ಸಾಂದರ್ಭಿಕ ಚಿತ್ರ Express Phot | Allen
ದೇಶ

ಗುಜರಾತ್: ಮಳೆ ಸಂಬಂಧಿತ ಅನಾಹುತ; 14 ಮಂದಿ ಸಾವು, ಮುಂದಿನ ಕೆಲವು ದಿನ ಭಾರಿ ಮಳೆಯ ಮುನ್ಸೂಚನೆ

ಮುಂದಿನ ಕೆಲವು ದಿನಗಳಲ್ಲಿ ರಾಜ್ಯದಾದ್ಯಂತ 50-60 ಕಿಮೀ ವೇಗದಲ್ಲಿ ಗುಡುಗು ಸಹಿತ ಬೀರುಗಾಳಿ ಬೀಸಲಿದೆ ಎಂದು ಭಾರತೀಯ ಹವಾಮಾನ ಇಲಾಖೆ (IMD)ಮುನ್ಸೂಚನೆ ನೀಡಿದೆ.

ಅಹಮದಾಬಾದ್: ಗುಜರಾತ್‌ನ ಹಲವು ಭಾಗಗಳಲ್ಲಿ ಗುಡುಗು, ಬಿರುಗಾಳಿ ಸಹಿತ ಮಳೆ ಸಂಬಂಧಿತ ಘಟನೆಗಳಲ್ಲಿ ಕನಿಷ್ಠ 14 ಜನರು ಸಾವನ್ನಪ್ಪಿದ್ದಾರೆ ಎಂದು ಅಧಿಕಾರಿಗಳು ಮಂಗಳವಾರ ತಿಳಿಸಿದ್ದಾರೆ. ಮುಂದಿನ ಕೆಲವು ದಿನಗಳಲ್ಲಿ ರಾಜ್ಯದಾದ್ಯಂತ 50-60 ಕಿಮೀ ವೇಗದಲ್ಲಿ ಗುಡುಗು ಸಹಿತ ಬೀರುಗಾಳಿ ಬೀಸಲಿದೆ ಎಂದು ಭಾರತೀಯ ಹವಾಮಾನ ಇಲಾಖೆ (IMD)ಮುನ್ಸೂಚನೆ ನೀಡಿದೆ.

ಕಳೆದ 24 ಗಂಟೆಗಳಲ್ಲಿ ರಾಜ್ಯದ 253 ತಾಲೂಕುಗಳ ಪೈಕಿ 168 ತಾಲೂಕುಗಳಲ್ಲಿ ಅಕಾಲಿಕ ಮಳೆಯಾಗಿದೆ, ಖೇಡಾ, ಗಾಂಧಿನಗರ, ಮೆಹ್ಸಾನಾ ಮತ್ತು ವಡೋದರಾ ಜಿಲ್ಲೆಗಳಲ್ಲಿ 25 ರಿಂದ 40 ಮಿಮೀ ಮಳೆಯಾಗಿದೆ ಎಂದು ರಾಜ್ಯ ತುರ್ತು ಕಾರ್ಯಾಚರಣೆ ಕೇಂದ್ರ (ಎಸ್‌ಇಒಸಿ) ಹೇಳಿಕೆಯಲ್ಲಿ ತಿಳಿಸಿದೆ.

ಬಿರು ಗಾಳಿಗೆ ಮರಗಳು, ಹೋರ್ಡಿಂಗ್‌ಗಳು ನೆಲಕ್ಕುರಳಿದ್ದು, ಹಲವು ಜಿಲ್ಲೆಗಳಲ್ಲಿ ಮನೆಗಳು ಕುಸಿದುಬಿದ್ದು, ಹಲವರು ಗಾಯಗೊಂಡಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ಸೋಮವಾರ ಗುಜರಾತ್‌ನ ಅಹಮದಾಬಾದ್, ಆನಂದ್, ಖೇಡಾ, ದಾಹೋದ್, ಅರಾವಳಿ ಮತ್ತು ವಡೋದರ ಜಿಲ್ಲೆಗಳಲ್ಲಿ ಸಿಡಿಲು, ವಿದ್ಯುತ್ ಆಘಾತ ಮತ್ತು ಮರ, ಮನೆಗಳು ಕುಸಿದು ಬಿದ್ದಿದ್ದು, ಮಳೆ ಸಂಬಂಧಿತ ಘಟನೆಗಳಲ್ಲಿ ಹದಿಮೂರು ಜನರು ಸಾವನ್ನಪ್ಪಿದ್ದಾರೆ ಮತ್ತು ಭಾನುವಾರ ಅಹಮದಾಬಾದ್‌ನ ವಿರಾಮಗಾಮ್‌ನಲ್ಲಿ ಸಿಡಿಲು ಬಡಿದು ಒಬ್ಬರು ಸಾವನ್ನಪ್ಪಿದ್ದಾರೆ.

ಖೇಡಾ ಜಿಲ್ಲೆಯಲ್ಲಿ ನಾಲ್ವರು ಸಾವನ್ನಪ್ಪಿದ್ದರೆ, ವಡೋದರಾದಲ್ಲಿ ಮೂರು, ಅಹಮದಾಬಾದ್, ದಾಹೋಡ್ ಮತ್ತು ಅರಾವಳಿಯಲ್ಲಿ ಇಬ್ಬರು, ಆನಂದ್ ಜಿಲ್ಲೆಯಲ್ಲಿ ಒಬ್ಬರು ಸಾವನ್ನಪ್ಪಿರುವುದಾಗಿ ವರದಿಯಾಗಿದೆ. ಕೆಲವು ಜಿಲ್ಲೆಗಳಲ್ಲಿ

ಮುಂದಿನ ಮೂರು ದಿನಗಳಲ್ಲಿ ಭಾರೀ ಮಳೆಯಾಗುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ ಹೇಳಿದೆ

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಓಮನ್ ಕರಾವಳಿಯಲ್ಲಿ 11 ಭಾರತೀಯರಿದ್ದ ಹಡಗಿನ ಮೇಲೆ ದಾಳಿಗೆ ಭಾರತ ಖಂಡನೆ; 10 ಜನರ ರಕ್ಷಣೆ, ಓರ್ವ ನಾಪತ್ತೆ

ಅಸ್ಸಾಂ: ರೋಡ್ ರೋಲರ್ ಬಳಸಿ ಸೀಜ್ ಮಾಡಿದ್ದ 472 ಕೋಟಿ ರೂ. ಮೌಲ್ಯದ ಡ್ರಗ್ಸ್ ನಾಶಪಡಿಸಿದ ಸಿಎಂ ಹಿಮಂತ ಬಿಸ್ವಾ ಶರ್ಮಾ! Video

Iranಗೆ ಅಮೆರಿಕಾ ಬಿಗ್ ಶಾಕ್: 140 ಗುರಿಗಳ ಮೇಲೆ ಭಾರೀ ವೈಮಾನಿಕ ದಾಳಿ; Gulf ರಾಷ್ಟ್ರಗಳತ್ತ ಕ್ಷಿಪಣಿ ಹಾರಿಸಿ Tehran ತಿರುಗೇಟು..!

KSRTC ಬಸ್‌ನಲ್ಲಿ ಯುವತಿಗೆ ಲೈಂಗಿಕ ಕಿರುಕುಳ: ಆರೋಪಿಗೆ ಧರ್ಮದೇಟು, ವಿಡಿಯೋ ವೈರಲ್

ಬಂಗಾಳ ಕೊಲ್ಲಿಯಲ್ಲಿ ಭೂಕಂಪ: ವಿಶಾಖಪಟ್ಟಣಂನಲ್ಲೂ ನಡುಗಿದ ಭೂಮಿ, ರಿಕ್ಟರ್ ಮಾಪಕದಲ್ಲಿ 4.5 ತೀವ್ರತೆ ದಾಖಲು..!