ಇಸ್ರೇಲ್ ವಿಮಾನ ನಿಲ್ದಾಣದಲ್ಲಿ ಕ್ಷಿಪಣಿ ದಾಳಿ Reuters
ದೇಶ

ಇಸ್ರೇಲ್ ನಲ್ಲಿ ಮತ್ತೆ Houthi ಉಗ್ರರ ಅಟ್ಟಹಾಸ: ವಿಮಾನ ನಿಲ್ದಾಣದಲ್ಲಿ Missile Strike; ಮೇ 6ರ ವರೆಗೆ Air India ವಿಮಾನಯಾನ ಬಂದ್

ಯೆಮೆನ್‌ನಿಂದ ಹಾರಿಸಲಾದ ಕ್ಷಿಪಣಿ ಬೆನ್ ಗುರಿಯನ್ ವಿಮಾನ ನಿಲ್ದಾಣದ ಮುಖ್ಯ ಟರ್ಮಿನಲ್ ಬಳಿ ಬಿದ್ದಿದ್ದು, ಈ ದಾಳಿಯಲ್ಲಿ ನಾಲ್ವರು ಗಾಯಗೊಂಡಿದ್ದಾರೆ.

ನವದೆಹಲಿ: ಇಸ್ರೇಲ್ ನಲ್ಲಿ ಮತ್ತೆ ಹೌತಿ ಬಂಡುಕೋರರ ಅಟ್ಟಹಾಸ ಮೆರೆದಿದ್ದು ಇಸ್ರೇಲ್ ನ ಬೆನ್ ಗುರಿಯನ್ ವಿಮಾನ ನಿಲ್ದಾಣದಲ್ಲಿ ಕ್ಷಿಪಣಿ ದಾಳಿ ನಡೆಸಿದ್ದಾರೆ. ಪರಿಣಾಮ ಭಾರತ ಮೇ 6ರ ವರೆಗೆ Air India ವಿಮಾನಯಾನ ಬಂದ್ ಮಾಡಿದೆ.

ಇಸ್ರೇಲ್ ನ ಬೆನ್ ಗುರಿಯನ್ ವಿಮಾನ ನಿಲ್ದಾಣದಲ್ಲಿಂದು ಬೆಳಗ್ಗೆ ಹೌತಿ ಬಂಡುಕೋರರು ಕ್ಷಿಪಣಿ ದಾಳಿ (Missile Attack) ನಡೆಸಿದೆ. ಯೆಮೆನ್‌ನಿಂದ ಹಾರಿಸಲಾದ ಕ್ಷಿಪಣಿ ಬೆನ್ ಗುರಿಯನ್ ವಿಮಾನ ನಿಲ್ದಾಣದ ಮುಖ್ಯ ಟರ್ಮಿನಲ್ ಬಳಿ ಬಿದ್ದಿದ್ದು, ಈ ದಾಳಿಯಲ್ಲಿ ನಾಲ್ವರು ಗಾಯಗೊಂಡಿದ್ದಾರೆ.

ಕ್ಷಿಪಣಿ ದಾಳಿಯು ವಿಮಾನ ನಿಲ್ದಾಣದಲ್ಲಿ ಕಾರ್ಯಾಚರಣೆಯನ್ನು ತಾತ್ಕಾಲಿಕವಾಗಿ ಸ್ಥಗಿತಗೊಳಿಸಿತು. ನಂತರ ಕಾರ್ಯಾಚರಣೆಗಳು ಪುನರಾರಂಭಗೊಂಡಿವೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ಹೌತಿ ಮಿಲಿಟರಿ ವಕ್ತಾರ ಯಾಹ್ಯಾ ಸಾರಿ ಬೆನ್ ಗುರಿಯನ್ ವಿಮಾನ ನಿಲ್ದಾಣವು "ಇನ್ನು ಮುಂದೆ ವಿಮಾನ ಪ್ರಯಾಣಕ್ಕೆ ಸುರಕ್ಷಿತವಲ್ಲ" ಎಂದು ಹೇಳಿದರು. ಇಸ್ರೇಲ್‌ನ ರಕ್ಷಣಾ ಸಚಿವ ಇಸ್ರೇಲ್ ಕಾಟ್ಜ್ ಬಲವಾದ ಪ್ರತಿಕ್ರಿಯೆಯನ್ನು ನೀಡುವುದಾಗಿ ಎಚ್ಚರಿಕೆ ನೀಡಿದ್ದಾರೆ. ಈ ವೇಳೆ "ನಮಗೆ ಯಾರಾದರೂ ಹೊಡೆದರೆ, ನಾವು ಅವರಿಗೆ ಏಳು ಪಟ್ಟು ಹೆಚ್ಚು ಹೊಡೆಯುತ್ತೇವೆ" ಎಂದು ಅವರು ಎಚ್ಚರಿಕೆ ನೀಡಿದರು.

ಇದೇ ವೇಳೆ ಕ್ಷಿಪಣಿಗಳು ಮತ್ತು ಡ್ರೋನ್ ದಾಳಿಗಳಿಂದ ಇಸ್ರೇಲ್ ಅನ್ನು ಗುರಿಯಾಗಿಸಿಕೊಂಡಿರುವ ಇರಾನ್ ಬೆಂಬಲಿತ ಹೌತಿ ಬಂಡುಕೋರರು, ನಾವು ಪ್ಯಾಲೆಸ್ಟೀನಿಯನ್ನರ ಜೊತೆಗಿದ್ದೇವೆ ಎಂದು ಹೇಳಿದ್ದಾರೆ.

ಮೇ 6ರ ವರೆಗೆ Air India ವಿಮಾನಯಾನ ಬಂದ್

ಪರಿಣಾಮ ಏರ್ ಇಂಡಿಯಾ ಸಂಸ್ಥೆಯು ಮುಂದಿನ 2 ದಿನಗಳ ಕಾಲ ಇಸ್ರೇಲ್ ರಾಜಧಾನಿ ಟೆಲ್ ಅವಿವ್‌ಗೆ ವಿಮಾನಯಾನವನ್ನ ಸ್ಥಗಿತಗೊಳಿಸಿದೆ. ಕ್ಷಿಪಣಿ ದಾಳಿಯ ಕುರಿತು ಲಭ್ಯವಾಗುತ್ತಿದ್ದಂತೆ ದೆಹಲಿಯಿಂದ ಟೆಲ್ ಅವಿವ್‌ಗೆ ಹೋಗುತ್ತಿದ್ದ ವಿಮಾನವನ್ನು ಅಬುಧಾಬಿಗೆ ತಿರುಗಿಸಲಾಯಿತು ಎಂದು ವಿಮಾನಯಾನ ಸಂಸ್ಥೆ ತಿಳಿಸಿವೆ.

ಇಸ್ರೇಲ್‌ಗೆ ಟಿಕೆಟ್ ಹೊಂದಿರುವವರಿಗೆ ವಿನಾಯಿತಿ ಅಥವಾ ವಿಮಾನಯಾನದ ಮರು ವೇಳಾಪಟ್ಟಿಯನ್ನು ನೀಡಲಾಗುವುದು ಎಂದು ಏರ್ ಇಂಡಿಯಾ ಮಾಹಿತಿ ನೀಡಿದೆ. ಏರ್ ಇಂಡಿಯಾದಲ್ಲಿ, ಗ್ರಾಹಕರು ಮತ್ತು ಸಿಬ್ಬಂದಿಯ ಸುರಕ್ಷತೆಗೆ ಪ್ರಮುಖ ಆದ್ಯತೆ ನೀಡಲಾಗುತ್ತದೆ. ಪ್ರಯಾಣಿಕರು ಮತ್ತು ಸಿಬ್ಬಂದಿಯ ಸುರಕ್ಷತೆಯ ಸಲುವಾಗಿ ಈ ನಿರ್ಧಾರ ತೆಗೆದುಕೊಳ್ಳಲಾಗಿದೆ ಎಂದು ಏರ್ ಇಂಡಿಯಾ ತಿಳಿಸಿದೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಜಮ್ಮುವಿನಾದ್ಯಂತ ಭಾರೀ ಮಳೆ: ಪ್ರವಾಹ, ಭೂಕುಸಿತದಿಂದ ಐವರು ಸಾವು; ಕೊಚ್ಚಿ ಹೋದ ಸೇತುವೆ; Video

Indian Navyಗೆ ಮತ್ತಷ್ಟು ಬಲ: INS Udaygiri, INS Himgiri ಯುದ್ಧನೌಕೆಗಳು ಸೇರ್ಪಡೆ!

ಬಿಹಾರ: ಇನ್ನು 40-50 ವರ್ಷ ಅಧಿಕಾರದಲ್ಲಿ ಇರ್ತೀವಿ ಅಂತಾ ಅಮಿತ್ ಶಾ ಗೆ ಹೇಗೆ ಗೊತ್ತು? ರಾಹುಲ್ ಗಾಂಧಿ

ಭ್ರಷ್ಟಾಚಾರ ಪ್ರಕರಣ: ಬಂಧಿತ ಶ್ರೀಲಂಕಾ ಮಾಜಿ ಅಧ್ಯಕ್ಷ ವಿಕ್ರಮಸಿಂಘೆಗೆ ಜಾಮೀನು

ನನ್ನ-ಕಾಂಗ್ರೆಸ್ ಮಧ್ಯೆ ಭಕ್ತ-ಭಗವಂತನ ಸಂಬಂಧ ಇದೆ; RSS ಗೀತೆ ಹಾಡಿದ್ದಕ್ಕೆ ನೋವಾಗಿದ್ದರೆ ಕ್ಷಮೆ ಕೇಳುತ್ತೇನೆ: ಡಿ.ಕೆ ಶಿವಕುಮಾರ್; Video

SCROLL FOR NEXT