ಪ್ರಮೋದ್ ಸಾವಂತ್ 
ದೇಶ

ದೇವಸ್ಥಾನದಲ್ಲಿ ಕಾಲ್ತುಳಿತ: ನ್ಯಾಯಾಂಗ ತನಿಖೆಗೆ ಗೋವಾ ಸಿಎಂ ಆದೇಶ

ಪಣಜಿಯಿಂದ ಸುಮಾರು 40 ಕಿ.ಮೀ ದೂರದಲ್ಲಿರುವ ಶಿರ್ಗಾವೊ ಗ್ರಾಮದಲ್ಲಿರುವ ಶ್ರೀ ಲೈರೈ ದೇವಿ ದೇವಾಲಯದಲ್ಲಿ ಇಂದು ಬೆಳಗಿನ ಜಾವ 3 ಗಂಟೆ ಸುಮಾರಿಗೆ ಈ ಕಾಲ್ತುಳಿತ ಸಂಭವಿಸಿದೆ.

ಪಣಜಿ: ಉತ್ತರ ಗೋವಾದ ಲೈರೈ ದೇವಿ ದೇವಸ್ಥಾನದಲ್ಲಿ ಶನಿವಾರ ಬೆಳಗ್ಗೆ ಸಂಭವಿಸಿದ ಕಾಲ್ತುಳಿತದಲ್ಲಿ ಕನಿಷ್ಠ ಆರು ಜನರು ಸಾವನ್ನಪ್ಪಿ, 70 ಕ್ಕೂ ಹೆಚ್ಚು ಜನ ಗಾಯಗೊಂಡ ಘಟನೆ ಬಗ್ಗೆ ನ್ಯಾಯಾಂಗ ತನಿಖೆ ನಡೆಸಲಾಗುವುದು ಎಂದು ಗೋವಾ ಮುಖ್ಯಮಂತ್ರಿ ಪ್ರಮೋದ್ ಸಾವಂತ್ ಹೇಳಿದ್ದಾರೆ.

ಪಣಜಿಯಿಂದ ಸುಮಾರು 40 ಕಿ.ಮೀ ದೂರದಲ್ಲಿರುವ ಶಿರ್ಗಾವೊ ಗ್ರಾಮದಲ್ಲಿರುವ ಶ್ರೀ ಲೈರೈ ದೇವಿ ದೇವಾಲಯದಲ್ಲಿ ಇಂದು ಬೆಳಗಿನ ಜಾವ 3 ಗಂಟೆ ಸುಮಾರಿಗೆ ಈ ಕಾಲ್ತುಳಿತ ಸಂಭವಿಸಿದೆ.

ವಾರ್ಷಿಕ ಉತ್ಸವಕ್ಕಾಗಿ ಸಾವಿರಾರು ಭಕ್ತರು ದೇವಾಲಯದ ಕಿರಿದಾದ ಹಾದಿಗಳಲ್ಲಿ ಸೇರುತ್ತಿದ್ದಾಗ ಈ ಕಾಲ್ತುಳಿತ ಸಂಭವಿಸಿದೆ.

ಇಂದು ಮಧ್ಯಾಹ್ನ ಈ ಕುರಿತು X ನಲ್ಲಿ ಪೋಸ್ಟ್ ಮಾಡಿದ ಸಿಎಂ, "ಶಿರ್ಗಾಂವ್ ಉತ್ಸವದಲ್ಲಿ ನಡೆದ ಘಟನೆಯನ್ನು ಕೂಲಂಕಷವಾಗಿ ತನಿಖೆ ಮಾಡಲು ನ್ಯಾಯಾಂಗ ತನಿಖೆ ನಡೆಸಲಾಗುವುದು. ಸಂಪೂರ್ಣ ಪರಿಸ್ಥಿತಿಯನ್ನು ಪರಿಶೀಲಿಸಲು ಮತ್ತು ಸೂಕ್ತ ಕ್ರಮ ಕೈಗೊಳ್ಳಲಾಗಿದೆಯೆ ಎಂದು ಖಚಿತಪಡಿಸಿಕೊಳ್ಳಲು ನಾನು ಶೀಘ್ರದಲ್ಲೇ ಉನ್ನತ ಮಟ್ಟದ ಸಭೆ ಕರೆಯುತ್ತೇನೆ" ಎಂದು ತಿಳಿಸಿದ್ದಾರೆ.

ಇದ್ದಕು ಮುನ್ನ ಘಟನಾ ಸ್ಥಳಕ್ಕೆ ಭೇಟಿ ನೀಡಿದ ನಂತರ ಸುದ್ದಿಗಾರರೊಂದಿಗೆ ಮಾತನಾಡಿದ ಸಾವಂತ್, ಘಟನೆಯ ಬಗ್ಗೆ ವಿವರವಾದ ತನಿಖೆ ನಡೆಸುವಂತೆ ಸೂಚಿಸಿದ್ದೇನೆ ಎಂದು ಹೇಳಿದ್ದರು.

"ನಾವು ತನಿಖಾ ವರದಿಯನ್ನು ಸಾರ್ವಜನಿಕವಾಗಿ ಬಹಿರಂಗಪಡಿಸುತ್ತೇವೆ" ಎಂದು ಗೋವಾ ಸಿಎಂ ತಿಳಿಸಿದ್ದಾರೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

Gaza Hospital Strike: ಹಮಾಸ್ ಸೋಲಿಸುವುದಷ್ಟೇ ನಮ್ಮ ಗುರಿ, ನಾಗರೀಕರನ್ನು ಗೌರವಿಸುತ್ತೇವೆ; ದಾಳಿ ಕುರಿತು ಮೊದಲ ಬಾರಿಗೆ ಇಸ್ರೇಲ್ ವಿಷಾದ

ವಿಧಾನಪರಿಷತ್'ಗೆ ನಾಮನಿರ್ದೇಶನ: ನಾಲ್ವರು MLC ಅಭ್ಯರ್ಥಿಗಳು ಹೆಸರು ಬದಲು, ಪಟ್ಟಿಯಲ್ಲಿ TNIE ಮೈಸೂರು ವಿಭಾಗದ ಮುಖ್ಯಸ್ಥನಿಗೆ ಸ್ಥಾನ

ಬಾನು ಮುಷ್ತಾಕ್‌ ದಸರಾ ಉದ್ಘಾಟನೆಗೆ ಆಕ್ಷೇಪ; ಮುಸ್ಲಿಂ ದ್ವೇಷ ಮನಸ್ಥಿತಿಯನ್ನು ಬದಿಗಿಟ್ಟು, ಸಂವಿಧಾನದ ಆಶಯ ಅರ್ಥ ಮಾಡಿಕೊಳ್ಳಿ: ಸಚಿವ ಹೆಚ್.ಸಿ.ಮಹದೇವಪ್ಪ

ಚಾಮುಂಡೇಶ್ವರಿ ದೇವಿ ಬಗ್ಗೆ ಗೌರವವಿದ್ದು, ಧಾರ್ಮಿಕ ಭಾವನೆಗಳ ಗೌರವಿಸುತ್ತೇನೆ; ಬಾನು ಮುಷ್ತಾಕ್

JC ರಸ್ತೆಯಲ್ಲಿ White-topping ಕಾಮಗಾರಿ: ಆ.30ರವರೆಗೆ ಭಾರಿ ಗಾತ್ರದ ವಾಹನಗಳ ಸಂಚಾರಕ್ಕೆ ನಿರ್ಬಂಧ

SCROLL FOR NEXT