ಲೋಕಸಭೆ 
ದೇಶ

ಮಹಾಕುಂಭ ಮೇಳ ಕುರಿತು ಪ್ರಧಾನಿ ಹೇಳಿಕೆ: ಲೋಕಸಭೆಯಲ್ಲಿ ಪ್ರತಿಪಕ್ಷಗಳ ಪ್ರತಿಭಟನೆ, ಕೆಲಕಾಲ ಕಲಾಪ ಸ್ಥಗಿತ

ಪ್ರತಿಭಟನಾನಿರತ ಸದಸ್ಯರು ತಮ್ಮ ಆಸನಗಳಿಗೆ ಮರಳುವಂತೆ ಲೋಕಸಭಾ ಸ್ಪೀಕರ್ ಓಂ ಬಿರ್ಲಾ ಪದೇ ಪದೇ ಮನವಿ ಮಾಡಿದರು.

ನವದೆಹಲಿ: ಪ್ರಯಾಗ್ ರಾಜ್ ನಲ್ಲಿ ಇತ್ತೀಚಿಗೆ ಮುಕ್ತಾಯವಾದ ಮಹಾಕುಂಭ ಯಶಸ್ಸು ಕುರಿತು ಪ್ರಧಾನಿ ನರೇಂದ್ರ ಮೋದಿ ಅವರ ಹೇಳಿಕೆ ನೀಡಿದ ಬೆನ್ನಲ್ಲೇ ಪ್ರತಿಪಕ್ಷಗಳು ಪ್ರತಿಭಟನೆ ನಡೆಸಿದ್ದರಿಂದ ಲೋಕಸಭೆ ಕಲಾಪವನ್ನು ಮಧ್ಯಾಹ್ನ 1 ಗಂಟೆಯವರೆಗೂ ಕೆಲಕಾಲ ಮುಂದೂಡಲಾಗಿತ್ತು.

ಪ್ರಧಾನಿ ಮೋದಿ ಮಾತನಾಡಿದ ನಂತರ ಅನೇಕ ವಿಪಕ್ಷಗಳ ಸದಸ್ಯರು ತಮ್ಮ ಆಸನದಿಂದ ಎದ್ದುನಿಂತು ಪ್ರತಿಭಟನೆಗೆ ಮುಂದಾದರು. ಪ್ರತಿಭಟನಾನಿರತ ಸದಸ್ಯರು ತಮ್ಮ ಆಸನಗಳಿಗೆ ಮರಳುವಂತೆ ಲೋಕಸಭಾ ಸ್ಪೀಕರ್ ಓಂ ಬಿರ್ಲಾ ಪದೇ ಪದೇ ಮನವಿ ಮಾಡಿದರು.

ಅವರ ಮಾತಿಗೆ ಸದಸ್ಯರು ಕಿವಿಗೂಡದಿದ್ದಾಗ ಕಲಾಪವನ್ನು ಮಧ್ಯಾಹ್ನ1 ಗಂಟೆಯವರೆಗೂ ಮುಂದೂಡಿದರು.

ಮಹಾಕುಂಭ ಮೇಳವನ್ನು ಪ್ರಮುಖವಾದ ಮೈಲಿಗಲ್ಲು ಎಂದು ಬಣ್ಣಿಸಿದ ಪ್ರಧಾನಿ, ಅಂತಹ ಬೃಹತ್ ಧಾರ್ಮಿಕ ಕಾರ್ಯಕ್ರಮವನ್ನು ಆಯೋಜಿಸುವ ಸಾಮರ್ಥ್ಯ ಭಾರತಕ್ಕೆ ಇದೆಯೇ ಎಂದು ಪ್ರಶ್ನಿಸಿದವರಿಗೆ ಈ ಘಟನೆ ತಕ್ಕ ಉತ್ತರ ನೀಡಿದೆ ಎಂದು ಮೋದಿ ಮಂಗಳವಾರ ಲೋಕಸಭೆಯಲ್ಲಿ ಹೇಳಿದರು.

ಮಹಾಕುಂಭದ ಸಂದರ್ಭದಲ್ಲಿ ಇಡೀ ಜಗತ್ತು ಭಾರತದ ಭವ್ಯತೆಗೆ ಸಾಕ್ಷಿಯಾಯಿತು. ಮಹಾಕುಂಭದ ಯಶಸ್ಸಿಗೆ ಕಾರಣರಾದ ದೇಶದ ಕೋಟ್ಯಂತರ ಜನರಿಗೆ ನಾನು ನಮಿಸುತ್ತೇನೆ. ಇದು ಜನರ ಒಗ್ಗಟ್ಟನ್ನು ಪ್ರದರ್ಶಿಸಿದೆ ಎಂದು ಹೇಳಿದರು.

ಸಬ್ಕಾ ಸಾಥ್ ಪರಿಕಲ್ಪನೆಗೆ ಇದೊಂದು ಉತ್ತಮ ಉದಾಹರಣೆಯಾಗಿದೆ. ವೈವಿಧ್ಯತೆಯಲ್ಲಿ ಏಕತೆ ಭಾರತದ ಸಂಸ್ಕೃತಿಯಲ್ಲಿ ಆಳವಾಗಿದೆ ಎಂಬುದನ್ನು ಮಹಾಕುಂಭವು ಸಾಬೀತುಪಡಿಸಿದೆ. ಭಾರತದ ಹೊಸ ಪೀಳಿಗೆಯು ಮಹಾಕುಂಭದೊಂದಿಗೆ ಸಂಪರ್ಕ ಹೊಂದಿದೆ. ಸಂಪ್ರದಾಯಗಳು ಮತ್ತು ನಂಬಿಕೆಯನ್ನು ಹೆಮ್ಮೆಯಿಂದ ಅಳವಡಿಸಿಕೊಂಡಿದೆ ಎಂದು ಮೋದಿ ಹೇಳಿದರು

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ತೀವ್ರ ಕುತೂಹಲ ಘಟ್ಟಕ್ಕೆ ತಲುಪಿದ ಪಶ್ಚಿಮ ಏಷ್ಯಾ ಸಂಘರ್ಷ: ಇಂದು ಪಾಕಿಸ್ತಾನ ಮಧ್ಯಸ್ಥಿಕೆಯಲ್ಲಿ ಇರಾನ್-ಅಮೆರಿಕ ನಡುವೆ ಸಂಧಾನ ಮಾತುಕತೆ-Video

5 ದಶಕಗಳ ಬಳಿಕ ದಾಖಲೆ ನಿರ್ಮಿಸಿದ ಚಂದ್ರಯಾನ: ಯಶಸ್ವಿಯಾಗಿ ಭೂಮಿಗೆ ಮರಳಿದ Artemis II ಗಗನ ಯಾತ್ರಿಗಳು-Video

ಉಪಚುನಾವಣೆ ಗೆಲ್ಲುವ ಉಮೇದು: ಪ್ರಚಾರದಲ್ಲಿ ನಿರತರಾದ ಸಿಎಂ -ಡಿಸಿಎಂ; ನಿಯಂತ್ರಣ ಕಳೆದುಕೊಂಡ ಆಡಳಿತ ಯಂತ್ರ!

'ನನ್ನ ಹಣೆಬರಹ ಎಲ್ಲಿದೆಯೋ, ಜನ ಎಲ್ಲಿ ಗೆಲ್ಲಿಸ್ತಾರೋ ನೋಡೋಣ: ನಮ್ಮ ಸಂಖ್ಯೆ ನೋಡಿ ಅಪಹಾಸ್ಯ ಮಾಡಿದ್ದಾರೆ, 2028 ರಲ್ಲಿ ಸರ್ಕಾರ ರಚಿಸ್ತಿವಿ'

ಲೋಕಭವನ -ಸರ್ಕಾರದ ನಡುವೆ ಮತ್ತೊಂದು ಸುತ್ತಿನ ಸಂಘರ್ಷ: ಮತ ಪತ್ರ ಬಳಕೆ ಮಸೂದೆಗೆ ರಾಜ್ಯಪಾಲರ ತಡೆ

SCROLL FOR NEXT