ಸಾಂದರ್ಭಿಕ ಚಿತ್ರ Express Phot | Allen
ದೇಶ

ಗುಜರಾತ್: ಮಳೆ ಸಂಬಂಧಿತ ಅನಾಹುತ; 14 ಮಂದಿ ಸಾವು, ಮುಂದಿನ ಕೆಲವು ದಿನ ಭಾರಿ ಮಳೆಯ ಮುನ್ಸೂಚನೆ

ಮುಂದಿನ ಕೆಲವು ದಿನಗಳಲ್ಲಿ ರಾಜ್ಯದಾದ್ಯಂತ 50-60 ಕಿಮೀ ವೇಗದಲ್ಲಿ ಗುಡುಗು ಸಹಿತ ಬೀರುಗಾಳಿ ಬೀಸಲಿದೆ ಎಂದು ಭಾರತೀಯ ಹವಾಮಾನ ಇಲಾಖೆ (IMD)ಮುನ್ಸೂಚನೆ ನೀಡಿದೆ.

ಅಹಮದಾಬಾದ್: ಗುಜರಾತ್‌ನ ಹಲವು ಭಾಗಗಳಲ್ಲಿ ಗುಡುಗು, ಬಿರುಗಾಳಿ ಸಹಿತ ಮಳೆ ಸಂಬಂಧಿತ ಘಟನೆಗಳಲ್ಲಿ ಕನಿಷ್ಠ 14 ಜನರು ಸಾವನ್ನಪ್ಪಿದ್ದಾರೆ ಎಂದು ಅಧಿಕಾರಿಗಳು ಮಂಗಳವಾರ ತಿಳಿಸಿದ್ದಾರೆ. ಮುಂದಿನ ಕೆಲವು ದಿನಗಳಲ್ಲಿ ರಾಜ್ಯದಾದ್ಯಂತ 50-60 ಕಿಮೀ ವೇಗದಲ್ಲಿ ಗುಡುಗು ಸಹಿತ ಬೀರುಗಾಳಿ ಬೀಸಲಿದೆ ಎಂದು ಭಾರತೀಯ ಹವಾಮಾನ ಇಲಾಖೆ (IMD)ಮುನ್ಸೂಚನೆ ನೀಡಿದೆ.

ಕಳೆದ 24 ಗಂಟೆಗಳಲ್ಲಿ ರಾಜ್ಯದ 253 ತಾಲೂಕುಗಳ ಪೈಕಿ 168 ತಾಲೂಕುಗಳಲ್ಲಿ ಅಕಾಲಿಕ ಮಳೆಯಾಗಿದೆ, ಖೇಡಾ, ಗಾಂಧಿನಗರ, ಮೆಹ್ಸಾನಾ ಮತ್ತು ವಡೋದರಾ ಜಿಲ್ಲೆಗಳಲ್ಲಿ 25 ರಿಂದ 40 ಮಿಮೀ ಮಳೆಯಾಗಿದೆ ಎಂದು ರಾಜ್ಯ ತುರ್ತು ಕಾರ್ಯಾಚರಣೆ ಕೇಂದ್ರ (ಎಸ್‌ಇಒಸಿ) ಹೇಳಿಕೆಯಲ್ಲಿ ತಿಳಿಸಿದೆ.

ಬಿರು ಗಾಳಿಗೆ ಮರಗಳು, ಹೋರ್ಡಿಂಗ್‌ಗಳು ನೆಲಕ್ಕುರಳಿದ್ದು, ಹಲವು ಜಿಲ್ಲೆಗಳಲ್ಲಿ ಮನೆಗಳು ಕುಸಿದುಬಿದ್ದು, ಹಲವರು ಗಾಯಗೊಂಡಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ಸೋಮವಾರ ಗುಜರಾತ್‌ನ ಅಹಮದಾಬಾದ್, ಆನಂದ್, ಖೇಡಾ, ದಾಹೋದ್, ಅರಾವಳಿ ಮತ್ತು ವಡೋದರ ಜಿಲ್ಲೆಗಳಲ್ಲಿ ಸಿಡಿಲು, ವಿದ್ಯುತ್ ಆಘಾತ ಮತ್ತು ಮರ, ಮನೆಗಳು ಕುಸಿದು ಬಿದ್ದಿದ್ದು, ಮಳೆ ಸಂಬಂಧಿತ ಘಟನೆಗಳಲ್ಲಿ ಹದಿಮೂರು ಜನರು ಸಾವನ್ನಪ್ಪಿದ್ದಾರೆ ಮತ್ತು ಭಾನುವಾರ ಅಹಮದಾಬಾದ್‌ನ ವಿರಾಮಗಾಮ್‌ನಲ್ಲಿ ಸಿಡಿಲು ಬಡಿದು ಒಬ್ಬರು ಸಾವನ್ನಪ್ಪಿದ್ದಾರೆ.

ಖೇಡಾ ಜಿಲ್ಲೆಯಲ್ಲಿ ನಾಲ್ವರು ಸಾವನ್ನಪ್ಪಿದ್ದರೆ, ವಡೋದರಾದಲ್ಲಿ ಮೂರು, ಅಹಮದಾಬಾದ್, ದಾಹೋಡ್ ಮತ್ತು ಅರಾವಳಿಯಲ್ಲಿ ಇಬ್ಬರು, ಆನಂದ್ ಜಿಲ್ಲೆಯಲ್ಲಿ ಒಬ್ಬರು ಸಾವನ್ನಪ್ಪಿರುವುದಾಗಿ ವರದಿಯಾಗಿದೆ. ಕೆಲವು ಜಿಲ್ಲೆಗಳಲ್ಲಿ

ಮುಂದಿನ ಮೂರು ದಿನಗಳಲ್ಲಿ ಭಾರೀ ಮಳೆಯಾಗುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ ಹೇಳಿದೆ

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

NICE ವಿವಾದ: ದೇವೇಗೌಡರು ಬೇಕಿದ್ರೆ ಕೋರ್ಟ್‌ಗೆ ಹೋಗಲಿ, ಉಪವಾಸ ಮಾಡಲಿ; ಮಾಜಿ ಪ್ರಧಾನಿ ಪತ್ರಕ್ಕೆ CM ಡಿಕೆಶಿ ತಿರುಗೇಟು

ಸ್ವಚ್ಛ ವಾಯು ಸರ್ವೇಕ್ಷಣ 2026: ಬೆಂಗಳೂರು, ಶ್ರೀನಗರ ಹಿಂದಿಕ್ಕಿದ ದೆಹಲಿ; ಅತ್ಯಂತ ಸ್ವಚ್ಛ ಗಾಳಿ ಯಾವ ನಗರದಲ್ಲಿದೆ ಗೊತ್ತಾ?

ಸತ್ಯ ನಿಕೇತನ ಪಿಜಿ ಕುಸಿತದ ಬಗ್ಗೆ ಉನ್ನತ ಮಟ್ಟದ ತನಿಖೆಗೆ ದೆಹಲಿ ಹೈಕೋರ್ಟ್ ಆದೇಶ; ದುರಂತಕ್ಕೆ ಮಾಲೀಕನಷ್ಟೇ ಅಲ್ಲ MCD, DU ಸಹ ಹೊಣೆ!

ರನ್‌ವೇಯಿಂದ ಜಾರಿದ ಅಮೆಜಾನ್ ಕಾರ್ಗೋ ವಿಮಾನ; ವಾಹನಗಳಿಗೆ ಡಿಕ್ಕಿ, ಕನಿಷ್ಠ ಐವರು ಸಾವು!

Varanasi: ತೆಲುಗು ರಾಜ್ಯಗಳಲ್ಲಿ ಬರೋಬ್ಬರಿ 320 ಕೋಟಿಗೆ ಥಿಯೇಟ್ರಿಕಲ್ ಹಕ್ಕುಗಳ ಮಾರಾಟ? ರಾಜಮೌಳಿಗೆ ತಲೆಬಿಸಿ!