ದೇಶ

Ranya Rao Gold Smuggling ಕೇಸ್ ಬೆನ್ನಲ್ಲೇ DRI ಭರ್ಜರಿ ಬೇಟೆ: 80 ಕೋಟಿ ರೂ ಮೌಲ್ಯದ ಚಿನ್ನದ ಗಟ್ಟಿ, 1 ಕೋಟಿಗೂ ಹೆಚ್ಚು ನಗದು ವಶ! Video

ಗುಜರಾತ್ ಎಟಿಎಸ್ ಮತ್ತು ಕಂದಾಯ ಗುಪ್ತಚರ ನಿರ್ದೇಶನಾಲಯ (DRI) ನಗರದ ಪಾಲ್ಡಿ ಪ್ರದೇಶದಲ್ಲಿ ಸ್ಟಾಕ್ ಮಾರ್ಕೆಟ್ ಆಪರೇಟರ್ ಒಬ್ಬರ ಖಾಲಿ ಫ್ಲಾಟ್ ಮೇಲೆ ಜಂಟಿ ಕಾರ್ಯಾಚರಣೆ ನಡೆಸಿದ್ದು ಈ ವೇಳೆ ಫ್ಲಾಟ್ ನಲ್ಲಿದ್ದ ಚಿನ್ನದ ಗಟ್ಟಿಗಳನ್ನು ನೋಡಿ ಅಧಿಕಾರಿಗಳೇ ಶಾಕ್ ಆಗಿದ್ದಾರೆ.

ಅಹಮದಾಬಾದ್‌: ಗುಜರಾತ್ ಎಟಿಎಸ್ ಮತ್ತು ಕಂದಾಯ ಗುಪ್ತಚರ ನಿರ್ದೇಶನಾಲಯ (DRI) ನಗರದ ಪಾಲ್ಡಿ ಪ್ರದೇಶದಲ್ಲಿ ಸ್ಟಾಕ್ ಮಾರ್ಕೆಟ್ ಆಪರೇಟರ್ ಒಬ್ಬರ ಖಾಲಿ ಫ್ಲಾಟ್ ಮೇಲೆ ಜಂಟಿ ಕಾರ್ಯಾಚರಣೆ ನಡೆಸಿದ್ದು ಈ ವೇಳೆ ಫ್ಲಾಟ್ ನಲ್ಲಿದ್ದ ಚಿನ್ನದ ಗಟ್ಟಿಗಳನ್ನು ನೋಡಿ ಅಧಿಕಾರಿಗಳೇ ಶಾಕ್ ಆಗಿದ್ದಾರೆ.

ಡಿಆರ್‌ಐ ಮತ್ತು ಎಟಿಎಸ್ (ATS) ಅಧಿಕಾರಿಗಳು ಚಿನ್ನದ (Gold) ಗಟ್ಟಿಗಳನ್ನು ತೂಕ ಮಾಡಿದ್ದಾರೆ. ಸುಮಾರು 90 ಕೆಜಿ ಇದ್ದು ಪ್ರಸ್ತುತ ಮಾರುಕಟ್ಟೆ ಬೆಲೆಯನ್ನು ಆಧರಿಸಿ ಇದರ ಮೌಲ್ಯ 80 ಕೋಟಿ ರೂ.ಗಳಿಗಿಂತ ಹೆಚ್ಚಿರಬಹುದು ಎಂದು ಅವರು ಹೇಳಿದ್ದಾರೆ. ಗುಜರಾತ್‌ಗೆ ಅಪಾರ ಪ್ರಮಾಣದ ಚಿನ್ನವನ್ನು ಕಳ್ಳಸಾಗಣೆ ಮಾಡಿ ಪಾಲ್ಡಿಯ ಆವಿಷ್ಕಾರ್ ಅಪಾರ್ಟ್‌ಮೆಂಟ್‌ನಲ್ಲಿರುವ ಮುಚ್ಚಿದ ಫ್ಲಾಟ್‌ನಲ್ಲಿ ಅಡಗಿಸಿಡಲಾಗಿದೆ ಎಂದು ಎಟಿಎಸ್ ಅಧಿಕಾರಿಗಳಿಗೆ ಗುಪ್ತಚರ ಮಾಹಿತಿ ಬಂದಿದೆ ಎಂದು ಮೂಲಗಳು ತಿಳಿಸಿವೆ. ಮಾಹಿತಿ ಪಡೆದ ನಂತರ, ತನಿಖಾ ಸಂಸ್ಥೆಗಳು ಮತ್ತು ಪೊಲೀಸರು ಮುಚ್ಚಿದ ಫ್ಲಾಟ್‌ನಲ್ಲಿ ಈ ದಾಳಿ ನಡೆಸಿದರು. ಇಂದು ಮಧ್ಯಾಹ್ನ ಪಾಲ್ಡಿಯಲ್ಲಿರುವ ಸ್ಟಾಕ್ ಮಾರ್ಕೆಟ್ ಆಪರೇಟರ್‌ನ ಆವಿಷ್ಕಾರ್ ಅಪಾರ್ಟ್‌ಮೆಂಟ್‌ನ 104 ನೇ ಫ್ಲಾಟ್ ಮೇಲೆ ಸುಮಾರು 25 ಅಧಿಕಾರಿಗಳು ದಾಳಿ ನಡೆಸಿದರು.

ಈ ಫ್ಲಾಟ್‌ನ ಮಾಲೀಕರು ಮಹೇಂದ್ರ ಶಾ ಮತ್ತು ಮೇಘ್ ಶಾ ಎಂದು ತಿಳಿದುಬಂದಿದೆ. ಇಬ್ಬರೂ ಷೇರು ಮಾರುಕಟ್ಟೆ ನಿರ್ವಾಹಕರು. ಅಧಿಕಾರಿಗಳು ಫ್ಲಾಟ್‌ನಲ್ಲಿ ಬೀಗ ಹಾಕಿದ ಪೆಟ್ಟಿಗೆಯನ್ನು ಕಂಡಿದ್ದರು. ಅದನ್ನು ತೆರೆದಾಗ, ಅಪಾರ ಪ್ರಮಾಣದ ಚಿನ್ನ ಪತ್ತೆಯಾಗಿದ್ದು, ಅದನ್ನು ಕ್ಯಾಮೆರಾ ಕಣ್ಗಾವಲಿನಲ್ಲಿ ಸೀಲ್ ಮಾಡಲಾಗಿದೆ. ಪ್ರಸ್ತುತ, ಷೇರು ಮಾರುಕಟ್ಟೆ ದಲ್ಲಾಳಿಯನ್ನು ಪ್ರಶ್ನಿಸಲಾಗುತ್ತಿದೆ ಮತ್ತು ಇಷ್ಟೊಂದು ದೊಡ್ಡ ಪ್ರಮಾಣದ ಚಿನ್ನ ಎಲ್ಲಿಂದ ಬಂತು ಎಂಬುದನ್ನು ಕಂಡುಹಿಡಿಯಲು ಪ್ರಯತ್ನಗಳು ನಡೆಯುತ್ತಿವೆ?

ದಾಳಿಯ ಸಮಯದಲ್ಲಿ, ನೋಟುಗಳನ್ನು ಎಣಿಸುವ ಎರಡು ಯಂತ್ರಗಳು ಮತ್ತು ಚಿನ್ನವನ್ನು ತೂಕ ಮಾಡುವ ವಿದ್ಯುತ್ ಮಾಪಕಗಳನ್ನು ಸಹ ವಶಪಡಿಸಿಕೊಳ್ಳಲಾಗಿದೆ. ತನಿಖೆಯಲ್ಲಿ ಚಿನ್ನದ ಬಿಸ್ಕತ್ತುಗಳು ಪತ್ತೆಯಾಗಿದ್ದು, ಅವುಗಳ ಒಟ್ಟು ತೂಕ 90-100 ಕೆಜಿ ಎಂದು ಹೇಳಲಾಗಿದೆ. ಇದಲ್ಲದೆ, ಕೆಲವು ಆಭರಣಗಳನ್ನು ಸಹ ವಶಪಡಿಸಿಕೊಳ್ಳಲಾಗಿದೆ. ಒಟ್ಟಾರೆಯಾಗಿ, ಮಾರುಕಟ್ಟೆಯಲ್ಲಿ ಇದರ ಬೆಲೆ 100 ಕೋಟಿ ರೂ.ಗಳವರೆಗೆ ಇರಬಹುದೆಂದು ಅಂದಾಜಿಸಲಾಗಿದೆ. ಇದಲ್ಲದೆ, ದಾಳಿಯಲ್ಲಿ ಸುಮಾರು 1 ಕೋಟಿಗೂ ಹೆಚ್ಚು ನಗದು ಪತ್ತೆಯಾಗಿದೆ. ಅಲ್ಲದೆ ದುಬಾರಿ ವಾಚ್ ಗಳನ್ನು ವಶಪಡಿಸಿಕೊಂಡಿದ್ದಾರೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

ಬಿಜೆಪಿ ಸಂಸದೀಯ ಮಂಡಳಿಯಲ್ಲಿ ಮಹತ್ತರ ಬದಲಾವಣೆ ಸಾಧ್ಯತೆ; ನಾಲ್ವರು ಮುಖ್ಯಮಂತ್ರಿಗಳಿಗೆ ಸ್ಥಾನ?

ಇರಾನ್‌ ತೈಲ ವಹಿವಾಟಿಗೆ ಅಮೆರಿಕಾ ಬ್ರೇಕ್: ಭಾರತದ 4 ಕಂಪನಿಗಳು ಕಪ್ಪುಪಟ್ಟಿಗೆ, 3 ಪ್ರಜೆಗಳ ಮೇಲೂ ನಿರ್ಬಂಧ..!

"ಮದುವೆ ಅಂದ್ರೆ ಗುಲಾಮಗಿರಿಯಲ್ಲ, ಮನೆಗೆಲಸ ಮಾಡು-ಅತ್ತೆ-ಮಾವನ ನೋಡ್ಕೋ ಅನ್ನೋಕೆ ಗಂಡನಿಗೆ ಹಕ್ಕಿಲ್ಲ": ಹೈಕೋರ್ಟ್ ಮಹತ್ವದ ತೀರ್ಪು..!

ಬಿಡದಿ ಟೌನ್‌ಶಿಪ್‌ ಯೋಜನೆ: ರೈತರ ಭೂಮಿ ಕಸಿಯಲ್ಲ, denotification ಮಾಡಲ್ಲ- ಸಿಎಂ ಡಿಕೆ. ಶಿವಕುಮಾರ್ ಸ್ಪಷ್ಟನೆ

Operation Sindoor; Kirana Hills ಪರಮಾಣು ನೆಲೆಗೆ ಅಪ್ಪಳಿಸಿದ ಭಾರತದ ಡ್ರೋನ್? ಬೆಚ್ಚಿಬಿದ್ದ ಪಾಕಿಸ್ತಾನ..! Indian Army ಹೇಳಿದ್ದೇನು?