ದೇಶ

ದೆಹಲಿ ಹೈಕೋರ್ಟ್‌ ನ್ಯಾಯಾಧೀಶರ ಮನೆಯಲ್ಲಿ ಕೋಟಿ-ಕೋಟಿ ಹಣ; ನ್ಯಾಯಾಂಗ ವ್ಯವಸ್ಥೆಯಲ್ಲಿ ತಲ್ಲಣ: ಜಡ್ಜ್ ವರ್ಗಾವಣೆಗೆ ಕೊಲಿಜಿಯಂ ಆದೇಶ

ಮಾರ್ಚ್ 14 ರಂದು ಅವರ ನಿವಾಸದಲ್ಲಿ ಬೆಂಕಿ ಕಾಣಿಸಿಕೊಂಡಾಗ ನ್ಯಾಯಮೂರ್ತಿ ಯಶವಂತ್ ವರ್ಮಾ ನಗರದಲ್ಲಿ ಇರಲಿಲ್ಲ. ಹೀಗಾಗಿ ಅವರ ಕುಟುಂಬ ಸದಸ್ಯರು ಅಗ್ನಿಶಾಮಕ ಮತ್ತು ರಕ್ಷಣಾ ಸೇವೆಗಳು ಮತ್ತು ಪೊಲೀಸರಿಗೆ ಕರೆ ಮಾಡಿದ್ದರು.

ನವದೆಹಲಿ: ಕಳೆದ ವಾರ ದೆಹಲಿ ಹೈಕೋರ್ಟ್ ನ್ಯಾಯಾಧೀಶ ಯಶವಂತ್ ವರ್ಮಾ ಅವರ ಮನೆಯಲ್ಲಿ ಸಂಭವಿಸಿದ ಬೆಂಕಿ ಅವಘಡದ ಸಮಯದಲ್ಲಿ ಲೆಕ್ಕಕ್ಕೆ ಸಿಗದ ಭಾರೀ ಪ್ರಮಾಣದ ಹಣ ಪತ್ತೆಯಾಗಿದ್ದು, ಸುಪ್ರೀಂ ಕೋರ್ಟ್ ಕೊಲಿಜಿಯಂ ಅವರನ್ನು ಅಲಹಾಬಾದ್ ಹೈಕೋರ್ಟ್‌ಗೆ ವರ್ಗಾವಣೆ ಮಾಡಿದೆ.

ಜಡ್ಜ್‌ ನಿವಾಸದಲ್ಲಿ ಪತ್ತೆಯಾದ ಅಪಾರ ಪ್ರಮಾಣದ ಹಣ ಕುರಿತು ಸುಪ್ರೀಂಕೋರ್ಟ್‌ ಸಿಜೆಐಗೆ ಮಾಹಿತಿ ನೀಡಲಾಗಿತ್ತು. ಸುಪ್ರೀಂ ಚೀಫ್‌ ಜಸ್ಟೀಸ್‌ ಸಂಜೀವ್‌ ಖನ್ನಾ ನೇತೃತ್ವದ ಕೊಲಿಜಿಯಂ ಜಸ್ಟೀಸ್‌ ವರ್ಮಾ ಅವರನ್ನು ವರ್ಗಾಯಿಸುವ ನಿರ್ಧಾರ ತೆಗೆದುಕೊಂಡಿದೆ.

ಮಾರ್ಚ್ 14 ರಂದು ಅವರ ನಿವಾಸದಲ್ಲಿ ಬೆಂಕಿ ಕಾಣಿಸಿಕೊಂಡಾಗ ನ್ಯಾಯಮೂರ್ತಿ ಯಶವಂತ್ ವರ್ಮಾ ನಗರದಲ್ಲಿ ಇರಲಿಲ್ಲ. ಹೀಗಾಗಿ ಅವರ ಕುಟುಂಬ ಸದಸ್ಯರು ಅಗ್ನಿಶಾಮಕ ಮತ್ತು ರಕ್ಷಣಾ ಸೇವೆಗಳು ಮತ್ತು ಪೊಲೀಸರಿಗೆ ಕರೆ ಮಾಡಿದ್ದರು. ಬೆಂಕಿಯನ್ನು ನಂದಿಸಿದ ನಂತರ, ಪೊಲೀಸರು ಮತ್ತು ಅಗ್ನಿಶಾಮಕ ದಳದವರು ಮನೆಗೆ ಪ್ರವೇಶಿಸಿದಾಗ, ಒಂದು ಕೋಣೆಯಲ್ಲಿ ಅಪಾರ ಪ್ರಮಾಣದ ನಗದು ಪತ್ತೆಯಾಗಿದೆ.

ಅದನ್ನು ಗಮನಿಸಿದ ಪೊಲೀಸರಿಗೆ ಇದು ಅನಾಮಧೇಯ ಹಣ ಎಂಬ ಅನುಮಾನ ಬಂದಿದೆ. ಇದರ ನಂತರ, ದೆಹಲಿ ಪೊಲೀಸರು ಗೃಹ ಸಚಿವಾಲಯಕ್ಕೆ ಮಾಹಿತಿ ನೀಡಿದರು. ಗೃಹ ಸಚಿವಾಲಯವು ಸಿಜೆಐಗೆ ವರದಿಯನ್ನು ಕಳುಹಿಸಿತು.

ನ್ಯಾಯಮೂರ್ತಿ ವರ್ಮಾ ಅವರ ವರ್ಗಾವಣೆಯ ಬಗ್ಗೆ ಸರ್ವಾನುಮತದಿಂದ ನಿರ್ಧರಿಸಲು ಕೊಲಿಜಿಯಂ ಅನ್ನು ಪ್ರೇರೇಪಿಸಿತು, ಅವರನ್ನು ಅಲಹಾಬಾದ್‌ನಲ್ಲಿರುವ ಅವರ ಮಾತೃ ನ್ಯಾಯಾಲಯಕ್ಕೆ ವಾಪಸ್ ಕಳುಹಿಸಲಾಗಿದೆ. ಅಕ್ಟೋಬರ್ 2021 ರಲ್ಲಿ ದೆಹಲಿ ಹೈಕೋರ್ಟ್‌ಗೆ ನೇಮಕಗೊಳ್ಳುವ ಮೊದಲು ಅಲಹಾಬಾದ್ ನ್ಯಾಯಾಲಯದಲ್ಲಿ ಸೇವೆ ಸಲ್ಲಿಸಿದ್ದರು ಎಂದು ಟೈಮ್ಸ್ ನೌ ವರದಿ ಮಾಡಿದೆ.

ಇಂತಹ ಪ್ರಕರಣಗಳಲ್ಲಿ ನ್ಯಾಯಾಧಿಶರನ್ನು ಕೇವಲ ವರ್ಗಾವಣೆ ಮಾಡಿದರೆ ಸಾಕಾಗುವುದಿಲ್ಲ ಮತ್ತಷ್ಟು ಕಠಿಣ ಕ್ರಮ ಕೈಗೊಳ್ಳಬೇಕು ಎಂದು ಐದು ನ್ಯಾಯಾಧೀಶರ ಕೊಲಿಜಿಯಂನ ಕೆಲವು ಸದಸ್ಯರು ಸಲಹೆ ನೀಡಿದ್ದಾರೆ ಎಂದು ಮೂಲಗಳು ತಿಳಿಸಿವೆ. ನ್ಯಾಯಮೂರ್ತಿ ವರ್ಮಾ ಅವರನ್ನು ರಾಜೀನಾಮೆ ನೀಡುವಂತೆ ಕೇಳಬೇಕು ಮತ್ತು ಅವರು ನಿರಾಕರಿಸಿದರೆ, ಅವರ ವಿರುದ್ಧ ಆಂತರಿಕ ತನಿಖೆ ಆರಂಭಿಸಬೇಕು ಎಂದು ಅವರು ಸೂಚಿಸಿದ್ದಾರೆ. ವರ್ಗಾವಣೆಯನ್ನು ಮೀರಿ ಏನಾದರೂ ಕ್ರಮ ಕೈಗೊಳ್ಳಲಾಗುತ್ತದೆಯೇ ಅಥವಾ ಇಲ್ಲವೇ ಎಂಬುದನ್ನು ಈಗ ಕಾದು ನೋಡಬೇಕಾಗಿದೆ.

ಯಶವಂತ್ ವರ್ಮಾ ಉತ್ತರ ಪ್ರದೇಶ ಮೂಲದವರಾಗಿದ್ದು, ಅಲಹಾಬಾದ್ ವಿಶ್ವವಿದ್ಯಾಲಯದಿಂದ ಕಾನೂನು ಶಿಕ್ಷಣವನ್ನು ಪೂರ್ಣಗೊಳಿಸಿದರು. ಕಾನೂನು ಅಭ್ಯಾಸವನ್ನು ಪ್ರಾರಂಭಿಸಿದ ನಂತರ, ಅವರು ಅಲಹಾಬಾದ್ ಹೈಕೋರ್ಟ್‌ನಲ್ಲಿ ಅಭ್ಯಾಸ ಮಾಡಲು ಪ್ರಾರಂಭಿಸಿದರು, ಅಲ್ಲಿ ಅವರು ವಿವಿಧ ಕಾನೂನು ವಿಷಯಗಳಲ್ಲಿ ತಮ್ಮ ಪರಿಣತಿಯನ್ನು ತೋರಿಸಿದರು. ಅವರ ನಿಷ್ಪಕ್ಷಪಾತ ಮತ್ತು ಕಾನೂನಿನ ಆಳವಾದ ತಿಳುವಳಿಕೆಯಿಂದಾಗಿ, ಅವರನ್ನು ಅಕ್ಟೋಬರ್ 13, 2021 ರಂದು ದೆಹಲಿ ಹೈಕೋರ್ಟ್‌ನ ನ್ಯಾಯಾಧೀಶರಾಗಿ ನೇಮಿಸಲಾಯಿತು.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಭಾರತದ ನೆಲದಲ್ಲೇ ಸ್ತ್ರೀದ್ವೇಷ ಪ್ರದರ್ಶಿಸಿದ ತಾಲೀಬಾನ್ ವಿದೇಶಾಂಗ ಸಚಿವ!; ಸುದ್ದಿಗೋಷ್ಠಿಗೆ ಮಹಿಳೆಯರಿಗಿಲ್ಲ ಪ್ರವೇಶ; ಭುಗಿಲೆದ್ದ ಅಸಮಾಧಾನ!

'ನನ್ನ ಪ್ರಶಸ್ತಿ ಟ್ರಂಪ್‌ಗೆ ಸಮರ್ಪಿತ...' Noble ಶಾಂತಿ ಪ್ರಶಸ್ತಿ ಗೆದ್ದ ಬೆನ್ನಲ್ಲೇ ಮಾರಿಯಾ ಶಾಕಿಂಗ್ ಹೇಳಿಕೆ!

ಭಾರತದ ಹಿತಾಸಕ್ತಿಗಳ ವಿರುದ್ಧ ಅಫ್ಘಾನಿಸ್ತಾನ ನೆಲ ಬಳಕೆಯಾಗಲ್ಲ, ನೀವು ಆಟ ಆಡಬೇಡಿ- ಪಾಕಿಸ್ತಾನ ಅಫ್ಘಾನ್ ವಿದೇಶಾಂಗ ಸಚಿವರ ನೇರ ಎಚ್ಚರಿಕೆ!

ಚಿಕ್ಕಬಳ್ಳಾಪುರ: 'Miss U Chinna'; ಅಪ್ರಾಪ್ತ ಪ್ರೇಯಸಿಯ ದುಪ್ಪಟ್ಟದಿಂದಲೇ ಯುವಕ ನೇಣಿಗೆ ಶರಣು; Instagram Post Viral

ಬೆಂಗಳೂರಿನಲ್ಲೊಂದು ಹೃದಯ ವಿದ್ರಾವಕ ಘಟನೆ: ಇಬ್ಬರು ಮಕ್ಕಳನ್ನು ಕೊಂದು ತಾಯಿ ಆತ್ಮಹತ್ಯೆ

SCROLL FOR NEXT