ಕಾಮಿಡಿಯನ್ ಕುನಾಲ್ ಕಮ್ರಾ ಹಾಗೂ ಶಿವಸೇನೆ ಕಾರ್ಯಕರ್ತರ ಹೋಟೆಲ್ ಧ್ವಂಸದ ಚಿತ್ರ 
ದೇಶ

DCM ಏಕನಾಥ್ ಶಿಂಧೆ ಕುರಿತು ಆಕ್ಷೇಪಾರ್ಹ ಹೇಳಿಕೆ: ಕಾಮಿಡಿಯನ್‌ ಕುನಾಲ್ ಕಾಮ್ರಾ, 40 ಶಿವಸೇನೆ ಕಾರ್ಯಕರ್ತರ ವಿರುದ್ಧ FIR ದಾಖಲು

ಕುನಾಲ್ ಕಮ್ರಾ 'ಗದ್ದರ್' ಪ್ರದರ್ಶನ ಚಿತ್ರೀಕರಿಸಿದ ಸ್ಟುಡಿಯೋ ಇರುವ ಮುಂಬೈನ ಖಾರ್ ಪ್ರದೇಶದ ಹೋಟೆಲ್ ನ್ನು ಧ್ವಂಸ ಗೊಳಿಸಿದ ಹಿನ್ನೆಲೆಯಲ್ಲಿ ಸುಮಾರು 40 ಶಿವಸೇನೆ ಕಾರ್ಯಕರ್ತರ ವಿರುದ್ಧವೂ ಪೊಲೀಸರು ಕೇಸ್ ದಾಖಲಿಸಿದ್ದಾರೆ.

ಮುಂಬೈ: ಕಾಮಿಡಿ ಶೋ ವೇಳೆ ಮಹಾರಾಷ್ಟ್ರ ಉಪ ಮುಖ್ಯಮಂತ್ರಿ ಏಕನಾಥ್ ಶಿಂಧೆ ಕುರಿತು ಆಕ್ಷೇಪಾರ್ಹ ಹೇಳಿಕೆ ನೀಡಿದ ಆರೋಪದ ಹಿನ್ನೆಲೆಯಲ್ಲಿ ಸ್ಟ್ಯಾಂಡ್ ಅಪ್ ಕಾಮಿಡಿಯಿನ್ ಕುನಾಲ್ ಕಾಮ್ರಾ ವಿರುದ್ಧ ಮುಂಬೈ ಪೊಲೀಸರು ಸೋಮವಾರ ಎಫ್ ಐಆರ್ ದಾಖಲಿಸಿದ್ದಾರೆ.

ಕುನಾಲ್ ಕಾಮ್ರಾ 'ಗದ್ದರ್' ಪ್ರದರ್ಶನ ಚಿತ್ರೀಕರಿಸಿದ ಸ್ಟುಡಿಯೋ ಇರುವ ಮುಂಬೈನ ಖಾರ್ ಪ್ರದೇಶದ ಹೋಟೆಲ್ ನ್ನು ಧ್ವಂಸ ಗೊಳಿಸಿದ ಹಿನ್ನೆಲೆಯಲ್ಲಿ ಸುಮಾರು 40 ಶಿವಸೇನೆ ಕಾರ್ಯಕರ್ತರ ವಿರುದ್ಧವೂ ಪೊಲೀಸರು ಕೇಸ್ ದಾಖಲಿಸಿದ್ದಾರೆ.

ಹ್ಯಾಬಿಟಾಟ್ ಸ್ಟುಡಿಯೋ ಇರುವ ಯೂನಿಕಾಂಟಿನೆಂಟಲ್ ಹೋಟೆಲ್ ಹೊರಗೆ ಭಾನುವಾರ ರಾತ್ರಿ ಹೆಚ್ಚಿನ ಸಂಖ್ಯೆಯಲ್ಲಿ ಜಮಾಯಿಸಿದ್ದ ಶಿವಸೇನೆ ಕಾರ್ಯಕರ್ತರು , ಸ್ಟುಡಿಯೋ ಮತ್ತು ಹೋಟೆಲ್ ಆವರಣವನ್ನು ಧ್ವಂಸ ಮಾಡಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ.

ವಿಶೇಷವೆಂದರೆ ಕಾಮ್ರಾ ಅವರ ಕಾರ್ಯಕ್ರಮ ನಡೆದ ಹ್ಯಾಬಿಟಾಟ್ ಸ್ಟುಡಿಯೋದಲ್ಲಿ ವಿವಾದಾತ್ಮಕ 'ಇಂಡಿಯಾಸ್ ಗಾಟ್ ಲ್ಯಾಟೆಂಟ್' ಶೋ ಕೂಡಾ ಚಿತ್ರೀಕರಿಸಲಾಗಿತ್ತು.

ಶಿಂಧೆ ವಿರುದ್ಧ ಕಾಮ್ರಾ ಆಕ್ಷೇಪಾರ್ಹಕಾರಿ ಪದಗಳನ್ನು ಬಳಸಿದ್ದಾರೆಂದು ತೋರಿಸುವ ವೀಡಿಯೊ ವೈರಲ್ ಆದ ನಂತರ, ಶಿವಸೇನಾ ಶಾಸಕ ಮುರ್ಜಿ ಪಟೇಲ್ ಪೊಲೀಸರಿಗೆ ದೂರು ದಾಖಲಿಸಿದ್ದಾರೆ.

ದೂರಿನ ಆಧಾರದ ಮೇಲೆ ಮುಂಬೈನ ಎಂಐಡಿಸಿ ಪೊಲೀಸರು ಸೋಮವಾರ ಮುಂಜಾನೆ ಕಮ್ರಾ ವಿರುದ್ಧ 353(1)(ಬಿ) (ಸಾರ್ವಜನಿಕ ಕಿಡಿಗೇಡಿತನಕ್ಕೆ ಕಾರಣವಾಗುವ ಹೇಳಿಕೆಗಳು) ಮತ್ತು 356(2) (ಮಾನನಷ್ಟ) ಸೇರಿದಂತೆ ವಿವಿಧ ಭಾರತೀಯ ನ್ಯಾಯ ಸಂಹಿತಾ (ಬಿಎನ್‌ಎಸ್) ನಿಬಂಧನೆಗಳ ಅಡಿಯಲ್ಲಿ ಪ್ರಥಮ ಮಾಹಿತಿ ವರದಿ (ಎಫ್‌ಐಆರ್) ದಾಖಲಿಸಿದ್ದಾರೆ ಎಂದು ಅಧಿಕಾರಿಯೊಬ್ಬರು ತಿಳಿಸಿದ್ದಾರೆ.

ಸುಮಾರು 2 ನಿಮಿಷಗಳ ವೀಡಿಯೊದಲ್ಲಿ, ಕಾಮ್ರಾ ಆಡಳಿತಾರೂಢ ಎನ್‌ಸಿಪಿ ಮತ್ತು ಶಿವಸೇನೆಯನ್ನು ಅಪಹಾಸ್ಯ ಮಾಡಿದ್ದು, ತನಿಖೆ ನಡೆಯುತ್ತಿದೆ ಎಂದು ಎಂಐಡಿಸಿ ಪೊಲೀಸ್ ಠಾಣೆಯ ಅಧಿಕಾರಿ ತಿಳಿಸಿದ್ದಾರೆ,

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಜಮ್ಮುವಿನಾದ್ಯಂತ ಭಾರೀ ಮಳೆ: ಪ್ರವಾಹ, ಭೂಕುಸಿತದಿಂದ ಮೂವರು ಸಾವು; ಕೊಚ್ಚಿ ಹೋದ ಸೇತುವೆ; Video

Indian Navyಗೆ ಮತ್ತಷ್ಟು ಬಲ: INS Udaygiri, INS Himgiri ಯುದ್ಧನೌಕೆಗಳು ಸೇರ್ಪಡೆ!

ಬಿಹಾರ: ಇನ್ನು 40-50 ವರ್ಷ ಅಧಿಕಾರದಲ್ಲಿ ಇರ್ತೀವಿ ಅಂತಾ ಅಮಿತ್ ಶಾ ಗೆ ಹೇಗೆ ಗೊತ್ತು? ರಾಹುಲ್ ಗಾಂಧಿ

ಭ್ರಷ್ಟಾಚಾರ ಪ್ರಕರಣ: ಬಂಧಿತ ಶ್ರೀಲಂಕಾ ಮಾಜಿ ಅಧ್ಯಕ್ಷ ವಿಕ್ರಮಸಿಂಘೆಗೆ ಜಾಮೀನು

ನನ್ನ-ಕಾಂಗ್ರೆಸ್ ಮಧ್ಯೆ ಭಕ್ತ-ಭಗವಂತನ ಸಂಬಂಧ ಇದೆ; RSS ಗೀತೆ ಹಾಡಿದ್ದಕ್ಕೆ ನೋವಾಗಿದ್ದರೆ ಕ್ಷಮೆ ಕೇಳುತ್ತೇನೆ: ಡಿ.ಕೆ ಶಿವಕುಮಾರ್; Video

SCROLL FOR NEXT