ಸಿಎಂ ಚಂದ್ರಬಾಬು ನಾಯ್ಡು  
ದೇಶ

'ಭಾಷೆ ದ್ವೇಷಿಸುವ ವಿಷಯವಲ್ಲ, ಹಿಂದಿ ರಾಷ್ಟ್ರ ಭಾಷೆ': ಆಂಧ್ರ ಸಿಎಂ ಚಂದ್ರಬಾಬು ನಾಯ್ಡು

ಇತ್ತೀಚಿಗೆ ಆಂಧ್ರ ಉಪಮುಖ್ಯಮಂತ್ರಿ ಮತ್ತು ಜನಸೇನಾ ಮುಖ್ಯಸ್ಥ ಪವನ್ ಕಲ್ಯಾಣ್ ಅವರು ಸಹ ಹಿಂದಿಯನ್ನು ಬೆಂಬಲಿಸಿದ್ದರು ಮತ್ತು ಯಾವುದೇ ಭಾಷೆಯನ್ನು ದ್ವೇಷಿಸುವ ಮನಸ್ಥಿತಿ ಬದಲಾಗಬೇಕು ಎಂದು ಅವರು ಹೇಳಿದ್ದರು.

ಅಮರಾವತಿ: ಹಿಂದಿ ಹೇರಿಕೆಯನ್ನು ತಮಿಳುನಾಡು ಸೇರಿದಂತೆ ದಕ್ಷಿಣ ಭಾರತದ ರಾಜ್ಯಗಳು ತೀವ್ರವಾಗಿ ವಿರೋಧಿಸುತ್ತಿರುವಾಗ ಆಂಧ್ರಪ್ರದೇಶದ ಮುಖ್ಯಮಂತ್ರಿ ಎನ್. ಚಂದ್ರಬಾಬು ನಾಯ್ಡು ಅವರು ಸೋಮವಾರ ಹಿಂದಿ ರಾಷ್ಟ್ರ ಭಾಷೆ ಮತ್ತು ಭಾಷೆ ದ್ವೇಷಿಸುವ ವಿಷಯವಲ್ಲ ಎಂದು ಪ್ರತಿಪಾದಿಸಿದ್ದಾರೆ.

ಇತ್ತೀಚಿಗೆ ಆಂಧ್ರ ಉಪಮುಖ್ಯಮಂತ್ರಿ ಮತ್ತು ಜನಸೇನಾ ಮುಖ್ಯಸ್ಥ ಪವನ್ ಕಲ್ಯಾಣ್ ಅವರು ಸಹ ಹಿಂದಿಯನ್ನು ಬೆಂಬಲಿಸಿದ್ದರು ಮತ್ತು ಯಾವುದೇ ಭಾಷೆಯನ್ನು ದ್ವೇಷಿಸುವ ಮನಸ್ಥಿತಿ ಬದಲಾಗಬೇಕು ಎಂದು ಅವರು ಹೇಳಿದ್ದರು.

ಇಂದು ವಿಧಾನಸಭೆಯಲ್ಲಿ ಮಾತನಾಡಿದ ಚಂದ್ರಬಾಬು ನಾಯ್ಡು ಅವರು, "ನಾನು ಇದನ್ನು ನಿಮಗೆ ಸ್ಪಷ್ಟವಾಗಿ ಹೇಳುತ್ತಿದ್ದೇನೆ. ಭಾಷೆ ದ್ವೇಷಿಸುವುದಕ್ಕಾಗಿ ಅಲ್ಲ. ಇಲ್ಲಿ(ಆಂಧ್ರಪ್ರದೇಶದಲ್ಲಿ) ಮಾತೃಭಾಷೆ ತೆಲುಗು. ಹಿಂದಿ ರಾಷ್ಟ್ರೀ ಭಾಷೆ ಮತ್ತು ಅಂತರರಾಷ್ಟ್ರೀಯ ಭಾಷೆ ಇಂಗ್ಲಿಷ್" ಎಂದು ಹೇಳಿದರು.

ಜೀವನೋಪಾಯಕ್ಕಾಗಿ ಸಾಧ್ಯವಾದಷ್ಟು ಭಾಷೆಗಳನ್ನು ಕಲಿಯುವುದು ಮುಖ್ಯ ಒತ್ತಿ ಹೇಳಿದ ನಾಯ್ಡು, 'ರಾಷ್ಟ್ರ ಭಾಷೆ' ಕಲಿಯುವುದರಿಂದ ದೆಹಲಿಯಲ್ಲಿ ಹಿಂದಿಯಲ್ಲಿ ನಿರರ್ಗಳವಾಗಿ ಮಾತನಾಡಲು ಸಾಧ್ಯವಾಗುತ್ತದೆ ಎಂದು ಹೇಳಿದರು.

ಜಪಾನ್ ಮತ್ತು ಜರ್ಮನಿಯಂತಹ ಇತರ ದೇಶಗಳಿಗೆ ಅನೇಕ ಜನರು ಹೋಗುತ್ತಿರುವುದರಿಂದ, ಆ ಭಾಷೆಗಳನ್ನು ಇಲ್ಲಿಯೂ ಕಲಿಯಲು ಸಾಧ್ಯವಾದರೆ, ಅವರು ವಿದೇಶಿ ತಾಣಗಳಿಗೆ ಭೇಟಿ ನೀಡಿದಾಗ ಮಾತನಾಡಲು ತುಂಬಾ ಸುಲಭವಾಗುತ್ತದೆ ಎಂದು ಹೇಳಿದರು.

ಭಾಷೆ ಸಂವಹನದ ಒಂದು ಸಾಧನ. ಭಾಷೆಯಿಂದ ಜ್ಞಾನವನ್ನು ಪಡೆಯಲು ಸಾಧ್ಯವಿಲ್ಲ. ತಮ್ಮ ಮಾತೃಭಾಷೆಯನ್ನು ಕಲಿತು ಹೆಮ್ಮೆಯಿಂದ ಮಾತನಾಡುವವರು ಪ್ರಪಂಚದಾದ್ಯಂತ ಉನ್ನತ ಸ್ಥಾನಗಳಲ್ಲಿ ಕುಳಿತಿದ್ದಾರೆ. ನಮ್ಮ ಮಾತೃಭಾಷೆಯನ್ನು ಕಲಿಯುವುದು ಸುಲಭ. ಅದರ ಜೊತೆಗೆ ಇತರೆ ಭಾಷೆಗಳನ್ನು ಕಲಿಯಬೇಕು ಎಂದರು.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಭಾರತದ ನೆಲದಲ್ಲೇ ಸ್ತ್ರೀದ್ವೇಷ ಪ್ರದರ್ಶಿಸಿದ ತಾಲೀಬಾನ್ ವಿದೇಶಾಂಗ ಸಚಿವ!; ಸುದ್ದಿಗೋಷ್ಠಿಗೆ ಮಹಿಳೆಯರಿಗಿಲ್ಲ ಪ್ರವೇಶ; ಭುಗಿಲೆದ್ದ ಅಸಮಾಧಾನ!

'ನನ್ನ ಪ್ರಶಸ್ತಿ ಟ್ರಂಪ್‌ಗೆ ಸಮರ್ಪಿತ...' Noble ಶಾಂತಿ ಪ್ರಶಸ್ತಿ ಗೆದ್ದ ಬೆನ್ನಲ್ಲೇ ಮಾರಿಯಾ ಶಾಕಿಂಗ್ ಹೇಳಿಕೆ!

ಭಾರತದ ಹಿತಾಸಕ್ತಿಗಳ ವಿರುದ್ಧ ಅಫ್ಘಾನಿಸ್ತಾನ ನೆಲ ಬಳಕೆಯಾಗಲ್ಲ, ನೀವು ಆಟ ಆಡಬೇಡಿ- ಪಾಕಿಸ್ತಾನಕ್ಕೆ ಅಫ್ಘಾನ್ ವಿದೇಶಾಂಗ ಸಚಿವರ ನೇರ ಎಚ್ಚರಿಕೆ!

ಚಿಕ್ಕಬಳ್ಳಾಪುರ: 'Miss U Chinna'; ಅಪ್ರಾಪ್ತ ಪ್ರೇಯಸಿಯ ದುಪ್ಪಟ್ಟದಿಂದಲೇ ಯುವಕ ನೇಣಿಗೆ ಶರಣು; Instagram Post Viral

ಬೆಂಗಳೂರಿನಲ್ಲೊಂದು ಹೃದಯ ವಿದ್ರಾವಕ ಘಟನೆ: ಇಬ್ಬರು ಮಕ್ಕಳನ್ನು ಕೊಂದು ತಾಯಿ ಆತ್ಮಹತ್ಯೆ

SCROLL FOR NEXT