ದೇಶ

ಕಳವಳಕಾರಿ ಸುದ್ದಿ: 13 ವರ್ಷದ ಬಾಲಕನೊಂದಿಗೆ ಓಡಿಹೋಗಿದ್ದ 23 ವರ್ಷದ ಶಿಕ್ಷಕಿ ಇದೀಗ 5 ತಿಂಗಳ ಗರ್ಭೀಣಿ!

ಸೂರತ್‌ನಲ್ಲಿ ಇಡೀ ದೇಶವನ್ನೇ ಬೆಚ್ಚಿಬೀಳಿಸಿದ ಪ್ರಕರಣವೊಂದು ಬೆಳಕಿಗೆ ಬಂದಿದೆ. ಸೂರತ್ ನಗರದಲ್ಲಿ 23 ವರ್ಷದ ಟ್ಯೂಷನ್ ಟೀಚರ್ ಮತ್ತು ಆಕೆಯ 13 ವರ್ಷದ ಅಪ್ರಾಪ್ತ ವಿದ್ಯಾರ್ಥಿಯ ನಡುವಿನ ಅಕ್ರಮ ಸಂಬಂಧ ಬಹಿರಂಗವಾಗಿದೆ.

ಸೂರತ್‌ನಲ್ಲಿ ಇಡೀ ದೇಶವನ್ನೇ ಬೆಚ್ಚಿಬೀಳಿಸಿದ ಪ್ರಕರಣವೊಂದು ಬೆಳಕಿಗೆ ಬಂದಿದೆ. ಸೂರತ್ ನಗರದಲ್ಲಿ 23 ವರ್ಷದ ಟ್ಯೂಷನ್ ಟೀಚರ್ ಮತ್ತು ಆಕೆಯ 13 ವರ್ಷದ ಅಪ್ರಾಪ್ತ ವಿದ್ಯಾರ್ಥಿಯ ನಡುವಿನ ಅಕ್ರಮ ಸಂಬಂಧ ಬಹಿರಂಗವಾಗಿದೆ. ಈ ವಿಷಯ ಸಾಮಾಜಿಕ ಜಾಲತಾಣಗಳಲ್ಲಿ ಬಿರುಗಾಳಿ ಎಬ್ಬಿಸಿದೆ. ಮಹಿಳಾ ಶಿಕ್ಷಕಿ ಪೊಲೀಸರ ಮುಂದೆ ಆಘಾತಕಾರಿ ಹೇಳಿಕೆ ನೀಡಿದ್ದು, ಆ ವಿದ್ಯಾರ್ಥಿಯಿಂದ ತಾನು ಗರ್ಭಿಣಿಯಾಗಿದ್ದು ಈಗ ಐದು ತಿಂಗಳು ಎಂದು ಹೇಳಿದ್ದಾಳೆ.

ಪೊಲೀಸ್ ದಾಖಲೆಗಳ ಪ್ರಕಾರ, ಈ ಘಟನೆ ಸೂರತ್‌ನ ತರಬೇತಿ ಕೇಂದ್ರಕ್ಕೆ ಸಂಬಂಧಿಸಿದೆ. ಅಲ್ಲಿ ಮಹಿಳಾ ಶಿಕ್ಷಕಿ 5ನೇ ತರಗತಿ ವಿದ್ಯಾರ್ಥಿಗೆ ಪಾಠ ಮಾಡುತ್ತಿದ್ದರು. ಕ್ರಮೇಣ, ಇಬ್ಬರ ನಡುವಿನ ಆತ್ಮೀಯತೆ ಬೆಳೆದು ಕೊನೆಗೆ ಅವರು ದೈಹಿಕ ಸಂಬಂಧವನ್ನು ಹೊಂದಿದ್ದರು. ಏಪ್ರಿಲ್ 24ರಂದು ಇಬ್ಬರೂ ಮನೆಯಿಂದ ಓಡಿಹೋಗಿದ್ದರು. ನಂತರ ಕುಟುಂಬವು ಪೊಲೀಸರಿಗೆ ದೂರು ನೀಡಿತು. ನಾಲ್ಕು ದಿನಗಳ ನಂತರ ಪೊಲೀಸರು ಇಬ್ಬರನ್ನು ವಶಕ್ಕೆ ಪಡೆದಿತ್ತು.

ಪೊಲೀಸರ ವಿಚಾರಣೆ ವೇಳೆ, ಶಿಕ್ಷಕಿ ತಾನು ಐದು ತಿಂಗಳ ಗರ್ಭಿಣಿ ಎಂದು ಹೇಳಿದ್ದಾಳೆ. ತಾನು ಗರ್ಭ ಧರಿಸಲು 13 ವರ್ಷದ ವಿದ್ಯಾರ್ಥಿ ಕಾರಣನಾಗಿದ್ದಾನೆ. ಹೀಗಾಗಿ ಬಾಲಕನೊಂದಿಗೆ ಓಡಿಹೋಗಿ ಬೇರೆ ನಗರದಲ್ಲಿ ನೆಲೆಸಲು ಬಯಸುತ್ತಿರುವುದಾಗಿಯೂ ಹೇಳಿದ್ದಾಳೆ. ಏತನ್ಮಧ್ಯೆ, ವಿದ್ಯಾರ್ಥಿಯು ಶಿಕ್ಷಕಿಯೊಂದಿಗೆ ಹಲವಾರು ಬಾರಿ ದೈಹಿಕ ಸಂಬಂಧ ಹೊಂದಿದ್ದಾಗಿ ಪೊಲೀಸರಿಗೆ ತಿಳಿಸಿದ್ದಾನೆ.

ವಿಷಯದ ಗಂಭೀರತೆಯನ್ನು ಪರಿಗಣಿಸಿ, ಪೊಲೀಸರು ವಿದ್ಯಾರ್ಥಿಯನ್ನು ವೈದ್ಯಕೀಯ ಪರೀಕ್ಷೆಗೆ ಒಳಪಡಿಸಿದ್ದರು. ಪರೀಕ್ಷೆಯಲ್ಲಿ ಬಾಲಕ ದೈಹಿಕವಾಗಿ ತಂದೆಯಾಗಲು ಸಮರ್ಥನಾಗಿದ್ದಾನೆ ಎಂದು ಬಹಿರಂಗವಾಗಿದೆ. ಆದಾಗ್ಯೂ, ಈಗ ದೃಢವಾದ ಪುರಾವೆಗಳಿಗಾಗಿ ಡಿಎನ್ಎ ಪರೀಕ್ಷೆಯನ್ನು ನಡೆಸಲು ಪೊಲೀಸರು ಮುಂದಾಗಿದ್ದಾರೆ. ಈ ಪ್ರಕರಣದಲ್ಲಿ, ಶಿಕ್ಷಕಿಯ ವಿರುದ್ಧ ಅಪ್ರಾಪ್ತ ವಯಸ್ಕನೊಂದಿಗೆ ಲೈಂಗಿಕ ಸಂಬಂಧ ಹೊಂದಿದ್ದಕ್ಕಾಗಿ, ಅಪಹರಣಕ್ಕಾಗಿ ಪೋಕ್ಸೊ ಕಾಯ್ದೆಯಡಿಯಲ್ಲಿ ಪ್ರಕರಣ ದಾಖಲಿಸಲಾಗಿದೆ. ಅದೇ ಸಮಯದಲ್ಲಿ, ವಿದ್ಯಾರ್ಥಿಯ ಚಿಕ್ಕ ವಯಸ್ಸಿನ ಕಾರಣ, ಆತನನ್ನು ರಕ್ಷಣೆಯಲ್ಲಿ ಇರಿಸಲಾಗಿದೆ.

ಈ ಸುದ್ದಿ ಸಾಮಾಜಿಕ ಮಾಧ್ಯಮದಲ್ಲಿ ವೇಗವಾಗಿ ಹರಡುತ್ತಿದ್ದು, 'ಸಚಿನ್ ಗುಪ್ತಾ' ಎಂಬ ಬಳಕೆದಾರರು ಈ ಮಾಹಿತಿಯನ್ನು ಹಂಚಿಕೊಂಡಿದ್ದಾರೆ. ಈ ವಿಷಯದಿಂದ ಜನರು ಆಘಾತಕ್ಕೊಳಗಾಗಿದ್ದಾರೆ ಮತ್ತು ಕಠಿಣ ಕ್ರಮ ಕೈಗೊಳ್ಳಬೇಕೆಂದು ಒತ್ತಾಯಿಸುತ್ತಿದ್ದಾರೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

40 ಕೋಟಿ ಯುವಕರು ದೇಶದ ನಿಜವಾದ ಶಕ್ತಿ, ಆದರೆ ನಿರುದ್ಯೋಗ ತಾಂಡವವಾಡುತ್ತಿದೆ: ಉತ್ತರಪ್ರದೇಶದಲ್ಲಿ ರಾಹುಲ್ ಗಾಂಧಿ

Toxic Trailer: ನಾನು ಬರೋ ಸಮಯ ಬಂದಿದೆ ಎಂದ ಯಶ್, ನಾವೆಲ್ಲರೂ ಕಾಯುತ್ತಿದ್ದೇವೆ ಎಂದ ಶಿವಣ್ಣ!

UPI ಪಾವತಿಗಳಿಗೆ ಶುಲ್ಕ ವಿಧಿಸಲ್ಲ: ಯಾರಿಗೆ MDR ವಿಧಿಸಲಾಗುತ್ತದೆ ಎಂಬುದನ್ನು ಬಹಿರಂಗಪಡಿಸಿದ ಕೇಂದ್ರ ಸರ್ಕಾರ!

ಟೆಸ್ಟ್ ಪಂದ್ಯದ ಕೊನೆಯ ಓವರ್​ನಲ್ಲಿ 6, 6, 0, 6, 6 ಸಿಡಿಸಿದ ಗುರ್ನೂರ್ ಬ್ರಾರ್; ಗಂಭೀರ್ ಚಲ್ಲಾಳೆ, Video!

ಅಸಮಾಧಾನಿತ ಕಾಂಗ್ರೆಸ್ ಶಾಸಕರಿಗೆ ಕುಮಾರಸ್ವಾಮಿ ಆಫರ್; ಹೊಸ ದಾಳ ಉರುಳಿಸಿದ 'ದಳಪತಿ'