ರಾಯಗಢ ಕೋಟೆ 
ದೇಶ

ರಾಯಗಢ ಕೋಟೆಯಲ್ಲಿ ಶ್ವಾನ ಸ್ಮಾರಕ: ತೆರವಿಗೆ ರಾಜಮನೆತನದ ಕುಟುಂಬ ಒತ್ತಾಯ!

ಈ ಸಂಬಂಧ ಮಾರ್ಚ್ 22 ರಂದು ಅವರು ಪತ್ರ ಬರೆದಿದ್ದು, ಈ ವರ್ಷದ ಮೇ 31ಕ್ಕೂ ಮುನ್ನಾ ಶ್ವಾನ ಸ್ಮಾರಕವನ್ನು ತೆರವುಗೊಳಿಸಬೇಕು ಎಂದು ಅವರು ಆಗ್ರಹಿಸಿದ್ದಾರೆ.

ಮಹಾರಾಷ್ಟ್ರ: ರಾಯಗಢ ಕೋಟೆಯಲ್ಲಿರುವ ಛತ್ರಪತಿ ಶಿವಾಜಿ ಮಹಾರಾಜರ ಸಮಾಧಿ ಬಳಿ ಇರುವ ಶ್ವಾನ ಸ್ಮಾರಕವನ್ನು ತೆರವುಗೊಳಿಸುವಂತೆ ಮಹಾರಾಷ್ಟ್ರ ಮುಖ್ಯಮಂತ್ರಿ ದೇವೇಂದ್ರ ಫಡ್ನವೀಸ್ ಅವರನ್ನು ಮಾಜಿ ರಾಜ್ಯಸಭಾ ಸದಸ್ಯ ಮತ್ತು ಕೊಲ್ಹಾಪುರ ರಾಜಮನೆತನದ ವಂಶಸ್ಥ ಸಂಭಾಜಿರಾಜೆ ಛತ್ರಪತಿ ಒತ್ತಾಯಿಸಿದ್ದಾರೆ.

ಈ ಸಂಬಂಧ ಮಾರ್ಚ್ 22 ರಂದು ಅವರು ಪತ್ರ ಬರೆದಿದ್ದು, ಈ ವರ್ಷದ ಮೇ 31ಕ್ಕೂ ಮುನ್ನಾ ಶ್ವಾನ ಸ್ಮಾರಕವನ್ನು ತೆರವುಗೊಳಿಸಬೇಕು ಎಂದು ಅವರು ಆಗ್ರಹಿಸಿದ್ದಾರೆ.

17ನೇ ಶತಮಾನದಲ್ಲಿ ಛತ್ರಪತಿ ಶಿವಾಜಿ ಮಹಾರಾಜರು ತನ್ನ ರಾಜಧಾನಿಯಾಗಿ ಮಾಡಿಕೊಂಡಿದ್ದ ರಾಯಗಢ ಕೋಟೆಯಲ್ಲಿ ವಾಘ್ಯಾ ಎಂಬ ಶ್ವಾನದ ಸ್ಮಾರಕವನ್ನು ನಿರ್ಮಿಸಲಾಗಿತ್ತು. ಆದರೆ, ಶಿವಾಜಿ ಮಹಾರಾಜರ ಮುದ್ದಿನ ಶ್ವಾನ 'ವಾಘ್ಯಾ'ಗೆ ಸಂಬಂಧಿಸಿದಂತೆ ಯಾವುದೇ ಸಾಕ್ಷ್ಯಗಳಿಲ್ಲ. ಅಂತಹ ಯಾವುದೇ ಪುರಾವೆಗಳಿಲ್ಲದ ಕಾರಣ ಇದು ಪಾರಂಪರಿಕ ಕೋಟೆಯಾಗಿ ಸಂರಕ್ಷಿಸಲಾಗಿರುವ ಕೋಟೆಯ ಮೇಲಿನ ಅತಿಕ್ರಮಣವಾಗಿದೆ ಎಂದು ಅವರು ಹೇಳಿದ್ದಾರೆ.

ಶ್ವಾನ ಕುರಿತು ಯಾವುದೇ ಪುರಾವೆ ಅಥವಾ ಲಿಖಿತ ಪುರಾವೆಗಳಿಲ್ಲ ಎಂದು ಭಾರತೀಯ ಪುರಾತತ್ವ ಸರ್ವೇಕ್ಷಣಾ ಇಲಾಖೆ ಸ್ಪಷ್ಟಪಡಿಸಿದೆ. ಇದು ದುರಾದೃಷ್ಟಕರ ಮತ್ತು ಮಹಾನ್ ಶಿವಾಜಿ ಮಹಾರಾಜರ ಪರಂಪರೆಯನ್ನು ಅವಮಾನಿಸುತ್ತದೆ ಎಂದು ಮಾಜಿ ಸಂಸದರು ಹೇಳಿದ್ದಾರೆ.

100 ವರ್ಷಗಳಿಗಿಂತಲೂ ಹಳೆಯದಾದ ಕಟ್ಟಡವನ್ನು ಭಾರತೀಯ ಪುರಾತತ್ವ ಸರ್ವೇಕ್ಷಣಾ ಇಲಾಖೆ ನೀತಿಯ ಪ್ರಕಾರ ರಕ್ಷಿಸಲಾಗಿದೆ. ವಾಘ್ಯಾ ಸ್ಮಾರಕ ಎಂದು ಹೆಸರು ಗಳಿಸುವ ಮುನ್ನಾ ಅದನ್ನು ತೆರವುಗೊಳಿಸಬೇಕು ಎಂದು ಸಂಭಾಜಿರಾಜೆ ಒತ್ತಾಯಿಸಿದ್ದಾರೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಇಬ್ಬರು ಕೇಂದ್ರ ಸಚಿವರು ಸೇರಿದಂತೆ 75 ಸದಸ್ಯರ GBA ಸೆ. 2 ರಿಂದ ಅಸ್ತಿತ್ವಕ್ಕೆ: ಯತೀಂದ್ರ ಸಿದ್ದರಾಮಯ್ಯಗೂ ಸ್ಥಾನ!

ಜಮ್ಮುವಿನಾದ್ಯಂತ ಭಾರಿ ಮಳೆ: ಅಪಾರ ಪ್ರಮಾಣದ ಹಾನಿ, 10 ಮಂದಿ ಸಾವು: ಕೊಚ್ಚಿ ಹೋದ ರಸ್ತೆ, ಸೇತುವೆಗಳು!

ಫೈಟರ್ ಜೆಟ್‌ ಇಂಜಿನ್ ಖರೀದಿ: ಅಮೆರಿಕಾದ GE ಸಂಸ್ಥೆಯೊಂದಿಗೆ $1 ಬಿಲಿಯನ್ ಮೊತ್ತದ ಒಪ್ಪಂದಕ್ಕೆ ಭಾರತ ಸಿದ್ಧತೆ!

ಡಿಕೆಶಿ ಕ್ಷಮೆ ಕೇಳಬಾರದಿತ್ತು; ಮುಲಾಜಿಲ್ಲದೆ ಕಾಂಗ್ರೆಸ್ ಪಕ್ಷದ ಸದಸ್ಯತ್ವಕ್ಕೆ ರಾಜೀನಾಮೆ ಬಿಸಾಕಬೇಕಿತ್ತು- ಆರ್. ಅಶೋಕ್

ಸುಂಕ ಸಮರ: Trump 4 ಬಾರಿ ಕರೆ ಮಾಡಿದರೂ ಉತ್ತರಿಸದ PM Modi; ಅಮೆರಿಕ ನಿಯೋಗಕ್ಕೂ No Entry!

SCROLL FOR NEXT