ಭಾರತೀಯ ಸೇನೆ 
ದೇಶ

ಜಮ್ಮು-ಕಾಶ್ಮೀರ: ದೋಡಾ ಜಿಲ್ಲೆಯಲ್ಲಿ ಉಗ್ರರ ಅಡಗುದಾಣ ಪತ್ತೆ; ಶಸ್ತ್ರಾಸ್ತ್ರಗಳು ವಶಕ್ಕೆ

ಅನುಮಾನಾಸ್ಪದ ಚಲನವಲನಗಳ ವರದಿಗಳ ಹಾಗೂ ಗುಪ್ತಚರ ಮಾಹಿತಿಯ ಮೇರೆಗೆ ಭದೇರ್ವಾದ ಭಲ್ರಾ ಅರಣ್ಯ ಪ್ರದೇಶದಲ್ಲಿ ಸ್ಥಳೀಯ ಪೊಲೀಸರು ಮತ್ತು ಸೇನೆ ವಿಶೇಷ ಕಾರ್ಯಾಚರಣೆ ಗುಂಪು(ಎಸ್‌ಒಜಿ) ಕಾರ್ಯಾಚರಣೆಗಿಳಿದಿತ್ತು.

ಶ್ರೀನಗರ: ಕಣಿವೆ ರಾಜ್ಯ ಜಮ್ಮು ಮತ್ತು ಕಾಶ್ಮೀರದಲ್ಲಿ ಭಾರತೀಯ ಸೇನೆ ಭಾರೀ ಕಾರ್ಯಾಚರಣೆ ನಡೆಸಿದ್ದು, ದೋಡಾ ಜಿಲ್ಲೆಯಲ್ಲಿ ಉಗ್ರರ ಬೃಹತ್ ಅಡಗುದಾಣವನ್ನು ಧ್ವಂಸ ಮಾಡಿ, ಅಲ್ಲಿದ್ದ ಭಾರಿ ಪ್ರಮಾಣದ ಶಸ್ತ್ರಾಸ್ತ್ರಗಳನ್ನು ವಶಕ್ಕೆ ಪಡೆದಿದೆ.

ಅನುಮಾನಾಸ್ಪದ ಚಲನವಲನಗಳ ವರದಿಗಳ ಹಾಗೂ ಗುಪ್ತಚರ ಮಾಹಿತಿಯ ಮೇರೆಗೆ ಭದೇರ್ವಾದ ಭಲ್ರಾ ಅರಣ್ಯ ಪ್ರದೇಶದಲ್ಲಿ ಸ್ಥಳೀಯ ಪೊಲೀಸರು ಮತ್ತು ಸೇನೆ ವಿಶೇಷ ಕಾರ್ಯಾಚರಣೆ ಗುಂಪು(ಎಸ್‌ಒಜಿ) ಕಾರ್ಯಾಚರಣೆಗಿಳಿದಿತ್ತು.

ಶೋದ ಕಾರ್ಯಾಚರಣೆ ವೇಳೆ ಉಗ್ರರ ಅಡಗುದಾಣ ಪತ್ತೆಯಾಗಿದೆ. ಕಾರ್ಯಾಚರಣೆ ವೇಳೆ ಯಾರನ್ನು ಬಂಧನಕ್ಕೊಳಪಡಿಸಿಲ್ಲ. ಆದರೆ, ಸ್ಫೋಟಕ ವಸ್ತು ಹಾಗೂ ಶಸ್ತ್ರಾಸ್ತ್ರಗಳನ್ನು ವಶಕ್ಕೆ ಪಡೆದಿದ್ದಾರೆಂದು ತಿಳಿದುಬಂದಿದೆ.

ಈ ನಡುವೆ ಪಕ್ಕದ ಕಿಶ್ತ್‌ವಾರ್ ಜಿಲ್ಲೆಯ ಗುರಿನಾಲ್, ಥಾಥ್ರಿ ಮತ್ತು ಚತ್ರೂ ಅರಣ್ಯದಲ್ಲಿ ಪೊಲೀಸರು, ಸೇನೆ ಮತ್ತು ಸಿಆರ್‌ಪಿಎಫ್ ಜಂಟಿ ಶೋಧ ಕಾರ್ಯಾಚರಣೆ ನಡೆಯುತ್ತಿದೆ ಎಂದು ಅಧಿಕಾರಿಗಳು ಮಾಹಿತಿ ನೀಡಿದ್ದಾರೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಇಬ್ಬರು ಕೇಂದ್ರ ಸಚಿವರು ಸೇರಿದಂತೆ 75 ಸದಸ್ಯರ GBA ಸೆ. 2 ರಿಂದ ಅಸ್ತಿತ್ವಕ್ಕೆ: ಯತೀಂದ್ರ ಸಿದ್ದರಾಮಯ್ಯಗೂ ಸ್ಥಾನ!

'ಸದನದಲ್ಲಿ ಹುಲಿ, ಹೈಕಮಾಂಡ್‌ ಮುಂದೆ ಇಲಿ'.. 'ಅಧಿಕಾರದಲ್ಲಿ ಉಳಿಯಲು DK Shivakumar ಕ್ಷಮೆಯಾಚನೆ': BJP-JDS ಟೀಕಾ ಪ್ರಹಾರ!

RSS ಅನ್ನು ಯಾರೂ "ಸಮರ್ಥಿಸಿಕೊಳ್ಳಬಾರದು": ಡಿಕೆಶಿ ಕ್ಷಮೆಯಾಚನೆ ಸ್ವಾಗತಿಸಿದ ಬಿ.ಕೆ ಹರಿಪ್ರಸಾದ್

ಸುಪ್ರೀಂ ಕೋರ್ಟ್‌ಗೆ ನ್ಯಾ. ಪಾಂಚೋಲಿ ಹೆಸರು ಶಿಫಾರಸು: ನ್ಯಾ. ಬಿ. ವಿ. ನಾಗರತ್ನ ತೀವ್ರ ಅಸಮಾಧಾನ!

ಶಿಬು ಸೊರೇನ್ 'ರಾಜ್ಯದ ಪಿತಾಮಹ' ಎಂದು ಘೋಷಿಸುವಂತೆ ಜೆಎಂಎಂ ಆಗ್ರಹ

SCROLL FOR NEXT