ಅಮೃತಸರ ಗಡಿ ಚಿತ್ರ 
ದೇಶ

ಅಮೃತಸರ: ಭಯೋತ್ಪಾದನಾ ಸಂಚು ವಿಫಲ; ಭಾರಿ ಪ್ರಮಾಣದ ಶಸ್ತ್ರಾಸ್ತ್ರ, ಮದ್ದು ಗುಂಡು ವಶ!

ಅಮೃತಸರ ಜಿಲ್ಲೆಯ ಭರೋಪಾಲ್ ಗ್ರಾಮದ ಬಳಿ ಪಂಜಾಬ್ ಪೊಲೀಸರ ಸಮನ್ವಯದಲ್ಲಿ ಗಡಿ ಭದ್ರತಾ ಪಡೆ (BSF) ಭಯೋತ್ಪಾದಕ ಸಂಚನ್ನು ವಿಫಲಗೊಳಿಸಿದ್ದು, ಶಸ್ತ್ರಾಸ್ತ್ರ ಮತ್ತು ಮದ್ದುಗುಂಡುಗಳ ಸಂಗ್ರಹವನ್ನು ವಶಪಡಿಸಿಕೊಂಡಿದೆ.

ಅಮೃತಸರ: ಪಹಲ್ಗಾಮ್ ಉಗ್ರರ ದಾಳಿ ಘಟನೆ ಜನರ ಮನಸ್ಸಿನಿಂದ ಮಾಸುವ ಮುನ್ನವೇ ಮತ್ತೊಂದು ದೊಡ್ಡ ಭಯೋತ್ಪಾದನಾ ಸಂಚನ್ನು ಗಡಿ ಭದ್ರತಾ ಪಡೆ ಅಮೃತಸರ ಗಡಿಯಲ್ಲಿ ವಿಫಲಗೊಳಿಸಿದೆ.

ಹೌದು, ಅಮೃತಸರ ಜಿಲ್ಲೆಯ ಭರೋಪಾಲ್ ಗ್ರಾಮದ ಬಳಿ ಪಂಜಾಬ್ ಪೊಲೀಸರ ಸಮನ್ವಯದಲ್ಲಿ ಗಡಿ ಭದ್ರತಾ ಪಡೆ (BSF) ಭಯೋತ್ಪಾದಕ ಸಂಚನ್ನು ವಿಫಲಗೊಳಿಸಿದ್ದು, ಶಸ್ತ್ರಾಸ್ತ್ರ ಮತ್ತು ಮದ್ದು ಗುಂಡುಗಳ ಸಂಗ್ರಹವನ್ನು ವಶಪಡಿಸಿಕೊಂಡಿದೆ.

ಬಿಎಸ್‌ಎಫ್ ಇಂಟಲಿಜೆನ್ಸ್ ವಿಂಗ್ ನೀಡಿದ ನಂಬಲಾರ್ಹ, ಗುಪ್ತಚರ ಮಾಹಿತಿ ಮೇರೆಗೆ ಭದ್ರತಾ ಪಡೆಗಳು ಬುಧವಾರ ಸಂಜೆ ಜಂಟಿ ಶೋಧ ಕಾರ್ಯಾಚರಣೆ ನಡೆಸಿದ್ದು, ಎರಡು ಹ್ಯಾಂಡ್ ಗ್ರೆನೇಡ್‌ಗಳು, ಮೂರು ಪಿಸ್ತೂಲ್‌ಗಳು, ಆರು ಮ್ಯಾಗಜೀನ್‌ಗಳು ಮತ್ತು 50 ಸುತ್ತಿನ ಮದ್ದುಗುಂಡುಗಳನ್ನು ವಶಪಡಿಸಿಕೊಂಡಿವೆ.

ವಶಕ್ಕೆ ಪಡೆದ ಶಸ್ತ್ರಾಸ್ತ್ರಗಳು ಮತ್ತು ಸ್ಫೋಟಕಗಳನ್ನು ಹೆಚ್ಚಿನ ತನಿಖೆಗಾಗಿ ಸ್ಥಳೀಯ ಪೊಲೀಸರಿಗೆ ಹಸ್ತಾಂತರಿಸಲಾಗಿದೆ.

ಈ ಜಂಟಿ ಕಾರ್ಯಾಚರಣೆ BSF ನ ಉನ್ನತ ಮಟ್ಟದ ಸನ್ನದ್ಧತೆ ಮತ್ತು ಜಾಗರೂಕತೆಯನ್ನು ಪ್ರತಿಬಿಂಬಿಸುತ್ತದೆ. ಪಂಜಾಬ್ ಪೊಲೀಸರೊಂದಿಗೆ ತ್ವರಿತ ಮತ್ತು ಸಂಘಟಿತ ಕ್ರಮವು ಸಂಭವನೀಯ ದೊಡ್ಡ ಭಯೋತ್ಪಾದಕ ಸಂಚನ್ನು ವಿಫಲಗೊಳಿಸಿದೆ. ರಾಷ್ಟ್ರೀಯ ಭದ್ರತೆ ಮತ್ತು ನಾಗರಿಕರ ರಕ್ಷಣೆಗೆ ಅದರ ಬದ್ಧತೆಯನ್ನು ತೋರಿಸಿದೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಭಾರತದ ನೆಲದಲ್ಲೇ ಸ್ತ್ರೀದ್ವೇಷ ಪ್ರದರ್ಶಿಸಿದ ತಾಲೀಬಾನ್ ವಿದೇಶಾಂಗ ಸಚಿವ!; ಸುದ್ದಿಗೋಷ್ಠಿಗೆ ಮಹಿಳೆಯರಿಗಿಲ್ಲ ಪ್ರವೇಶ; ಭುಗಿಲೆದ್ದ ಅಸಮಾಧಾನ!

'ನನ್ನ ಪ್ರಶಸ್ತಿ ಟ್ರಂಪ್‌ಗೆ ಸಮರ್ಪಿತ...' Noble ಶಾಂತಿ ಪ್ರಶಸ್ತಿ ಗೆದ್ದ ಬೆನ್ನಲ್ಲೇ ಮಾರಿಯಾ ಶಾಕಿಂಗ್ ಹೇಳಿಕೆ!

ಭಾರತದ ಹಿತಾಸಕ್ತಿಗಳ ವಿರುದ್ಧ ಅಫ್ಘಾನಿಸ್ತಾನ ನೆಲ ಬಳಕೆಯಾಗಲ್ಲ, ನೀವು ಆಟ ಆಡಬೇಡಿ- ಪಾಕಿಸ್ತಾನಕ್ಕೆ ಅಫ್ಘಾನ್ ವಿದೇಶಾಂಗ ಸಚಿವರ ನೇರ ಎಚ್ಚರಿಕೆ!

ಚಿಕ್ಕಬಳ್ಳಾಪುರ: 'Miss U Chinna'; ಅಪ್ರಾಪ್ತ ಪ್ರೇಯಸಿಯ ದುಪ್ಪಟ್ಟದಿಂದಲೇ ಯುವಕ ನೇಣಿಗೆ ಶರಣು; Instagram Post Viral

ಬೆಂಗಳೂರಿನಲ್ಲೊಂದು ಹೃದಯ ವಿದ್ರಾವಕ ಘಟನೆ: ಇಬ್ಬರು ಮಕ್ಕಳನ್ನು ಕೊಂದು ತಾಯಿ ಆತ್ಮಹತ್ಯೆ

SCROLL FOR NEXT