ಲೋಕಸಭೆ 
ದೇಶ

ತಮಿಳು ನಾಡು, ಕೇರಳ, ಪಶ್ಚಿಮ ಬಂಗಾಳಕ್ಕೆ 'ನರೇಗಾ' ಹಣ ಬಿಡುಗಡೆ ಬಾಕಿ, ವಿರೋಧ ಪಕ್ಷಗಳಿಂದ ತೀವ್ರ ಗದ್ದಲ: ಲೋಕಸಭೆ ಕಲಾಪ ಕೆಲಹೊತ್ತು ಮುಂದೂಡಿಕೆ

ಸ್ಪೀಕರ್ ಓಂ ಬಿರ್ಲಾ ಅವರು ಸದಸ್ಯರನ್ನು ತಮ್ಮ ಸ್ಥಾನಗಳಿಗೆ ಹಿಂತಿರುಗುವಂತೆ ಒತ್ತಾಯಿಸಿದರೂ ಕೇಳದಿದ್ದಾಗ ಸದನವನ್ನು ಮಧ್ಯಾಹ್ನ 12 ಗಂಟೆಯವರೆಗೆ ಮುಂದೂಡಲಾಯಿತು.

ನವದೆಹಲಿ: ತಮಿಳುನಾಡು ಮತ್ತು ಇತರ ರಾಜ್ಯಗಳಿಗೆ ನರೇಗಾ ಯೋಜನೆಯ ಬಾಕಿ ಹಣ ಬಿಡುಗಡೆ ಮಾಡುವ ಬಗ್ಗೆ ವಿರೋಧ ಪಕ್ಷದ ಸದಸ್ಯರು ತೀವ್ರ ಗದ್ದಲ, ಕೋಲಾಹಲ ಎಬ್ಬಿಸಿದ್ದರಿಂದ ಇಂದು ಮಂಗಳವಾರ ಲೋಕಸಭೆ ಕಲಾಪವನ್ನು ಕೆಲ ಹೊತ್ತು ಮುಂದೂಡಲಾಯಿತು.

ತಮಿಳುನಾಡು, ಕೇರಳ ಮತ್ತು ಪಶ್ಚಿಮ ಬಂಗಾಳಕ್ಕೆ ಮಹಾತ್ಮಾ ಗಾಂಧಿ ಗ್ರಾಮೀಣ ಉದ್ಯೋಗ ಖಾತ್ರಿ ಯೋಜನೆ(MGNREGA) ಬಾಕಿ ಹಣ ಬಿಡುಗಡೆ ಮಾಡುವ ಬಗ್ಗೆ ಗ್ರಾಮೀಣಾಭಿವೃದ್ಧಿ ಖಾತೆ ರಾಜ್ಯ ಸಚಿವ ಚಂದ್ರಶೇಖರ್ ಪೆಮ್ಮಸಾನಿ ಅವರ ಪ್ರತಿಕ್ರಿಯೆಯಿಂದ ವಿರೋಧ ಪಕ್ಷದ ಸಂಸದರು ಅತೃಪ್ತರಾಗಿದ್ದರು.

ಡಿಎಂಕೆ ಸದಸ್ಯರು ಸದನದ ಬಾವಿಗಿಳಿದು ಪ್ರತಿಭಟನೆ ನಡೆಸಿದರು. ನಂತರ ಕೆಲವು ತೃಣಮೂಲ ಕಾಂಗ್ರೆಸ್ ಸಂಸದರು ಸದನದ ಬಾವಿಗಿಳಿದರು.

ಸ್ಪೀಕರ್ ಓಂ ಬಿರ್ಲಾ ಅವರು ಸದಸ್ಯರನ್ನು ತಮ್ಮ ಸ್ಥಾನಗಳಿಗೆ ಹಿಂತಿರುಗುವಂತೆ ಒತ್ತಾಯಿಸಿದರೂ ಕೇಳದಿದ್ದಾಗ ಸದನವನ್ನು ಮಧ್ಯಾಹ್ನ 12 ಗಂಟೆಯವರೆಗೆ ಮುಂದೂಡಲಾಯಿತು.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಮೇಕೆದಾಟು ಯೋಜನೆ: ಕರ್ನಾಟಕಕ್ಕೆ ಗೆಲುವು, ತಮಿಳು ನಾಡು ಅರ್ಜಿ ಸುಪ್ರೀಂ ಕೋರ್ಟ್ ವಜಾ

ಬಾಬರಿ ಮಸೀದಿ ಧ್ವಂಸಕ್ಕೆ ಸೇಡು: ಡಿ. 6 ರಂದು ಸರಣಿ ಬಾಂಬ್ ಸ್ಫೋಟಕ್ಕೆ ಸಂಚು, 32 ಕಾರು ಸಜ್ಜುಗೊಳಿಸಿದ್ದ ಉಗ್ರರು!

Delhi Blast: ಬಾಂಬ್ ತಯಾರಿಕೆಗೆ ₹26 ಲಕ್ಷಕ್ಕೂ ಅಧಿಕ ಹಣ ಸಂಗ್ರಹ; 26 ಕ್ವಿಂಟಾಲ್ NPK ರಸಗೊಬ್ಬರ ಖರೀದಿಸಿದ್ದ ಶಂಕಿತರು!

ಬಲಿಷ್ಠ ಭಾರತವಾಗಲು ಕಠಿಣ ನಿರ್ಧಾರಗಳನ್ನು ತೆಗೆದುಕೊಳ್ಳುವ ಸಮಯ ಬಂದಿದೆ! (ಹಣಕ್ಲಾಸು)

Delhi Red Fort Car Blast: NIA ತನಿಖೆಯಲ್ಲಿ ಮಹತ್ವದ ಬೆಳವಣಿಗೆ; ಉಗ್ರರ ಡೈರಿ ಪತ್ತೆ, ಸ್ಫೋಟಕ ಮಾಹಿತಿ ಬಹಿರಂಗ..!

SCROLL FOR NEXT