರ ಸಹೋದರಿಯರೊಂದಿಗೆ ಸಾಮರಸ್ಯ ಮತ್ತು ಏಕತೆಯ ಸಂದೇಶವನ್ನು ಹಂಚಿಕೊಳ್ಳಲು ಅವಕಾಶ ಸಿಕ್ಕಿತು. ನಮ್ಮ ಸಂಸ್ಕೃತಿ ಪರಸ್ಪರ ಗೌರವ, ಪ್ರೀತಿ ಮತ್ತು ಸಾಮರಸ್ಯದ ಸಂಕೇತವಾಗಿದೆ. ಅಂತಹ ಕಾರ್ಯಕ್ರಮಗಳು ಸಮಾಜದಲ್ಲಿ ಏಕತೆ ಮತ್ತು ಸಾಮರಸ್ಯವನ್ನು ಮತ್ತಷ್ಟು ಬಲಪಡಿಸುತ್ತವೆ" ಎಂದು ರೇಖಾ ಗುಪ್ತಾ ಅವರು ಎಕ್ಸ್ ನಲ್ಲಿ ಪೋಸ್ಟ್‌ ಮಾಡಿದ್ದಾರೆ.

ಇದಕ್ಕೂ ಮೊದಲು, ಮುಖ್ಯಮಂತ್ರಿ ಗುಪ್ತಾ, ರಿಜಿಜು ಮತ್ತು ಇತರ ಪಕ್ಷದ ನಾಯಕರು ಶನಿವಾರ ದೆಹಲಿ ಹಜ್ ಸಮಿತಿ ಆಯೋಜಿಸಿದ್ದ ಇಫ್ತಾರ್‌ನಲ್ಲಿ ಭಾಗವಹಿಸಿದ್ದರು.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

IPL 2026: ಗುಜರಾತ್ ವಿರುದ್ಧ ಭರ್ಜರಿ ಗೆಲುವು; ಸತತ 2ನೇ ಬಾರಿ ಫೈನಲ್ಸ್ ಪ್ರವೇಶಿಸಿದ RCB

IPL 2026: 33 ಎಸೆತ, 9 ಸಿಕ್ಸರ್, ಒಂದೇ ಒಂದು ಡಾಟ್.. Rajat Patidar ಸ್ಫೋಟಕ ಬ್ಯಾಟಿಂಗ್ ಗೆ ಕೊಹ್ಲಿ ಸೇರಿ ಕ್ರೀಡಾಂಗಣವೇ ದಂಗು!

ಈ ವಾರವೇ ಸಿದ್ದರಾಮಯ್ಯ ರಾಜೀನಾಮೆ ಸಾಧ್ಯತೆ; ಆಪ್ತರ ಬಳಿ CM ಹೇಳಿದ್ದೇನು?: ಮೇ.27 ರಂದು ರಾಜ್ಯಕ್ಕೆ ಹೈಕಮಾಂಡ್ ನಾಯಕರು

IPL 2026 Qualifier 1: GT ವಿರುದ್ದ ಸ್ಫೋಟಕ ಬ್ಯಾಟಿಂಗ್, ಇತಿಹಾಸ ಬರೆದ RCB

IPL 2026 Qualifier 1: ಐಪಿಎಲ್ ಅಷ್ಟೇ ಅಲ್ಲ.. ಜಾಗತಿಕ ಟಿ20 ಕ್ರಿಕೆಟ್ ನಲ್ಲೂ RCB ಐತಿಹಾಸಿಕ ದಾಖಲೆ, ರೆಕಾರ್ಡ್ ಗಳ ಪಟ್ಟಿ!

SCROLL FOR NEXT