ತುಳಸಿ ಗಬ್ಬಾರ್ಡ್ - ಪ್ರಧಾನಿ ಮೋದಿ 
ದೇಶ

ತುಳಸಿ ಗಬ್ಬಾರ್ಡ್​ಗೆ ಮಹಾಕುಂಭ ಮೇಳದ ಗಂಗಾಜಲ ನೀಡಿದ ಪ್ರಧಾನಿ ಮೋದಿ

ಇಂದು ಸಂಜೆ ದೆಹಲಿಯಲ್ಲಿ ತಮ್ಮನ್ನು ಭೇಟಿಯಾದ ತುಳಸಿ ಗಬ್ಬಾರ್ಡ್​ ಅವರಿಗೆ ಪ್ರಧಾನಿ ಮೋದಿ ಇತ್ತೀಚೆಗೆ ಪ್ರಯಾಗ್‌ರಾಜ್‌ನಲ್ಲಿ ನಡೆದ ಮಹಾಕುಂಭ ಮೇಳದಿಂದ ಸಂಗ್ರಹಿಸಿದ್ದ ಪವಿತ್ರ ಗಂಗಾಜಲವನ್ನು ನೀಡಿದರು.

ನವದೆಹಲಿ: ಪ್ರಧಾನಿ ನರೇಂದ್ರ ಮೋದಿ ಸೋಮವಾರ ಸಂಜೆ ರಾಷ್ಟ್ರ ರಾಜಧಾನಿಯಲ್ಲಿ ಅಮೆರಿಕದ ರಾಷ್ಟ್ರೀಯ ಗುಪ್ತಚರ(ಡಿಎನ್‌ಐ) ನಿರ್ದೇಶಕಿ ತುಳಸಿ ಗಬ್ಬಾರ್ಡ್ ಅವರನ್ನು ಭೇಟಿಯಾದರು.

ಇಂದು ಸಂಜೆ ದೆಹಲಿಯಲ್ಲಿ ತಮ್ಮನ್ನು ಭೇಟಿಯಾದ ತುಳಸಿ ಗಬ್ಬಾರ್ಡ್​ ಅವರಿಗೆ ಪ್ರಧಾನಿ ಮೋದಿ ಇತ್ತೀಚೆಗೆ ಪ್ರಯಾಗ್‌ರಾಜ್‌ನಲ್ಲಿ ನಡೆದ ಮಹಾಕುಂಭ ಮೇಳದಿಂದ ಸಂಗ್ರಹಿಸಿದ್ದ ಪವಿತ್ರ ಗಂಗಾಜಲವನ್ನು ನೀಡಿದರು.

ತುಳಸಿ ಗಬ್ಬಾರ್ಡ್ ಭೇಟಿಯಾದ ಫೋಟೊವನ್ನು ಎಕ್ಸ್‌ನಲ್ಲಿ ಹಂಚಿಕೊಂಡಿರುವ ಪ್ರಧಾನಿ ಮೋದಿ, ಗಬ್ಬಾರ್ಡ್ ಅವರನ್ನು ಭಾರತಕ್ಕೆ ಸ್ವಾಗತಿಸಲು ಸಂತೋಷವಾಗುತ್ತಿದೆ. ಅಮೆರಿಕ ಮತ್ತು ಭಾರತ ಎರಡೂ ಭಯೋತ್ಪಾದನೆಯನ್ನು ಎದುರಿಸಲು ಮತ್ತು ಕಡಲ ಹಾಗೂ ಸೈಬರ್ ಭದ್ರತಾ ಸಹಕಾರವನ್ನು ಹೆಚ್ಚಿಸಲು ಬದ್ಧವಾಗಿವೆ ಎಂದು ಹೇಳಿದ್ದಾರೆ.

ಗಬ್ಬಾರ್ಡ್ ಅವರು ಮಾರ್ಚ್ 18 ರಂದು ದೆಹಲಿಯಲ್ಲಿ ಭದ್ರತಾ ಅಧಿಕಾರಿಗಳ ಬಹುರಾಷ್ಟ್ರೀಯ ಸಭೆಯಾದ ರೈಸಿನಾ ಸಂವಾದದಲ್ಲಿ ಭಾಗವಹಿಸುವುದರೊಂದಿಗೆ ಅವರ ಎರಡು ದಿನಗಳ ಭಾರತ ಪ್ರವಾಸ ಮುಕ್ತಾಯಗೊಳ್ಳಲಿದೆ.

ರಕ್ಷಣಾ ಸಚಿವ ರಾಜನಾಥ್ ಸಿಂಗ್ ಅವರೊಂದಿಗಿನ ಚರ್ಚೆಯ ನಂತರ ಗಬ್ಬಾರ್ಡ್ ಅವರು ಪ್ರಧಾನಿ ಮೋದಿ ಅವರರೊಂದಿಗೆ ಸಭೆ ನಡೆಸಿದರು.

ನಿನ್ನೆ ಭಾರತದ ರಾಷ್ಟ್ರೀಯ ಭದ್ರತಾ ಸಲಹೆಗಾರ(ಎನ್‌ಎಸ್‌ಎ) ಅಜಿತ್ ದೋವಲ್ ಅವರನ್ನು ಭೇಟಿಯಾಗಿದ್ದ ತುಳಸಿ ಗಬ್ಬಾರ್ಡ್ ಅವರು ಇಂದು ಬೆಳಗ್ಗೆ ದೆಹಲಿಯಲ್ಲಿ ಆಯೋಜಿಸಿದ್ದ ಜಾಗತಿಕ ಗುಪ್ತಚರ ಮುಖ್ಯಸ್ಥರ ಸಮಾವೇಶದಲ್ಲಿ ಭಾಗವಹಿಸಿದ್ದರು. ನಂತರ ರಾಜನಾಥ್ ಸಿಂಗ್ ಅವರೊಂದಿಗೆ ಮಾತುಕತೆ ನಡೆಸಿದರು. ಇದೀಗ ಸಂಜೆ ಪ್ರಧಾನಿ ಮೋದಿಯವರನ್ನು ಭೇಟಿಯಾಗಿದ್ದಾರೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಭಾರತದ ನೆಲದಲ್ಲೇ ಸ್ತ್ರೀದ್ವೇಷ ಪ್ರದರ್ಶಿಸಿದ ತಾಲೀಬಾನ್ ವಿದೇಶಾಂಗ ಸಚಿವ!; ಸುದ್ದಿಗೋಷ್ಠಿಗೆ ಮಹಿಳೆಯರಿಗಿಲ್ಲ ಪ್ರವೇಶ; ಭುಗಿಲೆದ್ದ ಅಸಮಾಧಾನ!

'ನನ್ನ ಪ್ರಶಸ್ತಿ ಟ್ರಂಪ್‌ಗೆ ಸಮರ್ಪಿತ...' Noble ಶಾಂತಿ ಪ್ರಶಸ್ತಿ ಗೆದ್ದ ಬೆನ್ನಲ್ಲೇ ಮಾರಿಯಾ ಶಾಕಿಂಗ್ ಹೇಳಿಕೆ!

ಭಾರತದ ಹಿತಾಸಕ್ತಿಗಳ ವಿರುದ್ಧ ಅಫ್ಘಾನಿಸ್ತಾನ ನೆಲ ಬಳಕೆಯಾಗಲ್ಲ, ನೀವು ಆಟ ಆಡಬೇಡಿ- ಪಾಕಿಸ್ತಾನಕ್ಕೆ ಅಫ್ಘಾನ್ ವಿದೇಶಾಂಗ ಸಚಿವರ ನೇರ ಎಚ್ಚರಿಕೆ!

ಚಿಕ್ಕಬಳ್ಳಾಪುರ: 'Miss U Chinna'; ಅಪ್ರಾಪ್ತ ಪ್ರೇಯಸಿಯ ದುಪ್ಪಟ್ಟದಿಂದಲೇ ಯುವಕ ನೇಣಿಗೆ ಶರಣು; Instagram Post Viral

ಬೆಂಗಳೂರಿನಲ್ಲೊಂದು ಹೃದಯ ವಿದ್ರಾವಕ ಘಟನೆ: ಇಬ್ಬರು ಮಕ್ಕಳನ್ನು ಕೊಂದು ತಾಯಿ ಆತ್ಮಹತ್ಯೆ

SCROLL FOR NEXT