ದೇಶ

ನಮಗೆ ಇಂತಹ ನ್ಯಾಯಾಧೀಶರು ಬೇಡ: ನ್ಯಾ. ವರ್ಮಾ ವರ್ಗಾವಣೆಗೆ ಅಲ್ಲಾಹಾಬಾದ್ ಬಾರ್ ಅಸೋಸಿಯೇಷನ್ ಆಕ್ರೋಶ; ಅನಿರ್ದಿಷ್ಟಾವಧಿ ಮುಷ್ಕರ

ವಕೀಲರು ಮಾರ್ಚ್ 25 ರಿಂದ ಅನಿರ್ದಿಷ್ಟಾವಧಿ ಮುಷ್ಕರ ನಡೆಸಲಿದ್ದಾರೆ ಎಂದು ಸಂಸ್ಥೆಯ ಹಿರಿಯ ಪದಾಧಿಕಾರಿಯೊಬ್ಬರು ಸೋಮವಾರ ಸ್ಪಷ್ಟಪಡಿಸಿದ್ದಾರೆ.

ಅಲ್ಲಾಹಾಬಾದ್: ನ್ಯಾಯಮೂರ್ತಿ ಯಶವಂತ್ ವರ್ಮಾ ಅವರನ್ನು ಅಲಹಾಬಾದ್ ಹೈಕೋರ್ಟ್‌ಗೆ ವರ್ಗಾವಣೆ ಮಾಡಿದ ಬೆನ್ನಲ್ಲೇ ಅಲಹಾಬಾದ್ ಹೈಕೋರ್ಟ್ ಬಾರ್ ಅಸೋಸಿಯೇಷನ್‌ನಲ್ಲಿ ತೀವ್ರ ಅಸಮಾಧಾನ ಭುಗಿಲೆದ್ದಿದೆ.

ವಕೀಲರು ಮಾರ್ಚ್ 25 ರಿಂದ ಅನಿರ್ದಿಷ್ಟಾವಧಿ ಮುಷ್ಕರ ನಡೆಸಲಿದ್ದಾರೆ ಎಂದು ಸಂಸ್ಥೆಯ ಹಿರಿಯ ಪದಾಧಿಕಾರಿಯೊಬ್ಬರು ಸೋಮವಾರ ಸ್ಪಷ್ಟಪಡಿಸಿದ್ದಾರೆ.

"ನ್ಯಾಯಮೂರ್ತಿ ಯಶವಂತ್ ವರ್ಮಾ ಅವರನ್ನು ಅಲಹಾಬಾದ್ ಹೈಕೋರ್ಟ್‌ಗೆ ವರ್ಗಾವಣೆ ಮಾಡಿದ ಹಿನ್ನೆಲೆಯಲ್ಲಿ ಅಲಹಾಬಾದ್ ಹೈಕೋರ್ಟ್ ಬಾರ್ ಅಸೋಸಿಯೇಷನ್‌ನ ವಕೀಲರು ಮಂಗಳವಾರದಿಂದ ಅನಿರ್ದಿಷ್ಟಾವಧಿ ಮುಷ್ಕರ ನಡೆಸಲಿದ್ದಾರೆ" ಎಂದು ಬಾರ್ ಬಾಡಿ ಅಧ್ಯಕ್ಷ ಅನಿಲ್ ತಿವಾರಿ ಹೇಳಿದ್ದಾರೆ.

"ಈ ಸಂಬಂಧ ನಾವು ಲಕ್ನೋದಲ್ಲಿರುವ ಬಾರ್ ಅಸೋಸಿಯೇಷನ್‌ಗಳಿಗೆ ವಿನಂತಿಯನ್ನು ಕಳುಹಿಸುತ್ತಿದ್ದೇವೆ" ಎಂದು ಅವರು ತಿಳಿಸಿದ್ದಾರೆ.

ದೆಹಲಿ ಹೈಕೋರ್ಟ್‌ನ ನ್ಯಾಯಮೂರ್ತಿ ಯಶವಂತ್ ವರ್ಮಾ ಅವರನ್ನು ಅವರ ಅಧಿಕೃತ ನಿವಾಸದಿಂದ ಭಾರಿ ಹಣ ಪತ್ತೆಯಾದ ಹಿನ್ನೆಲೆಯಲ್ಲಿ ವಿಚಾರಣೆ ಎದುರಿಸುತ್ತಿರುವ ಅವರನ್ನು ಅಲಹಾಬಾದ್ ಹೈಕೋರ್ಟ್‌ಗೆ ವರ್ಗಾಯಿಸಲು ಶಿಫಾರಸು ಮಾಡುವ ನಿರ್ಧಾರವನ್ನು ಸುಪ್ರೀಂ ಕೋರ್ಟ್ ಕೊಲಿಜಿಯಂ ಸೋಮವಾರ ದೃಢಪಡಿಸಿದ ನಂತರ ಮುಷ್ಕರಕ್ಕೆ ಕರೆ ನೀಡಲಾಗಿದೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಬ್ಯಾಂಕ್‌ಗೆ ನಕಲಿ ಗ್ಯಾರಂಟಿ: ರಿಲಯನ್ಸ್‌ ಪವರ್‌ನ ಮುಖ್ಯ ಹಣಕಾಸು ಅಧಿಕಾರಿ ಅಶೋಕ್ ಪಾಲ್ ಬಂಧನ

CM ಆಗುವ ಕಾಲ ಹತ್ತಿರ ಬಂದಿದೆ ಎಂದು ನಾನು ಹೇಳಿಲ್ಲ: ಸುದ್ದಿ ತಿರುಚಿ ಪ್ರಸಾರ ಮಾಡಿದರೆ ಮಾನನಷ್ಟ ಮೊಕದ್ದಮೆ ಅನಿವಾರ್ಯ; ಡಿ ಕೆ ಶಿವಕುಮಾರ್

2nd test, Day 2: 2ನೇ ದಿನದಾಟದ ಆರಂಭದಲ್ಲೇ ಭಾರತಕ್ಕೆ ಆಘಾತ, ಭೋಜನ ವಿರಾಮದ ವೇಳೆಗೆ 427/4

ಸಮಸ್ತ ಜನರಿಗೆ ಸುಗಮ ಆಡಳಿತ, ಶುದ್ಧ ನೀರಿನ ಪೂರೈಕೆ: ಸ್ವಚ್ಚತೆ- ಸಂಚಾರ ವ್ಯವಸ್ಥೆಗೆ ಸಿಎಂ ಸಿದ್ದರಾಮಯ್ಯ ಕಟ್ಟಪ್ಪಣೆ

ಸಿದ್ದರಾಮಯ್ಯ ಮೇಲೆ ತೂಗುಗತ್ತಿ: ಅಧಿಕಾರದಲ್ಲಿ ಉಳಿಯಲು ಸಂಪುಟ ಪುನಾರಚನೆ ಕಸರತ್ತು; ಬಿಹಾರ-ಕೇರಳ ಚುನಾವಣೆಯತ್ತ ಡಿಕೆಶಿ ಚಿತ್ತ!

SCROLL FOR NEXT