ಹೋಮ ನಡೆಸುತ್ತಿರುವ ಸುನೀತಾ ವಿಲಿಯಮ್ಸ್ ಕುಟುಂಬಸ್ಥರು 
ದೇಶ

ಗುಜರಾತ್: ಸುನೀತಾ ವಿಲಿಯಮ್ಸ್ ಸುರಕ್ಷಿತವಾಗಿ ಮರಳಲು ಯಜ್ಞದ ಮೊರೆ ಹೋದ ಕುಟುಂಬ!

ಗುಜರಾತ್ ನಲ್ಲಿರುವ ಅವರ ಕುಟುಂಬದಲ್ಲಿ ಸಂತಸ ಮನೆ ಮಾಡಿದ್ದು, ಆಕೆಯ ಮರಳುವಿಕೆಯನ್ನು ಕಾತುರದಿಂದ ಎದುರು ನೋಡುತ್ತಿದೆ.

ಗಾಂಧಿನಗರ: ನಾಸಾ ಗಗನಯಾತ್ರಿ ಸುನೀತಾ ವಿಲಿಯಮ್ಸ್ ಅವರು 9 ತಿಂಗಳ ನಂತರ ಅಂತಾರಾಷ್ಟ್ರೀಯ ಬಾಹ್ಯಾಕಾಶ ನಿಲ್ದಾಣದಿಂದ ನಿರ್ಗಮಿಸಿದ್ದು, ಅವರ ಸುರಕ್ಷಿತ ವಾಪಸಾತಿಗಾಗಿ ಭಾರತದಲ್ಲಿಯೂ ಯಜ್ಞ, ಹೋಮ, ಹವನಗಳು ನಡೆಯುತ್ತಿವೆ.

ಗುಜರಾತ್ ನಲ್ಲಿರುವ ಅವರ ಕುಟುಂಬದಲ್ಲಿ ಸಂತಸ ಮನೆ ಮಾಡಿದ್ದು, ಆಕೆಯ ಮರಳುವಿಕೆಯನ್ನು ಕಾತುರದಿಂದ ಎದುರು ನೋಡುತ್ತಿದೆ. ಸುನೀತಾ ವಿಲಿಯಮ್ಸ್ ತಾಯಿ, ಸಹೋದರ, ಮತ್ತು ಸಹೋದರಿ ಸೇರಿದಂತೆ ಎಲ್ಲರೂ ಖುಷಿಯಾಗಿದ್ದು, ಆಕೆ ಸುರಕ್ಷತೆಗಾಗಿ ದೇವಾಲಯಗಳಿಗೆ ಭೇಟಿ ನೀಡಿ, ವಿಶೇಷ ಪೂಜೆ, ಪ್ರಾರ್ಥನೆ ಸಲ್ಲಿಸುತ್ತಿದ್ದಾರೆ.

ಗುಜರಾತ್‌ನಲ್ಲಿರುವ ಅವರ ಸೋದರ ಸಂಬಂಧಿ ದಿನೇಶ್ ರಾವಲ್, ಸುನೀತಾ ವಿಲಿಯಮ್ಸ್ ರಾಷ್ಟ್ರದ ಹೆಮ್ಮೆ ಎಂದು ಹೇಳುವ ಮೂಲಕ ಸಂತಸ ವ್ಯಕ್ತಪಡಿಸಿದ್ದಾರೆ.

ಇದು ನಮಗೆ ಒಂದು ದೊಡ್ಡ ದಿನವಾಗಿದೆ. ವಿಲಿಯಮ್ಸ್ ರಾಷ್ಟ್ರದ ಹೆಮ್ಮೆ. ಆಕೆಯ ಮರಳುವಿಕೆಗಾಗಿ ಯಜ್ಞವನ್ನು ಮಾಡುತ್ತಿದ್ದೇವೆ ಮತ್ತು ಹಿಂದಿರುಗಿದ ನಂತರ ಸಿಹಿ ವಿತರಿಸುತ್ತೇವೆ ಎಂದು ಅವರು ಹೇಳಿದರು.

ಅಂತಾರಾಷ್ಟ್ರೀಯ ಬಾಹ್ಯಾಕಾಶ ನಿಲ್ದಾಣದಿಂದ ನಾಲ್ಕು ಗಗನಯಾತ್ರಿಗಳನ್ನು ಭೂಮಿಗೆ ಕರೆತರುವ ಸ್ಪೇಸ್‌ಎಕ್ಸ್ ಕ್ರ್ಯೂ-9 'ಡ್ರ್ಯಾಗನ್ ಫ್ರೀಡಮ್' ಬಾಹ್ಯಾಕಾಶ ನೌಕೆಯ ನೇರ ಪ್ರಸಾರವನ್ನು ನಾಸಾ ಒದಗಿಸುತ್ತಿದೆ.

288 ದಿನಗಳ ಬಳಿಕ ಭೂಮಿಗೆ ವಾಪಸ್ಸಾಗುತ್ತಿರುವ ಭಾರತೀಯ ಮೂಲದ ವಿಲಿಯಮ್ಸ್ ಮತ್ತು ವಿಲ್ಮೋರ್ ಜೊತೆಗೆ ಗಗನಯಾತ್ರಿಗಳಾದ ನಿಕ್ ಹೇಗ್ ಮತ್ತು ರಷ್ಯಾದ ಗಗನಯಾತ್ರಿ ಅಲೆಕ್ಸಾಂಡರ್ ಗೊರ್ಬುನೊವ್ ಇದ್ದಾರೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಭ್ರಷ್ಟರಿಗೆ ಬೆಳ್ಳಂಬೆಳಗ್ಗೆ ಲೋಕಾಯುಕ್ತ ಶಾಕ್: ಏಕ ಕಾಲದಲ್ಲಿ ರಾಜ್ಯದ 10 ಕಡೆ ದಾಳಿ- ಪರಿಶೀಲನೆ

Kabaddi World Cup 2025: ಭಾರತದ ಸಿಂಹಿಣಿಯರ ಮುಡಿಗೇರಿದ ವಿಶ್ವಕಪ್‌ ಕಿರೀಟ, ಸತತ 2ನೇ ಬಾರಿಗೆ ಪ್ರಶಸ್ತಿ ಗೆದ್ದ ಭಾರತ

ಬ್ರಾಹ್ಮಣನೊಬ್ಬ ತನ್ನ ಮಗಳನ್ನು ನನ್ನ ಮಗನಿಗೆ ದಾನ ಮಾಡುವವರೆಗೆ ಮೀಸಲಾತಿ ಮುಂದುವರೆಯಲಿ: IAS ಅಧಿಕಾರಿ ವಿವಾದಾತ್ಮಕ ಹೇಳಿಕೆ

ಆಫ್ರಿಕಾದಲ್ಲಿ ಜ್ವಾಲಾಮುಖಿ ಸ್ಫೋಟ: ಭಾರತದತ್ತ ಬರುತ್ತಿರುವ ಬೂದಿ ಹೊಗೆ, ವಿಮಾನಗಳ ಹಾರಾಟಕ್ಕೆ ಅಡ್ಡಿ

ಸಿದ್ದರಾಮಯ್ಯ, ಡಿಕೆ ಶಿವಕುಮಾರ್ ಫೈಟ್: ಮಲ್ಲಿಕಾರ್ಜುನ ಖರ್ಗೆಗೆ ಪ್ರಾಫಿಟ್; CM ಹುದ್ದೆ ನೀಡುವಂತೆ ಸೋನಿಯಾಗೆ ದಲಿತ ನಾಯಕರ ಪತ್ರ!

SCROLL FOR NEXT