ಕೇಂದ್ರ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಸಚಿವೆ ಅನ್ನಪೂರ್ಣ ದೇವಿ online desk
ದೇಶ

"ಇಂಥಹ ತೀರ್ಪುಗಳು ಸಮಾಜಕ್ಕೆ"...: ಸ್ತನಗಳ ಹಿಡಿಯುವುದು ಅತ್ಯಾಚಾರ ಯತ್ನವಲ್ಲ ಎಂಬ ಕೋರ್ಟ್ ತೀರ್ಪಿನ ಬಗ್ಗೆ ಕೇಂದ್ರ WCD ಸಚಿವೆ ಆಕ್ರೋಶ

ಅಲಹಾಬಾದ್ ಹೈಕೋರ್ಟ್ ನೀಡಿರುವ ತೀರ್ಪಿನಲ್ಲಿ ಸುಪ್ರೀಂ ಕೋರ್ಟ್ ಮಧ್ಯಪ್ರವೇಶಿಸಬೇಕು ಎಂದು ಕೇಂದ್ರ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಸಚಿವೆ ಅನ್ನಪೂರ್ಣ ದೇವಿ ಆಗ್ರಹಿಸಿದ್ದಾರೆ.

ನವದೆಹಲಿ: ಸ್ತನಗಳನ್ನು ಹಿಡಿಯುವುದು ಅಥವಾ ಪ್ಯಾಂಟ್ ಎಳೆಯುವಂತಹ ಕೃತ್ಯಗಳು ಅತ್ಯಾಚಾರ ಅಥವಾ ಅತ್ಯಾಚಾರದ ಪ್ರಯತ್ನವಲ್ಲ, ಬದಲಿಗೆ ತೀವ್ರ ಲೈಂಗಿಕ ದೌರ್ಜನ್ಯದ ಕಡಿಮೆ ಆರೋಪದ ಅಡಿಯಲ್ಲಿ ಬರುತ್ತವೆ ಎಂಬ ಅಲಹಾಬಾದ್ ಹೈಕೋರ್ಟ್ ತೀರ್ಪಿನ ಬಗ್ಗೆ ಕೇಂದ್ರ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಸಚಿವೆ ಅನ್ನಪೂರ್ಣ ದೇವಿ ತೀವ್ರ ಅಸಮಾಧಾನ ವ್ಯಕ್ತಪಡಿಸಿದ್ದಾರೆ.

ಅಲಹಾಬಾದ್ ಹೈಕೋರ್ಟ್ ನೀಡಿರುವ ತೀರ್ಪಿನಲ್ಲಿ ಸುಪ್ರೀಂ ಕೋರ್ಟ್ ಮಧ್ಯಪ್ರವೇಶಿಸಬೇಕು ಎಂದು ಕೇಂದ್ರ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಸಚಿವೆ ಅನ್ನಪೂರ್ಣ ದೇವಿ ಆಗ್ರಹಿಸಿದ್ದಾರೆ.

ಲೋಕಸಭೆಯ ಹೊರಗೆ ಸುದ್ದಿಗಾರರೊಂದಿಗೆ ಮಾತನಾಡಿದ ಅನ್ನಪೂರ್ಣ ದೇವಿ, ತೀರ್ಪಿನೊಂದಿಗೆ "ಸಂಪೂರ್ಣವಾಗಿ ಭಿನ್ನಾಭಿಪ್ರಾಯ ಹೊಂದಿದ್ದೇನೆ" ಮತ್ತು ಸುಪ್ರೀಂ ಕೋರ್ಟ್ ಈ ವಿಷಯವನ್ನು ಗಮನದಲ್ಲಿಟ್ಟುಕೊಳ್ಳಬೇಕೆಂದು ನ್ಯಾಯಾಲಯಕ್ಕೆ ಮನವಿ ಮಾಡಿದ್ದಾರೆ.

"ನಾನು ಈ ನಿರ್ಧಾರವನ್ನು ಸಂಪೂರ್ಣವಾಗಿ ವಿರೋಧಿಸುತ್ತೇನೆ ಮತ್ತು ಸುಪ್ರೀಂ ಕೋರ್ಟ್ ಇದನ್ನು ಗಂಭೀರವಾಗಿ ಗಮನಿಸಬೇಕು. ಅಂತಹ ತೀರ್ಪುಗಳಿಗೆ ನಾಗರಿಕ ಸಮಾಜದಲ್ಲಿ ಯಾವುದೇ ಸ್ಥಾನವಿಲ್ಲ" ಎಂದು ಅವರು ತಿಳಿಸಿದರು. ತೀರ್ಪಿನ ವ್ಯಾಪಕ ಪರಿಣಾಮಗಳ ಬಗ್ಗೆಯೂ ಸಚಿವರು ಕಳವಳ ವ್ಯಕ್ತಪಡಿಸಿದ್ದು ಇದು ಸಮಾಜಕ್ಕೆ ತಪ್ಪು ಸಂದೇಶವನ್ನು ಕಳುಹಿಸಬಹುದು ಎಂದು ಎಚ್ಚರಿಸಿದರು.

"ಇದು ಸಮಾಜದ ಮೇಲೆ ಇಂತಹ ತೀರ್ಪುಗಳು ನಕಾರಾತ್ಮಕ ಪರಿಣಾಮ ಬೀರುತ್ತದೆ ಮತ್ತು ನಾವು ಈ ವಿಷಯವನ್ನು ಮತ್ತಷ್ಟು ಚರ್ಚಿಸುತ್ತೇವೆ" ಎಂದು ಅವರು ಹೇಳಿದರು.

ಉತ್ತರ ಪ್ರದೇಶದ ಕಾಸ್ಗಂಜ್‌ನಲ್ಲಿ 11 ವರ್ಷದ ಬಾಲಕಿಯ ಮೇಲೆ 2021 ರಲ್ಲಿ ಪವನ್ ಮತ್ತು ಆಕಾಶ್ ಎಂಬ ಇಬ್ಬರು ಪುರುಷರಿಂದ ಹಲ್ಲೆ ನಡೆಸಿದ್ದ ಪ್ರಕರಣದ ಕುರಿತು ತೀರ್ಪು ನೀಡಿದ್ದ ಅಲಹಾಬಾದ್ ಹೈಕೋರ್ಟ್, ಸಂತ್ರಸ್ತೆಯ ಸ್ತನಗಳನ್ನು ಹಿಡಿಯುವುದು, ಆಕೆಯ ಪೈಜಾಮ ದಾರ ಅಥವಾ ಪ್ಯಾಂಟ್ ಎಳೆಯುವುದು ಅತ್ಯಾಚಾರ ಅಥವಾ ಅತ್ಯಾಚಾರ ಯತ್ನ ಆಗುವುದಿಲ್ಲ ಎಂದು ಹೇಳಿದ್ದರು.

ಆರೋಪಿಯು ಆಕೆಯ ಎದೆಯನ್ನು ಹಿಡಿದು, ಪೈಜಾಮ ದಾರವನ್ನು ಹರಿದು, ಮೋರಿಯ ಕೆಳಗೆ ಎಳೆಯಲು ಪ್ರಯತ್ನಿಸಿದಾಗ, ಆಕೆಯ ಕಿರುಚಾಟ ಕೇಳಿ ದಾರಿಹೋಕರು ಮಧ್ಯಪ್ರವೇಶಿಸಿದಾಗ, ಹಲ್ಲೆಕೋರರು ಓಡಿಹೋದರು.

ಆರೋಪಿ ಪವನ್ ಮತ್ತು ಆಕಾಶ್ ವಿರುದ್ಧದ ಆರೋಪವೆಂದರೆ, ಅವರು ಸಂತ್ರಸ್ತೆಯ ಎದೆಯನ್ನು ಹಿಡಿದುಕೊಂಡರು ಮತ್ತು ಆಕಾಶ್ ಸಂತ್ರಸ್ತೆಯ ಕೆಳಗಿನ ಉಡುಪನ್ನು ಕೆಳಗೆ ತರಲು ಪ್ರಯತ್ನಿಸಿದರು ಆದರೆ ಸಾಕ್ಷಿಗಳ ಹಸ್ತಕ್ಷೇಪದಿಂದಾಗಿ ಅವರು ಬಲಿಪಶುವನ್ನು ಬಿಟ್ಟು ಘಟನೆಯ ಸ್ಥಳದಿಂದ ಓಡಿಹೋದರು. ಆರೋಪಿಗಳ ವಿರುದ್ಧ ಹೊರಿಸಲಾದ ಆರೋಪಗಳು ಮತ್ತು ಪ್ರಕರಣದ ಸತ್ಯಗಳ ಆಧಾರದ ಮೇಲೆ, ಅತ್ಯಾಚಾರಕ್ಕೆ ಯತ್ನ ನಡೆದಿದೆ ಎಂದು ಸಾಬೀತುಪಡಿಸಲು ಸಾಧ್ಯವಿಲ್ಲ ಎಂದು ನ್ಯಾಯಮೂರ್ತಿ ರಾಮ್ ಮನೋಹರ್ ನಾರಾಯಣ್ ಮಿಶ್ರಾ ಅವರ ಪೀಠ ಹೇಳಿತ್ತು.

ದೆಹಲಿ ಡಿಸಿಡಬ್ಲ್ಯೂನ ಮಾಜಿ ಮುಖ್ಯಸ್ಥೆ ಮತ್ತು ರಾಜ್ಯಸಭಾ ಸಂಸದೆ ಸ್ವಾತಿ ಮಲಿವಾಲ್ ಅವರು ತೀರ್ಪನ್ನು ಖಂಡಿಸಿದ್ದಾರೆ. ನ್ಯಾಯಾಲಯದ ತೀರ್ಪು ದುರದೃಷ್ಟಕರ ಮತ್ತು ಆಘಾತಕಾರಿ ಎಂದು ಅವರು ಹೇಳಿದ್ದಾರೆ. ಆರೋಪಿ ಮಾಡಿದ ಕೃತ್ಯವನ್ನು ಅತ್ಯಾಚಾರವೆಂದು ಹೇಗೆ ಪರಿಗಣಿಸಲಾಗುವುದಿಲ್ಲ ಎಂದು ಪ್ರಶ್ನಿಸಿದರು. ಪರಿಸ್ಥಿತಿಯನ್ನು ನಾಚಿಕೆಗೇಡಿನ ಸಂಗತಿ ಎಂದು ಬಣ್ಣಿಸುತ್ತಾ, ಸುಪ್ರೀಂ ಕೋರ್ಟ್ ಮಧ್ಯಪ್ರವೇಶಿಸುವಂತೆ ಅವರು ಒತ್ತಾಯಿಸಿದರು.

ಪ್ರಮುಖ ಭಾರತೀಯ ವಕೀಲೆ ಇಂದಿರಾ ಜೈಸಿಂಗ್ ಕೂಡ ಈ ಪ್ರಕರಣದ ಬಗ್ಗೆ ತಮ್ಮ ಅಭಿಪ್ರಾಯ ವ್ಯಕ್ತಪಡಿಸಿ, ಸುಪ್ರೀಂ ಕೋರ್ಟ್ ಸ್ವಯಂಪ್ರೇರಿತ ಕ್ರಮ ಕೈಗೊಳ್ಳಬೇಕೆಂದು X ನಲ್ಲಿ ಹೇಳಿದ್ದಾರೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

'ವೆನೆಜುವೆಲಾ ಪರಿಸ್ಥಿತಿ ನಿಮಗೂ ಬರಬಹುದು.. ತಡ ಮಾಡದೇ ನಮ್ ಜೊತೆ ಒಪ್ಪಂದ ಮಾಡ್ಕೊಳ್ಳಿ': ಕ್ಯೂಬಾಗೂ Donald Trump ಎಚ್ಚರಿಕೆ!

ಕೊಹ್ಲಿ ಅರ್ಧಶತಕ: ನ್ಯೂಜಿಲ್ಯಾಂಡ್ ವಿರುದ್ಧದ ಮೊದಲ ಏಕದಿನ ಪಂದ್ಯದಲ್ಲಿ ಭಾರತಕ್ಕೆ ರೋಚಕ ಜಯ!

ತ್ರಿಪುರದಲ್ಲಿ ಎರಡು ಸಮುದಾಯಗಳ ನಡುವೆ ಘರ್ಷಣೆ: ಉನಕೋಟಿಯಲ್ಲಿ ಮಸೀದಿ-ಮುಸ್ಲಿಂ ಅಂಗಡಿಗಳಿಗೆ ಬೆಂಕಿ

ಒಂದು ವಾರದ ಚಿಕಿತ್ಸೆ ಬಳಿಕ ಆಸ್ಪತ್ರೆಯಿಂದ ಸೋನಿಯಾ ಗಾಂಧಿ ಡಿಸ್ಚಾರ್ಜ್!

Tubelight in his head: ಹಿಮಂತಾ ಬಿಸ್ವಾ ಶರ್ಮಾ ವಿರುದ್ಧ AIMIM ಮುಖ್ಯಸ್ಥ ಓವೈಸಿ ಕಿಡಿ! ಏನಿದು ವಿವಾದ?

SCROLL FOR NEXT