ವಾಯುಸೇನೆ ಮುಖ್ಯಸ್ಥ ಏರ್ ಚೀಫ್ ಮಾರ್ಷಲ್ ಎ.ಪಿ. ಅಮರ್ ಪ್ರೀತ್ ಸಿಂಗ್  
ದೇಶ

Pahalgam terror attack: ಇಂಡೋ-ಪಾಕ್ ಉದ್ವಿಗ್ನತೆ; ಪ್ರಧಾನಿ ಮೋದಿ ಭೇಟಿಯಾದ ವಾಯುಸೇನೆ ಮುಖ್ಯಸ್ಥ

ನೌಕಾಪಡೆಯ ಮುಖ್ಯಸ್ಥ ಅಡ್ಮಿರಲ್ ದಿನೇಶ್ ಕೆ ತ್ರಿಪಾಠಿ ಅವರು ಶನಿವಾರ ಪ್ರಧಾನಿ ಮೋದಿ ಅವರನ್ನು ರಾಷ್ಟ್ರ ರಾಜಧಾನಿ ನವದೆಹಲಿಯ ಲೋಕ ಕಲ್ಯಾಣ್ ಮಾರ್ಗದ ನಿವಾಸದಲ್ಲಿ ಭೇಟಿಯಾಗಿದ್ದರು.

ನವದೆಹಲಿ: ಪಹಲ್ಗಾಮ್ ಉಗ್ರರ ದಾಳಿ ಬೆನ್ನಲ್ಲೇ ಭಾರತ ಮತ್ತು ಪಾಕಿಸ್ತಾನ ನಡುವಿನ ಉದ್ವಿಗ್ನತೆ ಹೆಚ್ಚಾಗಿದ್ದು, ಇದರ ನಡುವಲ್ಲೇ ವಾಯುಸೇನೆ ಮುಖ್ಯಸ್ಥ ಏರ್ ಚೀಫ್ ಮಾರ್ಷಲ್ ಎ.ಪಿ. ಅಮರ್ ಪ್ರೀತ್ ಸಿಂಗ್ ಅವರು ಭಾನುವಾರ ಪ್ರಧಾನಮಂತ್ರಿ ನರೇಂದ್ರ ಮೋದಿ ಅವರನ್ನು ಭೇಟಿಯಾಗಿದ್ದಾರೆಂದು ಮೂಲಗಳಿಂದ ತಿಳಿದುಬಂದಿದೆ.

ನೌಕಾಪಡೆಯ ಮುಖ್ಯಸ್ಥ ಅಡ್ಮಿರಲ್ ದಿನೇಶ್ ಕೆ ತ್ರಿಪಾಠಿ ಅವರು ಶನಿವಾರ ಪ್ರಧಾನಿ ಮೋದಿ ಅವರನ್ನು ರಾಷ್ಟ್ರ ರಾಜಧಾನಿ ನವದೆಹಲಿಯ ಲೋಕ ಕಲ್ಯಾಣ್ ಮಾರ್ಗದ ನಿವಾಸದಲ್ಲಿ ಭೇಟಿಯಾಗಿದ್ದರು. ಇದರ ಬೆನ್ನಲ್ಲೇ ವಾಯುಸೇನೆ ಮುಖ್ಯಸ್ಥರು ಪ್ರಧಾನಮಂತ್ರಿಗಳನ್ನು ಭೇಟಿ ಮಾಡಿದ್ದಾರೆ.

ಪಹಲ್ಗಾಮ್‌ನಲ್ಲಿ ನಡೆದ ಭಯೋತ್ಪಾದಕ ದಾಳಿಯಲ್ಲಿ 26 ಪ್ರವಾಸಿಗರು ಸಾವಿಗೀಡಾಗಿದ್ದು, ಈ ಘಟನೆಗೆ ಭಾರತವನ್ನು ಕೆರಳುವಂತೆ ಮಾಡಿದೆ.

ಉಗ್ರರ ದಾಳಿಯನ್ನು ಗಂಭೀರವಾಗಿ ಪರಿಗಣಿಸಿರುವ ಭಾರತ ಸರ್ಕಾರ ದಾಳಿ ನಡೆದ ಮರುದಿನವೇ ಸಂಪುಟ ಸಮಿತಿಯ (ಸಿಸಿಎಸ್‌) ಸಭೆಯ ನಡೆಸಿತ್ತು.

ಉಗ್ರ ದಾಳಿಗೆ ಬಲವಾಗಿ ಪ್ರತಿಕ್ರಿಯಿಸಲು ತಂತ್ರ, ಗುರಿಗಳು ಮತ್ತು ಸಮಯವನ್ನು ನಿರ್ಧರಿಸಲು ಸರ್ಕಾರವು ಈ ಸಭೆ ನಡೆಸಿದ್ದು, ಸಭೆಯಲ್ಲಿ ಸಶಸ್ತ್ರ ಪಡೆಗಳಿಗೆ ಸಂಪೂರ್ಣ ಕಾರ್ಯಾಚರಣೆಯ ಪರಮಾಧಿಕಾರವನ್ನು ನೀಡಿತ್ತು.

ಭಯೋತ್ಪಾದಕ ದಾಳಿಯ ರೂವಾರಿಗಳ ವಿರುದ್ಧ ಸರ್ಕಾರವು ತೆಗೆದುಕೊಳ್ಳುವ ಯಾವುದೇ ಕ್ರಮಕ್ಕೆ ಸಂಪೂರ್ಣ ಬೆಂಬಲ ನೀಡುತ್ತೇವೆಂದು ವಿರೋಧ ಪಕ್ಷಗಳು ತಿಳಿಸಿದ್ದವು.

ಜಮ್ಮು ಮತ್ತು ಕಾಶ್ಮೀರದಲ್ಲಿ ಚುನಾವಣೆಗಳು ಯಶಸ್ವಿಯಾಗಿ ನಡೆದ ನಂತರ ಆರ್ಥಿಕ ಬೆಳವಣಿಗೆ ಮತ್ತು ಅಭಿವೃದ್ಧಿ ಕಾರ್ಯಗಳು ಉತ್ತಮವಾದ ಹಿನ್ನೆಲೆಯಲ್ಲಿ ಉಗ್ರರ ದಾಳಿ ನಡೆಸಲಾಗಿದೆ ಎಂದು ಮೂಲಗಳು ತಿಳಿಸಿವೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ರಾಜ್ಯ ಸರ್ಕಾರದ 'ದ್ವೇಷ ಭಾಷಣ' ಮಸೂದೆಗೆ ಅಮಿತ್ ಶಾ ಅಡ್ಡಗಾಲು; ಅಸ್ತಿತ್ವದಲ್ಲಿರುವ ಕಾನೂನೇ ಸಾಕು: ಕೇಂದ್ರ

Mekedatu row: ಕರ್ನಾಟಕದ DPR ತಿರಸ್ಕರಿಸಿ; ಪ್ರಧಾನಿ ಮೋದಿಗೆ ತಮಿಳುನಾಡು ಸಿಎಂ ವಿಜಯ್ ಮನವಿ

IPL 2026: ನಾವೇನು ಸಿನಿಮಾ ಸ್ಟಾರ್‌ಗಳಲ್ಲ: ವಿಮಾನ ನಿಲ್ಗಾಣದಲ್ಲಿ Riyan Parag ಗರಂ, ವೈಭವ್ ಸೂರ್ಯವಂಶಿ ಶಾಕ್! Video

Video: 'ಕಾಂತಾರ' ಕೆಂಗಣ್ಣಿಗೆ ಗುರಿ, ಬಾಲಿವುಡ್​ನಿಂದ ಬ್ಯಾನ್; ಚಾಮುಂಡೇಶ್ವರಿಗೆ ತಲೆಬಾಗಿ ಕ್ಷಮೆಯಾಚಿಸಿದ ರಣವೀರ್ ಸಿಂಗ್!

IPL 2026: RCB vs GT ನಡುವಿನ ಕ್ವಾಲಿಫೈಯರ್ ಪಂದ್ಯಕ್ಕೆ ಮಳೆ ಆತಂಕ, ರಿಸರ್ವ್ ಡೇ ಕೂಡ ಇಲ್ಲ.. ಪಂದ್ಯ ರದ್ದಾದರೆ ಯಾರು ಫೈನಲ್ ಗೆ?

SCROLL FOR NEXT