ಪ್ರಧಾನಿ ಮೋದಿ, ಪಂಬನ್ ರೈಲು ಸೇತುವೆ 
ದೇಶ

ರಾಮೇಶ್ವರಂ: ಪಂಬನ್ ಹೊಸ ರೈಲ್ವೆ ಸೇತುವೆ; ಏಪ್ರಿಲ್ 6 ರಂದು ಪ್ರಧಾನಿ ಮೋದಿ ಉದ್ಘಾಟನೆ

ಹಿರಿಯ ರೈಲ್ವೆ ಅಧಿಕಾರಿಗಳು ಸೇತುವೆಯ ಪರಿಶೀಲನೆ ನಡೆಸಿದ್ದು, ಉದ್ಘಾಟನಾ ಕಾರ್ಯಕ್ರಮಕ್ಕೆ ರಾಮೇಶ್ವರಂ ರೈಲ್ವೆ ನಿಲ್ದಾಣದಲ್ಲಿ ಸಿದ್ಧತಾ ಕಾರ್ಯಗಳು ನಡೆಯುತ್ತಿವೆ.

ಚೆನ್ನೈ: ತಮಿಳುನಾಡಿನ ರಾಮೇಶ್ವರಂನಲ್ಲಿ ಹೊಸದಾಗಿ ನಿರ್ಮಿಸಲಾಗಿರುವ ಪಂಬನ್ ರೈಲ್ವೆ ಸೇತುವೆಯನ್ನು ರಾಮ ನವಮಿ ದಿನವಾದ ಏಪ್ರಿಲ್ 16 ರಂದು ಪ್ರಧಾನಿ ನರೇಂದ್ರ ಮೋದಿ ಅವರು ಉದ್ಘಾಟಿಸಲಿದ್ದಾರೆ.

ಹಿರಿಯ ರೈಲ್ವೆ ಅಧಿಕಾರಿಗಳು ಸೇತುವೆಯ ಪರಿಶೀಲನೆ ನಡೆಸಿದ್ದು, ಉದ್ಘಾಟನಾ ಕಾರ್ಯಕ್ರಮಕ್ಕೆ ರಾಮೇಶ್ವರಂ ರೈಲ್ವೆ ನಿಲ್ದಾಣದಲ್ಲಿ ಸಿದ್ಧತಾ ಕಾರ್ಯಗಳು ನಡೆಯುತ್ತಿವೆ ಎಂದು ದಕ್ಷಿಣ ರೈಲ್ವೆ ಜನರಲ್ ಮ್ಯಾನೇಜರ್ R.N.ಸಿಂಗ್ ಬುಧವಾರ ಬಿಡುಗಡೆ ಮಾಡಿರುವ ಹೇಳಿಕೆಯಲ್ಲಿ ತಿಳಿಸಿದ್ದಾರೆ.

ಏಪ್ರಿಲ್ 6 ರಂದು ರಾಮನ ಜನ್ಮದಿನದ ಅಂಗವಾಗಿ ದೇಶಾದ್ಯಂತ ರಾಮ ನವಮಿ ಆಚರಿಸಲಿದ್ದು, ಅಂದು ಪ್ರಧಾನಿ ನರೇಂದ್ರ ಮೋದಿ ನೂತನ ರೈಲ್ವೆ ಸೇತುವೆಯನ್ನು ಲೋಕಾರ್ಪಣೆ ಮಾಡಲಿದ್ದಾರೆ. ಅವರು ರಾಮೇಶ್ವರಂನ ರಾಮನಾಥ ಸ್ವಾಮಿ ದೇವಾಲಯಕ್ಕೂ ಭೇಟಿ ನೀಡುವ ಸಾಧ್ಯತೆಯಿದೆ.

ತಮಿಳುನಾಡು ಮುಖ್ಯಮಂತ್ರಿ ಎಂ.ಕೆ. ಸ್ಟಾಲಿನ್, ರಾಜ್ಯಪಾಲ ಆರ್.ಎನ್. ರವಿ, ಕೇಂದ್ರ ರೈಲ್ವೆ ಸಚಿವ ಅಶ್ವಿನಿ ವೈಷ್ಣವ್, ತಮಿಳುನಾಡಿನ ಸಂಸದರು, ಶಾಸಕರು ಹಾಗೂ ಹಿರಿಯ ಬಿಜೆಪಿ ನಾಯಕರು ಸೇರಿದಂತೆ ಹಲವು ಗಣ್ಯರು ಕಾರ್ಯಕ್ರಮದಲ್ಲಿ ಪಾಲ್ಗೊಳ್ಳಲಿದ್ದಾರೆ ಎಂದು ದಕ್ಷಿಣ ರೈಲ್ವೆ ಮೂಲಗಳು ಹೇಳಿವೆ.

ಬಳಿಕ ಪ್ರಧಾನಿ ಮೋದಿ ದೆಹಲಿಗೂ ತೆರಳುವ ಮುನ್ನಾ ಜನರನ್ನುದ್ದೇಶಿಸಿ ಮಾತನಾಡುವ ಸಾಧ್ಯತೆಯಿದೆ. ಸುಗಮವಾಗಿ ಕಾರ್ಯಕ್ರಮ ನಡೆಯಲು ಸಂಬಂಧಿಸಿದ ಅಧಿಕಾರಿಗಳು ಸಿದ್ಧತಾ ಕಾರ್ಯದಲ್ಲಿ ತೊಡಗಿದ್ದಾರೆ. ಹೊಸ ಪಂಬನ್ ರೈಲ್ವೆ ಸೇತುವೆಯು 2.1 ಕಿಮೀ ಉದ್ದವನ್ನು ಹೊಂದಿದೆ. ಮೂಲತಃ ಫೆಬ್ರವರಿ 2019 ರಲ್ಲಿ ಕಾರ್ಯಾರಂಭ ಮಾಡಲಾದ ಸೇತುವೆ ನಿರ್ಮಾಣವು ನವೆಂಬರ್ 2024 ರಲ್ಲಿ ಪೂರ್ಣಗೊಂಡಿತು.

ಅದ್ಬುತ ಎಂಜಿನಿಯರಿಂಗ್ ಕೆಲಸ:

ಸೇತುವೆಯ ಪ್ರಮುಖ ಲಕ್ಷಣವೆಂದರೆ ಹಡುಗು ಬಂದ್ರೆ ಸೇತುವೆ ಮೇಲಕ್ಕೆ ಹೋಗುವಂತೆ ವರ್ಟಿಕಲ್ ಲಿಫ್ಟ್ ತಂತ್ರಜ್ಞಾನ ಬಳಸಲಾಗಿದೆ. ಇದು 660 ಮೆಟ್ರಿಕ್ ಟನ್ ತೂಕವಿದೆ. ಸೇತುವೆಯು ಭಾರತದ ಬೆಳೆಯುತ್ತಿರುವ ಮೂಲಸೌಕರ್ಯದ ಸಂಕೇತವಾಗಿದೆ ಮತ್ತು ರಾಮೇಶ್ವರಂ ದ್ವೀಪಕ್ಕೆ ಸಂಪರ್ಕವನ್ನು ಹೆಚ್ಚಿಸುತ್ತದೆ, ಸಾವಿರಾರು ಯಾತ್ರಿಕರು ಮತ್ತು ಪ್ರವಾಸಿಗರಿಗೆ ಪ್ರಯಾಣವನ್ನು ಹೆಚ್ಚು ಪರಿಣಾಮಕಾರಿಯಾಗಿ ಮಾಡುತ್ತದೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಅಮೆರಿಕ ನಿಯೋಜಿತ ರಾಯಭಾರಿ ಸೆರ್ಗಿಯೊ ಗೋರ್- ಮೋದಿ, ಜೈಶಂಕರ್ ಭೇಟಿ; Tariff ಒತ್ತಡದ ನಡುವೆ ಭಾರತ-ಅಮೆರಿಕ ಸಂಬಂಧ ಸುಧಾರಣೆಯ ಸೂಚನೆ?

ಅಫ್ಘಾನಿಸ್ತಾನ ನಮ್ಮೊಂದಿಗೆ ಗಡಿ ಹಂಚಿಕೊಂಡಿರುವ ನೆರೆ ರಾಷ್ಟ್ರ- S Jaishankar; ಭಾರತದೊಂದಿಗೆ POK ವಿಲೀನದ ಸುಳಿವು; ಚೀನಾಗೂ ಶಾಕ್!

ಅಬ್ಬಬ್ಬಾ ರೋಮಾಂಚನ: ಅದ್ಭುತ ಸೃಷ್ಟಿಸಿದ ರಿಷಬ್ ಶೆಟ್ಟಿಗೆ ರಾಷ್ಟ್ರಪ್ರಶಸ್ತಿ ಕೊಡಲೇಬೇಕು - ತಮಿಳು ನಿರ್ದೇಶಕ ಅಟ್ಲೀ

Pakistan: ಇಸ್ರೇಲ್ ವಿರೋಧಿ ಪ್ರತಿಭಟನಾ ಜಾಥಾ, ಪೋಲೀಸರ ಗುಂಡೇಟಿಗೆ 11 ಮಂದಿ ಬಲಿ! Video

ಉತ್ತರ ಪ್ರದೇಶಕ್ಕೆ ಭೇಟಿ ನೀಡಿದ ತಾಲಿಬಾನ್ ಸಚಿವನಿಗೆ ಅದ್ಧೂರಿ ಸ್ವಾಗತ, ಸರ್ಕಾರದ ಭದ್ರತೆ; ಯೋಗಿಗೆ ನಾಚಿಕೆಯಾಗಬೇಕು- SP ಸಂಸದ ಶಫೀಕರ್

SCROLL FOR NEXT