ಪ್ರಧಾನಿ ನರೇಂದ್ರ ಮೋದಿ 
ದೇಶ

Mann ki Baat: ನಮ್ಮ ಹಬ್ಬಗಳು ದೇಶದ ವಿವಿಧತೆಯಲ್ಲಿ ಏಕತೆಯ ಪ್ರತಿಬಿಂಬ- ಪ್ರಧಾನಿ ನರೇಂದ್ರ ಮೋದಿ

ವಿವಿಧ ರಾಜ್ಯಗಳು ಭಾನುವಾರ ತಮ್ಮ ಸಾಂಪ್ರದಾಯಿಕ ಹೊಸ ವರ್ಷವನ್ನು ಆಚರಿಸುತ್ತಿವೆ ಮತ್ತು ಇತರ ಹಲವು ರಾಜ್ಯಗಳು ಮುಂಬರುವ ದಿನಗಳಲ್ಲಿ ಆಚರಿಸಲಿವೆ.

ನವದೆಹಲಿ: ಇಂದು ಆಚರಿಸಲಾಗುತ್ತಿರುವ ಮತ್ತು ಮುಂಬರುವ ದಿನಗಳಲ್ಲಿ ಆಚರಿಸಲಾಗುವ ವಿವಿಧ ಹಬ್ಬಗಳು ಭಾರತದಲ್ಲಿನ ವೈವಿಧ್ಯತೆಯಲ್ಲಿ ಏಕತೆಯ ಮನೋಭಾವದ ಸೂಚಕವಾಗಿವೆ ಮತ್ತು ಈ ಭಾವನೆಯನ್ನು ಬಲಪಡಿಸುವುದನ್ನು ಮುಂದುವರಿಸಬೇಕು ಎಂದು ಪ್ರಧಾನಿ ನರೇಂದ್ರ ಮೋದಿ ಭಾನುವಾರ ಹೇಳಿದ್ದಾರೆ

ತಮ್ಮ ಮಾಸಿಕ ಮನ್ ಕಿ ಬಾತ್ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, ವಿವಿಧ ರಾಜ್ಯಗಳು ಭಾನುವಾರ ತಮ್ಮ ಸಾಂಪ್ರದಾಯಿಕ ಹೊಸ ವರ್ಷವನ್ನು ಆಚರಿಸುತ್ತಿವೆ ಮತ್ತು ಇತರ ಹಲವು ರಾಜ್ಯಗಳು ಮುಂಬರುವ ದಿನಗಳಲ್ಲಿ ಆಚರಿಸಲಿವೆ. ಈದ್ ಸೇರಿದಂತೆ ಇತರ ಹಬ್ಬಗಳನ್ನು ಆಚರಿಸಲಾಗುತ್ತಿರುವ ಎಲ್ಲರಿಗೂ ಶುಭಾಶಯಗಳು ಎಂದು ಹೇಳಿದರು.

ಶಾಲೆಗಳು ಇನ್ನೇನು ಬೇಸಿಗೆ ರಜೆಯನ್ನು ನೀಡಲಿವೆ. ಬೇಸಿಗೆಯ ಈ ದೀರ್ಘ ದಿನಗಳಲ್ಲಿ ವಿದ್ಯಾರ್ಥಿಗಳು ಹೊಸ ಹವ್ಯಾಸಗಳನ್ನು ಬೆಳೆಸಿಕೊಳ್ಳಬೇಕು ಮತ್ತು ತಮ್ಮ ಕೌಶಲ್ಯಗಳನ್ನು ವೃದ್ಧಿಸಿಕೊಳ್ಳಲು ಈ ಸಮಯವನ್ನು ಬಳಸಿಕೊಳ್ಳಬೇಕು ಎಂದು ಹೇಳಿದರು.

ವಿದ್ಯಾರ್ಥಿಗಳಿಗೆ ವಿವಿಧ ಚಟುವಟಿಕೆಗಳನ್ನು ನೀಡುತ್ತಿರುವವರು "myholidays" ಎಂಬ ಹ್ಯಾಶ್‌ಟ್ಯಾಗ್ ಬಳಸುವಂತೆ ಮತ್ತು ವಿದ್ಯಾರ್ಥಿಗಳು ಮತ್ತು ಪೋಷಕರು "holidaymemories" ಎಂಬ ಹ್ಯಾಶ್‌ಟ್ಯಾಗ್‌ನೊಂದಿಗೆ ತಮ್ಮ ಅನುಭವಗಳನ್ನು ಹಂಚಿಕೊಳ್ಳುವಂತೆ ಒತ್ತಾಯಿಸಿದರು.

ವಿವಿಧ ವಿಧಾನಗಳ ಮೂಲಕ ನೀರನ್ನು ಸಂರಕ್ಷಿಸುವ ಮೂಲಕ "ಮಳೆಯನ್ನು ಹಿಡಿಯಿರಿ" ಎಂಬ ಅಭಿಯಾನದ ಕುರಿತು ಹೇಳಿದರು. ಕಳೆದ ಏಳರಿಂದ ಎಂಟು ವರ್ಷಗಳಲ್ಲಿ ಇಂತಹ ಪದ್ಧತಿಗಳ ಮೂಲಕ 11 ಬಿಲಿಯನ್ ಘನ ಮೀಟರ್‌ಗಿಂತಲೂ ಹೆಚ್ಚು ನೀರನ್ನು ಉಳಿಸಲಾಗಿದೆ ಎಂದು ತಿಳಿಸಿದರು.

ಜನರು ಯೋಗವನ್ನು ತಮ್ಮ ದೈನಂದಿನ ಜೀವನದ ಭಾಗವನ್ನಾಗಿ ಮಾಡಿಕೊಳ್ಳಬೇಕು. ಇದು ಭಾರತದಿಂದ ಮಾನವ ಕುಲಕ್ಕೆ ಅಮೂಲ್ಯವಾದ ಕೊಡುಗೆಯಾಗಿದೆ. ಜೂನ್ 21 ರಂದು ನಡೆಯುವ ಅಂತರರಾಷ್ಟ್ರೀಯ ಯೋಗ ದಿನವು ಈಗ ಒಂದು ಭವ್ಯ ಆಚರಣೆಯಾಗಿದೆ. ಈ ವರ್ಷದ ಕಾರ್ಯಕ್ರಮದ ಧ್ಯೇಯವಾಕ್ಯ 'ಒಂದು ಭೂಮಿಗೆ, ಒಂದು ಆರೋಗ್ಯಕ್ಕೆ ಯೋಗ' ಆಗಿದೆ ಎಂದು ತಿಳಿಸಿದರು.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಜಮ್ಮುವಿನಾದ್ಯಂತ ಭಾರೀ ಮಳೆ: ಪ್ರವಾಹ, ಭೂಕುಸಿತದಿಂದ ಮೂವರು ಸಾವು; ಕೊಚ್ಚಿ ಹೋದ ಸೇತುವೆ; Video

Indian Navyಗೆ ಮತ್ತಷ್ಟು ಬಲ: INS Udaygiri, INS Himgiri ಯುದ್ಧನೌಕೆಗಳು ಸೇರ್ಪಡೆ!

ಬಿಹಾರ: ಇನ್ನು 40-50 ವರ್ಷ ಅಧಿಕಾರದಲ್ಲಿ ಇರ್ತೀವಿ ಅಂತಾ ಅಮಿತ್ ಶಾ ಗೆ ಹೇಗೆ ಗೊತ್ತು? ರಾಹುಲ್ ಗಾಂಧಿ

ನನ್ನ-ಕಾಂಗ್ರೆಸ್ ಮಧ್ಯೆ ಭಕ್ತ-ಭಗವಂತನ ಸಂಬಂಧ ಇದೆ; RSS ಗೀತೆ ಹಾಡಿದ್ದಕ್ಕೆ ನೋವಾಗಿದ್ದರೆ ಕ್ಷಮೆ ಕೇಳುತ್ತೇನೆ: ಡಿ.ಕೆ ಶಿವಕುಮಾರ್; Video

Tariff ಬೆನ್ನಲ್ಲೇ ಅಮೆರಿಕ ಅಧ್ಯಕ್ಷರಿಗೆ ಯುದ್ಧೋನ್ಮಾದ: "ಯುದ್ಧ ಇಲಾಖೆ" ಬಗ್ಗೆ ಟ್ರಂಪ್ ಒಲವು!

SCROLL FOR NEXT