ಮಿನಿ ಬಸ್ ಗೆ ಬೆಂಕಿ ಹೊತ್ತಿದ ದೃಶ್ಯ 
ದೇಶ

Pune: ಮಿನಿ ಬಸ್ ಗೆ ಬೆಂಕಿ, Emergency ಡೋರ್ ಕೂಡ ಜಾಮ್, 4 ಮಂದಿ ಸಜೀವ ದಹನ

ಬೆಂಕಿ ಮುಂಭಾಗಕ್ಕೆ ಹರಡುತ್ತಿದ್ದಂತೆಯೇ ಚಾಲಕ ವಾಹನವನ್ನು ನಿಲ್ಲಿಸಿದ್ದಾನೆ. ಅಪಾಯವನ್ನು ಅರಿತ ನಾಲ್ವರು ಉದ್ಯೋಗಿಗಳು ತಕ್ಷಣ ಮಿನಿ ಬಸ್‌ನಿಂದ ಇಳಿದರು.

ಪುಣೆ: ಬುಧವಾರ ಮುಂಜಾನೆ ಭೀಕರ ಅಪಘಾತ ಸಂಭವಿಸಿದ್ದು, ಖಾಸಗಿ ಮಿನಿ ಬಸ್ ಗೆ ಬೆಂಕಿ ಹೊತ್ತಿದ ಪರಿಣಾಮ ಬಸ್ ನಲ್ಲಿದ್ದ ಪ್ರಯಾಣಿಕರ ಪೈಕಿ 4 ಮಂದಿ ಸಜೀವ ದಹನವಾಗಿದ್ದಾರೆ.

ಮಹಾರಾಷ್ಟ್ರದ ಪುಣೆಯಲ್ಲಿ ಈ ಅಪಘಾತ ಸಂಭವಿಸಿದ್ದು, ಖಾಸಗಿ ಕಂಪನಿಯೊಂದರ ವಾಹನಕ್ಕೆ ಬೆಂಕಿ ಹೊತ್ತಿಕೊಂಡ ಪರಿಣಾಮ ನಾಲ್ವರು ಉದ್ಯೋಗಿಗಳು ಸುಟ್ಟು ಕರಕಲಾಗಿದ್ದು, ಐದು ಮಂದಿ ಗಾಯಗೊಂಡಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ.

ಪುಣೆ ಹೊರವಲಯದ ಪಿಂಪ್ರಿ ಚಿಂಚ್‌ವಾಡ್ ಪ್ರದೇಶದ ಹಿಂಜೇವಾಡಿಯಲ್ಲಿ ಬೆಳಿಗ್ಗೆ 7.30 ರ ಸುಮಾರಿಗೆ ಈ ಘಟನೆ ಸಂಭವಿಸಿದೆ. ವಾಹನವು ವ್ಯೋಮಾ ಗ್ರಾಫಿಕ್ಸ್‌ನ 12 ಉದ್ಯೋಗಿಗಳನ್ನು ವಾರ್ಜೆಯಿಂದ ಹಿಂಜೇವಾಡಿಗೆ ಕರೆದೊಯ್ಯುತ್ತಿತ್ತು. ವಾಹನವು ಡಸ್ಸಾಲ್ಟ್ ಸಿಸ್ಟಮ್ಸ್ ಬಳಿ ಇದ್ದಾಗ, ಚಾಲಕನ ಪಾದದ ಬಳಿ ಮೊದಲು ಬೆಂಕಿ ಕಾಣಿಸಿಕೊಂಡಿತು.

ಬೆಂಕಿ ಮುಂಭಾಗಕ್ಕೆ ಹರಡುತ್ತಿದ್ದಂತೆಯೇ ಚಾಲಕ ವಾಹನವನ್ನು ನಿಲ್ಲಿಸಿದ್ದಾನೆ. ಅಪಾಯವನ್ನು ಅರಿತ ನಾಲ್ವರು ಉದ್ಯೋಗಿಗಳು ತಕ್ಷಣ ಮಿನಿ ಬಸ್‌ನಿಂದ ಇಳಿದರು. ವಾಹನದ ಹಿಂಭಾಗದಲ್ಲಿರುವ ತುರ್ತು ನಿರ್ಗಮನ ದ್ವಾರದ ಮೂಲಕ ತಪ್ಪಿಸಿಕೊಳ್ಳಲು ಕೆಲ ಸಿಬ್ಬಂದಿ ಪ್ರಯತ್ನಿಸಿದರು.

ಆದರೆ ನಿರ್ಗಮನ ಬಾಗಿಲು ಜಾಮ್ ಆಗಿ ತೆರೆದುಕೊಳ್ಳದ ಕಾರಣ ಕೆಲ ಉದ್ಯೋಗಿಗಳು ಬೆಂಕಿಯಲ್ಲಿ ಸಿಲುಕಿಕೊಂಡರು. ಹೀಗಾಗಿ 4 ಮಂದಿ ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ. ಮತ್ತೆ ನಾಲ್ವರನ್ನು ಇತರರ ನೆರವಿನಿಂದ ರಕ್ಷಿಸಲಾಗಿದ್ದು ಸುಟ್ಟಗಾಯಗಳೊಂದಿಗೆ ಆಸ್ಪತ್ರೆಗೆ ದಾಖಲಾಗಿದ್ದಾರೆ.

ಶವಗಳನ್ನು ವಾಹನದಿಂದ ಹೊರತೆಗೆದು ಗಾಯಾಳುಗಳನ್ನು ವೈದ್ಯಕೀಯ ಚಿಕಿತ್ಸೆಗಾಗಿ ಆಸ್ಪತ್ರೆಗೆ ದಾಖಲಿಸಲಾಗಿದೆ. ಮಿನಿ ಬಸ್‌ನ ಹಿಂಭಾಗದಲ್ಲಿರುವ ತುರ್ತು ನಿರ್ಗಮನ ದ್ವಾರವನ್ನು ತೆರೆಯಲು ಸಾಧ್ಯವಾಗದ ಕಾರಣ ಸಾವು ನೋವು ಸಂಭವಿಸಿದೆ ಎಂದು ಹಿಂಜೆವಾಡಿ ಉಪ ಪೊಲೀಸ್ ಆಯುಕ್ತ ವಿಶಾಲ್ ಗಾಯಕ್ವಾಡ್ ತಿಳಿಸಿದ್ದಾರೆ.

ಬೆಂಕಿಗೆ ಆಹುತಿಯಾದ ಟೆಂಪೋ ಟ್ರಾವೆಲರ್‌

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಇಬ್ಬರು ಕೇಂದ್ರ ಸಚಿವರು ಸೇರಿದಂತೆ 75 ಸದಸ್ಯರ GBA ಸೆ. 2 ರಿಂದ ಅಸ್ತಿತ್ವಕ್ಕೆ: ಯತೀಂದ್ರ ಸಿದ್ದರಾಮಯ್ಯಗೂ ಸ್ಥಾನ!

ಜಮ್ಮುವಿನಾದ್ಯಂತ ಭಾರಿ ಮಳೆ: ಅಪಾರ ಪ್ರಮಾಣದ ಹಾನಿ, 10 ಮಂದಿ ಸಾವು: ಕೊಚ್ಚಿ ಹೋದ ರಸ್ತೆ, ಸೇತುವೆಗಳು!

ಫೈಟರ್ ಜೆಟ್‌ ಇಂಜಿನ್ ಖರೀದಿ: ಅಮೆರಿಕಾದ GE ಸಂಸ್ಥೆಯೊಂದಿಗೆ $1 ಬಿಲಿಯನ್ ಮೊತ್ತದ ಒಪ್ಪಂದಕ್ಕೆ ಭಾರತ ಸಿದ್ಧತೆ!

ಡಿಕೆಶಿ ಕ್ಷಮೆ ಕೇಳಬಾರದಿತ್ತು; ಮುಲಾಜಿಲ್ಲದೆ ಕಾಂಗ್ರೆಸ್ ಪಕ್ಷದ ಸದಸ್ಯತ್ವಕ್ಕೆ ರಾಜೀನಾಮೆ ಬಿಸಾಕಬೇಕಿತ್ತು- ಆರ್. ಅಶೋಕ್

ಸುಂಕ ಸಮರ: Trump 4 ಬಾರಿ ಕರೆ ಮಾಡಿದರೂ ಉತ್ತರಿಸದ PM Modi; ಅಮೆರಿಕ ನಿಯೋಗಕ್ಕೂ No Entry!

SCROLL FOR NEXT