ನರೇಂದ್ರ ಮೋದಿ 
ದೇಶ

ಆಪರೇಷನ್ ಸಿಂಧೂರ್: ರಾತ್ರೋರಾತ್ರಿ ನಡೆದ ಕಾರ್ಯಾಚರಣೆಯ ಮೇಲೆ ಮೋದಿ ನಿಗಾ; ಇಂಚಿಂಚೂ ಮಾಹಿತಿ ಪಡೆದ ಪ್ರದಾನಿ; Video

ಪ್ರಧಾನಿ ನರೇಂದ್ರ ಮೋದಿ ಅವರು ರಾತ್ರಿಯಿಡೀ ಭಾರತೀಯ ಸೇನೆ ನಡೆಸಿದ ‘ಆಪರೇಷನ್ ಸಿಂಧೂರ’ ಕಾರ್ಯಾಚರಣೆಯ ಮೇಲೆ ನಿಗಾ ಇಟ್ಟಿದ್ದರು ಎಂದು ಎಎನ್ ಐ ಸುದ್ದಿ ಸಂಸ್ಥೆ ವರದಿ ತಿಳಿಸಿದೆ.

ನವದೆಹಲಿ: ಕಾಶ್ಮೀರದ ಪಹಲ್ಗಾಮ್‌ನಲ್ಲಿ ನಡೆದ ಉಗ್ರರ ದಾಳಿಗೆ ಪ್ರತೀಕಾರವಾಗಿ ಭಾರತೀಯ ಸೇನೆ ಪಾಕಿಸ್ತಾನದ ಉಗ್ರ ಸಂಘಟನೆಗಳ 9 ಶಿಬಿರಗಳ ಮೇಲೆ ರಾತ್ರೋ ರಾತ್ರಿ ಕ್ಷಿಪಣಿ ದಾಳಿ ನಡೆಸಿದೆ.

ರಾತ್ರೋ ರಾತ್ರಿ ನಡೆದ ಈ ಕಾರ್ಯಾಚರಣೆ ಪ್ರಧಾನಿ ನರೇಂದ್ರ ಮೋದಿ ಅವರ ನೇತೃತ್ವದಲ್ಲಿ ನಡೆದಿದೆ. ಪ್ರಧಾನಿ ನರೇಂದ್ರ ಮೋದಿ ಅವರು ರಾತ್ರಿಯಿಡೀ ಭಾರತೀಯ ಸೇನೆ ನಡೆಸಿದ ‘ಆಪರೇಷನ್ ಸಿಂಧೂರ’ ಕಾರ್ಯಾಚರಣೆಯ ಮೇಲೆ ನಿಗಾ ಇಟ್ಟಿದ್ದರು ಎಂದು ಎಎನ್ ಐ ಸುದ್ದಿ ಸಂಸ್ಥೆ ವರದಿ ತಿಳಿಸಿದೆ.

ಪ್ರಧಾನಿ ಮೋದಿಯವರು ದಾಳಿಯ ಕುರಿತು ಇಂಚಿಂಚೂ ಮಾಹಿತಿಯನ್ನು ಪಡೆದಿದ್ದಾರೆ. ರಕ್ಷಣಾ ಪಡೆಗಳ ಮುಖ್ಯಸ್ಥರು, ಹಿರಿಯ ಗುಪ್ತಚರ ಅಧಿಕಾರಿಗಳು ಮತ್ತು ರಾಷ್ಟ್ರೀಯ ಭದ್ರತಾ ಸಲಹೆಗಾರ ಅಜಿತ್‌ ದೋಬಾಲ್‌ ಅವರು ಪ್ರಧಾನಿಗೆ ನಿರಂತರವಾಗಿ ಮಾಹಿತಿ ನೀಡಿದ್ದಾರೆ.

ಮಂಗಳವಾರ ರಾತ್ರಿ ಪ್ರಾರಂಭವಾಗಿ ಬುಧವಾರದ ಬೆಳಗಿನ ಜಾವದವರೆಗೂ ಪ್ರಧಾನಿ ಮತ್ತು ಭೂಸೇನೆ, ನೌಕಾಪಡೆ ಮತ್ತು ವಾಯುಪಡೆಯ ಮುಖ್ಯಸ್ಥರ ನಡುವೆ ಸಂವಹನ ನಡೆದಿದೆ ಎಂದು ಹೇಳಲಾಗಿದೆ.

26 ಜನರ ಭೀಕರ ಪಹಲ್ಗಾಮ್ ಹತ್ಯಾಕಾಂಡಕ್ಕೆ ಪ್ರತೀಕಾರವಾಗಿ, ಭಾರತೀಯ ಸಶಸ್ತ್ರ ಪಡೆಗಳು ಬುಧವಾರ ಮುಂಜಾನೆ ಪಾಕಿಸ್ತಾನ ಮತ್ತು ಪಾಕಿಸ್ತಾನ ಆಕ್ರಮಿತ ಕಾಶ್ಮೀರದಲ್ಲಿನ ಒಂಬತ್ತು ಭಯೋತ್ಪಾದಕ ಗುರಿಗಳ ಮೇಲೆ ಕ್ಷಿಪಣಿ ದಾಳಿ ನಡೆಸಿವೆ, ಇದರಲ್ಲಿ ಜೈಶ್-ಎ-ಮೊಹಮ್ಮದ್ ಭಯೋತ್ಪಾದಕ ಸಂಘಟನೆಯ ಭದ್ರಕೋಟೆಯಾಗಿರುವ ಬಹಾವಲ್ಪುರ್ ಸೇರಿದೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

TMCಗೆ ಸೆಡ್ಡು ಹೊಡೆದ ಬಂಡಾಯ ಸಂಸದರಿಗೆ ಶಾಕ್‌: 20 ಮಂದಿಗೆ ಲೋಕಸಭಾ ಸಚಿವಾಲಯ ನೋಟಿಸ್‌, 7 ದಿನಗಳೊಳಗೆ ಉತ್ತರಿಸುವಂತೆ ಸೂಚನೆ..!

ಬಿಜೆಪಿ ಸಂಸದೀಯ ಮಂಡಳಿಯಲ್ಲಿ ಮಹತ್ತರ ಬದಲಾವಣೆ ಸಾಧ್ಯತೆ; ನಾಲ್ವರು ಮುಖ್ಯಮಂತ್ರಿಗಳಿಗೆ ಸ್ಥಾನ?

ಇರಾನ್‌ ತೈಲ ವಹಿವಾಟಿಗೆ ಅಮೆರಿಕಾ ಬ್ರೇಕ್: ಭಾರತದ 4 ಕಂಪನಿಗಳು ಕಪ್ಪುಪಟ್ಟಿಗೆ, 3 ಪ್ರಜೆಗಳ ಮೇಲೂ ನಿರ್ಬಂಧ..!

"ಮದುವೆ ಅಂದ್ರೆ ಗುಲಾಮಗಿರಿಯಲ್ಲ, ಮನೆಗೆಲಸ ಮಾಡು-ಅತ್ತೆ-ಮಾವನ ನೋಡ್ಕೋ ಅನ್ನೋಕೆ ಗಂಡನಿಗೆ ಹಕ್ಕಿಲ್ಲ": ಹೈಕೋರ್ಟ್ ಮಹತ್ವದ ತೀರ್ಪು..!

ಬಿಡದಿ ಟೌನ್‌ಶಿಪ್‌ ಯೋಜನೆ: ರೈತರ ಭೂಮಿ ಕಸಿಯಲ್ಲ, denotification ಮಾಡಲ್ಲ- ಸಿಎಂ ಡಿಕೆ. ಶಿವಕುಮಾರ್ ಸ್ಪಷ್ಟನೆ