ಸ್ಥಳದಲ್ಲಿ ಪೊಲೀಸರ ನಿಯೋಜನೆ  
ದೇಶ

Madhya Pradesh: ಬಾಲಕ ಮಾಡಿದ್ದ ಒಂದು ಸೋಷಿಯಲ್ ಮೀಡಿಯಾ ಪೋಸ್ಟ್ ನಿಂದ ಕೋಮು ದಳ್ಳುರಿ; ಬುರ್ಹಾನ್‌ಪುರದಲ್ಲಿ ಘರ್ಷಣೆ

ಘಟನೆ ಬಗ್ಗೆ ತಿಳಿದ ಸ್ಥಳೀಯ ಪೊಲೀಸರು ರಾತ್ರಿ 11.30 ರ ಸುಮಾರಿಗೆ ಸ್ಥಳಕ್ಕೆ ಧಾವಿಸಿ ಗುಂಪನ್ನು ಚದುರಿಸಲು ಪ್ರಯತ್ನಿಸಿದರು.

ಭೋಪಾಲ್(ಮಧ್ಯಪ್ರದೇಶ): ಸೋಷಿಯಲ್ ಮೀಡಿಯಾವನ್ನು ಒಳ್ಳೆಯ ಕೆಲಸಕ್ಕೆ ಉಪಯೋಗಿಸಿ ಅದರಿಂದ ಪ್ರಯೋಜನ ಪಡೆದುಕೊಂಡವರಷ್ಟೋ ಮಂದಿ. ಇನ್ನು ಕೆಲವರು ಸೋಷಿಯಲ್ ಮೀಡಿಯಾದಿಂದ ದಾರಿತಪ್ಪಿದವರೂ ಇದ್ದಾರೆ. ಮಧ್ಯ ಪ್ರದೇಶದ ಭೋಪಾಲ್ ಜಿಲ್ಲೆಯಲ್ಲಿ 17 ವರ್ಷದ ಹದಿಹರೆಯದ ಹುಡುಗನೊಬ್ಬ ಸೋಷಿಯಲ್ ಮೀಡಿಯಾದಲ್ಲಿ ಮಾಡಿದ ಪೋಸ್ಟ್ ಕೋಮು ಸೂಕ್ಷ್ಮ ಬುರ್ಹಾನ್‌ಪುರ ನಗರದಲ್ಲಿ ಉದ್ವಿಗ್ನತೆಯನ್ನು ಸೃಷ್ಟಿಯಾಗಿ ಪೊಲೀಸರು ಮಧ್ಯೆಪ್ರವೇಶಿಸಿ ಪರಿಸ್ಥಿತಿ ತಿಳಿಗೊಳಿಸಬೇಕಾಯಿತು.

ನಡೆದ ಘಟನೆಯೇನು?

ಕಳೆದ ಮಂಗಳವಾರ ತಡರಾತ್ರಿ 10.30 ರ ಸುಮಾರಿಗೆ ನಗರದ ಲೋಹರ್ ಮಂಡಿ ಪ್ರದೇಶದ ಹುಡುಗನೊಬ್ಬ ಇನ್‌ಸ್ಟಾಗ್ರಾಮ್ ಗ್ರೂಪ್ ಚಾಟ್‌ನಲ್ಲಿ ನಿರ್ದಿಷ್ಟ ಧರ್ಮದ ಬಗ್ಗೆ ಕಾಮೆಂಟ್‌ಗಳನ್ನು ಮಾಡಿ ಪೋಸ್ಟ್ ಮಾಡಿದ್ದ. ಪೋಸ್ಟ್ ಕೆಲವೇ ಹೊತ್ತಿನಲ್ಲಿ ಸೋಷಿಯಲ್ ಮೀಡಿಯಾದಲ್ಲಿ ವೈರಲ್ ಆಯಿತು, ಇತರ ಸಮುದಾಯದ ಗುಂಪು ಮಾರುಕಟ್ಟೆ ಪ್ರದೇಶದಲ್ಲಿ ಜಮಾಯಿಸಿ ಗದ್ದಲವೆಬ್ಬಿಸಲು ಆರಂಭಿಸಿದರು.

ಘಟನೆ ಬಗ್ಗೆ ತಿಳಿದ ಸ್ಥಳೀಯ ಪೊಲೀಸರು ರಾತ್ರಿ 11.30 ರ ಸುಮಾರಿಗೆ ಸ್ಥಳಕ್ಕೆ ಧಾವಿಸಿ ಗುಂಪನ್ನು ಚದುರಿಸಲು ಪ್ರಯತ್ನಿಸಿದರು. ಆದಾಗ್ಯೂ, ಜನಸಮೂಹವು ಘೋಷಣೆಗಳನ್ನು ಕೂಗುತ್ತಾ ಬುರ್ಹಾನ್‌ಪುರ ನಗರ ಕೊಟ್ವಾಲಿಗೆ ತೆರಳಿ ತಡರಾತ್ರಿಯವರೆಗೆ ಆಕ್ಷೇಪಾರ್ಹ ಪೋಸ್ಟ್ ವಿರುದ್ಧ ಪ್ರತಿಭಟಿಸಿತು.

ತಡರಾತ್ರಿಯ ಧಾರ್ಮಿಕ ಪ್ರಾರ್ಥನೆಗಳು ಮುಗಿದ ನಂತರ, ಗುಂಪು ಜಮಾಯಿಸಿ ಕೊತ್ವಾಲಿಗೆ ತೆರಳಿತು. ಬುರ್ಹಾನ್‌ಪುರ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ದೇವೇಂದ್ರ ಪತಿದಾರ್, ಧಾರ್ಮಿಕ ಭಾವನೆಗಳನ್ನು ನೋಯಿಸುವ ಉದ್ದೇಶಪೂರ್ವಕ ಮತ್ತು ದುರುದ್ದೇಶಪೂರಿತ ಕೃತ್ಯಗಳನ್ನು ನಡೆಸಿದ ಆರೋಪದ ಮೇಲೆ ಸೆಕ್ಷನ್ 299 ಬಿಎನ್‌ಎಸ್ ಅಡಿಯಲ್ಲಿ ಆರೋಪಿಗಳ ವಿರುದ್ಧ ಹುಡುಗನ ವಿರುದ್ಧ ಎಫ್‌ಐಆರ್ ದಾಖಲಿಸಲಾಗಿದೆ ಎಂದು ಹೇಳಿದರು. ನಂತರ ಬಾಲಕನನ್ನು ಬಂಧಿಸಲಾಯಿತು.

ಎಫ್‌ಐಆರ್ ದಾಖಲಿಸುವ ಮೊದಲು, ಪ್ರತಿಭಟನಾಕಾರರು ಪೊಲೀಸ್ ಠಾಣೆಯ ಹೊರಗೆ ಪ್ರತಿಭಟನೆ ನಡೆಸುತ್ತಿದ್ದರು. ಆಕ್ರಮಣಕಾರಿ ಮತ್ತು ದಾರಿತಪ್ಪಿಸುವ ಸಾಮಾಜಿಕ ಮಾಧ್ಯಮ ಪೋಸ್ಟ್‌ಗಳನ್ನು ತಡೆಯಲು ಈಗಾಗಲೇ ನಿಷೇಧಾಜ್ಞೆಗಳು ಜಾರಿಯಲ್ಲಿವೆ. ವಯಸ್ಸು ಅಥವಾ ಲಿಂಗವನ್ನು ಲೆಕ್ಕಿಸದೆ, ಅಂತಹ ಯಾವುದೇ ಪೋಸ್ಟ್ ಮೂಲಕ ಕಾನೂನು ಮತ್ತು ಸುವ್ಯವಸ್ಥೆಯನ್ನು ಹಾಳುಮಾಡಲು ಪ್ರಯತ್ನಿಸುವ ಯಾರ ವಿರುದ್ಧವೂ ಕಠಿಣ ಕ್ರಮ ಕೈಗೊಳ್ಳಲಾಗುವುದು ಎಂದು ನಾವು ಸ್ಪಷ್ಟಪಡಿಸಲು ಬಯಸುತ್ತೇವೆ ಎಂದು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಭರವಸೆ ನೀಡಿದ ಮೇಲೆ ಪ್ರತಿಭಟನೆ ಹಿಂತೆಗೆದುಕೊಂಡರು.

ಕೋಮು ಸೂಕ್ಷ್ಮ ಪ್ರದೇಶ

ಮಧ್ಯಪ್ರದೇಶದ ನೈಋತ್ಯ ಭಾಗದಲ್ಲಿರುವ ಮಹಾರಾಷ್ಟ್ರದ ಬುರ್ಹಾನ್‌ಪುರ ಜಿಲ್ಲಾ ಕೇಂದ್ರವು ಹಳೆಯ ನಗರವನ್ನು ಹೊಂದಿದ್ದು, ಇದು ವಿಶೇಷವಾಗಿ ಕೋಮು ಸೂಕ್ಷ್ಮವಾಗಿದೆ.

ಪರಿಸ್ಥಿತಿಯನ್ನು ಸಕಾಲಿಕವಾಗಿ ನಿಯಂತ್ರಿಸದಿದ್ದರೆ, ಪಶ್ಚಿಮ ಮತ್ತು ನೈಋತ್ಯ ಮಧ್ಯಪ್ರದೇಶದ ಕೆಲವು ಭಾಗಗಳಲ್ಲಿ ಹೆಚ್ಚು ಜನಪ್ರಿಯವಾಗಿರುವ ಬಣ್ಣಗಳ ಹಬ್ಬ ರಂಗ ಪಂಚಮಿಗೆ ಕೆಲವೇ ಗಂಟೆಗಳ ಮೊದಲು ಅಹಿತಕರ ಘಟನೆಗಳಿಗೆ ಕಾರಣವಾಗುತ್ತಿತ್ತು ಎಂದು ಮೂಲಗಳು ತಿಳಿಸಿವೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಇದು ಕೇವಲ ಧ್ವಜವಲ್ಲ ಭಾರತೀಯ ನಾಗರಿಕತೆಯ ಪುನರ್‌ ಜಾಗೃತಿಯ ಧ್ವಜ, ಶತಮಾನಗಳಷ್ಟು ಹಳೆಯ ಗಾಯ ಈಗ ವಾಸಿಯಾಗುತ್ತಿದೆ: ಪ್ರಧಾನಿ ಮೋದಿ

ಅಯೋಧ್ಯೆ ರಾಮ ಮಂದಿರ ನಿರ್ಮಾಣ ಪೂರ್ಣ: ರಾಮ-ಸೀತೆ ವಿವಾಹ ಪರ್ವದಂದೇ ದೇಗುಲದ ಶಿಖರದ ಮೇಲೆ ಧ್ವಜಾರೋಹಣ ನೆರವೇರಿಸಿದ ಪ್ರಧಾನಿ ಮೋದಿ

"Misfit For Army": ಗುರುದ್ವಾರ ಪ್ರವೇಶಿಸಲು ನಿರಾಕರಣೆ, ಕ್ರಿಶ್ಚಿಯನ್ ಸೇನಾ ಅಧಿಕಾರಿಗೆ 'ಸುಪ್ರೀಂ' ತರಾಟೆ!

ಭ್ರಷ್ಟರಿಗೆ ಬೆಳ್ಳಂಬೆಳಗ್ಗೆ ಲೋಕಾಯುಕ್ತ ಶಾಕ್: ಏಕ ಕಾಲದಲ್ಲಿ ರಾಜ್ಯದ 10 ಕಡೆ ದಾಳಿ- ಪರಿಶೀಲನೆ

WPL 2026 auction: ಈ ಬಾರಿಯ 'ಮೋಸ್ಟ್ ಡಿಮ್ಯಾಂಡ್' ಆಟಗಾರ್ತಿ ಯಾರು?

SCROLL FOR NEXT