ಮಮತಾ ಬ್ಯಾನರ್ಜಿ 
ದೇಶ

'ಬಿಜೆಪಿ ಮಾತು ಕೇಳಿ ನಿಮ್ಮ ನಡುವೆ ಒಡಕು ಸೃಷ್ಟಿಸಬೇಡಿ': ಮುರ್ಷಿದಾಬಾದ್‌ನಲ್ಲಿ ಮಮತಾ ಮನವಿ

"ಬಾಬರಿ ಮಸೀದಿಯನ್ನು ಕೆಡವಿದಾಗಲೂ ನಾನು ಕಂಡ ಒಂದು ವಿಷಯವೆಂದರೆ ಮುರ್ಷಿದಾಬಾದ್‌ನಲ್ಲಿ ಯಾವುದೇ ಗಲಭೆಗಳು ನಡೆದಿಲ್ಲ" ಎಂದು ಮಮತಾ ತಿಳಿಸಿದರು.

ಮುರ್ಷಿದಾಬಾದ್‌: ಮುರ್ಷಿದಾಬಾದ್‌ನ ಹಿಂಸಾಚಾರ ಪೀಡಿತ ಪ್ರದೇಶಗಳಿಗೆ ಭೇಟಿ ನೀಡಿದ ಎರಡನೇ ದಿನವಾದ ಮಂಗಳವಾರ, ಪಶ್ಚಿಮ ಬಂಗಾಳದ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅವರು, ಹಿಂಸಾಚಾರ ನಡೆಸಲು ಹೊರಗಿನಿಂದ ರಾಜ್ಯಕ್ಕೆ ಗಲಭೆಕೋರರನ್ನು ಕರೆತರಲಾಗುತ್ತಿದೆ ಎಂದು ಆರೋಪಿಸಿದರು.

"ಬಿಜೆಪಿ ಅಥವಾ ಧಾರ್ಮಿಕ ಮೂಲಭೂತವಾದಿಗಳ" ಮಾತುಗಳನ್ನು ಕೇಳುವ ಮೂಲಕ ನಿಮ್ಮ ನಿಮ್ಮಲ್ಲೇ ಒಡಕು ಸೃಷ್ಟಿಸಬೇಡಿ ಎಂದು ಪಶ್ಚಿಮ ಬಂಗಾಳ ಸಿಎಂ ಜನರಿಗೆ ಮನವಿ ಮಾಡಿದರು.

"ಗಲಭೆಕೋರರನ್ನು ಹೊರಗಿನಿಂದ ಬಂಗಾಳಕ್ಕೆ ಕರೆತರಲಾಗುತ್ತಿದೆ, ಅವರಿಂದ ಪ್ರಚೋದನೆಗೆ ಒಳಗಾಗಬೇಡಿ... ಬಿಜೆಪಿ ಅಥವಾ ಯಾವುದೇ ಧಾರ್ಮಿಕ ಮೂಲಭೂತವಾದಿಗಳ ಮಾತುಗಳನ್ನು ಕೇಳಿ ನಿಮ್ಮಲ್ಲೇ ಒಡಕು ಸೃಷ್ಟಿಸಬೇಡಿ" ಎಂದು ಅವರು ಮುರ್ಷಿದಾಬಾದ್‌ನಲ್ಲಿ ಸರ್ಕಾರಿ ಕಾರ್ಯಕ್ರಮವೊಂದರಲ್ಲಿ ಹೇಳಿದರು.

"ಬಾಬರಿ ಮಸೀದಿಯನ್ನು ಕೆಡವಿದಾಗಲೂ ನಾನು ಕಂಡ ಒಂದು ವಿಷಯವೆಂದರೆ ಮುರ್ಷಿದಾಬಾದ್‌ನಲ್ಲಿ ಯಾವುದೇ ಗಲಭೆಗಳು ನಡೆದಿಲ್ಲ" ಎಂದು ಮಮತಾ ತಿಳಿಸಿದರು.

ವಕ್ಫ್ ತಿದ್ದುಪಡಿ ಕಾಯ್ದೆಯ ವಿರುದ್ಧದ ಪ್ರತಿಭಟನೆಯ ಸಂದರ್ಭದಲ್ಲಿ ಜನರು ಹಿಂಸಾಚಾರದಲ್ಲಿ ತೊಡಗಬಾರದು ಎಂದು ಮುಖ್ಯಮಂತ್ರಿ ಮನವಿ ಮಾಡಿದರು.

"ಬಂಗಾಳದಲ್ಲಿ ವಕ್ಫ್ ತಿದ್ದುಪಡಿ ಕಾಯ್ದೆಯನ್ನು ಜಾರಿಗೊಳಿಸುವ ಪ್ರಶ್ನೆಯೇ ಇಲ್ಲ" ಎಂದು ಬ್ಯಾನರ್ಜಿ ಪ್ರತಿಪಾದಿಸಿದರು.

ಮಮತಾ ಬ್ಯಾನರ್ಜಿ ಅವರು ಪ್ರಸ್ತುತ ಜಿಲ್ಲೆಯ ಗಲಭೆ ಪೀಡಿತ ಪ್ರದೇಶಗಳ ಭೇಟಿಗಾಗಿ ಎರಡು ದಿನ ಮುರ್ಷಿದಾಬಾದ್‌ನಲ್ಲಿದ್ದಾರೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಬ್ಯಾಂಕ್‌ಗೆ ನಕಲಿ ಗ್ಯಾರಂಟಿ: ರಿಲಯನ್ಸ್‌ ಪವರ್‌ನ ಮುಖ್ಯ ಹಣಕಾಸು ಅಧಿಕಾರಿ ಅಶೋಕ್ ಪಾಲ್ ಬಂಧನ

CM ಆಗುವ ಕಾಲ ಹತ್ತಿರ ಬಂದಿದೆ ಎಂದು ನಾನು ಹೇಳಿಲ್ಲ: ಸುದ್ದಿ ತಿರುಚಿ ಪ್ರಸಾರ ಮಾಡಿದರೆ ಮಾನನಷ್ಟ ಮೊಕದ್ದಮೆ ಅನಿವಾರ್ಯ; ಡಿ ಕೆ ಶಿವಕುಮಾರ್

2nd test, Day 2: 2ನೇ ದಿನದಾಟದ ಆರಂಭದಲ್ಲೇ ಭಾರತಕ್ಕೆ ಆಘಾತ, ಭೋಜನ ವಿರಾಮದ ವೇಳೆಗೆ 427/4

ಸಮಸ್ತ ಜನರಿಗೆ ಸುಗಮ ಆಡಳಿತ, ಶುದ್ಧ ನೀರಿನ ಪೂರೈಕೆ: ಸ್ವಚ್ಚತೆ- ಸಂಚಾರ ವ್ಯವಸ್ಥೆಗೆ ಸಿಎಂ ಸಿದ್ದರಾಮಯ್ಯ ಕಟ್ಟಪ್ಪಣೆ

ಸಿದ್ದರಾಮಯ್ಯ ಮೇಲೆ ತೂಗುಗತ್ತಿ: ಅಧಿಕಾರದಲ್ಲಿ ಉಳಿಯಲು ಸಂಪುಟ ಪುನಾರಚನೆ ಕಸರತ್ತು; ಬಿಹಾರ-ಕೇರಳ ಚುನಾವಣೆಯತ್ತ ಡಿಕೆಶಿ ಚಿತ್ತ!

SCROLL FOR NEXT