ಸೌರಭ್ ಭಾರದ್ವಾಜ್ - ಮನೀಶ್ ಸಿಸೋಡಿಯಾ 
ದೇಶ

ಎಎಪಿ ನಾಯಕತ್ವಕ್ಕೆ ಮೇಜರ್ ಸರ್ಜರಿ: ದೆಹಲಿ ಮುಖ್ಯಸ್ಥರಾಗಿ ಸೌರಭ್ ಭಾರದ್ವಾಜ್, ಪಂಜಾಬ್ ಮುಖ್ಯಸ್ಥರಾಗಿ ಸಿಸೋಡಿಯಾ

ಆಮ್ ಆದ್ಮಿ ಪಕ್ಷದ ಮುಖ್ಯಸ್ಥ ಅರವಿಂದ ಕೇಜ್ರಿವಾಲ್ ಅವರ ನಿವಾಸದಲ್ಲಿ ನಡೆದ ಎಎಪಿಯ ರಾಜಕೀಯ ವ್ಯವಹಾರಗಳ ಸಮಿತಿ (ಪಿಎಸಿ) ಸಭೆಯಲ್ಲಿ ಈ ನಿರ್ಧಾರಗಳನ್ನು ತೆಗೆದುಕೊಳ್ಳಲಾಗಿದೆ.

ನವದೆಹಲಿ: ಕಳೆದ ತಿಂಗಳು ನಡೆದ ದೆಹಲಿ ವಿಧಾನಸಭಾ ಚುನಾವಣೆಯಲ್ಲಿ ಹೀನಾಯ ಸೋಲಿನ ನಂತರ, ಆಮ್ ಆದ್ಮಿ ಪಕ್ಷವು ಶುಕ್ರವಾರ ಮಾಜಿ ಸಚಿವ ಸೌರಭ್ ಭಾರದ್ವಾಜ್ ಅವರನ್ನು ತನ್ನ ದೆಹಲಿ ಘಟಕದ ಹೊಸ ಅಧ್ಯಕ್ಷರನ್ನಾಗಿ ಮತ್ತು ಹಿರಿಯ ನಾಯಕ ಮನೀಶ್ ಸಿಸೋಡಿಯಾ ಅವರನ್ನು ಪಂಜಾಬ್‌ನ ಉಸ್ತುವಾರಿಯನ್ನಾಗಿ ನೇಮಿಸಿದೆ.

ಗೋಪಾಲ್ ರಾಯ್ ಬದಲಿಗೆ ಭಾರದ್ವಾಜ್ ಅವರನ್ನು ದೆಹಲಿ ಮುಖ್ಯಸ್ಥರನ್ನಾಗಿ ನೇಮಕ ಮಾಡಲಾಗಿದ್ದರೆ, ದೇಶದಲ್ಲಿ ಆಮ್ ಆದ್ಮಿ ಪಕ್ಷ (ಎಎಪಿ) ಸದ್ಯ ಅಧಿಕಾರದಲ್ಲಿರುವ ಏಕೈಕ ರಾಜ್ಯವಾಗಿರುವ ಪಂಜಾಬ್‌ನ ಉಸ್ತುವಾರಿಯನ್ನು ಸಿಸೋಡಿಯಾ ವಹಿಸಿಕೊಂಡಿದ್ದಾರೆ.

ಪಕ್ಷದ ಮುಖ್ಯಸ್ಥ ಅರವಿಂದ ಕೇಜ್ರಿವಾಲ್ ಅವರ ನಿವಾಸದಲ್ಲಿ ನಡೆದ ಎಎಪಿಯ ರಾಜಕೀಯ ವ್ಯವಹಾರಗಳ ಸಮಿತಿ (ಪಿಎಸಿ) ಸಭೆಯಲ್ಲಿ ಈ ನಿರ್ಧಾರಗಳನ್ನು ತೆಗೆದುಕೊಳ್ಳಲಾಗಿದೆ.

ಈ ಬದಲಾವಣೆಗಳನ್ನು ಪ್ರಕಟಿಸಿದ ಎಎಪಿ ಪ್ರಧಾನ ಕಾರ್ಯದರ್ಶಿ (ಸಂಘಟನೆ) ಸಂದೀಪ್ ಪಾಠಕ್, ಗೋಪಾಲ್ ರೈ ಅವರಿಗೆ ಗುಜರಾತ್ ಉಸ್ತುವಾರಿ ವಹಿಸಲಾಗಿದ್ದು, ಅಲ್ಲಿ ಪಕ್ಷವು ತನ್ನ ನೆಲೆಯನ್ನು ವಿಸ್ತರಿಸುವ ಗುರಿಯನ್ನು ಹೊಂದಿದೆ ಎಂದರು.

ರಾಜ್ಯಸಭಾ ಸದಸ್ಯರಾಗಿರುವ ಪಾಠಕ್ ಅವರನ್ನು ಛತ್ತೀಸ್‌ಗಢದ ಎಎಪಿ ಘಟಕದ ಉಸ್ತುವಾರಿಯನ್ನಾಗಿ ನೇಮಿಸಲಾಗಿದ್ದು, ಪಂಕಜ್ ಗುಪ್ತಾ ಅವರಿಗೆ ಪಕ್ಷದ ಗೋವಾ ಘಟಕದ ಮುಖ್ಯಸ್ಥರ ಜವಾಬ್ದಾರಿಯನ್ನು ನೀಡಲಾಗಿದೆ. ಮೆಹ್ರಾಜ್ ಮಲಿಕ್ ಅವರನ್ನು ಪಕ್ಷದ ಜಮ್ಮು ಮತ್ತು ಕಾಶ್ಮೀರ ಘಟಕದ ಹೊಸ ಮುಖ್ಯಸ್ಥರನ್ನಾಗಿ ನೇಮಿಸಲಾಗಿದೆ.

ದೆಹಲಿಯಲ್ಲಿ ಬಿಜೆಪಿ ನೀಡಿದ ಭರವಸೆಗಳನ್ನು ಈಡೇರಿಸದ ಬಗ್ಗೆಯೂ ಸಭೆಯಲ್ಲಿ ಚರ್ಚಿಸಲಾಯಿತು. ಇದರಲ್ಲಿ ಮಹಿಳೆಯರಿಗೆ ಮಾಸಿಕ 2,500 ರೂ. ಆರ್ಥಿಕ ನೆರವು ಮತ್ತು ಉಚಿತ ಎಲ್‌ಪಿಜಿ ಸಿಲಿಂಡರ್‌ಗಳನ್ನು ನೀಡುವುದು ಸೇರಿದೆ ಎಂದು ಪಾಠಕ್ ಹೇಳಿದರು.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

'ನಾವು ದಾಳಿ ಮಾಡದೇ ಹೋಗಿದ್ದರೆ ಇಷ್ಟು ಹೊತ್ತಿಗೆ Iran ಅಣ್ವಸ್ತ್ರ ರಾಷ್ಟ್ರವಾಗಿರುತ್ತಿತ್ತು': ಇಸ್ರೇಲ್ ಪ್ರಧಾನಿ ಬೆಂಜಮಿನ್ ನೇತನ್ಯಾಹು

IPL 2026: ತವರಿನಲ್ಲಿ ಮುಂಬೈ ಗೆ ಮುಖಭಂಗ; RCB ಗೆ 18 ರನ್ ಭರ್ಜರಿ ಗೆಲುವು!

7 ತಿಂಗಳ ಮಗುವಿಗಾಗಿ ಕೆಲಸದ ಸಮಯದ ಹೊಂದಾಣಿಕೆ ಕೋರಿದ ಭಾರತೀಯ ಉದ್ಯೋಗಿ; US ಮ್ಯಾನೇಜರ್ ಪ್ರತಿಕ್ರಿಯೆ ಬಗ್ಗೆ ಜಾಲತಾಣಗಳಲ್ಲಿ ಭಾರಿ ಚರ್ಚೆ!

ಗುರಿ ಇಟ್ಟಿದ್ದು ಜಿಹಾದಿ ಬಂಡುಕೋರರಿಗೆ, ಗುರಿಯಾಗಿದ್ದು ಸ್ಥಳೀಯ ಮಾರ್ಕೆಟ್; 100 ಕ್ಕೂ ಹೆಚ್ಚು ನಾಗರಿಕರ ಮಾರಣಹೋಮ!

IPL 2026: ಮುಂಬೈ ವಿರುದ್ದ ಭರ್ಜರಿ ಬ್ಯಾಟಿಂಗ್; ಬಾಬರ್ ಆಜಂ, ಕ್ರಿಸ್ ಗೇಯ್ಲ್ ದಾಖಲೆ ಮುರಿದ Virat Kohli!

SCROLL FOR NEXT