ರಾಯಗಢ ಕೋಟೆ 
ದೇಶ

ರಾಯಗಢ ಕೋಟೆಯಲ್ಲಿ ಶ್ವಾನ ಸ್ಮಾರಕ: ತೆರವಿಗೆ ರಾಜಮನೆತನದ ಕುಟುಂಬ ಒತ್ತಾಯ!

ಈ ಸಂಬಂಧ ಮಾರ್ಚ್ 22 ರಂದು ಅವರು ಪತ್ರ ಬರೆದಿದ್ದು, ಈ ವರ್ಷದ ಮೇ 31ಕ್ಕೂ ಮುನ್ನಾ ಶ್ವಾನ ಸ್ಮಾರಕವನ್ನು ತೆರವುಗೊಳಿಸಬೇಕು ಎಂದು ಅವರು ಆಗ್ರಹಿಸಿದ್ದಾರೆ.

ಮಹಾರಾಷ್ಟ್ರ: ರಾಯಗಢ ಕೋಟೆಯಲ್ಲಿರುವ ಛತ್ರಪತಿ ಶಿವಾಜಿ ಮಹಾರಾಜರ ಸಮಾಧಿ ಬಳಿ ಇರುವ ಶ್ವಾನ ಸ್ಮಾರಕವನ್ನು ತೆರವುಗೊಳಿಸುವಂತೆ ಮಹಾರಾಷ್ಟ್ರ ಮುಖ್ಯಮಂತ್ರಿ ದೇವೇಂದ್ರ ಫಡ್ನವೀಸ್ ಅವರನ್ನು ಮಾಜಿ ರಾಜ್ಯಸಭಾ ಸದಸ್ಯ ಮತ್ತು ಕೊಲ್ಹಾಪುರ ರಾಜಮನೆತನದ ವಂಶಸ್ಥ ಸಂಭಾಜಿರಾಜೆ ಛತ್ರಪತಿ ಒತ್ತಾಯಿಸಿದ್ದಾರೆ.

ಈ ಸಂಬಂಧ ಮಾರ್ಚ್ 22 ರಂದು ಅವರು ಪತ್ರ ಬರೆದಿದ್ದು, ಈ ವರ್ಷದ ಮೇ 31ಕ್ಕೂ ಮುನ್ನಾ ಶ್ವಾನ ಸ್ಮಾರಕವನ್ನು ತೆರವುಗೊಳಿಸಬೇಕು ಎಂದು ಅವರು ಆಗ್ರಹಿಸಿದ್ದಾರೆ.

17ನೇ ಶತಮಾನದಲ್ಲಿ ಛತ್ರಪತಿ ಶಿವಾಜಿ ಮಹಾರಾಜರು ತನ್ನ ರಾಜಧಾನಿಯಾಗಿ ಮಾಡಿಕೊಂಡಿದ್ದ ರಾಯಗಢ ಕೋಟೆಯಲ್ಲಿ ವಾಘ್ಯಾ ಎಂಬ ಶ್ವಾನದ ಸ್ಮಾರಕವನ್ನು ನಿರ್ಮಿಸಲಾಗಿತ್ತು. ಆದರೆ, ಶಿವಾಜಿ ಮಹಾರಾಜರ ಮುದ್ದಿನ ಶ್ವಾನ 'ವಾಘ್ಯಾ'ಗೆ ಸಂಬಂಧಿಸಿದಂತೆ ಯಾವುದೇ ಸಾಕ್ಷ್ಯಗಳಿಲ್ಲ. ಅಂತಹ ಯಾವುದೇ ಪುರಾವೆಗಳಿಲ್ಲದ ಕಾರಣ ಇದು ಪಾರಂಪರಿಕ ಕೋಟೆಯಾಗಿ ಸಂರಕ್ಷಿಸಲಾಗಿರುವ ಕೋಟೆಯ ಮೇಲಿನ ಅತಿಕ್ರಮಣವಾಗಿದೆ ಎಂದು ಅವರು ಹೇಳಿದ್ದಾರೆ.

ಶ್ವಾನ ಕುರಿತು ಯಾವುದೇ ಪುರಾವೆ ಅಥವಾ ಲಿಖಿತ ಪುರಾವೆಗಳಿಲ್ಲ ಎಂದು ಭಾರತೀಯ ಪುರಾತತ್ವ ಸರ್ವೇಕ್ಷಣಾ ಇಲಾಖೆ ಸ್ಪಷ್ಟಪಡಿಸಿದೆ. ಇದು ದುರಾದೃಷ್ಟಕರ ಮತ್ತು ಮಹಾನ್ ಶಿವಾಜಿ ಮಹಾರಾಜರ ಪರಂಪರೆಯನ್ನು ಅವಮಾನಿಸುತ್ತದೆ ಎಂದು ಮಾಜಿ ಸಂಸದರು ಹೇಳಿದ್ದಾರೆ.

100 ವರ್ಷಗಳಿಗಿಂತಲೂ ಹಳೆಯದಾದ ಕಟ್ಟಡವನ್ನು ಭಾರತೀಯ ಪುರಾತತ್ವ ಸರ್ವೇಕ್ಷಣಾ ಇಲಾಖೆ ನೀತಿಯ ಪ್ರಕಾರ ರಕ್ಷಿಸಲಾಗಿದೆ. ವಾಘ್ಯಾ ಸ್ಮಾರಕ ಎಂದು ಹೆಸರು ಗಳಿಸುವ ಮುನ್ನಾ ಅದನ್ನು ತೆರವುಗೊಳಿಸಬೇಕು ಎಂದು ಸಂಭಾಜಿರಾಜೆ ಒತ್ತಾಯಿಸಿದ್ದಾರೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಇತಿಹಾಸ ಕಲಿಯಬೇಕಿದ್ದರೆ ಕಾಲೇಜಿಗೆ ಹೋಗುತ್ತಾರೆ, ನಿಮ್ಮ ಬೋಧನೆಯ ಅಗತ್ಯವಿಲ್ಲ: ಪ್ರಧಾನಿ ಮೋದಿ ವಿರುದ್ಧ ಪ್ರಿಯಾಂಕ್ ಖರ್ಗೆ ವಾಗ್ದಾಳಿ

MGNREGA Row: ಯಾವಾಗ-ಎಲ್ಲಿ ಬೇಕಾದರೂ ಚರ್ಚೆಗೆ ಸಿದ್ಧ, ಡೈಲಾಗ್‌ ವೀರ HDK ಬಂದರೆ ಒಳ್ಳೆಯದು; ಡಿ.ಕೆ.ಶಿವಕುಮಾರ್

Positive Vibes ಗಾಗಿ ಮನೆಯಲ್ಲಿ ಯಾವ ಗಿಡ ಬೆಳಸಬೇಕು: ಮುಳ್ಳಿನ ಗಿಡಗಳಲ್ಲಿದೆಯೇ ನಕರಾತ್ಮಕ ಶಕ್ತಿ; ಮಲ್ಲಿಗೆ ಮತ್ತು ತುಳಸಿಗೆ ಸೂಕ್ತ ಸ್ಥಳ ಯಾವುದು?

ಬೆಂಗಳೂರು: 6 ವರ್ಷದ ಬಾಲಕಿ ಅಪಹರಿಸಿ ಹತ್ಯೆ ; ಕೊಲೆಗೂ ಮುನ್ನ ಲೈಂಗಿಕ ದೌರ್ಜನ್ಯ - ಶವ ಪರೀಕ್ಷೆ ವೇಳೆ ಸತ್ಯ ಬಹಿರಂಗ!

ಮಹಿಳಾ ಟೆಕ್ಕಿ ಸಾವಿನ ಕೇಸ್ ಗೆ ಬಿಗ್ ಟ್ವಿಸ್ಟ್: ಹತ್ಯೆಗೂ ಮುನ್ನ PU ವಿದ್ಯಾರ್ಥಿಯಿಂದ ರೇಪ್; ಸಾಕ್ಷಿ ನಾಶಕ್ಕೆ ಬೆಂಕಿ ಹಚ್ಚಿದ ಕರ್ನಲ್ ಕುರೈ!

SCROLL FOR NEXT