ಬಾಬಾ ರಾಮ್ ದೇವ್  
ದೇಶ

ಮತ್ತೆಂದೂ ಹೀಗೆ ಮಾಡೋಲ್ಲ: 'ಶರ್ಬತ್ ಜಿಹಾದ್' ಹೇಳಿಕೆ ಸಂಬಂಧ ಹೈಕೋರ್ಟ್‌ಗೆ ಬಾಬಾ ರಾಮದೇವ್ ಭರವಸೆ

ವಿವಾದಾತ್ಮಕ ಹೇಳಿಕೆಗಳಿಗೆ ಸಂಬಂಧಿಸಿದಂತೆ ರಾಮ್‌ದೇವ್ ಮತ್ತು ಅವರ ಪತಂಜಲಿ ಸಂಸ್ಥೆಯ ವಿರುದ್ಧ ಹಮ್‌ದರ್ದ್‌ ನ್ಯಾಷನಲ್‌ ಫೌಂಡೇಷನ್‌ ಆಫ್‌ ಇಂಡಿಯಾ ಕೋರ್ಟ್‌ ಮೇಟ್ಟಿಲೇರಿದೆ.

ನವದೆಹಲಿ: ಹಮ್‌ದರ್ದ್‌ ಸಂಸ್ಥೆಯ ವಿರುದ್ಧ ಆಕ್ಷೇಪಾರ್ಹ, ನಿಂದನಾತ್ಮಕ ಹೇಳಿಕೆ ನೀಡುವುದಿಲ್ಲ ಅಥವಾ ಸಾಮಾಜಿಕ ಮಾಧ್ಯಮದಲ್ಲಿ ಅಂಥ ಯಾವುದೇ ಪೋಸ್ಟ್‌ ಹಾಕುವುದಿಲ್ಲ, ಈ ರೀತಿ ಪುನಾರವರ್ತನೆ ಮಾಡುವುದಿಲ್ಲ ಎಂದು ಯೋಗಗುರು ರಾಮ್‌ದೇವ್‌ ಶುಕ್ರವಾರ ದೆಹಲಿ ಹೈಕೋರ್ಟ್‌ಗೆ ಭರವಸೆ ನೀಡಿದ್ದಾರೆ.

ನ್ಯಾಯಮೂರ್ತಿ ಅಮೃತ್‌ ಬನ್ಸಾಲ್ ಅವರು, ಈ ಕುರಿತು ಪ್ರಮಾಣ ಪತ್ರ ಸಲ್ಲಿಸುವಂತೆ ರಾಮ್‌ದೇವ್‌ ಪರ ವಕೀಲರಿಗೆ ತಿಳಿಸಿದರು. ಇದಕ್ಕೂ ಮೊದಲು ಮೇ 1ರಂದು ಅವರು, ಸಾಮಾಜಿಕ ಮಾಧ್ಯಮದಲ್ಲಿ ಪೋಸ್ಟ್‌ ಮಾಡಿದ್ದ ವಿವಾದಾತ್ಮಕ ಅಂಶವನ್ನು ಅಳಿಸಿಹಾಕುವಂತೆ ಸೂಚಿಸಿ ಅರ್ಜಿಯ ವಿಚಾರಣೆಯನ್ನು ಮೇ 9ಕ್ಕೆ ಮುಂದೂಡಿದರು.

ವಿವಾದಾತ್ಮಕ ಹೇಳಿಕೆಗಳಿಗೆ ಸಂಬಂಧಿಸಿದಂತೆ ರಾಮ್‌ದೇವ್ ಮತ್ತು ಅವರ ಪತಂಜಲಿ ಸಂಸ್ಥೆಯ ವಿರುದ್ಧ ಹಮ್‌ದರ್ದ್‌ ನ್ಯಾಷನಲ್‌ ಫೌಂಡೇಷನ್‌ ಆಫ್‌ ಇಂಡಿಯಾ ಕೋರ್ಟ್‌ ಮೇಟ್ಟಿಲೇರಿದೆ.

ಪತಂಜಲಿಯ ‘ಗುಲಾಬ್‌ ಶರ್ಬತ್‌’ ಜಾಹೀರಾತಿನಲ್ಲಿ, ಹಮ್‌ದರ್ದ್‌ ರೂಹ್‌ ಅಫ್ಜಾದಿಂದ ಸಂಪಾದಿಸಿದ ಹಣದಲ್ಲಿ ಮದರಸಾ ಮತ್ತು ಮಸೀದಿಗಳನ್ನು ನಿರ್ಮಿಸಲಾಗುತ್ತಿದೆ ಎಂಬುದಾಗಿ ಆರೋಪಿಸಲಾಗಿದೆ ಎಂದು ಹರ್ಮದ್‌ ಸಂಸ್ಥೆ ಆರೋಪಿಸಿದೆ. ರಾಮದೇವ್ ಅವರ ವಕೀಲರು ತಮ್ಮ ಕಕ್ಷಿದಾರರಿಗೆ "ನ್ಯಾಯಾಲಯದ ಬಗ್ಗೆ ಅಪಾರ ಗೌರವವಿದೆ" ಮತ್ತು ಅದರ ನಿರ್ದೇಶನಗಳನ್ನು ಪಾಲಿಸಲಾಗುವುದು ಎಂದು ತಿಳಿಸಿದರು.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಭಾರತದ ನೆಲದಲ್ಲೇ ಸ್ತ್ರೀದ್ವೇಷ ಪ್ರದರ್ಶಿಸಿದ ತಾಲೀಬಾನ್ ವಿದೇಶಾಂಗ ಸಚಿವ!; ಸುದ್ದಿಗೋಷ್ಠಿಗೆ ಮಹಿಳೆಯರಿಗಿಲ್ಲ ಪ್ರವೇಶ; ಭುಗಿಲೆದ್ದ ಅಸಮಾಧಾನ!

'ನನ್ನ ಪ್ರಶಸ್ತಿ ಟ್ರಂಪ್‌ಗೆ ಸಮರ್ಪಿತ...' Noble ಶಾಂತಿ ಪ್ರಶಸ್ತಿ ಗೆದ್ದ ಬೆನ್ನಲ್ಲೇ ಮಾರಿಯಾ ಶಾಕಿಂಗ್ ಹೇಳಿಕೆ!

ಭಾರತದ ಹಿತಾಸಕ್ತಿಗಳ ವಿರುದ್ಧ ಅಫ್ಘಾನಿಸ್ತಾನ ನೆಲ ಬಳಕೆಯಾಗಲ್ಲ, ನೀವು ಆಟ ಆಡಬೇಡಿ- ಪಾಕಿಸ್ತಾನಕ್ಕೆ ಅಫ್ಘಾನ್ ವಿದೇಶಾಂಗ ಸಚಿವರ ನೇರ ಎಚ್ಚರಿಕೆ!

ಚಿಕ್ಕಬಳ್ಳಾಪುರ: 'Miss U Chinna'; ಅಪ್ರಾಪ್ತ ಪ್ರೇಯಸಿಯ ದುಪ್ಪಟ್ಟದಿಂದಲೇ ಯುವಕ ನೇಣಿಗೆ ಶರಣು; Instagram Post Viral

ಬೆಂಗಳೂರಿನಲ್ಲೊಂದು ಹೃದಯ ವಿದ್ರಾವಕ ಘಟನೆ: ಇಬ್ಬರು ಮಕ್ಕಳನ್ನು ಕೊಂದು ತಾಯಿ ಆತ್ಮಹತ್ಯೆ

SCROLL FOR NEXT