ಹಳಿತಪ್ಪಿದ ಬೆಂಗಳೂರು-ಕಾಮಾಕ್ಯ ಎಕ್ಸ್‌ಪ್ರೆಸ್ 
ದೇಶ

ಒಡಿಶಾ: ಹಳಿತಪ್ಪಿದ ಬೆಂಗಳೂರು-ಕಾಮಾಕ್ಯ ಎಕ್ಸ್‌ಪ್ರೆಸ್; 7 ಮಂದಿಗೆ ಗಾಯ, ಓರ್ವ ಸಾವು!

ಮಂಗುಲಿ ಬಳಿಯ ನೆರ್ಗುಂಡಿ ರೈಲು ನಿಲ್ದಾಣದ ಬಳಿ ಬೆಳಿಗ್ಗೆ 11.54ಕ್ಕೆ ಎಸ್‌ಎಂವಿಟಿ ಬೆಂಗಳೂರು-ಕಾಮಾಕ್ಯ ಎಸಿ ಎಕ್ಸ್‌ಪ್ರೆಸ್‌ನ ಹನ್ನೊಂದು ಬೋಗಿಗಳು ಹಳಿತಪ್ಪಿವೆ.

ಕಟಕ್: ಒಡಿಶಾದ ಕಟಕ್ ಜಿಲ್ಲೆಯಲ್ಲಿ ಭಾನುವಾರ ಬೆಂಗಳೂರು-ಕಾಮಾಕ್ಯ ಎಕ್ಸ್‌ಪ್ರೆಸ್ ರೈಲು ಹಳಿ ತಪ್ಪಿದ್ದು, ಏಳು ಜನರು ಗಾಯಗೊಂಡಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ಮಂಗುಲಿ ಬಳಿಯ ನೆರ್ಗುಂಡಿ ರೈಲು ನಿಲ್ದಾಣದ ಬಳಿ ಬೆಳಿಗ್ಗೆ 11.54ಕ್ಕೆ ಎಸ್‌ಎಂವಿಟಿ ಬೆಂಗಳೂರು-ಕಾಮಾಕ್ಯ ಎಸಿ ಎಕ್ಸ್‌ಪ್ರೆಸ್‌ನ ಹನ್ನೊಂದು ಬೋಗಿಗಳು ಹಳಿತಪ್ಪಿವೆ. ಈ ಹಿನ್ನೆಲೆಯಲ್ಲಿ ರೈಲು ಸಂಚಾರದ ಮೇಲೆ ಪರಿಣಾಮ ಬೀರಿದೆ ಎಂದು ಪೂರ್ವ ಕರಾವಳಿ ರೈಲ್ವೆಯ ಮುಖ್ಯ ಸಾರ್ವಜನಿಕ ಸಂಪರ್ಕ ಅಧಿಕಾರಿ (ಸಿಪಿಆರ್‌ಒ) ಅಶೋಕ್ ಕುಮಾರ್ ಮಿಶ್ರಾ ತಿಳಿಸಿದ್ದಾರೆ.

ಗಾಯಗೊಂಡ ಏಳು ಜನರನ್ನು ಹತ್ತಿರದ ಆಸ್ಪತ್ರೆಗೆ ಕರೆದೊಯ್ಯಲಾಗಿದೆ. ಗಾಯಗೊಂಡವರ ಸಂಖ್ಯೆ 10ಕ್ಕಿಂತ ಹೆಚ್ಚಿಲ್ಲ. ರಕ್ಷಣಾ ಕಾರ್ಯಾಚರಣೆಯಲ್ಲಿ ಎನ್‌ಡಿಆರ್‌ಎಫ್ ಮತ್ತು ಒಡಿಶಾ ಅಗ್ನಿಶಾಮಕ ದಳದ ಸಿಬ್ಬಂದಿ ರೈಲ್ವೆಗೆ ಸಹಾಯ ಮಾಡುತ್ತಿದ್ದಾರೆ ಎಂದು ಒಡಿಶಾ ಅಗ್ನಿಶಾಮಕ ಸೇವೆಯ ಮಹಾನಿರ್ದೇಶಕ ಸುಧಾಂಶು ಸಾರಂಗಿ ತಿಳಿಸಿದ್ದಾರೆ.

ರೈಲು ಬೆಂಗಳೂರಿನಿಂದ ಅಸ್ಸಾಂನ ಗುವಾಹಟಿಯಲ್ಲಿರುವ ಕಾಮಾಕ್ಯ ನಿಲ್ದಾಣಕ್ಕೆ ಹೋಗುತ್ತಿತ್ತು.

ಸ್ಥಳಕ್ಕೆ ಬೇರೆ ರೈಲಿನ ವ್ಯವಸ್ಥೆ ಮಾಡಲಾಗಿದೆ. ಸಂಕಷ್ಟದಲ್ಲಿರುವ ಪ್ರಯಾಣಿಕರು ತಮ್ಮ ಸ್ಥಳಗಳನ್ನು ತಲುಪಲು ಸಹಾಯ ಮಾಡಲು ವ್ಯವಸ್ಥೆಗಳನ್ನು ಮಾಡಲಾಗುತ್ತಿದೆ. ಸಾಧ್ಯವಾದಷ್ಟು ಬೇಗ ಈ ಮಾರ್ಗದಲ್ಲಿ ಸಂಚಾರಕ್ಕೆ ಅನುವು ಮಾಡಿಕೊಡಲಾಗುವುದು ನಮ್ಮ ಆದ್ಯತೆಯಾಗಿದೆ. ಅದಕ್ಕೆ ಅನುಗುಣವಾಗಿ, ಇತರ ರೈಲುಗಳನ್ನು ಬೇರೆ ಮಾರ್ಗಗಳಿಗೆ ತಿರುಗಿಸಲಾಗುವುದು' ಎಂದು ಅವರು ಹೇಳಿದರು.

ಹಳಿತಪ್ಪಿದ ಕಾರಣ ಮೂರು ರೈಲುಗಳ ಮಾರ್ಗ ಬದಲಾವಣೆ ಮಾಡಲಾಗಿದೆ. ಈ ರೈಲುಗಳು ಧೌಲಿ ಎಕ್ಸ್‌ಪ್ರೆಸ್, ನೀಲಾಚಲ್ ಎಕ್ಸ್‌ಪ್ರೆಸ್ ಮತ್ತು ಪುರುಲಿಯಾ ಎಕ್ಸ್‌ಪ್ರೆಸ್ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ಪ್ರಯಾಣಿಕರ ನೆರವಿಗಾಗಿ ಸಹಾಯವಾಣಿ ಆರಂಭಿಸಲಾಗಿದೆ. 8455885999 ಮತ್ತು 8991124238 ಸಂಖ್ಯೆಗೆ ಕರೆ ಮಾಡುವಂತೆ ಅಧಿಕಾರಿಗಳು ತಿಳಿಸಿದ್ದಾರೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

Madhya Pradesh: ದುರ್ಗಾದೇವಿ ಮೂರ್ತಿ ವಿಸರ್ಜನೆ ವೇಳೆ ದುರಂತ, ಮಹಿಳೆಯರು, ಮಕ್ಕಳು ಸೇರಿದಂತೆ 14 ಮಂದಿ ಸಾವು!Video

ಈ ಬಾರಿ 'ಮೈಸೂರು ದಸರಾ' ಯಶಸ್ವಿ; ಬೆಳೆ ಹಾನಿಯಾದ ಎಲ್ಲ 10 ಲಕ್ಷ ಹೆಕ್ಟೇರ್ ಗೂ ಸಮೀಕ್ಷೆ ನಂತರ ಪರಿಹಾರ: ಸಿಎಂ ಸಿದ್ದರಾಮಯ್ಯ

'RSS ನಲ್ಲಿ ಒಬ್ಬ ವ್ಯಕ್ತಿಯೂ ಇಲ್ಲ': ಪ್ರಧಾನಿ ಮೋದಿ ಹೇಳಿಕೆಗೆ ಓವೈಸಿ ತಿರುಗೇಟು!

2026 T20 World Cup: ಅರ್ಹತೆ ಪಡೆದ ನಮೀಬಿಯಾ, ಜಿಂಬಾಬ್ವೆ!

ಅಂಬೇಡ್ಕರ್ ಸಿದ್ಧಾಂತದಂತೆ ಬದುಕಿದ್ದೇವೆ; RSS ಕಾರ್ಯಕ್ರಮಕ್ಕೆ ಹೋಗಲ್ಲ: CJI ಗವಾಯಿ ತಾಯಿ ಪತ್ರ

SCROLL FOR NEXT