ಕಾಂಗ್ರೆಸ್ ರಾಜ್ಯಸಭಾ ಸದಸ್ಯ ಇಮ್ರಾನ್ ಪ್ರತಾಪಗಡಿ 
ದೇಶ

ಸೋಷಿಯಲ್ ಮೀಡಿಯಾದಲ್ಲಿ 'ಪ್ರಚೋದನಕಾರಿ' ಪೋಸ್ಟ್: ಕಾಂಗ್ರೆಸ್ ಸಂಸದ ಇಮ್ರಾನ್ ಪ್ರತಾಪ್‌ಗಢಿ ವಿರುದ್ಧದ FIR ರದ್ದು

ಸಂವಿಧಾನವು ವಾಕ್ ಮತ್ತು ಅಭಿವ್ಯಕ್ತಿ ಸ್ವಾತಂತ್ರ್ಯದ ಮೇಲೆ ಸಮಂಜಸವಾದ ನಿರ್ಬಂಧಗಳನ್ನು ವಿಧಿಸುತ್ತದೆ, ಆದರೆ ಈ ನಿರ್ಬಂಧಗಳು ಅಸಮಂಜಸವಾಗಿರಬಾರದು ಅಥವಾ ನಾಗರಿಕರ ಹಕ್ಕುಗಳನ್ನು ತುಳಿಯಲು ಬಳಸಬಾರದು ಎಂದು ನ್ಯಾಯಪೀಠ ಒತ್ತಿ ಹೇಳಿದೆ.

ನವದೆಹಲಿ: ಕಾಂಗ್ರೆಸ್ ರಾಜ್ಯಸಭಾ ಸಂಸದ ಇಮ್ರಾನ್ ಪ್ರತಾಪ್‌ಗಡಿ ಅವರ "ಏ ಖೂಂ ಕೆ ಪ್ಯಾಸೆ ಬಾತ್ ಸುನೋ" ಎಂಬ ಕವನವನ್ನು ಒಳಗೊಂಡ ಸೋಷಿಯಲ್ ಪೋಸ್ಟ್‌ಗೆ ಸಂಬಂಧಿಸಿದಂತೆ ಗುಜರಾತ್ ಪೊಲೀಸರು ದಾಖಲಿಸಿದ್ದ ಎಫ್ಐಆರ್ ಮತ್ತು ಕ್ರಿಮಿನಲ್ ಮೊಕದ್ದಮೆಗಳನ್ನು ಸುಪ್ರೀಂ ಕೋರ್ಟ್ ಶುಕ್ರವಾರ ರದ್ದುಗೊಳಿಸಿದೆ.

ನ್ಯಾಯಮೂರ್ತಿ ಅಭಯ್ ಎಸ್. ಓಕಾ ಮತ್ತು ನ್ಯಾಯಮೂರ್ತಿ ಉಜ್ಜಲ್ ಭುಯಾನ್ ನೇತೃತ್ವದ ದ್ವಿಸದಸ್ಯ ಪೀಠವು, ಪ್ರತಾಪ್‌ಗಢಿ ಅವರು ಯಾವುದೇ ಅಪರಾಧ ಮಾಡಿಲ್ಲ ಮತ್ತು ಅಂತಹ ಪ್ರಕರಣಗಳಲ್ಲಿ ಎಫ್‌ಐಆರ್ ದಾಖಲಿಸುವ ಮೊದಲು ಪೊಲೀಸರು ಲಿಖಿತ ಅಥವಾ ಮಾತನಾಡುವ ಪದಗಳ ಅರ್ಥವನ್ನು ಅರ್ಥಮಾಡಿಕೊಳ್ಳಬೇಕು ಎಂದು ತೀರ್ಪು ನೀಡಿದೆ.

ಸಂವಿಧಾನವು ವಾಕ್ ಮತ್ತು ಅಭಿವ್ಯಕ್ತಿ ಸ್ವಾತಂತ್ರ್ಯದ ಮೇಲೆ ಸಮಂಜಸವಾದ ನಿರ್ಬಂಧಗಳನ್ನು ವಿಧಿಸುತ್ತದೆ, ಆದರೆ ಈ ನಿರ್ಬಂಧಗಳು ಅಸಮಂಜಸವಾಗಿರಬಾರದು ಅಥವಾ ನಾಗರಿಕರ ಹಕ್ಕುಗಳನ್ನು ತುಳಿಯಲು ಬಳಸಬಾರದು ಎಂದು ನ್ಯಾಯಪೀಠ ಒತ್ತಿ ಹೇಳಿದೆ.

ಲಿಖಿತ ಅಥವಾ ಮಾತನಾಡುವ ಅಭಿವ್ಯಕ್ತಿಗಳನ್ನು ಸಮಂಜಸ ವ್ಯಕ್ತಿಯ ದೃಷ್ಟಿಕೋನದಿಂದ ಮೌಲ್ಯಮಾಪನ ಮಾಡಬೇಕು, ಟೀಕೆಯನ್ನು ತಮ್ಮ ಅಧಿಕಾರ ಮತ್ತು ಸ್ಥಾನಮಾನಕ್ಕೆ ಬೆದರಿಕೆ ಎಂದು ಗ್ರಹಿಸುವವರಿಂದಲ್ಲ ಎಂದು ನ್ಯಾಯಾಲಯವು ಹೇಳಿದೆ.

ಮಾನವ ಜೀವನಕ್ಕೆ ಅರ್ಥವನ್ನು ನೀಡುವ ಕಾವ್ಯ, ನಾಟಕ, ಸಂಗೀತ ಮತ್ತು ವಿಡಂಬನೆ ಸೇರಿದಂತೆ ವಿವಿಧ ಪ್ರಕಾರದ ಕಲೆಗಳ ಮಹತ್ವವನ್ನು ಸುಪ್ರೀಂ ಕೋರ್ಟ್ ಎತ್ತಿ ತೋರಿಸಿದೆ. ಈ ಮಾಧ್ಯಮಗಳ ಮೂಲಕ ಜನರು ತಮ್ಮನ್ನು ತಾವು ವ್ಯಕ್ತಪಡಿಸಿಕೊಳ್ಳಲು ಸ್ವಾತಂತ್ರ್ಯವನ್ನು ನೀಡಬೇಕು ಎಂದು ಅದು ಹೇಳಿದೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಇತಿಹಾಸ ಕಲಿಯಬೇಕಿದ್ದರೆ ಕಾಲೇಜಿಗೆ ಹೋಗುತ್ತಾರೆ, ನಿಮ್ಮ ಬೋಧನೆಯ ಅಗತ್ಯವಿಲ್ಲ: ಪ್ರಧಾನಿ ಮೋದಿ ವಿರುದ್ಧ ಪ್ರಿಯಾಂಕ್ ಖರ್ಗೆ ವಾಗ್ದಾಳಿ

MGNREGA Row: ಯಾವಾಗ-ಎಲ್ಲಿ ಬೇಕಾದರೂ ಚರ್ಚೆಗೆ ಸಿದ್ಧ, ಡೈಲಾಗ್‌ ವೀರ HDK ಬಂದರೆ ಒಳ್ಳೆಯದು; ಡಿ.ಕೆ.ಶಿವಕುಮಾರ್

Positive Vibes ಗಾಗಿ ಮನೆಯಲ್ಲಿ ಯಾವ ಗಿಡ ಬೆಳಸಬೇಕು: ಮುಳ್ಳಿನ ಗಿಡಗಳಲ್ಲಿದೆಯೇ ನಕರಾತ್ಮಕ ಶಕ್ತಿ; ಮಲ್ಲಿಗೆ ಮತ್ತು ತುಳಸಿಗೆ ಸೂಕ್ತ ಸ್ಥಳ ಯಾವುದು?

ಮಹಿಳಾ ಟೆಕ್ಕಿ ಸಾವಿನ ಕೇಸ್ ಗೆ ಬಿಗ್ ಟ್ವಿಸ್ಟ್: ಹತ್ಯೆಗೂ ಮುನ್ನ PU ವಿದ್ಯಾರ್ಥಿಯಿಂದ ರೇಪ್; ಸಾಕ್ಷಿ ನಾಶಕ್ಕೆ ಬೆಂಕಿ ಹಚ್ಚಿದ ಕರ್ನಲ್ ಕುರೈ!

1st ODI: ಕೊಹ್ಲಿ ಅರ್ಧಶತಕ: ನ್ಯೂಜಿಲ್ಯಾಂಡ್ ವಿರುದ್ಧದ ಪಂದ್ಯದಲ್ಲಿ ಭಾರತಕ್ಕೆ ರೋಚಕ ಜಯ!

SCROLL FOR NEXT