ಬುಧವಾರ, ಮಾರ್ಚ್ 26, 2025 ರಂದು ನವದೆಹಲಿಯಲ್ಲಿ ನಡೆದ ಸಂಸತ್ತಿನ ಬಜೆಟ್ ಅಧಿವೇಶನದಲ್ಲಿ ಲೋಕಸಭೆಯ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ. PTI
ದೇಶ

ಸದನ ನಡೆಸಲು ಯಾವುದೇ ಮಾರ್ಗವಿಲ್ಲ.. ಮಾತನಾಡಲು ಅವಕಾಶ ನೀಡುತ್ತಿಲ್ಲ: ಲೋಕಸಭಾ ಸ್ಪೀಕರ್ ವಿರುದ್ಧ Rahul Gandhi

ಸರ್ಕಾರವು ವಿರೋಧ ಪಕ್ಷದ ಧ್ವನಿಯನ್ನು ಹತ್ತಿಕ್ಕುತ್ತಿದೆ ಎಂದು ಆರೋಪಿಸಿದರು. ಕಳೆದ ಹಲವಾರು ದಿನಗಳಿಂದ ಸದನದಲ್ಲಿ ಮಾತನಾಡಲು ಅವಕಾಶವಿಲ್ಲ ಎಂದು ಹೇಳಿದ್ದಾರೆ.

ನವದೆಹಲಿ: ಲೋಕಸಭೆಯಲ್ಲಿ ವಿರೋಧ ಪಕ್ಷದ ನಾಯಕ ಮತ್ತು ಕಾಂಗ್ರೆಸ್ ಸಂಸದ ರಾಹುಲ್ ಗಾಂಧಿ ಲೋಕಸಭೆ ಸ್ಪೀಕರ್ ಓಂ ಬಿರ್ಲಾ ವಿರುದ್ಧ ಅಸಮಾಧಾನಗೊಂಡಿದ್ದು, ಸ್ಪೀಕರ್ ಓಂ ಬಿರ್ಲಾ ಅವರು, ಸದನದಲ್ಲಿ ನಮಗೆ ಮಾತನಾಡಲು ಅವಕಾಶ ನೀಡುತ್ತಿಲ್ಲ, ಅವಕಾಶ ಕೇಳಿದರೆ ಓಡಿ ಹೋಗುತ್ತಾರೆ ಎಂದು ಕಿಡಿಕಾರಿದ್ದಾರೆ.

ಲೋಕಸಭೆಯಲ್ಲಿ ವಿರೋಧ ಪಕ್ಷದ ನಾಯಕ ಮತ್ತು ಕಾಂಗ್ರೆಸ್ ಸಂಸದ ರಾಹುಲ್ ಗಾಂಧಿ ಬುಧವಾರ ಸರ್ಕಾರವು ವಿರೋಧ ಪಕ್ಷದ ಧ್ವನಿಯನ್ನು ಹತ್ತಿಕ್ಕುತ್ತಿದೆ ಎಂದು ಆರೋಪಿಸಿದರು. ಕಳೆದ ಹಲವಾರು ದಿನಗಳಿಂದ ಸದನದಲ್ಲಿ ಮಾತನಾಡಲು ಅವಕಾಶವಿಲ್ಲ ಎಂದು ಹೇಳಿದ್ದಾರೆ.

"ಏನು ನಡೆಯುತ್ತಿದೆ ಎಂದು ನನಗೆ ತಿಳಿದಿಲ್ಲ... ನನಗೆ ಮಾತನಾಡಲು ಅವಕಾಶ ನೀಡುವಂತೆ ನಾನು ಸ್ಪೀಕರ್ ಅವರನ್ನು ವಿನಂತಿಸಿದೆ. ಆದರೆ ಅವರು ಓಡಿಹೋದರು. ಸದನವನ್ನು ನಡೆಸಲು ಇದು ಮಾರ್ಗವಲ್ಲ. ಸ್ಪೀಕರ್ ಸುಮ್ಮನೆ ಹೊರಟುಹೋದರು. ಅವರು ನನಗೆ ಮಾತನಾಡಲು ಬಿಡಲಿಲ್ಲ... ಅವರು ನನ್ನ ಬಗ್ಗೆ ಆಧಾರ ರಹಿತವಾದದ್ದನ್ನು ಹೇಳಿದರು... ಅಗತ್ಯ ಇಲ್ಲದಿದ್ದರೂ ಸದನವನ್ನು ಮುಂದೂಡಿದರು" ಎಂದು ಅವರು ಹೇಳಿದರು.

'ಸದನದ ಘನತೆಯನ್ನು ಎತ್ತಿಹಿಡಿಯಲು ಸದಸ್ಯರು ಪಾಲಿಸಬೇಕಾದ ಕಾರ್ಯವಿಧಾನದ ನಿಯಮಗಳನ್ನು ಲೋಕಸಭೆ ವಿರೋಧ ಪ‍ಕ್ಷದ ನಾಯಕರು ಪಾಲಿಸಬೇಕು. ನನ್ನ ಬಗ್ಗೆ ಹೇಳಿಕೆ ನೀಡಿ, ನನಗೆ ಮಾತನಾಡಲೂ ಅವಕಾಶ ನೀಡದೆ ಸದನವನ್ನು ಮುಂದೂಡಿದರು. ಕಳೆದ ವಾರವೂ ನನಗೆ ಮಾತನಾಡಲು ಅವಕಾಶ ನೀಡಲಿಲ್ಲ.

ವಿರೋಧ ಪಕ್ಷದ ನಾಯಕನಿಗೆ ಮಾತನಾಡಲು ಅವಕಾಶ ನೀಡಬೇಕು. ಆದರೆ ನಾನು ಮಾತನಾಡುವಾಗಲೆಲ್ಲಾ ನನ್ನನ್ನು ತಡೆಯಲಾಗುತ್ತಿದೆ. ನಾನು ಸುಮ್ಮನೇ ಕುಳಿತುಕೊಳ್ಳಬೇಕಾಯಿತು. ಇಲ್ಲಿ ಪ್ರಜಾಪ್ರಭುತ್ವಕ್ಕೆ ಅವಕಾಶವೇ ಇಲ್ಲ. ಮಹಾಕುಂಭಮೇಳ, ನಿರುದ್ಯೋಗದ ಬಗ್ಗೆ ನಾನು ಮಾತನಾಡಬೇಕೆಂದಿದ್ದೆ ಎಂದು ರಾಹುಲ್ ಗಾಂಧಿ ಹೇಳಿದರು.

ಸ್ಪೀಕರ್ ಹೇಳಿದ್ದೇನು?

ಏತನ್ಮಧ್ಯೆ, ಲೋಕಸಭಾ ಸ್ಪೀಕರ್ ಓಂ ಬಿರ್ಲಾ ಅವರು ಬುಧವಾರ ಸಭ್ಯತೆಯನ್ನು ಕಾಪಾಡಿಕೊಳ್ಳುವ ಮತ್ತು ಕಾರ್ಯವಿಧಾನದ ನಿಯಮಗಳನ್ನು ಅನುಸರಿಸುವ ಮಹತ್ವದ ಬಗ್ಗೆ ಮಾತನಾಡಿದರು. "ಸದಸ್ಯರ ನಡವಳಿಕೆಯು ಸದನದಲ್ಲಿ ನಿರೀಕ್ಷಿಸಲಾದ ಉನ್ನತ ಮಾನದಂಡಗಳಿಗೆ ಅನುಗುಣವಾಗಿಲ್ಲದ ಹಲವಾರು ನಿದರ್ಶನಗಳು ನನ್ನ ಗಮನಕ್ಕೆ ಬಂದಿವೆ ಎಂದ ಸ್ಪೀಕರ್ ಓಂ ಬಿರ್ಲಾ ಅವರು ಸದಸ್ಯರು ಪಾಲಿಸಬೇಕಾದ ನಿಯಮಗಳನ್ನು ವಿವರಿಸುವ ನಿಯಮ 349 ಅನ್ನು ಅವರು ನಿರ್ದಿಷ್ಟವಾಗಿ ಉಲ್ಲೇಖಿಸಿದರು.

"ಈ ಸದನದಲ್ಲಿ, ತಂದೆ ಮತ್ತು ಮಗಳು, ತಾಯಿ ಮತ್ತು ಮಗಳು, ಗಂಡ ಮತ್ತು ಹೆಂಡತಿ ಸದಸ್ಯರಾಗಿದ್ದಾರೆ. ಈ ಸಂದರ್ಭದಲ್ಲಿ, ವಿರೋಧ ಪಕ್ಷದ ನಾಯಕ ನಿಯಮಗಳಿಗೆ ಅನುಸಾರವಾಗಿ ವರ್ತಿಸಬೇಕೆಂದು ನಾನು ನಿರೀಕ್ಷಿಸುತ್ತೇನೆ ಎಂದು ಹೇಳಿದರು. ಸ್ಪೀಕರ್ ಈ ಅಭಿಪ್ರಾಯವನ್ನು ನೀಡಲು ಕಾರಣವೇನೆಂದು ತಕ್ಷಣ ಸ್ಪಷ್ಟವಾಗಿಲ್ಲ ಎಂದು ಸುದ್ದಿಸಂಸ್ಥೆ ವರದಿ ಮಾಡಿದೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

Operation Sindoor; Kirana Hills ಪರಮಾಣು ನೆಲೆಗೆ ಅಪ್ಪಳಿಸಿದ ಭಾರತದ ಡ್ರೋನ್? ಬೆಚ್ಚಿಬಿದ್ದ ಪಾಕಿಸ್ತಾನ..! Indian Army ಹೇಳಿದ್ದೇನು?

ನಿರ್ಬಂಧದ ಹೊರತಾಗಿಯೂ ರಷ್ಯಾದಲ್ಲಿ ಇಳಿದ ಅಮೆರಿಕದ C-17 ಮಿಲಿಟರಿ ವಿಮಾನ: ಮಿಷನ್ ಮಾತ್ರ ನಿಗೂಢ!

ನೀಟ್ ಪ್ರತಿಭಟನಾಕಾರರ ಮೇಲೆ ಪೊಲೀಸ್ ದೌರ್ಜನ್ಯ ಆರೋಪ: ಚರ್ಚೆಗೆ ವಿಪಕ್ಷಗಳ ಪಟ್ಟು, ಸಂಸದೀಯ ಸಮಿತಿ ಸಭೆಯಲ್ಲಿ ತೀವ್ರ ವಾಗ್ವಾದ!

2nd Test: ‘ಶ್ರೀಲಂಕಾ ಆಟಗಾರರ ವರ್ತನೆ ವೃತ್ತಿಪರವಾಗಿರಲಿಲ್ಲ’: ಬ್ಯಾಡ್ ಲೈಟ್ ವಿವಾದಕ್ಕೆ Sanjay Manjrekar ಕಿಡಿ

‘ಪ್ರಸಿದ್ಧ್ ಕೃಷ್ಣ ವಿಶ್ವದರ್ಜೆಯ ಬೌಲರ್ ಆಗಿ ಮಾರ್ಪಟ್ಟಿದ್ದಾರೆ’: ಕನ್ನಡಿಗನ ಶ್ಲಾಘಿಸಿದ ದಕ್ಷಿಣ ಆಫ್ರಿಕಾ ಮಾಜಿ ವೇಗಿ Morne Morkel