ಇಫ್ತಾರ್ ಕೂಟದಲ್ಲಿ ದೆಹಲಿ ಸಿಎಂ ಭಾಗಿ 
ದೇಶ

ಇಫ್ತಾರ್ ಕೂಟದಲ್ಲಿ ದೆಹಲಿ ಬಿಜೆಪಿ ಸಿಎಂ ಭಾಗಿ; ಏಕತೆ ಹೆಚ್ಚುತ್ತದೆ ಎಂದ ರೇಖಾ ಗುಪ್ತಾ

ಕೇಂದ್ರ ಅಲ್ಪಸಂಖ್ಯಾತ ವ್ಯವಹಾರಗಳ ಸಚಿವ ಕಿರಣ್ ರಿಜಿಜು ಮತ್ತು ಹಲವಾರು ಬಿಜೆಪಿ ನಾಯಕರು ಸಹ ಈ ಕಾರ್ಯಕ್ರಮದಲ್ಲಿ ಭಾಗವಹಿಸಿದ್ದರು.

ನವದೆಹಲಿ: ದೆಹಲಿಯಲ್ಲಿ ಬಿಜೆಪಿ ಅಲ್ಪಸಂಖ್ಯಾತ ಮೋರ್ಚಾ ಆಯೋಜಿಸಿದ್ದ ಇಫ್ತಾರ್ ಕೂಟದಲ್ಲಿ ದೆಹಲಿ ಮುಖ್ಯಮಂತ್ರಿ ರೇಖಾ ಗುಪ್ತಾ ಅವರು ಸಚಿವ ಆಶಿಶ್ ಸೂದ್ ಅವರೊಂದಿಗೆ ಭಾಗವಹಿಸಿದ್ದರು.

ಭಾನುವಾರ ದೆಹಲಿ ಬಿಜೆಪಿಯ ಅಲ್ಪಸಂಖ್ಯಾತ ಮೋರ್ಚಾ ಆಯೋಜಿಸಿದ್ದ ಇಫ್ತಾರ್ ಕಾರ್ಯಕ್ರಮದಲ್ಲಿ ಭಾಗವಹಿಸಿದೆ. ಇಂತಹ ಕಾರ್ಯಕ್ರಮಗಳು ಸಮಾಜದಲ್ಲಿ "ಏಕತೆ ಮತ್ತು ಸಾಮರಸ್ಯ"ವನ್ನು ಬಲಪಡಿಸುತ್ತವೆ ಎಂದು ದೆಹಲಿ ಮುಖ್ಯಮಂತ್ರಿ ರೇಖಾ ಗುಪ್ತಾ ಅವರು ಹೇಳಿದ್ದಾರೆ.

ಕೇಂದ್ರ ಅಲ್ಪಸಂಖ್ಯಾತ ವ್ಯವಹಾರಗಳ ಸಚಿವ ಕಿರಣ್ ರಿಜಿಜು ಮತ್ತು ಹಲವಾರು ಬಿಜೆಪಿ ನಾಯಕರು ಸಹ ಈ ಕಾರ್ಯಕ್ರಮದಲ್ಲಿ ಭಾಗವಹಿಸಿದ್ದರು.

"ಬಿಜೆಪಿ ಅಲ್ಪಸಂಖ್ಯಾತ ಮೋರ್ಚಾ(ದೆಹಲಿ ರಾಜ್ಯ) ಆಯೋಜಿಸಿದ್ದ 'ದಾವತ್-ಎ-ಇಫ್ತಾರ್' ಕಾರ್ಯಕ್ರಮದಲ್ಲಿ ಎಲ್ಲಾ ಸಹೋದರ ಸಹೋದರಿಯರೊಂದಿಗೆ ಸಾಮರಸ್ಯ ಮತ್ತು ಏಕತೆಯ ಸಂದೇಶವನ್ನು ಹಂಚಿಕೊಳ್ಳಲು ಅವಕಾಶ ಸಿಕ್ಕಿತು. ನಮ್ಮ ಸಂಸ್ಕೃತಿ ಪರಸ್ಪರ ಗೌರವ, ಪ್ರೀತಿ ಮತ್ತು ಸಾಮರಸ್ಯದ ಸಂಕೇತವಾಗಿದೆ. ಅಂತಹ ಕಾರ್ಯಕ್ರಮಗಳು ಸಮಾಜದಲ್ಲಿ ಏಕತೆ ಮತ್ತು ಸಾಮರಸ್ಯವನ್ನು ಮತ್ತಷ್ಟು ಬಲಪಡಿಸುತ್ತವೆ" ಎಂದು ರೇಖಾ ಗುಪ್ತಾ ಅವರು ಎಕ್ಸ್ ನಲ್ಲಿ ಪೋಸ್ಟ್‌ ಮಾಡಿದ್ದಾರೆ.

ಇದಕ್ಕೂ ಮೊದಲು, ಮುಖ್ಯಮಂತ್ರಿ ಗುಪ್ತಾ, ರಿಜಿಜು ಮತ್ತು ಇತರ ಪಕ್ಷದ ನಾಯಕರು ಶನಿವಾರ ದೆಹಲಿ ಹಜ್ ಸಮಿತಿ ಆಯೋಜಿಸಿದ್ದ ಇಫ್ತಾರ್‌ನಲ್ಲಿ ಭಾಗವಹಿಸಿದ್ದರು.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಜಮ್ಮುವಿನಾದ್ಯಂತ ಭಾರೀ ಮಳೆ: ಪ್ರವಾಹ, ಭೂಕುಸಿತದಿಂದ ಮೂವರು ಸಾವು; ಕೊಚ್ಚಿ ಹೋದ ಸೇತುವೆ; Video

Indian Navyಗೆ ಮತ್ತಷ್ಟು ಬಲ: INS Udaygiri, INS Himgiri ಯುದ್ಧನೌಕೆಗಳು ಸೇರ್ಪಡೆ!

ಬಿಹಾರ: ಇನ್ನು 40-50 ವರ್ಷ ಅಧಿಕಾರದಲ್ಲಿ ಇರ್ತೀವಿ ಅಂತಾ ಅಮಿತ್ ಶಾ ಗೆ ಹೇಗೆ ಗೊತ್ತು? ರಾಹುಲ್ ಗಾಂಧಿ

ಭ್ರಷ್ಟಾಚಾರ ಪ್ರಕರಣ: ಬಂಧಿತ ಶ್ರೀಲಂಕಾ ಮಾಜಿ ಅಧ್ಯಕ್ಷ ವಿಕ್ರಮಸಿಂಘೆಗೆ ಜಾಮೀನು

ನನ್ನ-ಕಾಂಗ್ರೆಸ್ ಮಧ್ಯೆ ಭಕ್ತ-ಭಗವಂತನ ಸಂಬಂಧ ಇದೆ; RSS ಗೀತೆ ಹಾಡಿದ್ದಕ್ಕೆ ನೋವಾಗಿದ್ದರೆ ಕ್ಷಮೆ ಕೇಳುತ್ತೇನೆ: ಡಿ.ಕೆ ಶಿವಕುಮಾರ್; Video

SCROLL FOR NEXT