ನಿರ್ಮಲಾ ಸೀತಾರಾಮನ್ 
ದೇಶ

ಮಳೆಗಾಲದ ಅಧಿವೇಶನದಲ್ಲಿ ಹೊಸ ಆದಾಯ ತೆರಿಗೆ ಮಸೂದೆ ಚರ್ಚೆಗೆ: ನಿರ್ಮಲಾ ಸೀತಾರಾಮನ್

ಇಂದು ಲೋಕಸಭೆಯಲ್ಲಿ ಹಣಕಾಸು ಮಸೂದೆ 2025 ರ ಮೇಲಿನ ಚರ್ಚೆಗೆ ಉತ್ತರಿಸಿದ ನಿರ್ಮಲಾ ಸೀತಾರಾಮನ್‌, ಫೆಬ್ರವರಿ 13 ರಂದು ಸದನದಲ್ಲಿ ಮಂಡಿಸಲಾದ ಹೊಸ ಆದಾಯ ತೆರಿಗೆ ಮಸೂದೆಯನ್ನು ಪ್ರಸ್ತುತ ಆಯ್ಕೆ ಸಮಿತಿ ಪರಿಶೀಲಿಸುತ್ತಿದೆ ಎಂದು ಹೇಳಿದರು.

ನವದೆಹಲಿ: ಸಂಸತ್ತಿನ ಮಳೆಗಾಲದ ಅಧಿವೇಶನದಲ್ಲಿ ಹೊಸ ಆದಾಯ ತೆರಿಗೆ ಮಸೂದೆಯನ್ನು ಚರ್ಚೆಗೆ ತೆಗೆದುಕೊಳ್ಳಲಾಗುವುದು ಎಂದು ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಅವರು ಮಂಗಳವಾರ ತಿಳಿಸಿದ್ದಾರೆ.

ಇಂದು ಲೋಕಸಭೆಯಲ್ಲಿ ಹಣಕಾಸು ಮಸೂದೆ 2025 ರ ಮೇಲಿನ ಚರ್ಚೆಗೆ ಉತ್ತರಿಸಿದ ನಿರ್ಮಲಾ ಸೀತಾರಾಮನ್‌, ಫೆಬ್ರವರಿ 13 ರಂದು ಸದನದಲ್ಲಿ ಮಂಡಿಸಲಾದ ಹೊಸ ಆದಾಯ ತೆರಿಗೆ ಮಸೂದೆಯನ್ನು ಪ್ರಸ್ತುತ ಆಯ್ಕೆ ಸಮಿತಿ ಪರಿಶೀಲಿಸುತ್ತಿದೆ ಎಂದು ಹೇಳಿದರು.

ಸಂಸತ್ತಿನ ಮುಂದಿನ ಮಳೆಗಾಲದ ಅಧಿವೇಶನದ ಮೊದಲ ದಿನದೊಳಗೆ ವರದಿ ಸಲ್ಲಿಸುವಂತೆ ಆಯ್ಕೆ ಸಮಿತಿಗೆ ಸೂಚಿಸಲಾಗಿದೆ. ನಾವು ಅದನ್ನು (ಹೊಸ ಆದಾಯ ತೆರಿಗೆ ಮಸೂದೆ) ಮಳೆಗಾಲದ ಅಧಿವೇಶನದಲ್ಲಿ ಚರ್ಚೆಗೆ ತೆಗೆದುಕೊಳ್ಳುತ್ತೇವೆ" ಎಂದು ಸೀತಾರಾಮನ್ ತಿಳಿಸಿದರು.

ಹಳೆಯ ಆದಾಯ ತೆರಿಗೆ ಕಾನೂನು ಡಿಜಿಟಲ್ ಸ್ವತ್ತುಗಳನ್ನು ಪರಿಶೀಲಿಸಲು ಕಾನೂನು ಬೆಂಬಲ ನೀಡುತ್ತಿರಲಿಲ್ಲ. ಇದೇ ಕಾರಣಕ್ಕೆ ಇದನ್ನೀಗ ಸೇರಿಸಲಾಗಿದೆ. ಹೊಸ ಆದಾಯ ತೆರಿಗೆ ಕಾಯ್ದೆಯಲ್ಲಿ ಡಿಜಿಟಲ್ ಅಂಶಗಳ ಪರಿಶೀಲನೆಯನ್ನು ಸೇರಿಸಲಾಗಿದೆ" ಎಂದು ಸೀತಾರಾಮನ್ ಹೇಳಿದ್ದಾರೆ.

ಸಂಸತ್ತಿನ ಮಳೆಗಾಲದ ಅಧಿವೇಶನವು ಸಾಮಾನ್ಯವಾಗಿ ಜುಲೈನಲ್ಲಿ ನಡೆಯುತ್ತದೆ ಮತ್ತು ಆಗಸ್ಟ್ ವರೆಗೆ ಮುಂದುವರೆಯುತ್ತದೆ.

ಆರು ದಶಕಗಳಷ್ಟು ಹಳೆಯದಾದ ಆದಾಯ ತೆರಿಗೆ ಕಾಯ್ದೆ 1961 ಅನ್ನು ಬದಲಾಯಿಸಲಾಗುತ್ತಿದ್ದು, ಡಿಜಿಟಲ್ ಯುಗಕ್ಕೆ ಬೇಕಾದ ಮಾರ್ಪಾಡುಗಳೊಂದಿಗೆ ಹೊಸ ಆದಾಯ ತೆರಿಗೆ ಮಸೂದೆ ಹೊರತರಲಾಗುತ್ತಿದೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಗ್ರೇಟರ್ ಬೆಂಗಳೂರು ಪ್ರಾಧಿಕಾರ ಚುನಾವಣೆ ಜೂನ್ 30ರೊಳಗೆ ಮುಗಿಸಿ: ರಾಜ್ಯ ಸರ್ಕಾರಕ್ಕೆ 'ಸುಪ್ರೀಂ' ಗಡುವು

'ಆ ದೇಶಕ್ಕೂ ನಾನೇ 'ಹಂಗಾಮಿ' ಸರ್ವೋಚ್ಛ ನಾಯಕ': Donald Trump ಘೋಷಣೆ, ಬೆಚ್ಚಿಬಿದ್ದ ವೆನೆಜುವೆಲಾ!

ಕ್ರಿಕೆಟ್ ಇತಿಹಾಸದಲ್ಲೇ ಮೊದಲು: ಅಂತಾರಾಷ್ಟ್ರೀಯ ಕ್ರಿಕೆಟ್ ಲೀಗ್ ನಲ್ಲಿ ಜೊತೆಯಾಗಿ ಕಣಕ್ಕಿಳಿದ ಅಪ್ಪ-ಮಗ.. ಯಾರಿವರು?

PSLV-C62 ಮಿಷನ್ ವಿಫಲ: ಕೊನೆಯ ಹಂತದಲ್ಲಿ ಎದುರಾದ ಸಮಸ್ಯೆ, ISROಗೆ ಹಿನ್ನಡೆ

ಇತಿಹಾಸ ಕಲಿಯಬೇಕಿದ್ದರೆ ಕಾಲೇಜಿಗೆ ಹೋಗುತ್ತಾರೆ, ನಿಮ್ಮ ಬೋಧನೆಯ ಅಗತ್ಯವಿಲ್ಲ: ಪ್ರಧಾನಿ ಮೋದಿ ವಿರುದ್ಧ ಪ್ರಿಯಾಂಕ್ ಖರ್ಗೆ ವಾಗ್ದಾಳಿ

SCROLL FOR NEXT