ಪ್ರಧಾನಿ ಮೋದಿ,ಪಾಕ್ ಪ್ರಧಾನಿ ಸಾಂದರ್ಭಿಕ ಚಿತ್ರ 
ದೇಶ

Pahalgam terror attack: ಪಾಕಿಸ್ತಾನಕ್ಕೆ IMF ಸಾಲ; ಜಾಗತಿಕ ಮಟ್ಟದಲ್ಲಿ ಭಾರಿ ಹೊಡೆತ ನೀಡಲು ಭಾರತ ಮುಂದು!

ಅಂತಾರಾಷ್ಟ್ರೀಯ ಹಣಕಾಸು ನಿಧಿಯನ್ನು (ಐಎಂಎಫ್) ಒಳಗೊಳ್ಳುವ ಭಾರತದ ಪ್ರಯತ್ನವು ಪಾಕಿಸ್ತಾನವನ್ನು ರಾಜತಾಂತ್ರಿಕವಾಗಿ ಪ್ರತ್ಯೇಕಿಸುವ ರಾಜಕೀಯ ತಂತ್ರವಾಗಿದೆ ಎಂದು ಅಧಿಕಾರಿಗಳನ್ನು ಉಲ್ಲೇಖಿಸಿ ಎಕ್ಸ್‌ಪ್ರೆಸ್ ಟ್ರಿಬ್ಯೂನ್ ಶನಿವಾರ ಹೇಳಿದೆ.

ಇಸ್ಲಾಮಾಬಾದ್‌: ಪಹಲ್ಗಾಮ್ ಉಗ್ರರ ದಾಳಿ ಹಿನ್ನೆಲೆಯಲ್ಲಿ ಪಾಕಿಸ್ತಾನಕ್ಕೆ ಜಾಗತಿಕ ಮಟ್ಟದಲ್ಲಿ ಭಾರಿ ಹೊಡೆತ ನೀಡಲು ಭಾರತ ಯೋಜನೆ ಹಾಕಿಕೊಂಡಿದೆ. ಮುಂದಿನ ವಾರ ನಡೆಯಲಿರುವ ಐಎಂಎಫ್‌ನ ನಿರ್ಣಾಯಕ ಪರಿಶೀಲನಾ ಸಭೆ ಹಿನ್ನೆಲೆಯಲ್ಲಿ ಪಾಕಿಸ್ತಾನಕ್ಕೆ ಹಣಕಾಸು ನೆರವು ಕಾರ್ಯಕ್ರಮವನ್ನು ಪರಿಶೀಲಿಸಲು ಜಾಗತಿಕ ಸಾಲದಾತನಿಗೆ ಮನವಿ ಮಾಡುವುದಾಗಿ ಭಾರತ ಘೋಷಿಸುತ್ತಿದ್ದಂತೆ ಬೆಚ್ಚಿ ಬಿದ್ದಿರುವ ಪಾಕಿಸ್ತಾನ, ಇದು ರಾಜಕೀಯ ಪ್ರೇರಿತ ಎಂದು ಹೇಳಿದೆ.

ಅಂತಾರಾಷ್ಟ್ರೀಯ ಹಣಕಾಸು ನಿಧಿಯನ್ನು (ಐಎಂಎಫ್) ಒಳಗೊಳ್ಳುವ ಭಾರತದ ಪ್ರಯತ್ನವು ಪಾಕಿಸ್ತಾನವನ್ನು ರಾಜತಾಂತ್ರಿಕವಾಗಿ ಪ್ರತ್ಯೇಕಿಸುವ ರಾಜಕೀಯ ತಂತ್ರವಾಗಿದೆ ಎಂದು ಅಧಿಕಾರಿಗಳನ್ನು ಉಲ್ಲೇಖಿಸಿ ಎಕ್ಸ್‌ಪ್ರೆಸ್ ಟ್ರಿಬ್ಯೂನ್ ಶನಿವಾರ ಹೇಳಿದೆ.

ವಿಸ್ತೃತ ನಿಧಿ ಸೌಲಭ್ಯದ (EFF) ಮೊದಲ ಪರಿಶೀಲನೆಗಾಗಿ IMF ಕಾರ್ಯನಿರ್ವಾಹಕ ಮಂಡಳಿಯು ಮೇ 9 ರಂದು ಪಾಕಿಸ್ತಾನದ ಅಧಿಕಾರಿಗಳನ್ನು ಭೇಟಿ ಮಾಡಲು ನಿರ್ಧರಿಸಿದೆ. ಏಪ್ರಿಲ್ 22 ರಂದು ಪಹಲ್ಗಾಮ್ ನಲ್ಲಿ ಭೀಕರ ಉಗ್ರರ ದಾಳಿ ನಂತರ ನೆರೆಯ ರಾಷ್ಟ್ರವನ್ನು ರಾಜತಾಂತ್ರಿಕವಾಗಿ ಮೂಲೆಗುಂಪು ಮಾಡಲು ಭಾರತ ಪ್ರಯತ್ನಿಸುತ್ತಿರುವುದರಿಂದ, ಪಾಕಿಸ್ತಾನಕ್ಕೆ ನೀಡಲಾದ ಹಣ ಮತ್ತು ಸಾಲಗಳ ಬಗ್ಗೆ ಮರುಪರಿಶೀಲಿಸುವಂತೆ IMF ಸೇರಿದಂತೆ ಜಾಗತಿಕ ಸಂಸ್ಥೆಗಳಿಗೆ ಮನವಿ ಮಾಡುವುದಾಗಿ ಭಾರತ ಹೇಳಿದೆ.

ಪಹಲ್ಗಾಮ್ ದಾಳಿ ಹಿಂದೆ ಮೂವರು ಪಾಕಿಸ್ತಾನಿ ಪ್ರಜೆಗಳು ಸೇರಿದಂತೆ ಐವರು ಭಯೋತ್ಪಾದಕರನ್ನು ಅಧಿಕಾರಿಗಳು ಗುರುತಿಸಿದ್ದಾರೆ. ಆದರೆ ಪಾಕಿಸ್ತಾನ ಆರೋಪಗಳನ್ನು ತಿರಸ್ಕರಿಸಿದೆ ಮತ್ತು ನಿಷ್ಪಕ್ಷಪಾತ ಅಂತಾರಾಷ್ಟ್ರೀಯ ತನಿಖೆಗೆ ಕರೆ ನೀಡಿದೆ.

ಪಹಲ್ಗಾಮ್ ಭಯೋತ್ಪಾದಕ ದಾಳಿಯ ಹಿಂದಿನ ಭಯೋತ್ಪಾದಕರನ್ನು ಹುಡುಕಿ, ಹುಡುಕಿ ಶಿಕ್ಷೆಗೆ ಗುರಿಪಡಿಸುವುದಾಗಿ ಪ್ರಧಾನಿ ಮೋದಿ ಏಪ್ರಿಲ್ 24ರಂದು ಪ್ರತಿಜ್ಞೆ ಮಾಡಿದ್ದರು. ಏಪ್ರಿಲ್ 29 ರಂದು ಉನ್ನತ ರಕ್ಷಣಾ ಅಧಿಕಾರಿಗಳೊಂದಿಗೆ ನಡೆದ ಉನ್ನತ ಮಟ್ಟದ ಸಭೆಯಲ್ಲಿ, ಭಯೋತ್ಪಾದಕ ದಾಳಿಗೆ ಭಾರತದ ಪ್ರತಿಕ್ರಿಯೆಯ ವಿಧಾನ, ಗುರಿಗಳು ಮತ್ತು ಸಮಯವನ್ನು ನಿರ್ಧರಿಸಲು ಸಶಸ್ತ್ರ ಪಡೆಗಳಿಗೆ ಸಂಪೂರ್ಣ ಕಾರ್ಯಾಚರಣೆಯ ಸ್ವಾತಂತ್ರ್ಯ ನೀಡಲಾಗಿದೆ ಎನ್ನಲಾಗಿದೆ.

ಈ ಮಧ್ಯೆ ಕಳೆದ ವರ್ಷ ಪಡೆದುಕೊಂಡ ದೇಶದ 7 ಬಿಲಿಯನ್ ಅಮೆರಿಕನ್ ಡಾಲರ್ IMF ಹಣ ಸುರಕ್ಷಿತವಾಗಿದ್ದು, ಆರ್ಥಿಕ ಸ್ಥಿರತೆಯಲ್ಲಿ ನೆರವಾಗುತ್ತಿದೆ ಎಂದು ಪಾಕಿಸ್ತಾನದ ಹಣಕಾಸು ಸಚಿವಾಲಯದ ಸಲಹೆಗಾರರೊಬ್ಬರು ಶುಕ್ರವಾರ ದೃಢಪಡಿಸಿದ್ದಾರೆ ಎಂದು ಪತ್ರಿಕೆ ಉಲ್ಲೇಖಿಸಿದೆ.

ಇಸ್ಲಾಮಾಬಾದ್ ಮಾರ್ಚ್ 2025 ರಲ್ಲಿ ಹೆಚ್ಚುವರಿಯಾಗಿ 1.3 ಬಿಲಿಯನ್ ಡಾಲರ್ ಹವಾಮಾನ ಸ್ಥಿತಿಸ್ಥಾಪಕ ನಿಧಿಯನ್ನು ಪಡೆದುಕೊಂಡಿದೆ.ಈ ಕಾರ್ಯಕ್ರಮವು ಪಾಕಿಸ್ತಾನದ ಆತ್ಮವಿಶ್ವಾಸವನ್ನು ಸ್ಥಿರಗೊಳಿಸುತ್ತಿಲ್ಲ ಎಂದು ಹಣಕಾಸು ಸಲಹೆಗಾರ ಖುರ್ರಾಮ್ ಷೆಹ್ಜಾದ್ ಹೇಳಿದ್ದಾರೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

CM ಬದಲಾವಣೆ ನಾಲ್ಕರಿಂದ ಐದು ಜನರ ನಡುವೆ ನಡೆದ "ರಹಸ್ಯ ಒಪ್ಪಂದ": ಡಿಕೆಶಿ​ ಸ್ಫೋಟಕ ಹೇಳಿಕೆ

ವಿಶ್ವಕಪ್ ವಿಜೇತ ಕರ್ನಾಟಕದ ಅಂಧ ಕ್ರಿಕೆಟ್ ಆಟಗಾರ್ತಿಯರಿಗೆ ತಲಾ 10 ಲಕ್ಷ ರೂ ನಗದು, ಸರ್ಕಾರಿ ಉದ್ಯೋಗ: ಸಿಎಂ ಸಿದ್ದರಾಮಯ್ಯ ಘೋಷಣೆ

ನಾಯಕತ್ವ ಬದಲಾವಣೆ ಬಗ್ಗೆ ಸಾರ್ವಜನಿಕವಾಗಿ ಚರ್ಚಿಸಲು ಸಾಧ್ಯವಿಲ್ಲ: ಮಲ್ಲಿಕಾರ್ಜುನ ಖರ್ಗೆ

ಸ್ಮೃತಿ ಮಂಧಾನ ಮದುವೆ ಮುಂದೂಡಿಕೆಗೆ ಅಸಲಿ ಕಾರಣ? ಮತ್ತೊಂದು ಹೆಣ್ಣಿನೊಂದಿಗೆ ಮೋಹ, ನಂಬಿಕೆ ದ್ರೋಹ; ಬಯಲಾಯ್ತು ಪಲಾಶ್'ನ ಅಸಲಿ ರಂಗಿನಾಟ!

ಅಯೋಧ್ಯ ಧ್ವಜಾರೋಹಣ ನೆರವೇರಿಸಿದ್ದು ಹೇಗೆ?: ಸ್ವಿಚ್ ಅಥವಾ ಹಗ್ಗ ಬಳಸದ ಪ್ರಧಾನಿ; ಈ ಅದ್ಭುತ Video ನೋಡಿ..

SCROLL FOR NEXT