ವಿಳಿಂಜಂ ಅಂತರರಾಷ್ಟ್ರೀಯ ಬಂದರು ಉದ್ಘಾಟಿಸಿದ ಮೋದಿ 
ದೇಶ

'ವಿಳಿಂಜಂನಲ್ಲಿ ತರೂರ್ ಉಪಸ್ಥಿತಿ ಹಲವರ ನಿದ್ದೆಗೆಡಿಸಲಿದೆ': ಕಾಂಗ್ರೆಸ್ ಕಾಲೆಳೆದ ಮೋದಿ; Video

ಇಂದು ಬಂದರು ಉದ್ಘಾಟಿಸಿ ಮಾತನಾಡಿದ ಪ್ರಧಾನಿ ಮೋದಿ, ಈ ಸಮಾರಂಭದಲ್ಲಿ ಶಶಿ ತರೂರ್ ಉಪಸ್ಥಿತಿಯು ಹಲವರ ನಿದ್ದೆಗೆಡಿಸಲಿದೆ ಎಂದು ಕಾಂಗ್ರೆಸ್ ಕಾಲೆಳೆದರು.

ತಿರುವನಂತಪುರಂ: ಪ್ರಧಾನಿ ನರೇಂದ್ರ ಮೋದಿ ಅವರು ಶುಕ್ರವಾರ ಮುಖ್ಯಮಂತ್ರಿ ಪಿಣರಾಯಿ ವಿಜಯನ್ ಮತ್ತು ಹಿರಿಯ ಕಾಂಗ್ರೆಸ್ ನಾಯಕ ಶಶಿ ತರೂರ್ ಅವರ ಸಮ್ಮುಖದಲ್ಲಿ ವಿಳಿಂಜಂ ಅಂತರರಾಷ್ಟ್ರೀಯ ಬಂದರನ್ನು ಅಧಿಕೃತವಾಗಿ ಉದ್ಘಾಟಿಸಿದರು.

ಇಂದು ಬಂದರು ಉದ್ಘಾಟಿಸಿ ಮಾತನಾಡಿದ ಪ್ರಧಾನಿ ಮೋದಿ, ಈ ಸಮಾರಂಭದಲ್ಲಿ ಶಶಿ ತರೂರ್ ಉಪಸ್ಥಿತಿಯು ಹಲವರ ನಿದ್ದೆಗೆಡಿಸಲಿದೆ ಎಂದು ಕಾಂಗ್ರೆಸ್ ಕಾಲೆಳೆದರು.

"ಮುಖ್ಯಮಂತ್ರಿ ಪಿಣರಾಯಿ ವಿಜಯನ್ ಅವರಿಗೆ ನೀವು ವಿಪಕ್ಷಗಳ ‘ಇಂಡಿಯಾ’ ಒಕ್ಕೂಟದ ಬಲವಾದ ಆಧಾರಸ್ತಂಭ ಎಂದು ಹೇಳಲು ಬಯಸುತ್ತೇನೆ. ವಿಳಿಂಜಂ ಅಂತಾರಾಷ್ಟ್ರೀಯ ಬಂದರಿನ ಉದ್ಘಾಟನೆ ಸಮಾರಂಭವು ಖಂಡಿತವಾಗಿಯೂ ಕೆಲವರ ನಿದ್ದೆಗೆ ಭಂಗ ತರಲಿದೆ. ಶಶಿ ತರೂರ್‌ ನನ್ನ ಪಕ್ಕದಲ್ಲಿರುವುದು ನೋಡಿ ಅನೇಕರು ಹುಬ್ಬೇರಿಸಲಿದ್ದಾರೆ" ಎಂದು ಪ್ರಧಾನಿ ಮೋದಿ ಹೇಳಿದ್ದು, ಅವರ ಹೇಳಿಕೆ ಕೇರಳ ರಾಜಕಾರಣದಲ್ಲಿ ಸಂಚಲನ ಸೃಷ್ಟಿಸಿದೆ.

ಕಾಂಗ್ರೆಸ್ ಪಕ್ಷದೊಳಗೆ, ವಿಶೇಷವಾಗಿ ಕೇರಳದಲ್ಲಿ, ತರೂರ್ ಅವರ ಸ್ಥಾನದ ಬಗ್ಗೆ ಹೆಚ್ಚುತ್ತಿರುವ ಊಹಾಪೋಹಗಳ ನಡುವೆ ಈ ಹೇಳಿಕೆಗಳು ಬಂದಿವೆ, ಅಲ್ಲಿ ಅವರು ತಮ್ಮ ವೈಯಕ್ತಿಕ ಸ್ಥಾನಮಾನವನ್ನು ಹೆಚ್ಚು ಒತ್ತಿಹೇಳಿದ್ದಾರೆ, ರಾಜ್ಯದ ಪಕ್ಷದ ನಾಯಕತ್ವದಿಂದ ತಮ್ಮನ್ನು ಪ್ರತ್ಯೇಕಿಸಿಕೊಂಡಿದ್ದಾರೆ.

ತಿರುವನಂತಪುರಂ ವಿಮಾನ ನಿಲ್ದಾಣದಲ್ಲಿ ಪ್ರಧಾನಿ ಮೋದಿಯವರನ್ನು ವೈಯಕ್ತಿಕವಾಗಿ ಬರಮಾಡಿಕೊಳ್ಳಲು ಶಶಿ ತರೂರ್ ಅವರನ್ನು ಆಯ್ಕೆಮಾಡಿದ್ದು ಸಾಕಷ್ಟು ಗಮನ ಸೆಳೆಯಿತು. ಪ್ರಧಾನಿಯವರನ್ನು ತರೂರ್ ಸ್ವಾಗತಿಸುತ್ತಿರುವ ಫೋಟೋ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗಿದೆ.

"ದೆಹಲಿ ವಿಮಾನ ನಿಲ್ದಾಣದಲ್ಲಿ ವಿಳಂಬವಾಗಿದ್ದರೂ, ಪ್ರಧಾನಿ ನರೇಂದ್ರ ಮೋದಿ ನನ್ನ ಕ್ಷೇತ್ರಕ್ಕೆ ಆಗಮಿಸಿದಾಗ ಅವರನ್ನು ಸ್ವಾಗತಿಸಲು ನಾನು ಸಮಯಕ್ಕೆ ಸರಿಯಾಗಿ ತಿರುವನಂತಪುರಂಗೆ ಬಂದಿಳಿದೆ" ಎಂದು ತರೂರ್ X ನಲ್ಲಿ ಪೋಸ್ಟ್ ಮಾಡಿದ್ದಾರೆ.

ದೇಶದಲ್ಲಿನ ಅಭಿವೃದ್ಧಿಯ ವಿವರಗಳನ್ನು ನೀಡಿದ ಪ್ರಧಾನಿ ಮೋದಿ, ನಾವಿಕರ ಸಂಖ್ಯೆಯಲ್ಲಿ ಭಾರತವು ಜಾಗತಿಕವಾಗಿ ಅಗ್ರ ಮೂರು ರಾಷ್ಟ್ರಗಳಲ್ಲಿ ಒಂದಾಗಿದೆ ಮತ್ತು ಕಳೆದ 10 ವರ್ಷಗಳಲ್ಲಿ, ನಮ್ಮ ಬಂದರುಗಳ ಸಾಮರ್ಥ್ಯವು ದ್ವಿಗುಣಗೊಂಡಿದೆ, ಅವುಗಳ ದಕ್ಷತೆಯು ಸುಧಾರಿಸಿದೆ ಮತ್ತು ಅಲ್ಲಿ ಟರ್ನ್‌ಅರೌಂಡ್ ಸಮಯವು ಶೇಕಡಾ 30 ರಷ್ಟು ಕಡಿಮೆಯಾಗಿದೆ ಎಂದು ಹೇಳಿದರು.

ಈ ಬಂದರನ್ನು 8,800 ಕೋಟಿ ರೂ. ವೆಚ್ಚದಲ್ಲಿ ನಿರ್ಮಿಸಲಾಗಿದೆ ಮತ್ತು ಅದರ ಟ್ರಾನ್ಸ್‌ಶಿಪ್‌ಮೆಂಟ್ ಹಬ್ ಸಾಮರ್ಥ್ಯವು ಮುಂದಿನ ದಿನಗಳಲ್ಲಿ ಮೂರು ಪಟ್ಟು ಹೆಚ್ಚಾಗಲಿದೆ ಎಂದು ಮೋದಿ ತಿಳಿಸಿದರು.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

Operation Sindoor; Kirana Hills ಪರಮಾಣು ನೆಲೆಗೆ ಅಪ್ಪಳಿಸಿದ ಭಾರತದ ಡ್ರೋನ್? ಬೆಚ್ಚಿಬಿದ್ದ ಪಾಕಿಸ್ತಾನ..! Indian Army ಹೇಳಿದ್ದೇನು?

ನಿರ್ಬಂಧದ ಹೊರತಾಗಿಯೂ ರಷ್ಯಾದಲ್ಲಿ ಇಳಿದ ಅಮೆರಿಕದ C-17 ಮಿಲಿಟರಿ ವಿಮಾನ: ಮಿಷನ್ ಮಾತ್ರ ನಿಗೂಢ!

ನೀಟ್ ಪ್ರತಿಭಟನಾಕಾರರ ಮೇಲೆ ಪೊಲೀಸ್ ದೌರ್ಜನ್ಯ ಆರೋಪ: ಚರ್ಚೆಗೆ ವಿಪಕ್ಷಗಳ ಪಟ್ಟು, ಸಂಸದೀಯ ಸಮಿತಿ ಸಭೆಯಲ್ಲಿ ತೀವ್ರ ವಾಗ್ವಾದ!

2nd Test: ‘ಶ್ರೀಲಂಕಾ ಆಟಗಾರರ ವರ್ತನೆ ವೃತ್ತಿಪರವಾಗಿರಲಿಲ್ಲ’: ಬ್ಯಾಡ್ ಲೈಟ್ ವಿವಾದಕ್ಕೆ Sanjay Manjrekar ಕಿಡಿ

‘ಪ್ರಸಿದ್ಧ್ ಕೃಷ್ಣ ವಿಶ್ವದರ್ಜೆಯ ಬೌಲರ್ ಆಗಿ ಮಾರ್ಪಟ್ಟಿದ್ದಾರೆ’: ಕನ್ನಡಿಗನ ಶ್ಲಾಘಿಸಿದ ದಕ್ಷಿಣ ಆಫ್ರಿಕಾ ಮಾಜಿ ವೇಗಿ Morne Morkel