ಪ್ರಾತಿನಿಧಿಕ ಚಿತ್ರ 
ದೇಶ

ರಾಜಸ್ಥಾನ: ಗಂಡು ಮಗು ಬೇಕೆಂದು ಐದು ತಿಂಗಳ ಅವಳಿ ಹೆಣ್ಣು ಮಕ್ಕಳನ್ನು ಕೊಂದ ತಂದೆ, ಬಂಧನ

ಗುರುವಾರ ನೀಮ್ ಕಾ ಥಾನಾ ನಗರದಲ್ಲಿ ಮನೆಯಿಂದ ಸುಮಾರು 2 ಕಿ.ಮೀ ದೂರದಲ್ಲಿರುವ ಖಾಲಿ ಜಾಗದಲ್ಲಿ ಶವಗಳನ್ನು ಹೂತು ಹಾಕಿದ್ದಾನೆ ಎಂದು ಆರೋಪಿಸಿದ್ದು, ಪೊಲೀಸರು ಶವಗಳನ್ನು ಹೊರತೆಗೆದು, ಆರೋಪಿ ತಂದೆಯನ್ನು ಬಂಧಿಸಿದ್ದಾರೆ.

ಜೈಪುರ: ರಾಜಸ್ಥಾನದ ಸಿಕಾರ್‌ನಲ್ಲಿ ವ್ಯಕ್ತಿಯೊಬ್ಬ ಗಂಡು ಮಗು ಬೇಕೆಂದು ತನ್ನ ಐದು ತಿಂಗಳ ಅವಳಿ ಹೆಣ್ಣು ಮಕ್ಕಳನ್ನು ನೆಲಕ್ಕೆ ಅಪ್ಪಳಿಸಿ ಕೊಂದಿದ್ದಾನೆ ಎಂದು ಪೊಲೀಸರು ಶುಕ್ರವಾರ ತಿಳಿಸಿದ್ದಾರೆ.

ಗುರುವಾರ ನೀಮ್ ಕಾ ಥಾನಾ ನಗರದಲ್ಲಿ ಮನೆಯಿಂದ ಸುಮಾರು 2 ಕಿ.ಮೀ ದೂರದಲ್ಲಿರುವ ಖಾಲಿ ಜಾಗದಲ್ಲಿ ಶವಗಳನ್ನು ಹೂತು ಹಾಕಿದ್ದಾನೆ ಎಂದು ಆರೋಪಿಸಿದ್ದು, ಪೊಲೀಸರು ಶವಗಳನ್ನು ಹೊರತೆಗೆದು, ಆರೋಪಿ ತಂದೆಯನ್ನು ಬಂಧಿಸಿದ್ದಾರೆ.

ಅಶೋಕ್ ಯಾದವ್ ಗಂಡು ಮಗುವನ್ನು ಬಯಸಿದ್ದನು. ಇದೇ ವಿಚಾರವಾಗಿ ಗುರುವಾರ ರಾತ್ರಿ ಪತ್ನಿ ಅನಿತಾ ಜೊತೆ ಜಗಳವಾಡಿದ್ದನು. ದಂಪತಿಗೆ ಐದು ವರ್ಷದ ಇನ್ನೊಂದು ಹೆಣ್ಣು ಮಗು ಇದೆ ಎಂದು ಪೊಲೀಸರು ತಿಳಿಸಿದ್ದಾರೆ.

'ಮೃತ ಹೆಣ್ಣು ಮಕ್ಕಳ ಚಿಕ್ಕಪ್ಪ ಸುನಿಲ್ ಯಾದವ್, ಕೊತ್ವಾಲಿ ಪೊಲೀಸ್ ಠಾಣೆಗೆ ಕರೆ ಮಾಡಿದ್ದಾರೆ. ಹೆಣ್ಣು ಮಕ್ಕಳ ತಂದೆ ಅವರನ್ನು ಕೊಂದು ಕಲೆಕ್ಟರೇಟ್ ಬಳಿಯ ಜಮೀನಿನಲ್ಲಿ ಶವಗಳನ್ನು ಹೂತು ಹಾಕಿದ್ದಾನೆ ಎಂದು ಹೇಳಿದ್ದಾರೆ' ಎಂದು ಹೆಚ್ಚುವರಿ ಎಸ್ಪಿ ರೋಷನ್ ಮೀನಾ ಹೇಳಿದರು.

ಘಟನೆ ಬಗ್ಗೆ ಮಾಹಿತಿ ಪಡೆದ ಎಸ್‌ಡಿಎಂ ರಾಜವೀರ್ ಯಾದವ್ ಮತ್ತು ವಿಧಿವಿಜ್ಞಾನ ವಿಜ್ಞಾನ ಪ್ರಯೋಗಾಲಯ (ಎಫ್‌ಎಸ್‌ಎಲ್) ತಂಡವು ತಡರಾತ್ರಿ ಸ್ಥಳಕ್ಕೆ ತಲುಪಿದೆ. ಶುಕ್ರವಾರ ಬೆಳಿಗ್ಗೆ, ಶವಗಳನ್ನು ಹೊರತೆಗೆದು ಮರಣೋತ್ತರ ಪರೀಕ್ಷೆಗಾಗಿ ಕಳುಹಿಸಲಾಗಿದೆ ಎಂದು ಅವರು ಹೇಳಿದರು.

ಅವಳಿ ಮಕ್ಕಳು ನವೆಂಬರ್ 4, 2024 ರಂದು ಜನಿಸಿದರು. ಅಂದಿನಿಂದ ಮನೆಯಲ್ಲಿ ಜಗಳ ನಡೆಯುತ್ತಿತ್ತು. ಅಶೋಕ್ ಮತ್ತು ಅವರ ಕುಟುಂಬ ಸದಸ್ಯರು ಗಂಡು ಮಗುವನ್ನು ಬಯಸುತ್ತಿದ್ದರು. ಮೊದಲು ಆತ ತಮ್ಮ ಹೆಂಡತಿಯನ್ನು ಹೊಡೆದಿದ್ದಾನೆ. ನಂತರ ಇಬ್ಬರೂ ಹೆಣ್ಣು ಮಕ್ಕಳನ್ನು ಎತ್ತಿಕೊಂಡು ಕ್ರೂರವಾಗಿ ನೆಲದ ಮೇಲೆ ಎಸೆದಿದ್ದಾನೆ ಎಂದು ಸಬ್-ಇನ್ಸ್‌ಪೆಕ್ಟರ್ ವೀರೇಂದ್ರ ಕುಮಾರ್ ಹೇಳಿದರು.

ಗಾಯಗೊಂಡ ಹಸುಳೆಗಳನ್ನು ಆಸ್ಪತ್ರೆಗೆ ಕರೆದೊಯ್ಯಲಾಗಿದೆ. ಆದರೆ, ಆ ವೇಳೆಗಾಗಲೇ ಅವರಿಬ್ಬರು ಮೃತಪಟ್ಟಿರುವುದಾಗಿ ವೈದ್ಯರು ತಿಳಿಸಿದ್ದಾರೆ. ನಂತರ, ಪತಿ ಮತ್ತು ಅವರ ಕುಟುಂಬಸ್ಥರು ಮಕ್ಕಳನ್ನು ಮುಚ್ಚಿದ್ದಾರೆ. ಸಮಾಧಿ ಸ್ಥಳದ ಮೇಲೆ ಕಲ್ಲುಗಳು ಮತ್ತು ಗಿಡಗಳ ಪೊದೆಗಳನ್ನು ಇರಿಸಲಾಗಿತ್ತು ಎಂದು ಅವರು ಹೇಳಿದರು.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

Demographic manipulation: ಒಳನುಸುಳುವಿಕೆಗಿಂತ ಸಾಮಾಜಿಕ ಸಾಮರಸ್ಯಕ್ಕೆ ಇದೇ 'ದೊಡ್ಡ ಅಪಾಯ'- ಪ್ರಧಾನಿ ಮೋದಿ

RSS Centenary: ಇದೇ ಮೊದಲು; 'ಭಾರತ ಮಾತೆ'ಯ ಚಿತ್ರವುಳ್ಳ 100 ನಾಣ್ಯ ರೂ ಬಿಡುಗಡೆ ಮಾಡಿದ ಪ್ರಧಾನಿ ಮೋದಿ

ಮೈಸೂರು: ಮುಂದಿನ ವರ್ಷಗಳಲ್ಲೂ ದಸರಾದಲ್ಲಿ ನಾನೇ ಪುಷ್ಪಾರ್ಚನೆ: ಡಿಕೆಶಿ ಕನಸಿಗೆ 'ಕೊಳ್ಳಿ' ಇಟ್ರಾ ಸಿದ್ದರಾಮಯ್ಯ?

DA hike: ಕೇಂದ್ರ ಸರ್ಕಾರಿ ನೌಕರರಿಗೆ 'ದಸರಾ ಗಿಫ್ಟ್' ; ಶೇ. 3 ರಷ್ಟು ತುಟ್ಟಿ ಭತ್ಯೆ ಹೆಚ್ಚಳಕ್ಕೆ ಸಂಪುಟ ಅನುಮೋದನೆ

ತಮಿಳುನಾಡು: ಅರುಣಾಚಲೇಶ್ವರ ದೇವಸ್ಥಾನಕ್ಕೆ ಬಂದಿದ್ದ ಆಂಧ್ರ ಮಹಿಳೆ ಮೇಲೆ ಅತ್ಯಾಚಾರ; ಇಬ್ಬರು ಪೊಲೀಸರ ಬಂಧನ!

SCROLL FOR NEXT