ಪ್ರಧಾನಿ ಮೋದಿ - ಮುಹಮ್ಮದ್ ಯೂನಸ್  
ದೇಶ

ಯೂನಸ್ ಗೆ ಪತ್ರ ಬರೆದು ಬಾಂಗ್ಲಾ ವಿಮೋಚನಾ ದಿನದ ಶುಭಾಶಯ ಕೋರಿದ ಪ್ರಧಾನಿ ಮೋದಿ

ದ್ವಿಪಕ್ಷೀಯ ಸಂಬಂಧವನ್ನು ಬಲಪಡಿಸುವ ಭಾರತದ ಬದ್ಧತೆಯನ್ನು ಪ್ರಧಾನಿ ಮೋದಿ ಪುನರುಚ್ಚರಿಸಿದ್ದಾರೆ ಮತ್ತು ಬಾಂಗ್ಲಾ ಸ್ವಾತಂತ್ರ್ಯ ದಿನದ ಶುಭಾಶಯ ಕೋರಿದ್ದಾರೆ.

ನವದೆಹಲಿ: ಹಿಂದೂಗಳ ಮೇಲಿನ ದಾಳಿಯ ಹಿನ್ನೆಲೆಯಲ್ಲಿ ನವದೆಹಲಿ ಮತ್ತು ಢಾಕಾ ನಡುವಿನ ರಾಜಕೀಯ ಸಂಬಂಧ ಹದಗೆಟ್ಟಿರುವ ನಡುವೆಯೂ, ಪ್ರಧಾನಿ ನರೇಂದ್ರ ಮೋದಿ ಅವರು ಬಾಂಗ್ಲಾದೇಶ ಮಧ್ಯಂತರ ಸರ್ಕಾರದ ಮುಖ್ಯ ಸಲಹೆಗಾರ ಮುಹಮ್ಮದ್ ಯೂನಸ್ ಅವರಿಗೆ ಪತ್ರ ಬರೆದಿದ್ದು, ದ್ವಿಪಕ್ಷೀಯ ಸಂಬಂಧವನ್ನು ಬಲಪಡಿಸುವ ಭಾರತದ ಬದ್ಧತೆಯನ್ನು ಪುನರುಚ್ಚರಿಸಿದ್ದಾರೆ ಮತ್ತು ಬಾಂಗ್ಲಾ ಸ್ವಾತಂತ್ರ್ಯ ದಿನದ ಶುಭಾಶಯ ಕೋರಿದ್ದಾರೆ.

“ಮಾನ್ಯರೇ, ನಿಮ್ಮ ರಾಷ್ಟ್ರೀಯ ದಿನಾಚರಣೆಯಂದು ನಿಮಗೆ ಮತ್ತು ಬಾಂಗ್ಲಾದೇಶದ ಜನರಿಗೆ ನನ್ನ ಹೃತ್ಪೂರ್ವಕ ಅಭಿನಂದನೆಗಳನ್ನು ಸಲ್ಲಿಸುತ್ತೇನೆ” ಎಂದು ಪ್ರಧಾನಿ ಪತ್ರ ಬರೆದಿದ್ದಾರೆ.

“ಈ ದಿನ, ರಾಷ್ಟ್ರೀಯ ದಿನಾಚರಣೆಯು ಉಭಯ ದೇಶಗಳ ದ್ವಿಪಕ್ಷೀಯ ಪಾಲುದಾರಿಕೆಗೆ ಅಡಿಪಾಯ ಎನಿಸಿದ ಪರಸ್ಪರ ಹಂಚಿಕೊಂಡಿರುವ ಇತಿಹಾಸ ಮತ್ತು ತ್ಯಾಗದ ಪ್ರತೀಕ. ಬಾಂಗ್ಲಾದೇಶ ವಿಮೋಚನಾ ಯುದ್ಧದ ಸ್ಫೂರ್ತಿ, ಹಲವು ಕ್ಷೇತ್ರಗಳಲ್ಲಿಸಮೃದ್ಧವಾಗಿ ಬೆಳೆದಿರುವ ಮತ್ತು ನಮ್ಮ ಜನತೆಗೆ ಲಾಭ ತರುವ ನಮ್ಮ ಸಂಬಂಧಕ್ಕೆ ಮಾರ್ಗದರ್ಶಿ ದೀಪವಾಗಿ ಮುಂದುವರಿಯಲಿದೆ" ಎಂದು ಮೋದಿ ಹೇಳಿದ್ದಾರೆ.

“ಶಾಂತಿ, ಸ್ಥಿರತೆ ಮತ್ತು ಸಮೃದ್ಧಿಗಾಗಿ ನಮ್ಮ ಸಾಮಾನ್ಯ ಆಕಾಂಕ್ಷೆಗಳಿಂದ ನಡೆಸಲ್ಪಡುವ ಮತ್ತು ಪರಸ್ಪರರ ಹಿತಾಸಕ್ತಿಗಳು ಮತ್ತು ಕಾಳಜಿಗಳಿಗೆ ಪರಸ್ಪರ ಗೌರವವನ್ನು ಆಧರಿಸಿದ ಈ ಪಾಲುದಾರಿಕೆಯನ್ನು ಮತ್ತಷ್ಟು ಹೆಚ್ಚಿಸಲು ನಾವು ಬದ್ಧರಾಗಿದ್ದೇವೆ” ಎಂದು ಪ್ರಧಾನಿ ತಿಳಿಸಿದ್ದಾರೆ.

ಥಾಯ್ಲೆಂಡ್ ನಲ್ಲಿ ನಡೆಯಲಿರುವ ಬಿಮ್‌ಸ್ಟೆಕ್ ಶೃಂಗ ಸಭೆಯಲ್ಲಿ ಪ್ರಥಮ ಬಾರಿಗೆ ಪರಸ್ಪರ ಭೇಟಿ ಮಾಡಲಿರುವ ಒಂದು ವಾರದ ಮೊದಲು ಈ ಬೆಳವಣಿಗೆ ನಡೆದಿದೆ. ಕಳೆದ ವರ್ಷ ಬಾಂಗ್ಲಾದೇಶದ ಮಾಜಿ ಪ್ರಧಾನಿ ಹಾಗೂ ಭಾರತದೊಂದಿಗೆ ಸ್ನೇಹಪರವಾಗಿದ್ದ ಶೇಖ್‌ ಹಸೀನಾ ಸರ್ಕಾರವನ್ನು ಪದಚ್ಯುತಿಗೊಳಿಸಿ, ಯೂನುಸ್ ಅವರು ಮಧ್ಯಂತರ ಸರ್ಕಾರದ ಮುಖ್ಯಸ್ಥರಾಗಿ ಅಧಿಕಾರ ವಹಿಸಿಕೊಂಡಿದ್ದಾರೆ.

ಹಿಂದೂ ಅಲ್ಪಸಂಖ್ಯಾತರ ಮೇಲಿನ ದಾಳಿಗಳಿಗೆ ಸಂಬಂಧಿಸಿದ ವರದಿಗಳ ಹಿನ್ನೆಲೆಯಲ್ಲಿ, ಭಾರತವು ಬಾಂಗ್ಲಾದೇಶಕ್ಕೆ ತನ್ನ ಕಳವಳಗಳನ್ನು ವ್ಯಕ್ತಪಡಿಸುತ್ತಲೇ ಇದೆ. ದಾಳಿಗಳು ಕೋಮುವಾದಕ್ಕಿಂತ ರಾಜಕೀಯ ಪ್ರೇರಿತವಾಗಿವೆ ಎಂದು ಢಾಕಾ ಪ್ರತಿಕ್ರಿಯಿಸಿದೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಇರಾನ್‌ ಸರ್ಕಾರ ವಿರುದ್ಧ ಪ್ರತಿಭಟನೆ: ಹಿಂಸಾಚಾರದಲ್ಲಿ ಮೃತಪಟ್ಟವರ ಸಂಖ್ಯೆ 116 ಕ್ಕೆ ಏರಿಕೆ

ಕರ್ನಾಟಕದ ಮುಕುಟಕ್ಕೆ ಮತ್ತೊಂದು ಗರಿ: ಬೆಂಗಳೂರು ಮೂಲದ ಮೇಜರ್ Swathi ShanthaKumarಗೆ ವಿಶ್ವಸಂಸ್ಥೆ ಸೆಕ್ರೆಟರಿ ಜನರಲ್ ಪ್ರಶಸ್ತಿ!

ಕೇಂದ್ರ ಬಜೆಟ್ 2026-27: ರಾಜ್ಯದ ಹಣಕಾಸು ಸಮತೋಲನ ಪುನಃಸ್ಥಾಪಿಸಲು ಹೆಚ್ಚಿನ ಅನುದಾನ ಒದಗಿಸಿ; ಕೇಂದ್ರಕ್ಕೆ ರಾಜ್ಯ ಸರ್ಕಾರ ಆಗ್ರಹ

Grok ಅಶ್ಲೀಲ ಕಂಟೆಂಟ್ ವಿವಾದ: ಕೇಂದ್ರ ಸರ್ಕಾರಕ್ಕೆ ಕೊನೆಗೂ ಮಣಿದ X, 600 ಖಾತೆಗಳ ಡಿಲೀಟ್!

ಕೌಟುಂಬಿಕ ಹಿಂಸಾಚಾರ ಸಂತ್ರಸ್ಥರಿಗೆ ಬೆಂಗಳೂರಿನಲ್ಲಿ ಅಣಬೆ ಕೃಷಿ ತರಬೇತಿ

SCROLL FOR NEXT