ಜಮ್ಮು-ಕಾಶ್ಮೀರ (ಸಂಗ್ರಹ ಚಿತ್ರ) online desk
ದೇಶ

ಜಮ್ಮು-ಕಾಶ್ಮೀರ ಅರಣ್ಯದಲ್ಲಿ ನುಸುಳುಕೋರು-ಭದ್ರತಾ ಪಡೆಗಳ ನಡುವೆ ಗುಂಡಿನ ಚಕಮಕಿ

ಸ್ಥಳಕ್ಕೆ ಸೇನಾ ಪಡೆಗಳನ್ನು ರವಾನಿಸಲಾಗಿದೆ ಮತ್ತು ಹೆಚ್ಚಿನ ವಿವರಗಳನ್ನು ನಿರೀಕ್ಷಿಸಲಾಗಿದೆ ಎಂದು ಅಧಿಕಾರಿಗಳು ಹೇಳಿದ್ದಾರೆ.

ಶ್ರೀನಗರ: ಜಮ್ಮು ಮತ್ತು ಕಾಶ್ಮೀರದ ಕಥುವಾದಲ್ಲಿ ಅರಣ್ಯ ಪ್ರದೇಶದಿಂದ ನುಸುಳಲು ನುಸುಳುಕೋರರು ಯತ್ನಿಸಿದ್ದು, ಭದ್ರತಾ ಪಡೆಗಳು- ನುಸುಳುಕೋರರ ನಡಿವೆ ಗುಂಡಿನ ಚಕಮಕಿ ನಡೆದಿದೆ.

ಹಿರಾನಗರ ವಲಯದ ಅಂತರರಾಷ್ಟ್ರೀಯ ಗಡಿಯ ಬಳಿಯ ಸನ್ಯಾಲ್ ಗ್ರಾಮದಲ್ಲಿ ಶಂಕಿತ ಭಯೋತ್ಪಾದಕರು ಇರುವ ಬಗ್ಗೆ ಮಾಹಿತಿ ಬಂದ ನಂತರ ಭದ್ರತಾ ಪಡೆಗಳು ಶೋಧ ಕಾರ್ಯಾಚರಣೆಯನ್ನು ಪ್ರಾರಂಭಿಸಿದಾಗ ಎನ್‌ಕೌಂಟರ್ ಪ್ರಾರಂಭವಾಯಿತು ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ಸ್ಥಳಕ್ಕೆ ಸೇನಾ ಪಡೆಗಳನ್ನು ರವಾನಿಸಲಾಗಿದೆ ಮತ್ತು ಹೆಚ್ಚಿನ ವಿವರಗಳನ್ನು ನಿರೀಕ್ಷಿಸಲಾಗಿದೆ ಎಂದು ಅಧಿಕಾರಿಗಳು ಹೇಳಿದ್ದಾರೆ.

ಜಮ್ಮುವಿನಲ್ಲಿ ಇತ್ತೀಚೆಗೆ ಭಯೋತ್ಪಾದಕರ ಸರಣಿ ಒಳನುಸುಳುವಿಕೆ ನಡೆಯುತ್ತಿದೆ. ಮಾರ್ಚ್ 17 ರಂದು, ಕುಪ್ವಾರಾ ಜಿಲ್ಲೆಯಲ್ಲಿ ಭಯೋತ್ಪಾದಕರು ಮತ್ತು ಭದ್ರತಾ ಪಡೆಗಳ ನಡುವೆ ಎನ್‌ಕೌಂಟರ್ ನಡೆದು, ಒಬ್ಬ ಪಾಕಿಸ್ತಾನಿ ಭಯೋತ್ಪಾದಕ ಸಾವನ್ನಪ್ಪಿದ್ದಾನೆ.

ಇತ್ತೀಚೆಗೆ, ಕಥುವಾ ಜಿಲ್ಲೆಯಲ್ಲಿ ಭಯೋತ್ಪಾದಕರು ಮೂವರು ಅಮಾಯಕ ನಾಗರಿಕರನ್ನು ಕೊಂದರು. ಅವರಲ್ಲಿ ಒಬ್ಬ 14 ವರ್ಷದ ಬಾಲಕನೂ ಇದ್ದ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಇಬ್ಬರು ಕೇಂದ್ರ ಸಚಿವರು ಸೇರಿದಂತೆ 75 ಸದಸ್ಯರ GBA ಸೆ. 2 ರಿಂದ ಅಸ್ತಿತ್ವಕ್ಕೆ: ಯತೀಂದ್ರ ಸಿದ್ದರಾಮಯ್ಯಗೂ ಸ್ಥಾನ!

ಫೈಟರ್ ಜೆಟ್‌ ಇಂಜಿನ್ ಖರೀದಿ: ಅಮೆರಿಕಾದ GE ಸಂಸ್ಥೆಯೊಂದಿಗೆ $1 ಬಿಲಿಯನ್ ಮೊತ್ತದ ಒಪ್ಪಂದಕ್ಕೆ ಭಾರತ ಸಿದ್ಧತೆ!

ಸುಂಕ ಸಮರ: Trump 4 ಬಾರಿ ಕರೆ ಮಾಡಿದರೂ ಉತ್ತರಿಸದ PM Modi; ಅಮೆರಿಕ ನಿಯೋಗಕ್ಕೂ No Entry!

'ನನ್ನ ಕುರ್ಚಿ'ಗೆ ಪ್ರಧಾನಿ ಮೋದಿ ಗೌರವ ನೀಡಬೇಕು: ಪಶ್ಚಿಮ ಬಂಗಾಳ ಸಿಎಂ ಮಮತಾ ಬ್ಯಾನರ್ಜಿ ಕಿಡಿ!

ಸುಪ್ರೀಂ ಕೋರ್ಟ್‌ಗೆ ನ್ಯಾ. ಪಾಂಚೋಲಿ ಹೆಸರು ಶಿಫಾರಸು: ನ್ಯಾ. ಬಿ. ವಿ. ನಾಗರತ್ನ ತೀವ್ರ ಅಸಮಾಧಾನ!

SCROLL FOR NEXT