ಯತಿ ನರಸಿಂಹಾನಂದ ಗಿರಿ 
ದೇಶ

ಮಹಾತ್ಮ ಗಾಂಧಿ ಬಗ್ಗೆ ಅವಹೇಳನಕಾರಿ ಹೇಳಿಕೆ: ಯತಿ ನರಸಿಂಹಾನಂದ್ ವಿರುದ್ಧ ಪ್ರಕರಣ ದಾಖಲು

ನರಸಿಂಹಾನಂದ ಅವರು ಗಾಜಿಯಾಬಾದ್ ಪೊಲೀಸ್ ಕಮಿಷನರ್ ಮತ್ತು ಲೋನಿಯ ಸಹಾಯಕ ಪೊಲೀಸ್ ಕಮಿಷನರ್ ವಿರುದ್ಧ ನಿಂದನೀಯ ಪದಗಳನ್ನು ಬಳಸಿದ್ದಾರೆ ಎಂದು ದೂರುದಾರರು ಉಲ್ಲೇಖಿಸಿದ್ದಾರೆ.

ಗಾಜಿಯಾಬಾದ್: ಮಹಾತ್ಮ ಗಾಂಧಿ ವಿರುದ್ಧ ಅವಹೇಳನಕಾರಿ ಹೇಳಿಕೆ ನೀಡಿದ್ದ ಹಿನ್ನೆಲೆಯಲ್ಲಿ ವಿವಾದಿತ ಅರ್ಚಕ ಯತಿ ನರಸಿಂಹಾನಂದ ಗಿರಿ ವಿರುದ್ಧ ಪ್ರಕರಣ ದಾಖಲಾಗಿದೆ.

ಈ ಸಂಬಂಧ ದಾಸ್ನಾ ದೇವಿ ದೇವಾಲಯದ ಅರ್ಚಕರು ಗಾಜಿಯಾಬಾದ್ ನಲ್ಲಿ ಎಫ್ ಐಆರ್ ದಾಖಲಿಸಿದ್ದು, ನರಸಿಂಹಾನಂದ್ ಅವರು ಮಹಾತ್ಮ ಗಾಂಧಿ ವಿರುದ್ಧ ಅವಹೇಳನಾಕಾರಿ ಹೇಳಿಕೆ ನೀಡಿದ್ದು, ಧಾರ್ಮಿಕ ಭಾವನೆಗಳನ್ನು ಕೆರಳಿಸುವ, ಕ್ರಿಮಿನಲ್ ಬೆದರಿಕೆ, ಅವಮಾನ, ಮಾನಹಾನಿ ಮತ್ತು ಸಾರ್ವಜನಿಕ ಶಾಂತಿಯನ್ನು ಕದಡುವ ಉದ್ದೇಶದ ಪದಗಳನ್ನು ಬಳಸಿದ್ದಾರೆ ಎಂದು ಆರೋಪಿಸಲಾಗಿದೆ.

ನರಸಿಂಹಾನಂದ ಅವರು ಗಾಜಿಯಾಬಾದ್ ಪೊಲೀಸ್ ಕಮಿಷನರ್ ಮತ್ತು ಲೋನಿಯ ಸಹಾಯಕ ಪೊಲೀಸ್ ಕಮಿಷನರ್ ವಿರುದ್ಧ ನಿಂದನೀಯ ಪದಗಳನ್ನು ಬಳಸಿದ್ದಾರೆ ಎಂದು ದೂರುದಾರರು ಉಲ್ಲೇಖಿಸಿದ್ದಾರೆ.

ವೀಡಿಯೋದಲ್ಲಿ ದ್ವೇಷ ಹರಡುವ ಮತ್ತು ಜಿಲ್ಲೆಯ ಉನ್ನತ ಪೊಲೀಸ್ ಅಧಿಕಾರಿಗಳನ್ನು ನಿಂದಿಸಿದ ಆರೋಪದ ಮೇಲೆ ಪ್ರಕರಣ ದಾಖಲಿಸಲಾಗಿದೆ ಎಂದು ಅಧಿಕಾರಿಗಳು ಶನಿವಾರ ತಿಳಿಸಿದ್ದಾರೆ.

ನರಸಿಂಹಾನಂದ ಅವರ ಹೇಳಿಕೆಗಳು ಕೋಮು ಸೌಹಾರ್ದತೆಯನ್ನು ಕೆರಳಿಸುವ ಮತ್ತು ಭಂಗಗೊಳಿಸುವ ಉದ್ದೇಶದಿಂದ ಕೂಡಿವೆ ಎಂದು ಆರೋಪಿಸಿ ಶುಕ್ರವಾರ ಅಲೆ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದೆ ಎಂದು ಉಪ ಪೊಲೀಸ್ ಆಯುಕ್ತ (ಗ್ರಾಮೀಣ) ಸುರೇಂದ್ರ ನಾಥ್ ತಿವಾರಿ ಹೇಳಿದ್ದಾರೆ.

ಈ ಬಗ್ಗೆ ತನಿಖೆ ನಡೆಯುತ್ತಿದೆ ಎಂದು ಅಧಿಕಾರಿ ತಿಳಿಸಿದ್ದಾರೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಜಮ್ಮು-ಕಾಶ್ಮೀರ: ಮಸೂದ್ ಅಜರ್ ಆಡಿಯೋ ಬೆನ್ನಲ್ಲೇ ಭಾರತದ ಗಡಿಗೆ ನುಗ್ಗಲು 'ಪಾಕ್ ಡ್ರೋನ್' ಗಳು ಯತ್ನ!

1st ODI: ಕೊಹ್ಲಿ ಅರ್ಧಶತಕ: ನ್ಯೂಜಿಲ್ಯಾಂಡ್ ವಿರುದ್ಧದ ಪಂದ್ಯದಲ್ಲಿ ಭಾರತಕ್ಕೆ ರೋಚಕ ಜಯ!

ಕಾಂಗ್ರೆಸ್ ಶಾಸಕಿ ನಯನಾ ಮೋಟಮ್ಮಗೆ ಅಶ್ಲೀಲ ಕಾಮೆಂಟ್! ಕಿಡಿಗೇಡಿಗಳಿಗೆ ಕೊಟ್ಟ ವಾರ್ನಿಂಗ್ ಏನು?

ಮಿಲಿಟರಿ ದಾಳಿಗೆ ಟ್ರಂಪ್, ನೆತನ್ಯಾಹು ಸಜ್ಜು: ತಿರುಗೇಟು ನೀಡಿದ ಇರಾನ್! ಹೇಳಿದ್ದೇನು ಗೊತ್ತಾ?

ಪಾಕಿಸ್ತಾನದಲ್ಲಿ 'ಗುಂಡಿಟ್ಟು' ಹಿಂದೂ ರೈತನ ಕಗ್ಗೊಲೆ! ಹೈದರಾಬಾದಿನಲ್ಲಿ ಆರೋಪಿಗಳ ಬಂಧನ

SCROLL FOR NEXT