ರಕ್ಷಣಾ ಕಾರ್ಯ ಪ್ರಗತಿಯಲ್ಲಿ  
ದೇಶ

ತೆಲಂಗಾಣ ಸುರಂಗ ಮಾರ್ಗ ಕುಸಿತ: ಮತ್ತೊಂದು ಮೃತದೇಹ ಹೊರಕ್ಕೆ; 32ನೇ ದಿನಕ್ಕೆ ಕಾಲಿಟ್ಟ ರಕ್ಷಣಾ ಕಾರ್ಯ

ಕಳೆದ ಫೆಬ್ರವರಿ 22 ರಂದು ಎಂಟು ಕಾರ್ಮಿಕರು ಕೆಲಸ ಮಾಡುತ್ತಿದ್ದ ವೇಳೆ ಸುರಂಗದೊಳಗೆ ಸಿಲುಕಿಹಾಕಿಕೊಂಡಿದ್ದರು. ಅವರಿಗಾಗಿ ಒಂದು ತಿಂಗಳಿಗೂ ಹೆಚ್ಚು ಕಾಲ ಹುಡುಕಾಟ ನಡೆಸಲಾಗಿತ್ತು.

ಹೈದರಾಬಾದ್: ಶ್ರೀಶೈಲಂ ಎಡದಂಡೆ ಕಾಲುವೆ (SLBC) ಸುರಂಗದೊಳಗೆ ಇಂದು ಮಂಗಳವಾರ ಮತ್ತೊಂದು ಮೃತದೇಹ ಪತ್ತೆಯಾಗಿದೆ. ಕಾರ್ಮಿಕರು ನಿರ್ವಹಣಾ ಕೆಲಸ ಮಾಡುತ್ತಿದ್ದ ಕನ್ವೇಯರ್ ಬೆಲ್ಟ್‌ನಿಂದ 50 ಮೀಟರ್ ದೂರದಲ್ಲಿ ಶವ ಪತ್ತೆಯಾಗಿದ್ದು, ಶವದ ಗುರುತು ಪತ್ತೆ ಆಗಿಲ್ಲ.

ಕಳೆದ ಫೆಬ್ರವರಿ 22 ರಂದು ಎಂಟು ಕಾರ್ಮಿಕರು ಕೆಲಸ ಮಾಡುತ್ತಿದ್ದ ವೇಳೆ ಸುರಂಗದೊಳಗೆ ಸಿಲುಕಿಹಾಕಿಕೊಂಡಿದ್ದರು. ಅವರಿಗಾಗಿ ಒಂದು ತಿಂಗಳಿಗೂ ಹೆಚ್ಚು ಕಾಲ ಹುಡುಕಾಟ ನಡೆಸಲಾಗಿತ್ತು. ಕಾರ್ಮಿಕರಲ್ಲಿ ಒಬ್ಬರಾದ ಗುರುಪ್ರೀತ್ ಸಿಂಗ್ ಎಂಬುವವರ ಶವವನ್ನು ಮಾರ್ಚ್ 9 ರಂದು ಹೊರತೆಗೆಯಲಾಗಿತ್ತು. ನಂತರ ರಕ್ಷಣಾ ಪ್ರಯತ್ನಗಳು ಮುಂದುವರಿದಿದ್ದರೂ ಉಳಿದ ಆರು ಕಾರ್ಮಿಕರ ಭವಿಷ್ಯ ಅನಿಶ್ಚಿತವಾಗಿದೆ.

ಕಾಣೆಯಾದ ವ್ಯಕ್ತಿಗಳನ್ನು ಪತ್ತೆಹಚ್ಚಲು ತಂಡಗಳು ದಣಿವರಿಯಿಲ್ಲದೆ ಕೆಲಸ ಮಾಡುತ್ತಿರುವಾಗ ರಕ್ಷಣಾ ಕಾರ್ಯಾಚರಣೆಗಳು ಈಗ 32 ನೇ ದಿನಕ್ಕೆ ಕಾಲಿಟ್ಟಿದೆ. ಹೊಸದಾಗಿ ಪತ್ತೆಯಾಗಿರುವ ಮೃತದೇಹವನ್ನು ಗುರುತಿಸುವ ಕಾರ್ಯ ಇನ್ನೂ ನಡೆಯುತ್ತಿದೆ ಎಂದು ಅಧಿಕಾರಿಗಳು ದೃಢಪಡಿಸಿದ್ದು, ಹೆಚ್ಚಿನ ವಿವರಗಳನ್ನು ನೀಡಿಲ್ಲ.

ಮುಂದಿನ ದಿನಗಳಲ್ಲಿ ರಕ್ಷಣಾ ಕಾರ್ಯಾಚರಣೆಯಲ್ಲಿ ಪ್ರಗತಿ ಸಾಧಿಸುವ ಭರವಸೆಯನ್ನು ಅಧಿಕಾರಿಗಳು ಹೊಂದಿದ್ದಾರೆ. ಎನ್ ಡಿಆರ್ ಎಫ್, ಎಸ್ ಡಿಆರ್ ಎಫ್, ಎಸ್ ಸಿಸಿಎಲ್, ಅನ್ವಿ ರೊಬೊಟಿಕ್ಸ್ ಮತ್ತು ಇತರ ತಂಡಗಳು ಸೇರಿದಂತೆ ಬಹು ಸಂಸ್ಥೆಗಳು ರಕ್ಷಣಾ ಕಾರ್ಯಾಚರಣೆಯಲ್ಲಿ ಸಕ್ರಿಯವಾಗಿ ತೊಡಗಿಸಿಕೊಂಡಿವೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಸಿದ್ದರಾಮಯ್ಯ ಮೇಲೆ ತೂಗುಗತ್ತಿ: ಅಧಿಕಾರದಲ್ಲಿ ಉಳಿಯಲು ಸಂಪುಟ ಪುನಾರಚನೆ ಕಸರತ್ತು; ಬಿಹಾರ-ಕೇರಳ ಚುನಾವಣೆಯತ್ತ ಡಿಕೆಶಿ ಚಿತ್ತ!

ವೀರೇಂದ್ರ ಪಪ್ಪಿ ಕರ್ಮಕಾಂಡ ನೋಡುತ್ತಿದ್ದರೆ CM- DCM ಇನ್ಯಾವ ಪರಿ ಲೂಟಿ ಮಾಡಿ ಹೈಕಮಾಂಡ್ ಗೆ ಕಪ್ಪ ನೀಡುತ್ತಿರಬೇಡಾ?

ಈ ಬಾರಿ ನಾನು ಸಚಿವನಾಗುವ ಭರವಸೆ ಇದೆ: ಸಂಪುಟ ವಿಸ್ತರಣೆಯೇ ನವೆಂಬರ್ ಕ್ರಾಂತಿಯಿರಬಹುದು; ಸಲೀಂ ಅಹ್ಮದ್

BDA ಯೋಜನಾ ಪ್ರಾಧಿಕಾರದ ಜವಾಬ್ದಾರಿ ಹಸ್ತಾಂತರ: GBA ವಿರೋಧಿಸುವವರು ಪಾಲಿಕೆ ಚುನಾವಣೆ ಬಹಿಷ್ಕರಿಸಲಿ; ಡಿಕೆಶಿ ಸವಾಲು

ಮೈಸೂರು ಪೊಲೀಸರಿಗೆ CM ಪುತ್ರನ ಕಾಟ: ಯಾವುದೇ ವರ್ಗಾವಣೆಯಾಗಬೇಕಾದರೂ ಯತೀಂದ್ರಗೆ ಟ್ಯಾಕ್ಸ್ ಕಟ್ಟಬೇಕು; ಪ್ರತಾಪ್ ಸಿಂಹ

SCROLL FOR NEXT