ಕುನಾಲ್ ಕಾಮ್ರಾ, ಕಾಂಗ್ರೆಸ್ ಶಾಸಕ ವಿಜಯ್ ವಡೆತ್ತಿವಾರ್ 
ದೇಶ

ಕ್ಷಮೆ ಕೇಳಲು ಕುನಾಲ್ ಕಾಮ್ರಾ ನಿರಾಕರಣೆ: ಸರಿಯಾದ ನಿರ್ಧಾರ ಎಂದ ಕಾಂಗ್ರೆಸ್!

ಯಾರೊಬ್ಬರು ನಗಿಸುವುದಕ್ಕಾಗಿ ಹಾಸ್ಯ ಮಾಡಿದ್ದರೆ ಸರ್ಕಾರ ನಗಬೇಕಿತ್ತು. ನಿಮ್ಮ ನಾಯಕರ ಬಗ್ಗೆ ಇನ್ನಷ್ಟು ಅವಹೇಳನಕಾರಿ ಮಾತುಗಳನ್ನಾಡಿದ್ದು, ವಾಕ್ ಸ್ವಾತಂತ್ರ್ಯ ಎಂದು ಕಂಗನಾ ರಣಾವತ್ ಹೇಳುತ್ತಾರೆ.

ಮುಂಬೈ: ಮಹಾರಾಷ್ಟ್ರದ ಉಪಮುಖ್ಯಮಂತ್ರಿ ಏಕನಾಥ್ ಶಿಂಧೆ ಅವರನ್ನು ಗುರಿಯಾಗಿಸಿಕೊಂಡು ನೀಡಿರುವ ಹೇಳಿಕೆಗೆ ಕ್ಷಮೆ ಯಾಚಿಸಲು ಸ್ಟ್ಯಾಂಡ್ ಅಪ್ ಕಾಮಿಡಿಯಿನ್ ಕುನಾಲ್ ಕಾಮ್ರಾ ಕುನಾಲ್ ಕಮ್ರಾ ನಿರಾಕರಿಸಿದ್ದಾರೆ.

ಈ ಕುರಿತು ಮಂಗಳವಾರ ಸುದ್ದಿಗಾರರೊಂದಿಗೆ ಮಾತನಾಡಿದ ಕಾಂಗ್ರೆಸ್ ಶಾಸಕ ವಿಜಯ್ ವಡೆತ್ತಿವಾರ್, ಕಾಮ್ರಾ ಯಾರ ಹೆಸರನ್ನೂ ತೆಗೆದುಕೊಂಡಿಲ್ಲ. ಹೀಗಾಗಿ ಕ್ಷಮೆಯಾಚಿಸದಿರಲು ಅವರು ತೆಗೆದುಕೊಂಡಿರುವ ನಿರ್ಧಾರ ಸರಿಯಾಗಿದೆ ಎಂದರು.

ಹ್ಯಾಬಿಟೆಟ್ ಸೆಂಟರ್ ಧ್ವಂಸವನ್ನು ಟೀಕಿಸಿದ ವಡೆತ್ತಿವಾರ್, ಹೋಟೆಲ್ ಧ್ವಂಸ ಹಾಗೂ ಯಾವುದೇ ವ್ಯಕ್ತಿಯ ಧ್ವನಿಯನ್ನು ಅಡಗಿಸುವುದು ಸರಿಯಲ್ಲ. ಒಂದು ವೇಳೆ ತಪ್ಪಿದ್ದಲ್ಲಿ ನ್ಯಾಯಾಲಯದ ಮೊರೆ ಹೋಗಲಿ. ಆದರೆ, ಹೀಗೆ ಧ್ವಂಸಗೊಳಿಸುವ ಕೃತ್ಯ, ಧ್ವನಿಯನ್ನು ಅಡಗಿಸುವುದು ಸರಿಯಲ್ಲ. ಸರ್ಕಾರ ಟೀಕೆಗಳನ್ನು ತೆಗೆದುಕೊಳ್ಳಬೇಕು ಎಂದು ಹೇಳಿದರು.

ಯಾರೊಬ್ಬರು ನಗಿಸುವುದಕ್ಕಾಗಿ ಹಾಸ್ಯ ಮಾಡಿದ್ದರೆ ಸರ್ಕಾರ ನಗಬೇಕಿತ್ತು. ನಿಮ್ಮ ನಾಯಕರ ಬಗ್ಗೆ ಇನ್ನಷ್ಟು ಅವಹೇಳನಕಾರಿ ಮಾತುಗಳನ್ನಾಡಿದ್ದು, ವಾಕ್ ಸ್ವಾತಂತ್ರ್ಯ ಎಂದು ಕಂಗನಾ ರಣಾವತ್ ಹೇಳುತ್ತಾರೆ. ಕ್ಷಮೆಯಾಚಿಸಲು ಕುನಾಲ್ ಕಾಮ್ರಾ ಅವರ ನಿರ್ಧಾರ ಸರಿಯಾದದ್ದು ಎಂದರು.

ಕುನಾಲ್ ಕಾಮ್ರಾ ಯಾರೊಬ್ಬರ ಹೆಸರನ್ನು ತೆಗೆದುಕೊಂಡಿಲ್ಲ. ಕಾನೂನನ್ನು ಯಾರೂ ಗೌರವಿಸುತ್ತಿಲ್ಲ. ಇಂತಹ ಸರ್ಕಾರ ಹೆಚ್ಚು ದಿನ ಇರಲು ಸಾಧ್ಯವಿಲ್ಲ. ಒಂದು ಅಥವಾ ಇನ್ನೊಂದು ದಿನ ಜನರು ಆಕ್ರೋಶಗೊಳ್ಳುತ್ತಾರೆ ಮತ್ತು ಸರ್ಕಾರ ಸರಿಯಾದ ಬೆಲೆ ತೆರಬೇಕಾಗುತ್ತದೆ ಎಂದು ಹೇಳಿದರು.

ಇತ್ತೀಚಿನ ವಿವಾದದ ಕುರಿತು ಮಾತನಾಡಿರುವ ಬಿಜೆಪಿ ಶಾಸಕ ಸುಧೀರ್ ಮುಂಗಂಟಿವಾರ್, ಈ ವಿಷಯದಲ್ಲಿ ಕಾನೂನು ಪ್ರಕ್ರಿಯೆಯು ತನ್ನ ಮಾರ್ಗವನ್ನು ತೆಗೆದುಕೊಳ್ಳುತ್ತದೆ ಎಂದು ಹೇಳಿದ್ದಾರೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

2030 Commonwealth Games: ಭಾರತದ ಬಿಡ್‌ಗೆ ಕೇಂದ್ರ ಸಂಪುಟದ ಅನುಮೋದನೆ! ಅಹಮದಾಬಾದ್ ನಲ್ಲಿ ಆಯೋಜಿಸುವ ಪ್ರಸ್ತಾಪ!

Theaterisation: 'ಥಿಯೇಟರ್ ಕಮಾಂಡ್‌' ರಚನೆ: ಪ್ರಯತ್ನದಲ್ಲಿ ಪ್ರಗತಿ ಸಾಧಿಸಲಾಗುತ್ತಿದೆಯೇ? ಆಡ್ಮಿರಲ್ ಡಿಕೆ ತ್ರಿಪಾಠಿ ಹೇಳಿದ್ದು ಹೀಗೆ...

ಹಿಂದೂ ನಂಬಿಕೆ ಒಡೆಯುತ್ತಿರುವ ಬಾನು ಮುಷ್ತಾಕ್: ಶಿವನ ಬೆಟ್ಟವನ್ನೇ 'ಯೇಸು ಬೆಟ್ಟ' ಮಾಡಲು ಹೊರಟವರಿಂದ ಧರ್ಮದ ಪಾಠ ಬೇಡ- ಪ್ರತಾಪ್ ಸಿಂಹ

'ಪಾಕಿಸ್ತಾನದೊಂದಿಗೆ ಯುದ್ಧ ನಿಲ್ಲಿಸಲು ಟ್ರಂಪ್ 24 ಗಂಟೆ ಕಾಲಾವಕಾಶ ನೀಡಿದ್ದರು, ಮೋದಿ ಕೇವಲ 5 ಗಂಟೆಗಳಲ್ಲಿ ಪಾಲಿಸಿದರು': ರಾಹುಲ್ ಗಾಂಧಿ

'ಧಮ್ ಇದ್ರೆ.. ಸನಾತನಧರ್ಮ, ಬಿಹಾರಿಗಳ ಕುರಿತ ಹೇಳಿಕೆ ಮತ್ತೆ ಹೇಳ್ತೀರಾ?': MK Stalin ಗೆ ಬಿಜೆಪಿ-ಜೆಡಿಯು ಸವಾಲು!

SCROLL FOR NEXT