ಸಾಂದರ್ಭಿಕ ಚಿತ್ರ 
ದೇಶ

ಛತ್ತೀಸ್‌ಗಢ: ನಕ್ಸಲ್ ವಿರೋಧಿ ಕಾರ್ಯಾಚರಣೆಯಲ್ಲಿ ಮಹಿಳಾ ಕೇಡರ್ ಹತ್ಯೆ

ಏಪ್ರಿಲ್ 24 ರಂದು ಭದ್ರತಾ ಪಡೆಗಳೊಂದಿಗೆ ನಡೆದ ಗುಂಡಿನ ಚಕಮಕಿಯಲ್ಲಿ ಮೂವರು ಮಹಿಳಾ ನಕ್ಸಲರನ್ನು ಹತ್ಯೆ ಮಾಡಲಾಗಿತ್ತು.

ರಾಯ್‌ಪುರ: ತೆಲಂಗಾಣಕ್ಕೆ ಹೊಂದಿಕೊಂಡಿರುವ ಬಿಜಾಪುರದ ನೈಋತ್ಯ ಅರಣ್ಯ ಗಡಿ ಪ್ರದೇಶದಲ್ಲಿ ಭದ್ರತಾ ಪಡೆಗಳೊಂದಿಗೆ ನಡೆದ ಗುಂಡಿನ ಚಕಮಕಿಯಲ್ಲಿ ಸಮವಸ್ತ್ರದಲ್ಲಿದ್ದ ಮಹಿಳಾ ಮಾವೋವಾದಿಯೊಬ್ಬರು ಹತರಾಗಿದ್ದಾರೆ ಎಂದು ಬಸ್ತಾರ್ ಪೊಲೀಸರು ಮಂಗಳವಾರ ತಿಳಿಸಿದ್ದಾರೆ.

ಏಪ್ರಿಲ್ 24 ರಂದು ಭದ್ರತಾ ಪಡೆಗಳೊಂದಿಗೆ ನಡೆದ ಗುಂಡಿನ ಚಕಮಕಿಯಲ್ಲಿ ಮೂವರು ಮಹಿಳಾ ನಕ್ಸಲರನ್ನು ಹತ್ಯೆ ಮಾಡಲಾಗಿತ್ತು.

ಕಳೆದ 12 ದಿನಗಳಲ್ಲಿ 10,000 ಕ್ಕೂ ಹೆಚ್ಚು ಭದ್ರತಾ ಸಿಬ್ಬಂದಿಯನ್ನು ಒಳಗೊಂಡ "ನಿರ್ಣಾಯಕ" ಅಂತರ-ರಾಜ್ಯ ಕಾರ್ಯಾಚರಣೆಯಲ್ಲಿ ಇದುಯವರೆಗೆ ನಿಷೇಧಿತ ಸಿಪಿಐ(ಮಾವೋವಾದಿಗಳ ಮಹಿಳಾ ಕೇಡರ್‌ಗಳು)ನ ನಾಲ್ವರ ಶವಗಳು, ಹಲವಾರು ಶಸ್ತ್ರಾಸ್ತ್ರಗಳನ್ನು ವಶಪಡಿಸಿಕೊಳ್ಳಲಾಗಿದೆ.

"ಬಿಜಾಪುರ ಜಿಲ್ಲೆಯ ನೈಋತ್ಯ ಗಡಿ ಪ್ರದೇಶಗಳಲ್ಲಿ ಮಾವೋವಾದಿಗಳ ಉಪಸ್ಥಿತಿಯ ಬಗ್ಗೆ ನಿರ್ದಿಷ್ಟ ಗುಪ್ತಚರ ಮಾಹಿತಿಯ ಆಧಾರದ ಮೇಲೆ, ಜಿಲ್ಲಾ ಮೀಸಲು ಪಡೆ(DRG), ವಿಶೇಷ ಕಾರ್ಯಪಡೆ(STF), CRPF ಮತ್ತು ಅದರ ಕೋಬ್ರಾ ಪಡೆಯ ಸಿಬ್ಬಂದಿಯನ್ನು ಒಳಗೊಂಡ ಭದ್ರತಾ ಪಡೆಗಳ ಜಂಟಿ ತಂಡವು ನಕ್ಸಲ್ ವಿರೋಧಿ ಕಾರ್ಯಾಚರಣೆ ನಡೆಸುತ್ತಿದೆ.

ಕಾರ್ಯಾಚರಣೆ ನಡೆಯುತ್ತಿರುವಾಗ, ಭದ್ರತಾ ಪಡೆಗಳು ಮತ್ತು ಮಾವೋವಾದಿಗಳ ನಡುವೆ ಗುಂಡಿನ ಚಕಮಕಿ ಆರಂಭಿವಾಯಿತು. ಬಳಿಕ ಘಟನಾ ಸ್ಥಳದಿಂದ ಮಹಿಳಾ ಮಾವೋವಾದಿಯ ಮೃತದೇಹ ಮತ್ತು ಒಂದು ರೈಫಲ್ ಅನ್ನು ವಶಪಡಿಸಿಕೊಳ್ಳಲಾಗಿದೆ" ಎಂದು ಬಸ್ತಾರ್ ರೇಂಜ್ ಇನ್ಸ್‌ಪೆಕ್ಟರ್ ಜನರಲ್ ಆಫ್ ಪೊಲೀಸ್ ಸುಂದರರಾಜ್ ಪಿ ಅವರು ತಿಳಿಸಿದ್ದಾರೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

ಜನರ ಭಾವನೆ ಮೇಲೆ ರಾಜಕಾರಣ ಮಾಡಲ್ಲ: ಸುಮ್ಮನೆ ಘೋಷಣೆ ಮಾಡಿ ಮರೆಯುವ ಜಾಯಮಾನ ನಮ್ಮದಲ್ಲ- ಸಿಎಂ ಡಿಕೆ ಶಿವಕುಮಾರ್!

ಟಿ. ನರಸೀಪುರ ಶೋಭಾಯಾತ್ರೆ: ಮಸೀದಿ ಮುಂದೆ ಪಟಾಕಿ ಸಿಡಿಸಿ ಸಂಭ್ರಮ, ಒಂದುವರೆ ವರ್ಷದಲ್ಲಿ ನಾವು ಬರ್ತೀವಿ, ಅವಾಗ ಲೆಕ್ಕ ಚುಪ್ತ ಮಾಡ್ತೀವಿ- ಪ್ರತಾಪ್ ಸಿಂಹ

ಪಂಚಾಯ್ತಿ ಚುನಾವಣೆ ನಡೆಸಲು ಸಚಿವ ಸಂಪುಟದ ನಿರ್ಧಾರ: EVM ಬದಲು ಮತಪೆಟ್ಟಿಗೆ ಬಳಕೆ

ಅಭಿಮಾನಿಯ ಕಾಲಿನ ಮೇಲೆ ಹತ್ತಿದ ಕಾರು: ತಾಳ್ಮೆ ಕಳೆದುಕೊಂಡು ಚಾಲಕನಿಗೆ ಹಿಗ್ಗಾಮುಗ್ಗಾ ಬೈದ ಸಲ್ಮಾನ್ ಖಾನ್! video

ಸಾಕ್ಷ್ಯ ವಿಚಾರಣೆ ವೇಳೆ ದರ್ಶನ್ ಖುದ್ದು ಹಾಜರಾಗಲು ಹೈಕೋರ್ಟ್ ಒಪ್ಪಿಗೆ, ಷರತ್ತು ಅನ್ವಯ!