ದೇಶ

ಉತ್ತರ ಪ್ರದೇಶ: ಪತ್ನಿಯ ಅನೈತಿಕ ಸಂಬಂಧ ಶಂಕೆಗೆ 3 ಮಕ್ಕಳು ಬಲಿ; ಪತ್ನಿ ಸ್ಥಿತಿ ಗಂಭೀರ, BJP ನಾಯಕನಿಂದಲೇ ಗುಂಡೇಟು!

ಈ ಘಟನೆ ಇಡೀ ಸಮುದಾಯವನ್ನೇ ಬೆಚ್ಚಿಬೀಳಿಸಿದೆ. ಯೋಗೇಶ್ ಮಕ್ಕಳನ್ನು ಒಬ್ಬೊಬ್ಬರಾಗಿ ಪಿಸ್ತೂಲಿನಿಂದ ಗುಂಡು ಹಾರಿಸಿ ಛಾವಣಿಯಿಂದ ರಸ್ತೆಗೆ ಎಸೆಯುತ್ತಲೇ ಇದ್ದನು.

ಉತ್ತರ ಪ್ರದೇಶದ ಸಹರಾನ್‌ಪುರ ಜಿಲ್ಲೆಯಲ್ಲಿ ನಡೆದ ಆಘಾತಕಾರಿ ಘಟನೆಯೊಂದರಲ್ಲಿ, ಬಿಜೆಪಿ ನಾಯಕ ಯೋಗೇಶ್ ರೋಹಿಲ್ಲಾ ತನ್ನ ಪತ್ನಿ ಮತ್ತು ಮೂವರು ಮಕ್ಕಳನ್ನು ಗುಂಡಿಕ್ಕಿ ಕೊಂದಿದ್ದಾನೆ. ಐಎಎನ್‌ಎಸ್ ವರದಿಯ ಪ್ರಕಾರ, ಅವರ ಮೂವರು ಮಕ್ಕಳು, ಒಬ್ಬ ಮಗಳು ಮತ್ತು ಇಬ್ಬರು ಗಂಡು ಮಕ್ಕಳು ಸೇರಿದಂತೆ, ದಾಳಿಯಲ್ಲಿ ಸಾವನ್ನಪ್ಪಿದ್ದಾರೆ. ಪತ್ನಿ ನೇಹಾ ಸ್ಥಿತಿ ಇನ್ನೂ ಗಂಭೀರವಾಗಿದೆ. ಮೃತರನ್ನು 11 ವರ್ಷದ ಮಗಳು ಶ್ರದ್ಧಾ ಮತ್ತು ಇಬ್ಬರು ಪುತ್ರರಾದ ಶಿವಾಂಶ್ ಮತ್ತು ದೇವಾಂಶ್ ಎಂದು ಗುರುತಿಸಲಾಗಿದೆ.

ಪೊಲೀಸ್ ವರದಿಗಳ ಪ್ರಕಾರ, ಬಿಜೆಪಿ ಕಾರ್ಯಕಾರಿಣಿ ಸದಸ್ಯ ಹುದ್ದೆಯನ್ನು ಹೊಂದಿರುವ ಆರೋಪಿಯನ್ನು ಘಟನಾ ಸ್ಥಳದಲ್ಲೇ ಬಂಧಿಸಲಾಗಿದೆ. ಅಪರಾಧಕ್ಕೆ ಬಳಸಲಾದ ಪಿಸ್ತೂಲ್ ಅನ್ನು ಸಹ ವಶಪಡಿಸಿಕೊಳ್ಳಲಾಗಿದೆ. ಅಪರಾಧದ ಬಗ್ಗೆ ಮಾಹಿತಿ ಪಡೆದ ನಂತರ, ಸಹರಾನ್‌ಪುರ ಎಸ್‌ಎಸ್‌ಪಿ ರೋಹಿತ್ ಸಜ್ವಾನ್ ಸೇರಿದಂತೆ ಹಿರಿಯ ಪೊಲೀಸ್ ಅಧಿಕಾರಿಗಳು ಸ್ಥಳಕ್ಕೆ ತಲುಪಿದರು. ಆರೋಪಿಯು ತನ್ನ ಪತ್ನಿಯ ಅಕ್ರಮ ಸಂಬಂಧ ಹೊಂದಿದ್ದಾಳೆ ಎಂದು ಆರೋಪಿಸಿದ್ದು ಇದು ಘಟನೆಗೆ ಕಾರಣವಾಯಿತು ಎಂದು ಎಸ್‌ಎಸ್‌ಪಿ ಸಜ್ವಾನ್ ಬಹಿರಂಗಪಡಿಸಿದ್ದಾರೆ.

ಪತ್ನಿಯ ಅನೈತಿಕ ಸಂಬಂಧ ಶಂಕೆ ಹಿನ್ನೆಲೆಯಲ್ಲಿ ಯೋಗೇಶ್ ರೋಹಿಲ್ಲಾ ತನ್ನ ಹೆಂಡತಿ ಮತ್ತು ಮೂವರು ಮಕ್ಕಳ ಮೇಲೆ ಗುಂಡು ಹಾರಿಸಿದ್ದಾನೆ. ಇಬ್ಬರು ಮಕ್ಕಳು ಸ್ಥಳದಲ್ಲೇ ಸಾವನ್ನಪ್ಪಿದರೆ, ಹೆಂಡತಿ ಮತ್ತು ಮೂರನೇ ಮಗುವನ್ನು ಗಂಭೀರ ಸ್ಥಿತಿಯಲ್ಲಿ ಸಹರಾನ್‌ಪುರ ಜಿಲ್ಲಾ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆದರೆ ಪತ್ನಿಯ ಸ್ಥಿತಿ ಗಂಭೀರವಾಗಿದೆ. ಆದರೆ ಚಿಕಿತ್ಸೆ ಫಲಿಸದೇ ಮಗು ಸಾವನ್ನಪ್ಪಿದೆ ಎಂದು ಅವರು ಹೇಳಿದರು.

ಕೃತ್ಯ ಎಸಗಿದ ನಂತರ, ರೋಹಿಲ್ಲಾ ಸ್ವತಃ ಪೊಲೀಸರಿಗೆ ಮಾಹಿತಿ ನೀಡಿದ್ದಾನೆ ಎಂದು ಹೇಳಲಾಗುತ್ತಿದೆ. ಪೊಲೀಸರು ಸ್ಥಳಕ್ಕೆ ತಲುಪಿ ಆರೋಪಿಯನ್ನು ವಶಕ್ಕೆ ಪಡೆದರು. ಹೆಚ್ಚಿನ ಮಾಹಿತಿಯನ್ನು ಸಂಗ್ರಹಿಸಲು ಮತ್ತು ಘಟನೆಗಳ ನಿಖರವಾದ ಮಾಹಿತಿಯನ್ನು ಖಚಿತಪಡಿಸಿಕೊಳ್ಳಲು ಸ್ಥಳೀಯ ಅಧಿಕಾರಿಗಳು ವಿವರವಾದ ತನಿಖೆ ನಡೆಸುತ್ತಿದ್ದಾರೆ.

ಈ ಘಟನೆ ಇಡೀ ಸಮುದಾಯವನ್ನೇ ಬೆಚ್ಚಿಬೀಳಿಸಿದೆ. ಯೋಗೇಶ್ ಮಕ್ಕಳನ್ನು ಒಬ್ಬೊಬ್ಬರಾಗಿ ಪಿಸ್ತೂಲಿನಿಂದ ಗುಂಡು ಹಾರಿಸಿ ಛಾವಣಿಯಿಂದ ರಸ್ತೆಗೆ ಎಸೆಯುತ್ತಲೇ ಇದ್ದನು. ಗುಂಡಿನ ಸದ್ದು ಕೇಳಿದ ಪ್ರದೇಶದ ಜನರು ನೇಹಾ ಮತ್ತು ಮಕ್ಕಳು ರಸ್ತೆಯಲ್ಲಿ ರಕ್ತದ ಮಡುವಿನಲ್ಲಿ ಬಿದ್ದಿರುವುದನ್ನು ನೋಡಿ ಆಘಾತಕ್ಕೊಳಗಾದರು.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಭಾರತದ ಮೇಲೆ ಶೇ.50 ರಷ್ಟು ಸುಂಕ ನಾಳೆ ಜಾರಿ: ಕರಡು ಸೂಚನೆ ಹೊರಡಿಸಿದ ಅಮೆರಿಕ

ಧರ್ಮಸ್ಥಳ ಬುರುಡೆ ಕೇಸು: ಮಹೇಶ್ ತಿಮರೋಡಿ ನಿವಾಸದಲ್ಲಿ ಆರೋಪಿ ಚಿನ್ನಯ್ಯನ ಮೊಬೈಲ್ ಪತ್ತೆ

Gaza Hospital Strike: ಹಮಾಸ್ ಸೋಲಿಸುವುದಷ್ಟೇ ನಮ್ಮ ಗುರಿ, ನಾಗರೀಕರನ್ನು ಗೌರವಿಸುತ್ತೇವೆ; ದಾಳಿ ಕುರಿತು ಮೊದಲ ಬಾರಿಗೆ ಇಸ್ರೇಲ್ ವಿಷಾದ

ವಿಧಾನಪರಿಷತ್'ಗೆ ನಾಮನಿರ್ದೇಶನ: ನಾಲ್ವರು MLC ಅಭ್ಯರ್ಥಿಗಳು ಹೆಸರು ಬದಲು, ಪಟ್ಟಿಯಲ್ಲಿ TNIE ಮೈಸೂರು ವಿಭಾಗದ ಮುಖ್ಯಸ್ಥನಿಗೆ ಸ್ಥಾನ

ಬಾನು ಮುಷ್ತಾಕ್‌ ದಸರಾ ಉದ್ಘಾಟನೆಗೆ ಆಕ್ಷೇಪ; ಮುಸ್ಲಿಂ ದ್ವೇಷ ಮನಸ್ಥಿತಿಯನ್ನು ಬದಿಗಿಟ್ಟು, ಸಂವಿಧಾನದ ಆಶಯ ಅರ್ಥ ಮಾಡಿಕೊಳ್ಳಿ: ಸಚಿವ ಹೆಚ್.ಸಿ.ಮಹದೇವಪ್ಪ

SCROLL FOR NEXT