ಕುನಾಲ್ ಕಾಮ್ರಾ 
ದೇಶ

ಮುಂಬೈ: ಸೋಮವಾರವೂ ವಿಚಾರಣೆಗೆ ಹಾಜರಾಗದ ಕುನಾಲ್ ಕಾಮ್ರಾ, ನಿವಾಸಕ್ಕೆ ಪೊಲೀಸರ ದೌಡು!

ಇಂದು ಹಗಲಿನ ವೇಳೆ ಅವರು ಪೊಲೀಸರ ಮುಂದೆ ಹಾಜರಾಗಬೇಕಿತ್ತು ಎಂದು ಅಧಿಕಾರಿಯೊಬ್ಬರು ತಿಳಿಸಿದ್ದಾರೆ. ಎರಡನೇ ಬಾರಿಗೆ ಅವರಿಗೆ ಸಮನ್ಸ್ ನೀಡಲಾಗಿತ್ತು.

ಮುಂಬೈ: ಮಹಾರಾಷ್ಟ್ರ ಡಿಸಿಎಂ ಏಕನಾಥ್ ಶಿಂಧೆ ವಿರುದ್ಧ ಅವಹೇಳನಾಕಾರಿ ಹೇಳಿಕೆಗೆ ಸಂಬಂಧಿಸಿದ ಕೇಸ್ ನಲ್ಲಿ ಸ್ಟ್ಯಾಂಡ್ ಅಪ್ ಕಾಮಿಡಿಯನ್ ಕುನಾಲ್ ಕಾಮ್ರಾ ಸೋಮವಾರವೂ ಪೊಲೀಸರ ಮುಂದೆ ವಿಚಾರಣೆಗೆ ಹಾಜರಾಗಿಲ್ಲ. ಹೀಗಾಗಿ ಪೊಲೀಸರ ತಂಡವೊಂದನ್ನು ಪರಿಶೀಲಿಸಲು ಅವರ ನಿವಾಸಕ್ಕೆ ತೆರಳಿತು.

ಇಂದು ಹಗಲಿನ ವೇಳೆ ಅವರು ಪೊಲೀಸರ ಮುಂದೆ ಹಾಜರಾಗಬೇಕಿತ್ತು ಎಂದು ಅಧಿಕಾರಿಯೊಬ್ಬರು ತಿಳಿಸಿದ್ದಾರೆ. ಎರಡನೇ ಬಾರಿಗೆ ಅವರಿಗೆ ಸಮನ್ಸ್ ನೀಡಲಾಗಿತ್ತು.

ಪ್ರಕರಣಕ್ಕೆ ಸಂಬಂಧಿಸಿದಂತೆ ಕುನಾಲ್ ಕಾಮ್ರಾ ವಿಚಾರಣೆಗೆ ಹಾಜರಾಗುತ್ತಾರೆಯೇ ಅಥವಾ ಇಲ್ಲವೇ ಎಂಬುದನ್ನು ಪರಿಶೀಲಿಸಲು ಅವರ ಕುಟುಂಬ ನೆಲೆಸಿರುವ ಮಾಹಿಮ್‌ನಲ್ಲಿರುವ ಅವರ ಮನೆಗೆ ಪೊಲೀಸರ ತಂಡವೊಂದು ತೆರಳಿದರು.

ವಿಚಾರಣೆಗೆ ಅವರು ಹಾಜರಾಗದ ಕಾರಣ ಮುಂದಿನ ಕ್ರಮವನ್ನು ಶೀಘ್ರದಲ್ಲೇ ನಿರ್ಧರಿಸಲಾಗುವುದು ಎಂದು ಅಧಿಕಾರಿ ಹೇಳಿದರು. ಕಳೆದ ವಾರ ಅವರ ಹಾಜರಿ ಕೋರಿ ಮೊದಲ ನೋಟೀಸ್ ನೀಡಲಾಗಿತ್ತು. ಕಾಮ್ರಾ ಅವರ ಏಳು ದಿನಗಳ ಕಾಲಾವಕಾಶದ ಕೋರಿಕೆಯನ್ನು ಪೊಲೀಸರು ನಿರಾಕರಿಸಿದ್ದರು.

ಮದ್ರಾಸ್ ಹೈಕೋರ್ಟ್ ಮಾರ್ಚ್ 28 ರಂದು ಕುನಾಲ್ ಕಾಮ್ರಾ ಅವರ ವಿರುದ್ಧ ದಾಖಲಾಗಿರುವ ಹಲವು ಎಫ್‌ಐಆರ್‌ಗಳಿಗೆ ಸಂಬಂಧಿಸಿದಂತೆ ಮಧ್ಯಂತರ ನಿರೀಕ್ಷಣಾ ಜಾಮೀನು ನೀಡಿತ್ತು.

ಬೆದರಿಕೆ ಕರೆ ಹಾಗೂ ಮುಂಬೈ ಪೊಲೀಸರಿಂದ ಬಂಧನದ ಭೀತಿ ಹಿನ್ನೆಲೆಯಲ್ಲಿ ತಮಿಳುನಾಡಿನ ವಿಲ್ಲುಪುರಂ ಪಟ್ಟಣದ ಖಾಯಂ ನಿವಾಸಿಯಾಗಿರುವುದರಿಂದ ತಮ್ಮ ನಿರೀಕ್ಷಣಾ ಜಾಮೀನು ಅರ್ಜಿಯನ್ನು ಆಲಿಸುವ ಅಧಿಕಾರ ಮದ್ರಾಸ್ ಹೈಕೋರ್ಟ್ ಗೆ ಇದೆ ಎಂದು ಕಾಮ್ರಾ ಅರ್ಜಿಯಲ್ಲಿ ತಿಳಿಸಿದ್ದರು.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಇಬ್ಬರು ಕೇಂದ್ರ ಸಚಿವರು ಸೇರಿದಂತೆ 75 ಸದಸ್ಯರ GBA ಸೆ. 2 ರಿಂದ ಅಸ್ತಿತ್ವಕ್ಕೆ: ಯತೀಂದ್ರ ಸಿದ್ದರಾಮಯ್ಯಗೂ ಸ್ಥಾನ!

ಜಮ್ಮುವಿನಾದ್ಯಂತ ಭಾರಿ ಮಳೆ: ಅಪಾರ ಪ್ರಮಾಣದ ಹಾನಿ, 10 ಮಂದಿ ಸಾವು: ಕೊಚ್ಚಿ ಹೋದ ರಸ್ತೆ, ಸೇತುವೆಗಳು!

ಫೈಟರ್ ಜೆಟ್‌ ಇಂಜಿನ್ ಖರೀದಿ: ಅಮೆರಿಕಾದ GE ಸಂಸ್ಥೆಯೊಂದಿಗೆ $1 ಬಿಲಿಯನ್ ಮೊತ್ತದ ಒಪ್ಪಂದಕ್ಕೆ ಭಾರತ ಸಿದ್ಧತೆ!

ಡಿಕೆಶಿ ಕ್ಷಮೆ ಕೇಳಬಾರದಿತ್ತು; ಮುಲಾಜಿಲ್ಲದೆ ಕಾಂಗ್ರೆಸ್ ಪಕ್ಷದ ಸದಸ್ಯತ್ವಕ್ಕೆ ರಾಜೀನಾಮೆ ಬಿಸಾಕಬೇಕಿತ್ತು- ಆರ್. ಅಶೋಕ್

ಸುಂಕ ಸಮರ: Trump 4 ಬಾರಿ ಕರೆ ಮಾಡಿದರೂ ಉತ್ತರಿಸದ PM Modi; ಅಮೆರಿಕ ನಿಯೋಗಕ್ಕೂ No Entry!

SCROLL FOR NEXT