ಬಾಬಾ ರಾಮ್ ದೇವ್  
ದೇಶ

ಮತ್ತೆಂದೂ ಹೀಗೆ ಮಾಡೋಲ್ಲ: 'ಶರ್ಬತ್ ಜಿಹಾದ್' ಹೇಳಿಕೆ ಸಂಬಂಧ ಹೈಕೋರ್ಟ್‌ಗೆ ಬಾಬಾ ರಾಮದೇವ್ ಭರವಸೆ

ವಿವಾದಾತ್ಮಕ ಹೇಳಿಕೆಗಳಿಗೆ ಸಂಬಂಧಿಸಿದಂತೆ ರಾಮ್‌ದೇವ್ ಮತ್ತು ಅವರ ಪತಂಜಲಿ ಸಂಸ್ಥೆಯ ವಿರುದ್ಧ ಹಮ್‌ದರ್ದ್‌ ನ್ಯಾಷನಲ್‌ ಫೌಂಡೇಷನ್‌ ಆಫ್‌ ಇಂಡಿಯಾ ಕೋರ್ಟ್‌ ಮೇಟ್ಟಿಲೇರಿದೆ.

ನವದೆಹಲಿ: ಹಮ್‌ದರ್ದ್‌ ಸಂಸ್ಥೆಯ ವಿರುದ್ಧ ಆಕ್ಷೇಪಾರ್ಹ, ನಿಂದನಾತ್ಮಕ ಹೇಳಿಕೆ ನೀಡುವುದಿಲ್ಲ ಅಥವಾ ಸಾಮಾಜಿಕ ಮಾಧ್ಯಮದಲ್ಲಿ ಅಂಥ ಯಾವುದೇ ಪೋಸ್ಟ್‌ ಹಾಕುವುದಿಲ್ಲ, ಈ ರೀತಿ ಪುನಾರವರ್ತನೆ ಮಾಡುವುದಿಲ್ಲ ಎಂದು ಯೋಗಗುರು ರಾಮ್‌ದೇವ್‌ ಶುಕ್ರವಾರ ದೆಹಲಿ ಹೈಕೋರ್ಟ್‌ಗೆ ಭರವಸೆ ನೀಡಿದ್ದಾರೆ.

ನ್ಯಾಯಮೂರ್ತಿ ಅಮೃತ್‌ ಬನ್ಸಾಲ್ ಅವರು, ಈ ಕುರಿತು ಪ್ರಮಾಣ ಪತ್ರ ಸಲ್ಲಿಸುವಂತೆ ರಾಮ್‌ದೇವ್‌ ಪರ ವಕೀಲರಿಗೆ ತಿಳಿಸಿದರು. ಇದಕ್ಕೂ ಮೊದಲು ಮೇ 1ರಂದು ಅವರು, ಸಾಮಾಜಿಕ ಮಾಧ್ಯಮದಲ್ಲಿ ಪೋಸ್ಟ್‌ ಮಾಡಿದ್ದ ವಿವಾದಾತ್ಮಕ ಅಂಶವನ್ನು ಅಳಿಸಿಹಾಕುವಂತೆ ಸೂಚಿಸಿ ಅರ್ಜಿಯ ವಿಚಾರಣೆಯನ್ನು ಮೇ 9ಕ್ಕೆ ಮುಂದೂಡಿದರು.

ವಿವಾದಾತ್ಮಕ ಹೇಳಿಕೆಗಳಿಗೆ ಸಂಬಂಧಿಸಿದಂತೆ ರಾಮ್‌ದೇವ್ ಮತ್ತು ಅವರ ಪತಂಜಲಿ ಸಂಸ್ಥೆಯ ವಿರುದ್ಧ ಹಮ್‌ದರ್ದ್‌ ನ್ಯಾಷನಲ್‌ ಫೌಂಡೇಷನ್‌ ಆಫ್‌ ಇಂಡಿಯಾ ಕೋರ್ಟ್‌ ಮೇಟ್ಟಿಲೇರಿದೆ.

ಪತಂಜಲಿಯ ‘ಗುಲಾಬ್‌ ಶರ್ಬತ್‌’ ಜಾಹೀರಾತಿನಲ್ಲಿ, ಹಮ್‌ದರ್ದ್‌ ರೂಹ್‌ ಅಫ್ಜಾದಿಂದ ಸಂಪಾದಿಸಿದ ಹಣದಲ್ಲಿ ಮದರಸಾ ಮತ್ತು ಮಸೀದಿಗಳನ್ನು ನಿರ್ಮಿಸಲಾಗುತ್ತಿದೆ ಎಂಬುದಾಗಿ ಆರೋಪಿಸಲಾಗಿದೆ ಎಂದು ಹರ್ಮದ್‌ ಸಂಸ್ಥೆ ಆರೋಪಿಸಿದೆ. ರಾಮದೇವ್ ಅವರ ವಕೀಲರು ತಮ್ಮ ಕಕ್ಷಿದಾರರಿಗೆ "ನ್ಯಾಯಾಲಯದ ಬಗ್ಗೆ ಅಪಾರ ಗೌರವವಿದೆ" ಮತ್ತು ಅದರ ನಿರ್ದೇಶನಗಳನ್ನು ಪಾಲಿಸಲಾಗುವುದು ಎಂದು ತಿಳಿಸಿದರು.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ದಾವಣಗೆರೆಯಲ್ಲಿ ಕಾಂಗ್ರೆಸ್ ಬೆನ್ನಿಗೆ ಚೂರಿ: ಸುರ್ಜೇವಾಲ ಕೈಸೇರಿದ ರಿಪೋರ್ಟ್; MLC ಅಬ್ದುಲ್ ಜಬ್ಬಾರ್ ರಾಜಿನಾಮೆ!

ಒಂದು ಸಲ ಅಧಿಕಾರ ಕೊಟ್ಟು ನೋಡಿ, ರಾಜ್ಯಕ್ಕೆ ಹಿಡಿದಿರೋ ಗ್ರಹಣ ಬಿಡಿಸ್ತೀನಿ: ಕುಮಾರಸ್ವಾಮಿ

ಹುಬ್ಬಳ್ಳಿ ಆಯ್ತು ಈಗ ಕೊಪ್ಪಳದಲ್ಲೂ Love Jihad: ಮುಸ್ತಫಾ ಮೊಬೈಲ್‌ನಲ್ಲಿ Hindu ಯುವತಿಯರ ಅಶ್ಲೀಲ ವಿಡಿಯೋಗಳು ಪತ್ತೆ!

ಮತ್ತೊಂದು ಗುಡ್ ನ್ಯೂಸ್: ಕದನ ವಿರಾಮದ ನಂತರ ಹಾರ್ಮುಜ್ ದಾಟಿದ ಎಲ್‌ಪಿಜಿ ಹೊತ್ತ ಭಾರತದ ಹಡಗು

ದಾವಣಗೆರೆಯಲ್ಲಿ ಪಕ್ಷ ವಿರೋಧಿ ಚಟುವಟಿಕೆ: ಸಿಎಂ ರಾಜಕೀಯ ಕಾರ್ಯದರ್ಶಿ ನಸೀರ್ ತಲೆದಂಡ, ಜಮೀರ್ ಸಚಿವ ಸ್ಥಾನಕ್ಕೂ ಕುತ್ತು?

SCROLL FOR NEXT