ನೌಕಾಪಡೆ ಅಧಿಕಾರಿ ಪತ್ನಿ ಹಿಮಾಂಶಿ ನರ್ವಾಲ್ 
ದೇಶ

Pahalgam terror attack: 'ಮುಸ್ಲಿಮರು-ಕಾಶ್ಮೀರಿಗಳ ವಿರುದ್ಧ ದ್ವೇಷ ಬೇಡ' ಎಂದ ನೌಕಾಪಡೆ ಅಧಿಕಾರಿ ಪತ್ನಿ ಟ್ರೋಲ್; NCW ಕಿಡಿ

ಹಿಮಾಂಶಿ ಅವರು ತಮ್ಮ ಅಭಿಪ್ರಾಯಗಳನ್ನು ಹೇಳಿದ್ದಾರೆ. ಅದಕ್ಕಾಗಿ ಅವರನ್ನು ಗುರಿಯಾಗಿಸಿ ಟ್ರೋಲ್ ಮಾಡುವುದು ಖಂಡನೀಯ ಮತ್ತು ದುರದೃಷ್ಟಕರ ಎಂದು ಮಹಿಳಾ ಆಯೋಗ ಹೇಳಿದೆ.

ನವದೆಹಲಿ: ಏಪ್ರಿಲ್ 22ರಂದು ಜಮ್ಮು ಮತ್ತು ಕಾಶ್ಮೀರದ ಪಹಲ್ಗಾಮ್‌ನಲ್ಲಿ ನಡೆದ ಭೀಕರ ಭಯೋತ್ಪಾದಕ ದಾಳಿಯಲ್ಲಿ ಸಾವಿಗೀಡಾದ ನೌಕಾಪಡೆಯ ಅಧಿಕಾರಿ ಲೆಫ್ಟಿನೆಂಟ್ ವಿನಯ್ ನರ್ವಾಲ್ ಅವರ ಪತ್ನಿ ಹಿಮಾಂಶಿ ನರ್ವಾಲ್ ಅವರನ್ನು ಟ್ರೋಲ್ ಮಾಡಲಾಗುತ್ತಿದ್ದು, ರಾಷ್ಟ್ರೀಯ ಮಹಿಳಾ ಆಯೋಗ (NCW) ಅವರ ಬೆನ್ನಿಗೆ ನಿಂತಿದೆ.

'ಮುಸ್ಲಿಮರು ಅಥವಾ ಕಾಶ್ಮೀರಿಗಳ ವಿರುದ್ಧ ಜನರು ದ್ವೇಷ ಸಾಧಿಸಬಾರದು' ಎಂಬ ಹಿಮಾಂಶಿ ನರ್ವಾಲ್ ಅವರ ಹೇಳಿಕೆಗಳು ಟ್ರೋಲ್‌ಗೆ ಗುರಿಯಾಗಿವೆ. ಹಿಮಾಂಶಿ ಅವರು ತಮ್ಮ ಅಭಿಪ್ರಾಯಗಳನ್ನು ಹೇಳಿದ್ದಾರೆ. ಅದಕ್ಕಾಗಿ ಅವರನ್ನು ಗುರಿಯಾಗಿಸಿ ಟ್ರೋಲ್ ಮಾಡುವುದು ಖಂಡನೀಯ ಮತ್ತು ದುರದೃಷ್ಟಕರ ಎಂದು ಮಹಿಳಾ ಆಯೋಗ ಹೇಳಿದೆ.

'ಜಮ್ಮು ಮತ್ತು ಕಾಶ್ಮೀರದ ಪಹಲ್ಗಾಮ್‌ನಲ್ಲಿ ನಡೆದ ಭಯೋತ್ಪಾದಕ ದಾಳಿಯಲ್ಲಿ ಅನೇಕ ನಾಗರಿಕರು ಸಾವಿಗೀಡಾದರು. ಈ ಪೈಕಿ ಲೆಫ್ಟಿನೆಂಟ್ ವಿನಯ್ ನರ್ವಾಲ್ ಅವರ ಧರ್ಮ ಯಾವುದೆಂದು ಕೇಳಲಾಯಿತು ಮತ್ತು ನಂತರ ಗುಂಡು ಹಾರಿಸಲಾಯಿತು. ಈ ದಾಳಿಯಿಂದ ಇಡೀ ದೇಶವು ನೋವು ಅನುಭವಿಸಿದೆ ಮತ್ತು ಆಕ್ರೋಶಗೊಂಡಿದೆ. ಲೆಫ್ಟಿನೆಂಟ್ ವಿನಯ್ ನರ್ವಾಲ್ ಅವರ ಮರಣದ ನಂತರ, ಅವರ ಪತ್ನಿ ಹಿಮಾಂಶಿ ನರ್ವಾಲ್ ಅವರನ್ನು ಸಾಮಾಜಿಕ ಮಾಧ್ಯಮದಲ್ಲಿ ಟೀಕಿಸುತ್ತಿರುವುದು ಅತ್ಯಂತ ಖಂಡನೀಯ ಮತ್ತು ದುರದೃಷ್ಟಕರ. ಮಹಿಳೆ ತಮ್ಮ ಅಭಿಪ್ರಾಯ ವ್ಯಕ್ತಪಡಿಸಿರುವುದಕ್ಕೆ ಅವರ ವೈಯಕ್ತಿಕ ಜೀವನದ ಬಗ್ಗೆ ಟ್ರೋಲ್ ಮಾಡುವುದು ಸ್ವೀಕಾರಾರ್ಹವಲ್ಲ ಎಂದು ಎನ್‌ಸಿಡಬ್ಲ್ಯು ಎಕ್ಸ್‌ನಲ್ಲಿ ಪೋಸ್ಟ್‌ನಲ್ಲಿ ತಿಳಿಸಿದೆ.

'ಯಾವುದೇ ವಿಚಾರಕ್ಕೆ ಭಿನ್ನಾಭಿಪ್ರಾಯ ವ್ಯಕ್ತಪಡಿಸುವಾಗ ಯಾವಾಗಲೂ ಸಭ್ಯ ಮತ್ತು ಸಾಂವಿಧಾನಿಕ ಮಿತಿಯೊಳಗೆ ವ್ಯಕ್ತಪಡಿಸಬೇಕು. ರಾಷ್ಟ್ರೀಯ ಮಹಿಳಾ ಆಯೋಗವು ಪ್ರತಿಯೊಬ್ಬ ಮಹಿಳೆಯ ಗೌರವ ಮತ್ತು ಘನತೆಯನ್ನು ರಕ್ಷಿಸಲು ಬದ್ಧವಾಗಿದೆ' ಎಂದು ಹೇಳಿದೆ.

NCW ಅಧ್ಯಕ್ಷೆ ವಿಜಯಾ ರಹತ್ಕರ್ ಅವರು X ನಲ್ಲಿ ಪ್ರತ್ಯೇಕವಾಗಿ ಪೋಸ್ಟ್ ಮಾಡಿದ್ದು, 'ಕೆಲವು ಜನರಿಗೆ ಹಿಮಾಂಶಿ ನರ್ವಾಲ್ ಅವರ ಹೇಳಿಕೆ ಇಷ್ಟವಾಗದಿರಬಹುದು. ಆದರೆ ಅವರ ಅಭಿಪ್ರಾಯಗಳಿಗಾಗಿ ಅವರನ್ನು ಟ್ರೋಲ್ ಮಾಡುವುದು ಮತ್ತು ವೈಯಕ್ತಿಕ ಹೇಳಿಕೆಗಳೊಂದಿಗೆ ಗುರಿಯಾಗಿಸುವುದು ಸರಿಯಲ್ಲ' ಎಂದಿದ್ದಾರೆ.

ಭಯೋತ್ಪಾದಕ ದಾಳಿಗೆ ಕೆಲವು ದಿನಗಳ ಮೊದಲು ವಿವಾಹವಾದ ನವ ದಂಪತಿ ಹನಿಮೂನ್‌ಗಾಗಿ ಕಾಶ್ಮೀರಕ್ಕೆ ಭೇಟಿ ನೀಡಿದ್ದರು. ಈ ವೇಳೆ 26 ವರ್ಷದ ನೌಕಾಪಡೆಯ ಅಧಿಕಾರಿ ಸೇರಿದಂತೆ ಇತರ 26 ಜನರು ಪಹಲ್ಗಾಮ್‌ನ ಬೈಸರನ್ ಕಣಿವೆಯಲ್ಲಿ ನಡೆದ ಉಗ್ರರ ದಾಳಿಯಲ್ಲಿ ಸಾವಿಗೀಡಾಗಿದ್ದರು.

ಪತಿಯ ಮೃತದೇಹದ ಪಕ್ಕದಲ್ಲಿ ಹಿಮಾಂಶಿ ನರ್ವಾಲ್ ಕುಳಿತಿದ್ದ ಹೃದಯವಿದ್ರಾವಕ ಫೋಟೊಗಳು, ಇಡೀ ರಾಷ್ಟ್ರವನ್ನು ಬೆಚ್ಚಿಬೀಳಿಸಿತ್ತು.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಸಮಸ್ತ ಜನರಿಗೆ ಸುಗಮ ಆಡಳಿತ, ಶುದ್ಧ ನೀರಿನ ಪೂರೈಕೆ: ಸ್ವಚ್ಚತೆ- ಸಂಚಾರ ವ್ಯವಸ್ಥೆಗೆ ಸಿಎಂ ಸಿದ್ದರಾಮಯ್ಯ ಕಟ್ಟಪ್ಪಣೆ

ಸಿದ್ದರಾಮಯ್ಯ ಮೇಲೆ ತೂಗುಗತ್ತಿ: ಅಧಿಕಾರದಲ್ಲಿ ಉಳಿಯಲು ಸಂಪುಟ ಪುನಾರಚನೆ ಕಸರತ್ತು; ಬಿಹಾರ-ಕೇರಳ ಚುನಾವಣೆಯತ್ತ ಡಿಕೆಶಿ ಚಿತ್ತ!

ವೀರೇಂದ್ರ ಪಪ್ಪಿ ಕರ್ಮಕಾಂಡ ನೋಡುತ್ತಿದ್ದರೆ CM- DCM ಇನ್ಯಾವ ಪರಿ ಲೂಟಿ ಮಾಡಿ ಹೈಕಮಾಂಡ್ ಗೆ ಕಪ್ಪ ನೀಡುತ್ತಿರಬೇಡಾ?

ಈ ಬಾರಿ ನಾನು ಸಚಿವನಾಗುವ ಭರವಸೆ ಇದೆ: ಸಂಪುಟ ವಿಸ್ತರಣೆಯೇ ನವೆಂಬರ್ ಕ್ರಾಂತಿಯಿರಬಹುದು; ಸಲೀಂ ಅಹ್ಮದ್

BDA ಯೋಜನಾ ಪ್ರಾಧಿಕಾರದ ಜವಾಬ್ದಾರಿ ಹಸ್ತಾಂತರ: GBA ವಿರೋಧಿಸುವವರು ಪಾಲಿಕೆ ಚುನಾವಣೆ ಬಹಿಷ್ಕರಿಸಲಿ; ಡಿಕೆಶಿ ಸವಾಲು

SCROLL FOR NEXT